Homeಕರ್ನಾಟಕಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾದ ಸರ್ಕಾರ :...

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾದ ಸರ್ಕಾರ : ವಿದ್ಯಾರ್ಥಿ ಸಂಘಟನೆಗಳಿಂದ ಆಕ್ರೋಶ

- Advertisement -
- Advertisement -

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಎಡ ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ.

ಬುಧವಾರ (ಜ.21) ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಎಐಎಸ್ಎಫ್, ಎಸ್ಎಫ್ಐ, ಎಐಡಿಎಸ್ಓ, ಎಐಎಸ್ಎ ಹಾಗೂ ಕೆವಿಎಸ್ ಸಂಘಟನೆಗಳ ಪ್ರತಿನಿಧಿಗಳು ಸರ್ಕಾರದ ಆದೇಶ ಪ್ರತಿ ಬಿಡುಗಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮೀಣ ಭಾಗದ 40 ಸಾವಿರಕ್ಕೂ ಅಧಿಕ ಶಾಲೆಗಳನ್ನು ಮುಚ್ಚಿ ಪಂಚಾಯಿತಿಗೊಂದರಂತೆ ಕೇವಲ 6 ಸಾವಿರ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಸ್ಥಾಪಿಸಲು ಕರ್ನಾಟಕ ರಾಜ್ಯ ಸರ್ಕಾರ ಮುಂದಾಗಿದೆ. ಮೊದಲ ಹಂತದಲ್ಲೇ 900 ಮ್ಯಾಗ್ನೆಟ್ ಶಾಲೆ ಮಾಡಲು ಆದೇಶಿಸಲಾಗಿದೆ ಎಂದು ಹೇಳಿದರು.

ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಾಗಿ ಪರಿವರ್ತಿಸಲು 1-5 ಕಿಲೋ ಮೀಟರ್ ವ್ಯಾಪ್ತಿಯ ಎಲ್ಲಾ ಶಾಲೆಗಳನ್ನು ವಿಲೀನ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈಗಾಗಲೇ ಚನ್ನಪಟ್ಟಣದ ಹೊಂಗನೂರಿನಲ್ಲಿ 50, 70, 80, ಹಾಗೂ 100 ದಾಖಲಾತಿ ಇರುವ ಶಾಲೆಗಳನ್ನು ವಿಲೀನ ಮಾಡಲು ಆದೇಶ ಹೊರಡಿಸಲಾಗಿದೆ. ಅಲ್ಲದೆ, ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಿಗೆ ಸಾರಿಗೆ ವ್ಯವಸ್ಥೆ ಮಾಡುವುದು ಎಸ್‌ಡಿಎಂಸಿ, ಅಂದರೆ ಪೋಷಕರ ಜವಾಬ್ದಾರಿ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. ಶಾಲೆಗಳನ್ನು ನಡೆಸಲು ಹೊರಗುತ್ತಿಗೆ ನೀಡಲಾಗುವುದು ಹಾಗೂ ಶಾಲೆಗಳು ತಮ್ಮ ಆದಾಯವನ್ನು ತಾವೇ ಉತ್ಪತ್ತಿ ಮಾಡಿಕೊಳ್ಳಬೇಕು ಎಂಬ ಗಂಭೀರ ಮತ್ತು ಆಘಾತಕಾರಿ ಅಂಶಗಳು ಸುತ್ತೋಲೆಯಲ್ಲಿ ಇವೆ. ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ತೆರೆಯಲು ಕಾರ್ಪೊರೇಟ್ ದೇಣಿಗೆಯನ್ನು ಪಡೆಯಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಆ ಶಾಲೆಗಳನ್ನು ಖಾಸಗಿ ಒಡೆತನಕ್ಕೆ ಒಪ್ಪಿಸುವ ಹುನ್ನಾರ ಇದರಲ್ಲಿ ಅಡಗಿದೆ ಎಂದು ವಿದ್ಯಾರ್ಥಿ ಸಂಘಟನೆಗಳ ಪ್ರತಿನಿಧಿಗಳು ಆರೋಪಿಸಿದರು.

