Homeಕರ್ನಾಟಕ‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ ವಿರುದ್ಧ ‘ಮುಂದಿನ ನಡೆ ಬಗ್ಗೆ’ ಶನಿವಾರ ಬೆಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಭೆ

‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ ವಿರುದ್ಧ ‘ಮುಂದಿನ ನಡೆ ಬಗ್ಗೆ’ ಶನಿವಾರ ಬೆಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಭೆ

ಸಾಮಾಜಿಕ ಮಾಧ್ಯಮಗಳಲ್ಲಿ ಈಗಾಗಲೇ ಪಠ್ಯಪುಸ್ತಕಗಳ ಬ್ರಾಹ್ಮಣೀಕರದ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು ಹಲವಾರು ಪೋಸ್ಟರ್‌ಗಳು ಹರಿದಾಡುತ್ತಿದೆ. ಅವುಗಳಲ್ಲಿ ಆಯ್ದ ಕೆಲವು ಇಲ್ಲಿವೆ.

- Advertisement -
- Advertisement -

ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರವು, ನಾಡಿನ ಹಲವು ಚಿಂತಕರು ಮತ್ತು ಮಹಾತ್ಮರ ಪಾಠಗಳನ್ನು ಶಾಲಾ ಪಠ್ಯದಿಂದ ಕೈಬಿಟ್ಟಿರುವುದನ್ನು ವಿರೋಧಿಸಿ, ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ತಜ್ಞರು ಹಾಗೂ ಸಮಾನ ಮನಸ್ಕರು ಬೆಂಗಳೂರಿನ ಗಾಂಧಿಭವನದಲ್ಲಿ ಶನಿವಾರದಂದು ಸಭೆಯೊಂದನ್ನು ಆಯೋಜಿಸಿದ್ದು, ‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ ವಿಷಯದಲ್ಲಿ ‘ನಮ್ಮ ಮುಂದಿನ ನಡೆ ಏನಾಗಿರಬೇಕು?’ ಎಂಬ ವಿಚಾರದಲ್ಲಿ ಚರ್ಚೆ ನಡೆಸಲಿದ್ದಾರೆ.

ರಾಜ್ಯ ಸರ್ಕಾರ 2022-23ರ ಸಾಲಿನ ಶಾಲಾ ಪಠ್ಯಪುಸ್ತಕವನ್ನು ಆರೆಸ್ಸೆಸ್‌ ಮತ್ತು ಬಿಜೆಪಿ ಪರ ಒಲವಿರುವ ಬಲಪಂಥೀಯ ಲೇಖಕ ರೋಹಿತ್‌ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ಪರಿಷ್ಕರಿಸಿದೆ. ಈ ವೇಳೆ ಸಮಿತಿಯು ನಾಡಿನ ಖ್ಯಾತ ಸಾಹಿತಿಗಳಾದ ಪಿ.ಲಂಕೇಶ್‌, ಸಾರಾ ಅಬೂಬಕ್ಕರ್‌, ಡಾ.ಜಿ.ರಾಮಕೃಷ್ಣ ಅವರ ಬರಹಗಳು ಸೇರಿದಂತೆ, ಸಮಾಜ ಸುಧಾರಕ ನಾರಾಯಣ ಗುರು, ಕ್ರಾಂತಿಕಾರಿ ನಾಯಕ ಭಗತ್‌‌ಸಿಂಗ್‌, ಸಾಮಾಜಿಕ ನ್ಯಾಯದ ಹರಿಕಾರ ಪೆರಿಯಾರ್‌‌ ಸೇರಿದಂತೆ ಹಲವಾರು ಮಹಾತ್ಮರ ಪರಿಚಯಿಸುವ ಪಠ್ಯಗಳನ್ನು ಕೈಬಿಟ್ಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಎಲ್ಲಾ ಬೆಳವಣಿಗೆಯ ಹಿನ್ನಲೆಯಲ್ಲಿ ರಾಜ್ಯದ ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ತಜ್ಞರು ಹಾಗೂ ಸಮಾನ ಮನಸ್ಕರು ಬೆಂಗಳೂರಿನ ಗಾಂಧಿ ಭವನದಲ್ಲಿ ಸೇರಿ, ‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ದ ವಿರುದ್ಧ, ‘‘ನಮ್ಮ ಮುಂದಿನ ನಡೆ ಏನಾಗಿರ ಬೇಕು” ಎಂಬ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ: ‘ಕೆಟ್ಟ ನಡತೆಯ ಇಂಥ ಸಿರಿಯೆಂಬ ಹೆಣ್ಣು’: ನೂತನ ಪಠ್ಯದಲ್ಲಿ ಹೆಣ್ಣನ್ನು ಕೀಳಾಗಿ ಬಿಂಬಿಸಿರುವ ಬನ್ನಂಜೆ ಗೋವಿಂದಾಚಾರ್ಯ

