Homeಕರ್ನಾಟಕಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾದ ಸರ್ಕಾರ :...

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾದ ಸರ್ಕಾರ : ವಿದ್ಯಾರ್ಥಿ ಸಂಘಟನೆಗಳಿಂದ ಆಕ್ರೋಶ

- Advertisement -
- Advertisement -

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಎಡ ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ.

ಬುಧವಾರ (ಜ.21) ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಎಐಎಸ್ಎಫ್, ಎಸ್ಎಫ್ಐ, ಎಐಡಿಎಸ್ಓ, ಎಐಎಸ್ಎ ಹಾಗೂ ಕೆವಿಎಸ್ ಸಂಘಟನೆಗಳ ಪ್ರತಿನಿಧಿಗಳು ಸರ್ಕಾರದ ಆದೇಶ ಪ್ರತಿ ಬಿಡುಗಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮೀಣ ಭಾಗದ 40 ಸಾವಿರಕ್ಕೂ ಅಧಿಕ ಶಾಲೆಗಳನ್ನು ಮುಚ್ಚಿ ಪಂಚಾಯಿತಿಗೊಂದರಂತೆ ಕೇವಲ 6 ಸಾವಿರ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಸ್ಥಾಪಿಸಲು ಕರ್ನಾಟಕ ರಾಜ್ಯ ಸರ್ಕಾರ ಮುಂದಾಗಿದೆ. ಮೊದಲ ಹಂತದಲ್ಲೇ 900 ಮ್ಯಾಗ್ನೆಟ್ ಶಾಲೆ ಮಾಡಲು ಆದೇಶಿಸಲಾಗಿದೆ ಎಂದು ಹೇಳಿದರು.

ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಾಗಿ ಪರಿವರ್ತಿಸಲು 1-5 ಕಿಲೋ ಮೀಟರ್ ವ್ಯಾಪ್ತಿಯ ಎಲ್ಲಾ ಶಾಲೆಗಳನ್ನು ವಿಲೀನ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈಗಾಗಲೇ ಚನ್ನಪಟ್ಟಣದ ಹೊಂಗನೂರಿನಲ್ಲಿ 50, 70, 80, ಹಾಗೂ 100 ದಾಖಲಾತಿ ಇರುವ ಶಾಲೆಗಳನ್ನು ವಿಲೀನ ಮಾಡಲು ಆದೇಶ ಹೊರಡಿಸಲಾಗಿದೆ. ಅಲ್ಲದೆ, ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಿಗೆ ಸಾರಿಗೆ ವ್ಯವಸ್ಥೆ ಮಾಡುವುದು ಎಸ್‌ಡಿಎಂಸಿ, ಅಂದರೆ ಪೋಷಕರ ಜವಾಬ್ದಾರಿ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. ಶಾಲೆಗಳನ್ನು ನಡೆಸಲು ಹೊರಗುತ್ತಿಗೆ ನೀಡಲಾಗುವುದು ಹಾಗೂ ಶಾಲೆಗಳು ತಮ್ಮ ಆದಾಯವನ್ನು ತಾವೇ ಉತ್ಪತ್ತಿ ಮಾಡಿಕೊಳ್ಳಬೇಕು ಎಂಬ ಗಂಭೀರ ಮತ್ತು ಆಘಾತಕಾರಿ ಅಂಶಗಳು ಸುತ್ತೋಲೆಯಲ್ಲಿ ಇವೆ. ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ತೆರೆಯಲು ಕಾರ್ಪೊರೇಟ್ ದೇಣಿಗೆಯನ್ನು ಪಡೆಯಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಆ ಶಾಲೆಗಳನ್ನು ಖಾಸಗಿ ಒಡೆತನಕ್ಕೆ ಒಪ್ಪಿಸುವ ಹುನ್ನಾರ ಇದರಲ್ಲಿ ಅಡಗಿದೆ ಎಂದು ವಿದ್ಯಾರ್ಥಿ ಸಂಘಟನೆಗಳ ಪ್ರತಿನಿಧಿಗಳು ಆರೋಪಿಸಿದರು.