ಈ ಉದ್ದೇಶಕ್ಕಾಗಿ ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕಿನಿಂದ 2,500 ಕೋಟಿ ರೂಪಾಯಿ ಸಾಲ ಪಡೆಯಲಾಗಿದೆ. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಭಾಗದ ಜನರ ಏಳಿಗೆಗಾಗಿ ಇರುವ ಕೆಕೆಆರ್‌ಡಿಬಿ ಮತ್ತು ಗಣಿಗಾರಿಕೆಯಿಂದ ಬದುಕು ಕಳೆದುಕೊಂಡ 10 ತಾಲೂಕಿನ ಜನರ ಪುನಶ್ಚೇತನಕ್ಕಾಗಿ ಇರುವ ಕೆಎಂಇಆರ್‌ಸಿ ನಿಧಿಗಳಿಂದ 700 ಕೋಟಿ ರೂಪಾಯಿ ಹಣ ಪಡೆಯಲಾಗಿದೆ. ಅಲ್ಪಸಂಖ್ಯಾತರ ನಿಧಿಯಿಂದ 100ಕೋಟಿ ಪಡೆಯಲಾಗಿದೆ. ಜನಕಲ್ಯಾಣಕ್ಕಾಗಿ ಬಳಸಬೇಕಾದ ನಿಧಿಯನ್ನು ಅದೇ ಜನರ ಮಕ್ಕಳು ಓದುವ ಗ್ರಾಮೀಣ ಶಾಲೆಗಳನ್ನು ಮುಚ್ಚಲು ಬಳಸಲಾಗುತ್ತಿದೆ. ಇದು ಈ ಜನರಿಗೆ ಮಾಡುತ್ತಿರುವ ವಿಶ್ವಾಸ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಶಾಲಾ ಶಿಕ್ಷಣ ಇಲಾಖೆಯಲ್ಲಿ 59 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ. 21,000 ಶಾಲೆಗಳು ದುರಸ್ತಿ ಕಾಣದೆ ನಲುಗುತ್ತಿವೆ. 7 ಸಾವಿರ ಶಾಲೆಗಳಲ್ಲಿ ಏಕೋಪಾಧ್ಯಾಯ ಶಿಕ್ಷಕರಿದ್ದಾರೆ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿನ ಶಾಲೆಗಳನ್ನು ಅಭಿವೃದ್ಧಿಪಡಿಸದೇ, ಶಾಲೆಗಳನ್ನು ವಿಲೀನ ಮಾಡಿ ಮುಚ್ಚಿ ಹಾಕುತ್ತಿರುವುದು ಶಿಕ್ಷಣ ವಿರೋಧಿ ನಿಲುವಾಗಿದೆ ಎಂದರು.

