Homeಕರ್ನಾಟಕ‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ ವಿರುದ್ಧ ‘ಮುಂದಿನ ನಡೆ ಬಗ್ಗೆ’ ಶನಿವಾರ ಬೆಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಭೆ

‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ ವಿರುದ್ಧ ‘ಮುಂದಿನ ನಡೆ ಬಗ್ಗೆ’ ಶನಿವಾರ ಬೆಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಭೆ

ಸಾಮಾಜಿಕ ಮಾಧ್ಯಮಗಳಲ್ಲಿ ಈಗಾಗಲೇ ಪಠ್ಯಪುಸ್ತಕಗಳ ಬ್ರಾಹ್ಮಣೀಕರದ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು ಹಲವಾರು ಪೋಸ್ಟರ್‌ಗಳು ಹರಿದಾಡುತ್ತಿದೆ. ಅವುಗಳಲ್ಲಿ ಆಯ್ದ ಕೆಲವು ಇಲ್ಲಿವೆ.

- Advertisement -
- Advertisement -

ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರವು, ನಾಡಿನ ಹಲವು ಚಿಂತಕರು ಮತ್ತು ಮಹಾತ್ಮರ ಪಾಠಗಳನ್ನು ಶಾಲಾ ಪಠ್ಯದಿಂದ ಕೈಬಿಟ್ಟಿರುವುದನ್ನು ವಿರೋಧಿಸಿ, ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ತಜ್ಞರು ಹಾಗೂ ಸಮಾನ ಮನಸ್ಕರು ಬೆಂಗಳೂರಿನ ಗಾಂಧಿಭವನದಲ್ಲಿ ಶನಿವಾರದಂದು ಸಭೆಯೊಂದನ್ನು ಆಯೋಜಿಸಿದ್ದು, ‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ ವಿಷಯದಲ್ಲಿ ‘ನಮ್ಮ ಮುಂದಿನ ನಡೆ ಏನಾಗಿರಬೇಕು?’ ಎಂಬ ವಿಚಾರದಲ್ಲಿ ಚರ್ಚೆ ನಡೆಸಲಿದ್ದಾರೆ.

ರಾಜ್ಯ ಸರ್ಕಾರ 2022-23ರ ಸಾಲಿನ ಶಾಲಾ ಪಠ್ಯಪುಸ್ತಕವನ್ನು ಆರೆಸ್ಸೆಸ್‌ ಮತ್ತು ಬಿಜೆಪಿ ಪರ ಒಲವಿರುವ ಬಲಪಂಥೀಯ ಲೇಖಕ ರೋಹಿತ್‌ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ಪರಿಷ್ಕರಿಸಿದೆ. ಈ ವೇಳೆ ಸಮಿತಿಯು ನಾಡಿನ ಖ್ಯಾತ ಸಾಹಿತಿಗಳಾದ ಪಿ.ಲಂಕೇಶ್‌, ಸಾರಾ ಅಬೂಬಕ್ಕರ್‌, ಡಾ.ಜಿ.ರಾಮಕೃಷ್ಣ ಅವರ ಬರಹಗಳು ಸೇರಿದಂತೆ, ಸಮಾಜ ಸುಧಾರಕ ನಾರಾಯಣ ಗುರು, ಕ್ರಾಂತಿಕಾರಿ ನಾಯಕ ಭಗತ್‌‌ಸಿಂಗ್‌, ಸಾಮಾಜಿಕ ನ್ಯಾಯದ ಹರಿಕಾರ ಪೆರಿಯಾರ್‌‌ ಸೇರಿದಂತೆ ಹಲವಾರು ಮಹಾತ್ಮರ ಪರಿಚಯಿಸುವ ಪಠ್ಯಗಳನ್ನು ಕೈಬಿಟ್ಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಎಲ್ಲಾ ಬೆಳವಣಿಗೆಯ ಹಿನ್ನಲೆಯಲ್ಲಿ ರಾಜ್ಯದ ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ತಜ್ಞರು ಹಾಗೂ ಸಮಾನ ಮನಸ್ಕರು ಬೆಂಗಳೂರಿನ ಗಾಂಧಿ ಭವನದಲ್ಲಿ ಸೇರಿ, ‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ದ ವಿರುದ್ಧ, ‘‘ನಮ್ಮ ಮುಂದಿನ ನಡೆ ಏನಾಗಿರ ಬೇಕು” ಎಂಬ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ: ‘ಕೆಟ್ಟ ನಡತೆಯ ಇಂಥ ಸಿರಿಯೆಂಬ ಹೆಣ್ಣು’: ನೂತನ ಪಠ್ಯದಲ್ಲಿ ಹೆಣ್ಣನ್ನು ಕೀಳಾಗಿ ಬಿಂಬಿಸಿರುವ ಬನ್ನಂಜೆ ಗೋವಿಂದಾಚಾರ್ಯ