ಈ ಉದ್ದೇಶಕ್ಕಾಗಿ ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕಿನಿಂದ 2,500 ಕೋಟಿ ರೂಪಾಯಿ ಸಾಲ ಪಡೆಯಲಾಗಿದೆ. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಭಾಗದ ಜನರ ಏಳಿಗೆಗಾಗಿ ಇರುವ ಕೆಕೆಆರ್‌ಡಿಬಿ ಮತ್ತು ಗಣಿಗಾರಿಕೆಯಿಂದ ಬದುಕು ಕಳೆದುಕೊಂಡ 10 ತಾಲೂಕಿನ ಜನರ ಪುನಶ್ಚೇತನಕ್ಕಾಗಿ ಇರುವ ಕೆಎಂಇಆರ್‌ಸಿ ನಿಧಿಗಳಿಂದ 700 ಕೋಟಿ ರೂಪಾಯಿ ಹಣ ಪಡೆಯಲಾಗಿದೆ. ಅಲ್ಪಸಂಖ್ಯಾತರ ನಿಧಿಯಿಂದ 100ಕೋಟಿ ಪಡೆಯಲಾಗಿದೆ. ಜನಕಲ್ಯಾಣಕ್ಕಾಗಿ ಬಳಸಬೇಕಾದ ನಿಧಿಯನ್ನು ಅದೇ ಜನರ ಮಕ್ಕಳು ಓದುವ ಗ್ರಾಮೀಣ ಶಾಲೆಗಳನ್ನು ಮುಚ್ಚಲು ಬಳಸಲಾಗುತ್ತಿದೆ. ಇದು ಈ ಜನರಿಗೆ ಮಾಡುತ್ತಿರುವ ವಿಶ್ವಾಸ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಶಾಲಾ ಶಿಕ್ಷಣ ಇಲಾಖೆಯಲ್ಲಿ 59 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ. 21,000 ಶಾಲೆಗಳು ದುರಸ್ತಿ ಕಾಣದೆ ನಲುಗುತ್ತಿವೆ. 7 ಸಾವಿರ ಶಾಲೆಗಳಲ್ಲಿ ಏಕೋಪಾಧ್ಯಾಯ ಶಿಕ್ಷಕರಿದ್ದಾರೆ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿನ ಶಾಲೆಗಳನ್ನು ಅಭಿವೃದ್ಧಿಪಡಿಸದೇ, ಶಾಲೆಗಳನ್ನು ವಿಲೀನ ಮಾಡಿ ಮುಚ್ಚಿ ಹಾಕುತ್ತಿರುವುದು ಶಿಕ್ಷಣ ವಿರೋಧಿ ನಿಲುವಾಗಿದೆ ಎಂದರು.