ಸಭೆಯು ಮೇ 21ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯಲಿದೆ. ರಾಜ್ಯದ ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ತಜ್ಞರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸರ್ಕಾರವು ಕೈ ಬಿಟ್ಟಿರುವ ಪಾಠಗಳ ಜಾಗಕ್ಕೆ ಆರೆಸ್ಸೆಸ್‌ ನಾಯಕ ಹೆಡಗೆವಾರ್‌ ಅವರು ‘ಭಗವಾಧ್ವಜ ನಮ್ಮ ಆದರ್ಶವಾಗಬೇಕು’ ಎಂಬ ಭಾಷಣ ಹಾಗೂ ಬನ್ನಂಜೆ ಗೋವಿಂದಾಚಾರ್ಯ ಮತ್ತು ಆರ್‌.ಗಣೇಶ್‌ ಅವರ ವೈದಿಕ ಸಂಸ್ಕೃತಿಯ ವೈಭವೀಕರಣ, ಸ್ತ್ರೀದ್ವೇಷಿ ಬರಹಗಳನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗಿದೆ.

ಸರ್ಕಾರವು ಶಾಲಾ ಪಠ್ಯಗಳನ್ನು ರಾಜಕೀಯ ಪಕ್ಷಗಳ ಪುಸ್ತಕವನ್ನಾಗಿ ಮಾಡುತ್ತಿರುವುದರ ವಿರುದ್ದ ರಾಜ್ಯದಾದ್ಯಂತ ಈಗಾಗಲೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಹಲವಾರು ಶಿಕ್ಷಣ ತಜ್ಞರು, ಅಧ್ಯಾಪಕರು, ಪಠ್ಯಗಳನ್ನು ಪರಿಷ್ಕರಣೆ ಮಾಡಿರುವ ರೋಹಿತ್ ಚಕ್ರತೀರ್ಥ ಅವರ ಅರ್ಹತೆಗಳ ಬಗ್ಗೆ ಕೂಡಾ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಜಿ.ರಾಮಕೃಷ್ಣ, ಲಂಕೇಶ್‌ರವರ ಜಾತಿ ಗೊತ್ತಿಲ್ಲ: ರೋಹಿತ್ ಚಕ್ರತೀರ್ಥ ಸಂದರ್ಶನ

ಸಾಮಾಜಿಕ ಮಾಧ್ಯಮಗಳಲ್ಲಿ ಈಗಾಗಲೇ ಪಠ್ಯಪುಸ್ತಕಗಳ ಬ್ರಾಹ್ಮಣೀಕರದ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು ಹಲವಾರು ಪೋಸ್ಟರ್‌ಗಳು ಹರಿದಾಡುತ್ತಿದೆ. ಅವುಗಳಲ್ಲಿ ಆಯ್ದ ಕೆಲವು ಇಲ್ಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮುಗ್ಧ ಮಕ್ಕಳ ಕಲಿಕೆಯ ಪಠ್ಯ ಪುಸ್ತಕಗಳ ಕೇಸರಿಕರಣ, ಕ್ಷುದ್ರ ಮತ್ತು ಕ್ಷುಲ್ಲಕ! ಅಂಧಭಕ್ತರ ಆರ್ಭಟ ಈ ಮಟ್ಟದ ದುರ್ಗತಿಗೆ ಇಳಿದಿದೆ! ನಾಡಿನ ಸಮಸ್ತರೂ ಇದರ ವಿರುದ್ಧ ಧ್ವನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...