ಸಭೆಯು ಮೇ 21ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯಲಿದೆ. ರಾಜ್ಯದ ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ತಜ್ಞರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸರ್ಕಾರವು ಕೈ ಬಿಟ್ಟಿರುವ ಪಾಠಗಳ ಜಾಗಕ್ಕೆ ಆರೆಸ್ಸೆಸ್‌ ನಾಯಕ ಹೆಡಗೆವಾರ್‌ ಅವರು ‘ಭಗವಾಧ್ವಜ ನಮ್ಮ ಆದರ್ಶವಾಗಬೇಕು’ ಎಂಬ ಭಾಷಣ ಹಾಗೂ ಬನ್ನಂಜೆ ಗೋವಿಂದಾಚಾರ್ಯ ಮತ್ತು ಆರ್‌.ಗಣೇಶ್‌ ಅವರ ವೈದಿಕ ಸಂಸ್ಕೃತಿಯ ವೈಭವೀಕರಣ, ಸ್ತ್ರೀದ್ವೇಷಿ ಬರಹಗಳನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗಿದೆ.

ಸರ್ಕಾರವು ಶಾಲಾ ಪಠ್ಯಗಳನ್ನು ರಾಜಕೀಯ ಪಕ್ಷಗಳ ಪುಸ್ತಕವನ್ನಾಗಿ ಮಾಡುತ್ತಿರುವುದರ ವಿರುದ್ದ ರಾಜ್ಯದಾದ್ಯಂತ ಈಗಾಗಲೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಹಲವಾರು ಶಿಕ್ಷಣ ತಜ್ಞರು, ಅಧ್ಯಾಪಕರು, ಪಠ್ಯಗಳನ್ನು ಪರಿಷ್ಕರಣೆ ಮಾಡಿರುವ ರೋಹಿತ್ ಚಕ್ರತೀರ್ಥ ಅವರ ಅರ್ಹತೆಗಳ ಬಗ್ಗೆ ಕೂಡಾ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಜಿ.ರಾಮಕೃಷ್ಣ, ಲಂಕೇಶ್‌ರವರ ಜಾತಿ ಗೊತ್ತಿಲ್ಲ: ರೋಹಿತ್ ಚಕ್ರತೀರ್ಥ ಸಂದರ್ಶನ

ಸಾಮಾಜಿಕ ಮಾಧ್ಯಮಗಳಲ್ಲಿ ಈಗಾಗಲೇ ಪಠ್ಯಪುಸ್ತಕಗಳ ಬ್ರಾಹ್ಮಣೀಕರದ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು ಹಲವಾರು ಪೋಸ್ಟರ್‌ಗಳು ಹರಿದಾಡುತ್ತಿದೆ. ಅವುಗಳಲ್ಲಿ ಆಯ್ದ ಕೆಲವು ಇಲ್ಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮುಗ್ಧ ಮಕ್ಕಳ ಕಲಿಕೆಯ ಪಠ್ಯ ಪುಸ್ತಕಗಳ ಕೇಸರಿಕರಣ, ಕ್ಷುದ್ರ ಮತ್ತು ಕ್ಷುಲ್ಲಕ! ಅಂಧಭಕ್ತರ ಆರ್ಭಟ ಈ ಮಟ್ಟದ ದುರ್ಗತಿಗೆ ಇಳಿದಿದೆ! ನಾಡಿನ ಸಮಸ್ತರೂ ಇದರ ವಿರುದ್ಧ ಧ್ವನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...