Homeಕರ್ನಾಟಕ‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ ವಿರುದ್ಧ ‘ಮುಂದಿನ ನಡೆ ಬಗ್ಗೆ’ ಶನಿವಾರ ಬೆಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಭೆ

‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ ವಿರುದ್ಧ ‘ಮುಂದಿನ ನಡೆ ಬಗ್ಗೆ’ ಶನಿವಾರ ಬೆಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಭೆ

ಸಾಮಾಜಿಕ ಮಾಧ್ಯಮಗಳಲ್ಲಿ ಈಗಾಗಲೇ ಪಠ್ಯಪುಸ್ತಕಗಳ ಬ್ರಾಹ್ಮಣೀಕರದ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು ಹಲವಾರು ಪೋಸ್ಟರ್‌ಗಳು ಹರಿದಾಡುತ್ತಿದೆ. ಅವುಗಳಲ್ಲಿ ಆಯ್ದ ಕೆಲವು ಇಲ್ಲಿವೆ.

- Advertisement -
- Advertisement -

ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರವು, ನಾಡಿನ ಹಲವು ಚಿಂತಕರು ಮತ್ತು ಮಹಾತ್ಮರ ಪಾಠಗಳನ್ನು ಶಾಲಾ ಪಠ್ಯದಿಂದ ಕೈಬಿಟ್ಟಿರುವುದನ್ನು ವಿರೋಧಿಸಿ, ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ತಜ್ಞರು ಹಾಗೂ ಸಮಾನ ಮನಸ್ಕರು ಬೆಂಗಳೂರಿನ ಗಾಂಧಿಭವನದಲ್ಲಿ ಶನಿವಾರದಂದು ಸಭೆಯೊಂದನ್ನು ಆಯೋಜಿಸಿದ್ದು, ‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ ವಿಷಯದಲ್ಲಿ ‘ನಮ್ಮ ಮುಂದಿನ ನಡೆ ಏನಾಗಿರಬೇಕು?’ ಎಂಬ ವಿಚಾರದಲ್ಲಿ ಚರ್ಚೆ ನಡೆಸಲಿದ್ದಾರೆ.

ರಾಜ್ಯ ಸರ್ಕಾರ 2022-23ರ ಸಾಲಿನ ಶಾಲಾ ಪಠ್ಯಪುಸ್ತಕವನ್ನು ಆರೆಸ್ಸೆಸ್‌ ಮತ್ತು ಬಿಜೆಪಿ ಪರ ಒಲವಿರುವ ಬಲಪಂಥೀಯ ಲೇಖಕ ರೋಹಿತ್‌ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ಪರಿಷ್ಕರಿಸಿದೆ. ಈ ವೇಳೆ ಸಮಿತಿಯು ನಾಡಿನ ಖ್ಯಾತ ಸಾಹಿತಿಗಳಾದ ಪಿ.ಲಂಕೇಶ್‌, ಸಾರಾ ಅಬೂಬಕ್ಕರ್‌, ಡಾ.ಜಿ.ರಾಮಕೃಷ್ಣ ಅವರ ಬರಹಗಳು ಸೇರಿದಂತೆ, ಸಮಾಜ ಸುಧಾರಕ ನಾರಾಯಣ ಗುರು, ಕ್ರಾಂತಿಕಾರಿ ನಾಯಕ ಭಗತ್‌‌ಸಿಂಗ್‌, ಸಾಮಾಜಿಕ ನ್ಯಾಯದ ಹರಿಕಾರ ಪೆರಿಯಾರ್‌‌ ಸೇರಿದಂತೆ ಹಲವಾರು ಮಹಾತ್ಮರ ಪರಿಚಯಿಸುವ ಪಠ್ಯಗಳನ್ನು ಕೈಬಿಟ್ಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಎಲ್ಲಾ ಬೆಳವಣಿಗೆಯ ಹಿನ್ನಲೆಯಲ್ಲಿ ರಾಜ್ಯದ ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ತಜ್ಞರು ಹಾಗೂ ಸಮಾನ ಮನಸ್ಕರು ಬೆಂಗಳೂರಿನ ಗಾಂಧಿ ಭವನದಲ್ಲಿ ಸೇರಿ, ‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ದ ವಿರುದ್ಧ, ‘‘ನಮ್ಮ ಮುಂದಿನ ನಡೆ ಏನಾಗಿರ ಬೇಕು” ಎಂಬ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ: ‘ಕೆಟ್ಟ ನಡತೆಯ ಇಂಥ ಸಿರಿಯೆಂಬ ಹೆಣ್ಣು’: ನೂತನ ಪಠ್ಯದಲ್ಲಿ ಹೆಣ್ಣನ್ನು ಕೀಳಾಗಿ ಬಿಂಬಿಸಿರುವ ಬನ್ನಂಜೆ ಗೋವಿಂದಾಚಾರ್ಯ

