Homeಕರ್ನಾಟಕನವೆಂಬರ್‌ 26 ರ ಅಖಿಲ ಭಾರತ ಮುಷ್ಕರಕ್ಕೆ ವಿದ್ಯಾರ್ಥಿ ಸಂಘಟನೆಗಳ ಬೆಂಬಲ

ನವೆಂಬರ್‌ 26 ರ ಅಖಿಲ ಭಾರತ ಮುಷ್ಕರಕ್ಕೆ ವಿದ್ಯಾರ್ಥಿ ಸಂಘಟನೆಗಳ ಬೆಂಬಲ

ರಾಷ್ಟ್ರೀಯ ಶಿಕ್ಷಣ ನೀತಿ-2020 ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಮುಷ್ಕರವನ್ನು ಬೆಂಬಲಿಸಿದ್ದು, ಹೊಸ ಶಿಕ್ಷಣ ನೀತಿ ಮೇಲುನೋಟಕ್ಕೆ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ ಆಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ, ಕೇಸರೀಕರಣ, ಇತಿಹಾಸ ತಿರುಚುವಿಕೆ ಸೇರಿದಂತೆ ಹಲವು ಅಂಶಗಳು ಅಡಕವಾಗಿದೆ ಎಂದು ಅದು ಹೇಳಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಅಸಂವಿಧಾನಿಕವಾಗಿ ಜಾರಿಗೊಳಿಸುತ್ತಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ- 2020 ವಿರೋಧಿಸಿ ನವೆಂಬರ್-26 ರಂದು ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಎಡ ವಿದ್ಯಾರ್ಥಿ ಸಂಘಟನೆಗಳ ಜಂಟಿ ಒಕ್ಕೂಟ ಕರೆ ನೀಡಿದೆ. ಇಂದು ಬೆಂಗಳೂರಿನ ಸೂರಿ ಭವನದಲ್ಲಿ ಸಭೆ ಸೇರಿದ ಎಡ ವಿದ್ಯಾರ್ಥಿ ಸಂಘಟನೆಗಳಾದ AISF, SFI, AIDSO, AISA ಮತ್ತು KVS, “ಹೊಸ ಶಿಕ್ಷಣ ನೀತಿ ಮೇಲುನೋಟಕ್ಕೆ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ ಅದರ ಆಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ, ಕೇಸರೀಕರಣ, ಇತಿಹಾಸ ತಿರುಚುವಿಕೆ ಸೇರಿದಂತೆ ಹಲವು ಅಂಶಗಳು ಅಡಕವಾಗಿದೆ ಎಂದು ಹೇಳಿದೆ.

“ಕೇಂದ್ರ ಸರ್ಕಾರವು ಜಾರಿ ಮಾಡಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಹಿಂದಿ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಇದ್ದು, ಭಾರತದ ಇನ್ನುಳಿದ ರಾಷ್ಟ್ರೀಯ ಪ್ರಾದೇಶಿಕ ಭಾಷೆಗಳಲ್ಲಿ ಇಲ್ಲ. ಸಾರ್ವಜನಿಕವಾಗಿ ಹಾಗೂ ಕೇಂದ್ರ ಮತ್ತು ರಾಜ್ಯಗಳ ಶಾಸನ ಸಭೆಯಲ್ಲಿ ಚರ್ಚೆಯಾಗದೆ, ಅದರ ಸಾಧಕ-ಬಾಧಕಗಳನ್ನು ಅರಿಯದೆ ಜಾರಿ ಮಾಡಲು ಹೊರಟಿರುವುದು ಪ್ರಜಾಪ್ರಭುತ್ವದ ಕಗ್ಗೂಲೆಯಾಗುತ್ತದೆ” ಎಡ ವಿದ್ಯಾರ್ಥಿ ಸಂಘಟನೆಗಳ ಜಂಟಿ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಹೊಸ ಶಿಕ್ಷಣ ನೀತಿ: ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ ಮಾಡಿದ ವ್ಯವಸ್ಥಿತ ವಂಚನೆ!

“ಮೇಲುನೋಟಕ್ಕೆ ಹೊಸ ಶಿಕ್ಷಣ ನೀತಿ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ, ಅದರ ಆಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ, ಕೇಸರಿಕರಣ, ಇತಿಹಾಸ ತಿರುಚುಏಕೆ ಈ ರೀತಿ ಹತ್ತು ಹಲವು ಅಂಶಗಳು ಅಡಕವಾಗಿರುವುದು ಕಾಣುತ್ತದೆ. ನಮ್ಮ ರಾಜ್ಯದಲ್ಲೂ ಸಹ ಕೇಂದ್ರದ ಒತ್ತಡದ ಮೇರೆಗೆ ಯಾವುದೇ ರೀತಿಯ ಜನಾಭಿಪ್ರಾಯ ಸಂಗ್ರಹಿಸದೆ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರುತ್ತಿರುವುದು ಖಂಡನೀಯ” ಎಂದು ಅದು ಹೇಳಿದೆ.