ಊರಿನ ಶಾಲೆಗಳನ್ನು ಕೊಂದು ಸ್ಥಾಪಿಸಲಾಗುತ್ತಿರುವ ಈ ಕೆಪಿಎಸ್ ಶಾಲೆಗಳಲ್ಲಿ ಕೌಶಲ್ಯದ ಹೆಸರಿನಲ್ಲಿ ಬಡ ಮಕ್ಕಳನ್ನು ಕಾರ್ಮಿಕರನ್ನಾಗಿಸುವ ವೃತ್ತಿ ಶಿಕ್ಷಣವನ್ನು 6ನೇ ತರಗತಿಯಿಂದಲೇ ಕಡ್ಡಾಯಗೊಳಿಸಲಾಗಿದೆ. ಮಣ್ಣಿನ ಹಣತೆ ತಯಾರಿಸುವುದು, ಅಡಿಕೆ ಸುಲಿಯುವುದು, ಟೈಲರಿಂಗ್ ಸೇರಿದಂತೆ ಮುಂತಾದ ಕಸುಬುಗಳನ್ನು ಕಲಿಸಲಾಗುವ ಪಠ್ಯಕ್ರಮವನ್ನು ಉದ್ಯಮ ಪಾಲುದಾರರೊಂದಿಗೆ ರೂಪಿಸಲು ಹೊರಟಿರುವ ಸರ್ಕಾರವು, ರೈತ-ಕಾರ್ಮಿಕರ ಮಕ್ಕಳನ್ನು ಮತ್ತೆ ಅವರ ಕಾರ್ಖಾನೆಗಳಲ್ಲಿ ಅಗ್ಗದ ಕೂಲಿಗೆ ದೂಡುವ ಹುನ್ನಾರವನ್ನು ರಚಿಸಿದೆ. ಶಿಕ್ಷಣವು ಚಾರಿತ್ರ್ಯ ನಿರ್ಮಾಣದ ಪ್ರಕ್ರಿಯೆಯಾಗಬೇಕೆಂಬ ದೇಶದ ಮಹಾನ್ ವ್ಯಕ್ತಿಗಳ ಆಶಯಕ್ಕೆ ತಿಲಾಂಜಲಿಯಿಟ್ಟು ಕನಿಷ್ಟ ವಿಷಯಗಳ ಜ್ಞಾನ ಹೊಂದಿರದ, ಚಿಂತನೆಯ ಪರಿವೆಯಿಲ್ಲದ ಯಂತ್ರಮಾನವರನ್ನು ಸೃಷ್ಟಿಸುವ ನಾಗರಿಕತೆ ವಿರೋಧಿ ಕೆಲಸಕ್ಕೆ ಕರ್ನಾಟಕ ರಾಜ್ಯ ಸರ್ಕಾರವು ಮುಂದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ಈ ನಡೆ ವಿರುದ್ಧ ರಾಜ್ಯದಲ್ಲೆಡೆ ಜನ ಹೋರಾಟ ಭುಗಿಲೆದ್ದಿದೆ. ಸಾವಿರಾರು ಸಂಖ್ಯೆಯಲ್ಲಿ ಪಾಲಕರು ಹಾಗೂ ಗ್ರಾಮಸ್ಥರು ಬೀದಿಗಿಳಿದು ಊರಿನ ಶಾಲೆಗಳನ್ನು ಮುಚ್ಚುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ತೀವ್ರ ಜನವಿರೋಧದ ನಡುವೆಯೂ ಸರ್ಕಾರವು ಈ ಕುಕೃತ್ಯವನ್ನು ಮುಂದುವರೆಸಿದೆ. ಜನಾಭಿಪ್ರಾಯವನ್ನು ಧಿಕ್ಕರಿಸಿರುವ ಸರ್ಕಾರದ ಈ ನಿರಂಕುಶ ಮತ್ತು ಅಪ್ರಜಾತಾಂತ್ರಿಕ ನಡೆಯನ್ನು ಎಡ ವಿದ್ಯಾರ್ಥಿ ಸಂಘಟನೆಗಳು ಅತ್ಯುಗ್ರ ಪದಗಳಲ್ಲಿ ಖಂಡಿಸುತ್ತವೆ. ಈ ಕೂಡಲೇ ಕರಾಳ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಹಿಂಪಡೆಯಬೇಕು ಮತ್ತು ಶಿಕ್ಷಕರು ಹಾಗೂ ಸೌಲಭ್ಯಗಳ ಕೊರತೆಯಿಂದ ನರಳುತ್ತಿರುವ ರಾಜ್ಯದ ಸರ್ಕಾರಿ ಶಾಲೆಗಳಿಗೆ ಸಮರ್ಪಕ ಸೌಲಭ್ಯ ನೀಡಿ ಅಭಿವೃದ್ಧಿಪಡಿಸಬೇಕೆಂದು ರಾಜ್ಯದ ವಿದ್ಯಾರ್ಥಿಗಳು, ಶಿಕ್ಷಕರು, ಪಾಲಕರು ಹಾಗೂ ಶಿಕ್ಷಣ ಪ್ರೇಮಿ ಜನತೆಯ ಪರವಾಗಿ ಸರ್ಕಾರವನ್ನು ಆಗ್ರಹಿಸುತ್ತದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಎಐಎಸ್ಎಫ್ ರಾಜ್ಯಾಧ್ಯಕ್ಷೆ ವೀಣಾ ನಾಯಕ್, ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ವಿಜಯ್ ಕುಮಾರ್ ಟಿಎಸ್, ಎಐಡಿಎಸ್ಓ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ, ಎಐಎಸ್ಎ ಜಿಲ್ಲಾ ಮಂಡಳಿ ಸದಸ್ಯ ಸುಶಾಂತ್, ಹಾಗೂ ಕೆವಿಎಸ್ ರಾಜ್ಯ ಕಾರ್ಯದರ್ಶಿ ದುರ್ಗೇಶ್ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...