Homeಕರ್ನಾಟಕನವೆಂಬರ್‌ 26 ರ ಅಖಿಲ ಭಾರತ ಮುಷ್ಕರಕ್ಕೆ ವಿದ್ಯಾರ್ಥಿ ಸಂಘಟನೆಗಳ ಬೆಂಬಲ

ನವೆಂಬರ್‌ 26 ರ ಅಖಿಲ ಭಾರತ ಮುಷ್ಕರಕ್ಕೆ ವಿದ್ಯಾರ್ಥಿ ಸಂಘಟನೆಗಳ ಬೆಂಬಲ

ರಾಷ್ಟ್ರೀಯ ಶಿಕ್ಷಣ ನೀತಿ-2020 ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಮುಷ್ಕರವನ್ನು ಬೆಂಬಲಿಸಿದ್ದು, ಹೊಸ ಶಿಕ್ಷಣ ನೀತಿ ಮೇಲುನೋಟಕ್ಕೆ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ ಆಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ, ಕೇಸರೀಕರಣ, ಇತಿಹಾಸ ತಿರುಚುವಿಕೆ ಸೇರಿದಂತೆ ಹಲವು ಅಂಶಗಳು ಅಡಕವಾಗಿದೆ ಎಂದು ಅದು ಹೇಳಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಅಸಂವಿಧಾನಿಕವಾಗಿ ಜಾರಿಗೊಳಿಸುತ್ತಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ- 2020 ವಿರೋಧಿಸಿ ನವೆಂಬರ್-26 ರಂದು ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಎಡ ವಿದ್ಯಾರ್ಥಿ ಸಂಘಟನೆಗಳ ಜಂಟಿ ಒಕ್ಕೂಟ ಕರೆ ನೀಡಿದೆ. ಇಂದು ಬೆಂಗಳೂರಿನ ಸೂರಿ ಭವನದಲ್ಲಿ ಸಭೆ ಸೇರಿದ ಎಡ ವಿದ್ಯಾರ್ಥಿ ಸಂಘಟನೆಗಳಾದ AISF, SFI, AIDSO, AISA ಮತ್ತು KVS, “ಹೊಸ ಶಿಕ್ಷಣ ನೀತಿ ಮೇಲುನೋಟಕ್ಕೆ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ ಅದರ ಆಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ, ಕೇಸರೀಕರಣ, ಇತಿಹಾಸ ತಿರುಚುವಿಕೆ ಸೇರಿದಂತೆ ಹಲವು ಅಂಶಗಳು ಅಡಕವಾಗಿದೆ ಎಂದು ಹೇಳಿದೆ.

“ಕೇಂದ್ರ ಸರ್ಕಾರವು ಜಾರಿ ಮಾಡಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಹಿಂದಿ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಇದ್ದು, ಭಾರತದ ಇನ್ನುಳಿದ ರಾಷ್ಟ್ರೀಯ ಪ್ರಾದೇಶಿಕ ಭಾಷೆಗಳಲ್ಲಿ ಇಲ್ಲ. ಸಾರ್ವಜನಿಕವಾಗಿ ಹಾಗೂ ಕೇಂದ್ರ ಮತ್ತು ರಾಜ್ಯಗಳ ಶಾಸನ ಸಭೆಯಲ್ಲಿ ಚರ್ಚೆಯಾಗದೆ, ಅದರ ಸಾಧಕ-ಬಾಧಕಗಳನ್ನು ಅರಿಯದೆ ಜಾರಿ ಮಾಡಲು ಹೊರಟಿರುವುದು ಪ್ರಜಾಪ್ರಭುತ್ವದ ಕಗ್ಗೂಲೆಯಾಗುತ್ತದೆ” ಎಡ ವಿದ್ಯಾರ್ಥಿ ಸಂಘಟನೆಗಳ ಜಂಟಿ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಹೊಸ ಶಿಕ್ಷಣ ನೀತಿ: ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ ಮಾಡಿದ ವ್ಯವಸ್ಥಿತ ವಂಚನೆ!

“ಮೇಲುನೋಟಕ್ಕೆ ಹೊಸ ಶಿಕ್ಷಣ ನೀತಿ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ, ಅದರ ಆಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ, ಕೇಸರಿಕರಣ, ಇತಿಹಾಸ ತಿರುಚುಏಕೆ ಈ ರೀತಿ ಹತ್ತು ಹಲವು ಅಂಶಗಳು ಅಡಕವಾಗಿರುವುದು ಕಾಣುತ್ತದೆ. ನಮ್ಮ ರಾಜ್ಯದಲ್ಲೂ ಸಹ ಕೇಂದ್ರದ ಒತ್ತಡದ ಮೇರೆಗೆ ಯಾವುದೇ ರೀತಿಯ ಜನಾಭಿಪ್ರಾಯ ಸಂಗ್ರಹಿಸದೆ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರುತ್ತಿರುವುದು ಖಂಡನೀಯ” ಎಂದು ಅದು ಹೇಳಿದೆ.