ಊರಿನ ಶಾಲೆಗಳನ್ನು ಕೊಂದು ಸ್ಥಾಪಿಸಲಾಗುತ್ತಿರುವ ಈ ಕೆಪಿಎಸ್ ಶಾಲೆಗಳಲ್ಲಿ ಕೌಶಲ್ಯದ ಹೆಸರಿನಲ್ಲಿ ಬಡ ಮಕ್ಕಳನ್ನು ಕಾರ್ಮಿಕರನ್ನಾಗಿಸುವ ವೃತ್ತಿ ಶಿಕ್ಷಣವನ್ನು 6ನೇ ತರಗತಿಯಿಂದಲೇ ಕಡ್ಡಾಯಗೊಳಿಸಲಾಗಿದೆ. ಮಣ್ಣಿನ ಹಣತೆ ತಯಾರಿಸುವುದು, ಅಡಿಕೆ ಸುಲಿಯುವುದು, ಟೈಲರಿಂಗ್ ಸೇರಿದಂತೆ ಮುಂತಾದ ಕಸುಬುಗಳನ್ನು ಕಲಿಸಲಾಗುವ ಪಠ್ಯಕ್ರಮವನ್ನು ಉದ್ಯಮ ಪಾಲುದಾರರೊಂದಿಗೆ ರೂಪಿಸಲು ಹೊರಟಿರುವ ಸರ್ಕಾರವು, ರೈತ-ಕಾರ್ಮಿಕರ ಮಕ್ಕಳನ್ನು ಮತ್ತೆ ಅವರ ಕಾರ್ಖಾನೆಗಳಲ್ಲಿ ಅಗ್ಗದ ಕೂಲಿಗೆ ದೂಡುವ ಹುನ್ನಾರವನ್ನು ರಚಿಸಿದೆ. ಶಿಕ್ಷಣವು ಚಾರಿತ್ರ್ಯ ನಿರ್ಮಾಣದ ಪ್ರಕ್ರಿಯೆಯಾಗಬೇಕೆಂಬ ದೇಶದ ಮಹಾನ್ ವ್ಯಕ್ತಿಗಳ ಆಶಯಕ್ಕೆ ತಿಲಾಂಜಲಿಯಿಟ್ಟು ಕನಿಷ್ಟ ವಿಷಯಗಳ ಜ್ಞಾನ ಹೊಂದಿರದ, ಚಿಂತನೆಯ ಪರಿವೆಯಿಲ್ಲದ ಯಂತ್ರಮಾನವರನ್ನು ಸೃಷ್ಟಿಸುವ ನಾಗರಿಕತೆ ವಿರೋಧಿ ಕೆಲಸಕ್ಕೆ ಕರ್ನಾಟಕ ರಾಜ್ಯ ಸರ್ಕಾರವು ಮುಂದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ಈ ನಡೆ ವಿರುದ್ಧ ರಾಜ್ಯದಲ್ಲೆಡೆ ಜನ ಹೋರಾಟ ಭುಗಿಲೆದ್ದಿದೆ. ಸಾವಿರಾರು ಸಂಖ್ಯೆಯಲ್ಲಿ ಪಾಲಕರು ಹಾಗೂ ಗ್ರಾಮಸ್ಥರು ಬೀದಿಗಿಳಿದು ಊರಿನ ಶಾಲೆಗಳನ್ನು ಮುಚ್ಚುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ತೀವ್ರ ಜನವಿರೋಧದ ನಡುವೆಯೂ ಸರ್ಕಾರವು ಈ ಕುಕೃತ್ಯವನ್ನು ಮುಂದುವರೆಸಿದೆ. ಜನಾಭಿಪ್ರಾಯವನ್ನು ಧಿಕ್ಕರಿಸಿರುವ ಸರ್ಕಾರದ ಈ ನಿರಂಕುಶ ಮತ್ತು ಅಪ್ರಜಾತಾಂತ್ರಿಕ ನಡೆಯನ್ನು ಎಡ ವಿದ್ಯಾರ್ಥಿ ಸಂಘಟನೆಗಳು ಅತ್ಯುಗ್ರ ಪದಗಳಲ್ಲಿ ಖಂಡಿಸುತ್ತವೆ. ಈ ಕೂಡಲೇ ಕರಾಳ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಹಿಂಪಡೆಯಬೇಕು ಮತ್ತು ಶಿಕ್ಷಕರು ಹಾಗೂ ಸೌಲಭ್ಯಗಳ ಕೊರತೆಯಿಂದ ನರಳುತ್ತಿರುವ ರಾಜ್ಯದ ಸರ್ಕಾರಿ ಶಾಲೆಗಳಿಗೆ ಸಮರ್ಪಕ ಸೌಲಭ್ಯ ನೀಡಿ ಅಭಿವೃದ್ಧಿಪಡಿಸಬೇಕೆಂದು ರಾಜ್ಯದ ವಿದ್ಯಾರ್ಥಿಗಳು, ಶಿಕ್ಷಕರು, ಪಾಲಕರು ಹಾಗೂ ಶಿಕ್ಷಣ ಪ್ರೇಮಿ ಜನತೆಯ ಪರವಾಗಿ ಸರ್ಕಾರವನ್ನು ಆಗ್ರಹಿಸುತ್ತದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಎಐಎಸ್ಎಫ್ ರಾಜ್ಯಾಧ್ಯಕ್ಷೆ ವೀಣಾ ನಾಯಕ್, ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ವಿಜಯ್ ಕುಮಾರ್ ಟಿಎಸ್, ಎಐಡಿಎಸ್ಓ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ, ಎಐಎಸ್ಎ ಜಿಲ್ಲಾ ಮಂಡಳಿ ಸದಸ್ಯ ಸುಶಾಂತ್, ಹಾಗೂ ಕೆವಿಎಸ್ ರಾಜ್ಯ ಕಾರ್ಯದರ್ಶಿ ದುರ್ಗೇಶ್ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...