ಸಭೆಯು ಮೇ 21ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯಲಿದೆ. ರಾಜ್ಯದ ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ತಜ್ಞರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸರ್ಕಾರವು ಕೈ ಬಿಟ್ಟಿರುವ ಪಾಠಗಳ ಜಾಗಕ್ಕೆ ಆರೆಸ್ಸೆಸ್‌ ನಾಯಕ ಹೆಡಗೆವಾರ್‌ ಅವರು ‘ಭಗವಾಧ್ವಜ ನಮ್ಮ ಆದರ್ಶವಾಗಬೇಕು’ ಎಂಬ ಭಾಷಣ ಹಾಗೂ ಬನ್ನಂಜೆ ಗೋವಿಂದಾಚಾರ್ಯ ಮತ್ತು ಆರ್‌.ಗಣೇಶ್‌ ಅವರ ವೈದಿಕ ಸಂಸ್ಕೃತಿಯ ವೈಭವೀಕರಣ, ಸ್ತ್ರೀದ್ವೇಷಿ ಬರಹಗಳನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗಿದೆ.

ಸರ್ಕಾರವು ಶಾಲಾ ಪಠ್ಯಗಳನ್ನು ರಾಜಕೀಯ ಪಕ್ಷಗಳ ಪುಸ್ತಕವನ್ನಾಗಿ ಮಾಡುತ್ತಿರುವುದರ ವಿರುದ್ದ ರಾಜ್ಯದಾದ್ಯಂತ ಈಗಾಗಲೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಹಲವಾರು ಶಿಕ್ಷಣ ತಜ್ಞರು, ಅಧ್ಯಾಪಕರು, ಪಠ್ಯಗಳನ್ನು ಪರಿಷ್ಕರಣೆ ಮಾಡಿರುವ ರೋಹಿತ್ ಚಕ್ರತೀರ್ಥ ಅವರ ಅರ್ಹತೆಗಳ ಬಗ್ಗೆ ಕೂಡಾ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಜಿ.ರಾಮಕೃಷ್ಣ, ಲಂಕೇಶ್‌ರವರ ಜಾತಿ ಗೊತ್ತಿಲ್ಲ: ರೋಹಿತ್ ಚಕ್ರತೀರ್ಥ ಸಂದರ್ಶನ

ಸಾಮಾಜಿಕ ಮಾಧ್ಯಮಗಳಲ್ಲಿ ಈಗಾಗಲೇ ಪಠ್ಯಪುಸ್ತಕಗಳ ಬ್ರಾಹ್ಮಣೀಕರದ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು ಹಲವಾರು ಪೋಸ್ಟರ್‌ಗಳು ಹರಿದಾಡುತ್ತಿದೆ. ಅವುಗಳಲ್ಲಿ ಆಯ್ದ ಕೆಲವು ಇಲ್ಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮುಗ್ಧ ಮಕ್ಕಳ ಕಲಿಕೆಯ ಪಠ್ಯ ಪುಸ್ತಕಗಳ ಕೇಸರಿಕರಣ, ಕ್ಷುದ್ರ ಮತ್ತು ಕ್ಷುಲ್ಲಕ! ಅಂಧಭಕ್ತರ ಆರ್ಭಟ ಈ ಮಟ್ಟದ ದುರ್ಗತಿಗೆ ಇಳಿದಿದೆ! ನಾಡಿನ ಸಮಸ್ತರೂ ಇದರ ವಿರುದ್ಧ ಧ್ವನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...