ರಾಜ್ಯ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಯನ್ನು ಚರ್ಚೆಗೆ ಬಿಡಬೇಕು ಎಂದು ಹೇಳಿರುವ ಸಂಘಟನೆಗಳು, ಅದರಲ್ಲಿನ ಶಿಕ್ಷಣದ ಕೇಸರೀಕರಣ, ಕೇಂದ್ರೀಕರಣ, ಕೋಮುವಾದೀಕರಣ ಹೇರುವ ಅಂಶಗಳನ್ನು ಕೈಬಿಡಬೇಕು ಹಾಗೂ ಅದರ ಸಾಧಕ-ಬಾಧಕಗಳನ್ನು ಅರಿತು ನಂತರ ಲೋಪ ದೋಷಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ಶಿಕ್ಷಣವನ್ನು ವೇಗವಾಗಿ ವ್ಯಾಪಾರ ಮಾಡಲು ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ತರುತ್ತಿದೆ; ರಮೇಶ್ ಪಟ್ನಾಯಕ್

ಇಷ್ಟೇ ಅಲ್ಲದೆ ವಿದ್ಯಾರ್ಥಿ ಸಂಘಟನೆಗಳು ತಮ್ಮ ಬೇಡಿಕೆಯನ್ನು ಕೂಡಾ ಸರ್ಕಾರಗಳ ಮುಂದೆ ಇಟ್ಟಿದೆ.

  •  ಶಿಕ್ಷಣ ಕ್ಷೇತ್ರ ಸಂವಿಧಾನದ ಶೆಡ್ಯೂಲ್ -07 ರಂತೆ ಸಮವರ್ತಿ ಪಟ್ಟಿಯಲ್ಲಿ ಬರುತ್ತದೆ. ಆದರೆ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ರಾಜ್ಯ ಸರ್ಕಾರಗಳಿಗೆ ಇರುವ ಶಿಕ್ಷಣ ಕ್ಷೇತ್ರ ಅಧಿಕಾರ, ಹಕ್ಕುಗಳನ್ನು ಮೊಟಕುಗೊಳಿಸಿ ಶಿಕ್ಷಣವನ್ನು ನೀತಿ ನಿರೂಪಣೆಯ ಅಧಿಕಾರಿಗಳನ್ನು ಕೇಂದ್ರೀಕರಣಗೊಳಿಸುವ ಅಂಶಗಳನ್ನು ರಾಜ್ಯ ಸರ್ಕಾರ ವಿರೋಧಿಸಬೇಕು. ಅಲ್ಲದೆ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದ ಸರ್ಕಾರಕ್ಕಿರುವ ಅಧಿಕಾರ ಹಕ್ಕುಗಳನ್ನು ಕಾಯ್ದಿರಿಸಲು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಉಳಿಸಲು ಮುಂದಾಗಬೇಕು.
  • ಸರ್ಕಾರವೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ಸಂವಿಧಾನದ ಮಾನ್ಯತೆ ಪಡೆದ ಎಲ್ಲ ಭಾಷೆಗಳಿಗೆ ಅನುವಾದಿಸಿ ಅಧ್ಯಯನಕ್ಕೆ ಅವಕಾಶ ನೀಡಿ, ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು, ಅಂಗನವಾಡಿ, ಬಿಸಿಯೂಟ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲರೂ ಚರ್ಚಿಸಿ ತಿದ್ದುಪಡಿ ಸಲಹೆಗಳನ್ನು ನೀಡಲು ಅಗತ್ಯವಾದ ಕಾಲವಕಾಶ ನೀಡಬೇಕು.
  • ಕೇಂದ್ರ ಸರ್ಕಾರದ ಸಚಿವ ಸಂಪುಟ ಅನುಮೋದಿತ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ರಾಜ್ಯ ವಿಧಾನಸಭೆ, ವಿಧಾನ ಪರಿಷತ್ತಿನ ಉಭಯ ಸದನಗಳಲ್ಲಿ ಸಮಗ್ರ ಚರ್ಚೆ ನಡೆಸಬೇಕು. ಈ ಸದನದಲ್ಲಿ ಈ ಕುರಿತು ಜನಪ್ರತಿನಿಧಿಗಳು ಮಾತನಾಡಬೇಕು.
  • ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಪ್ರಸ್ತಾಪಿಸಿರುವ ತ್ರಿಭಾಷಾ ಸೂತ್ರವನ್ನು ತಮಿಳುನಾಡು ರಾಜ್ಯ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರ ವಿರೋಧಿಸಬೇಕು.
  • ಕೊರೊನಾ-ಕಾಲಾವಧಿಯಲ್ಲಿ ದೇಶದ ಭವಿಷ್ಯವನ್ನು ರೂಪಿಸುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಯ ಕುರಿತು ರಾಜ್ಯ ಸರ್ಕಾರದ ಮಂತ್ರಿಗಳು ನಡೆಸುತ್ತಿರುವ ಏಕಮುಖವಾದ, ಅಪ್ರಜಾಸತ್ತಾತ್ಮಕವಾದ ಅನುಷ್ಠಾನದ ತಯಾರಿಗಳನ್ನು ಕೈ ಬಿಡಲು ಒತ್ತಾಯಿಸಬೇಕು.

ಇದನ್ನೂ ಓದಿ: ಹೊಸ ಶಿಕ್ಷಣ ನೀತಿ ಏನು? ಎತ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...