ರಾಜ್ಯ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಯನ್ನು ಚರ್ಚೆಗೆ ಬಿಡಬೇಕು ಎಂದು ಹೇಳಿರುವ ಸಂಘಟನೆಗಳು, ಅದರಲ್ಲಿನ ಶಿಕ್ಷಣದ ಕೇಸರೀಕರಣ, ಕೇಂದ್ರೀಕರಣ, ಕೋಮುವಾದೀಕರಣ ಹೇರುವ ಅಂಶಗಳನ್ನು ಕೈಬಿಡಬೇಕು ಹಾಗೂ ಅದರ ಸಾಧಕ-ಬಾಧಕಗಳನ್ನು ಅರಿತು ನಂತರ ಲೋಪ ದೋಷಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ಶಿಕ್ಷಣವನ್ನು ವೇಗವಾಗಿ ವ್ಯಾಪಾರ ಮಾಡಲು ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ತರುತ್ತಿದೆ; ರಮೇಶ್ ಪಟ್ನಾಯಕ್

ಇಷ್ಟೇ ಅಲ್ಲದೆ ವಿದ್ಯಾರ್ಥಿ ಸಂಘಟನೆಗಳು ತಮ್ಮ ಬೇಡಿಕೆಯನ್ನು ಕೂಡಾ ಸರ್ಕಾರಗಳ ಮುಂದೆ ಇಟ್ಟಿದೆ.

  •  ಶಿಕ್ಷಣ ಕ್ಷೇತ್ರ ಸಂವಿಧಾನದ ಶೆಡ್ಯೂಲ್ -07 ರಂತೆ ಸಮವರ್ತಿ ಪಟ್ಟಿಯಲ್ಲಿ ಬರುತ್ತದೆ. ಆದರೆ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ರಾಜ್ಯ ಸರ್ಕಾರಗಳಿಗೆ ಇರುವ ಶಿಕ್ಷಣ ಕ್ಷೇತ್ರ ಅಧಿಕಾರ, ಹಕ್ಕುಗಳನ್ನು ಮೊಟಕುಗೊಳಿಸಿ ಶಿಕ್ಷಣವನ್ನು ನೀತಿ ನಿರೂಪಣೆಯ ಅಧಿಕಾರಿಗಳನ್ನು ಕೇಂದ್ರೀಕರಣಗೊಳಿಸುವ ಅಂಶಗಳನ್ನು ರಾಜ್ಯ ಸರ್ಕಾರ ವಿರೋಧಿಸಬೇಕು. ಅಲ್ಲದೆ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದ ಸರ್ಕಾರಕ್ಕಿರುವ ಅಧಿಕಾರ ಹಕ್ಕುಗಳನ್ನು ಕಾಯ್ದಿರಿಸಲು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಉಳಿಸಲು ಮುಂದಾಗಬೇಕು.
  • ಸರ್ಕಾರವೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ಸಂವಿಧಾನದ ಮಾನ್ಯತೆ ಪಡೆದ ಎಲ್ಲ ಭಾಷೆಗಳಿಗೆ ಅನುವಾದಿಸಿ ಅಧ್ಯಯನಕ್ಕೆ ಅವಕಾಶ ನೀಡಿ, ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು, ಅಂಗನವಾಡಿ, ಬಿಸಿಯೂಟ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲರೂ ಚರ್ಚಿಸಿ ತಿದ್ದುಪಡಿ ಸಲಹೆಗಳನ್ನು ನೀಡಲು ಅಗತ್ಯವಾದ ಕಾಲವಕಾಶ ನೀಡಬೇಕು.
  • ಕೇಂದ್ರ ಸರ್ಕಾರದ ಸಚಿವ ಸಂಪುಟ ಅನುಮೋದಿತ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ರಾಜ್ಯ ವಿಧಾನಸಭೆ, ವಿಧಾನ ಪರಿಷತ್ತಿನ ಉಭಯ ಸದನಗಳಲ್ಲಿ ಸಮಗ್ರ ಚರ್ಚೆ ನಡೆಸಬೇಕು. ಈ ಸದನದಲ್ಲಿ ಈ ಕುರಿತು ಜನಪ್ರತಿನಿಧಿಗಳು ಮಾತನಾಡಬೇಕು.
  • ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಪ್ರಸ್ತಾಪಿಸಿರುವ ತ್ರಿಭಾಷಾ ಸೂತ್ರವನ್ನು ತಮಿಳುನಾಡು ರಾಜ್ಯ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರ ವಿರೋಧಿಸಬೇಕು.
  • ಕೊರೊನಾ-ಕಾಲಾವಧಿಯಲ್ಲಿ ದೇಶದ ಭವಿಷ್ಯವನ್ನು ರೂಪಿಸುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಯ ಕುರಿತು ರಾಜ್ಯ ಸರ್ಕಾರದ ಮಂತ್ರಿಗಳು ನಡೆಸುತ್ತಿರುವ ಏಕಮುಖವಾದ, ಅಪ್ರಜಾಸತ್ತಾತ್ಮಕವಾದ ಅನುಷ್ಠಾನದ ತಯಾರಿಗಳನ್ನು ಕೈ ಬಿಡಲು ಒತ್ತಾಯಿಸಬೇಕು.

ಇದನ್ನೂ ಓದಿ: ಹೊಸ ಶಿಕ್ಷಣ ನೀತಿ ಏನು? ಎತ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...