Homeಕರ್ನಾಟಕನವೆಂಬರ್‌ 26 ರ ಅಖಿಲ ಭಾರತ ಮುಷ್ಕರಕ್ಕೆ ವಿದ್ಯಾರ್ಥಿ ಸಂಘಟನೆಗಳ ಬೆಂಬಲ

ನವೆಂಬರ್‌ 26 ರ ಅಖಿಲ ಭಾರತ ಮುಷ್ಕರಕ್ಕೆ ವಿದ್ಯಾರ್ಥಿ ಸಂಘಟನೆಗಳ ಬೆಂಬಲ

ರಾಷ್ಟ್ರೀಯ ಶಿಕ್ಷಣ ನೀತಿ-2020 ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಮುಷ್ಕರವನ್ನು ಬೆಂಬಲಿಸಿದ್ದು, ಹೊಸ ಶಿಕ್ಷಣ ನೀತಿ ಮೇಲುನೋಟಕ್ಕೆ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ ಆಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ, ಕೇಸರೀಕರಣ, ಇತಿಹಾಸ ತಿರುಚುವಿಕೆ ಸೇರಿದಂತೆ ಹಲವು ಅಂಶಗಳು ಅಡಕವಾಗಿದೆ ಎಂದು ಅದು ಹೇಳಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಅಸಂವಿಧಾನಿಕವಾಗಿ ಜಾರಿಗೊಳಿಸುತ್ತಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ- 2020 ವಿರೋಧಿಸಿ ನವೆಂಬರ್-26 ರಂದು ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಎಡ ವಿದ್ಯಾರ್ಥಿ ಸಂಘಟನೆಗಳ ಜಂಟಿ ಒಕ್ಕೂಟ ಕರೆ ನೀಡಿದೆ. ಇಂದು ಬೆಂಗಳೂರಿನ ಸೂರಿ ಭವನದಲ್ಲಿ ಸಭೆ ಸೇರಿದ ಎಡ ವಿದ್ಯಾರ್ಥಿ ಸಂಘಟನೆಗಳಾದ AISF, SFI, AIDSO, AISA ಮತ್ತು KVS, “ಹೊಸ ಶಿಕ್ಷಣ ನೀತಿ ಮೇಲುನೋಟಕ್ಕೆ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ ಅದರ ಆಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ, ಕೇಸರೀಕರಣ, ಇತಿಹಾಸ ತಿರುಚುವಿಕೆ ಸೇರಿದಂತೆ ಹಲವು ಅಂಶಗಳು ಅಡಕವಾಗಿದೆ ಎಂದು ಹೇಳಿದೆ.

“ಕೇಂದ್ರ ಸರ್ಕಾರವು ಜಾರಿ ಮಾಡಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಹಿಂದಿ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಇದ್ದು, ಭಾರತದ ಇನ್ನುಳಿದ ರಾಷ್ಟ್ರೀಯ ಪ್ರಾದೇಶಿಕ ಭಾಷೆಗಳಲ್ಲಿ ಇಲ್ಲ. ಸಾರ್ವಜನಿಕವಾಗಿ ಹಾಗೂ ಕೇಂದ್ರ ಮತ್ತು ರಾಜ್ಯಗಳ ಶಾಸನ ಸಭೆಯಲ್ಲಿ ಚರ್ಚೆಯಾಗದೆ, ಅದರ ಸಾಧಕ-ಬಾಧಕಗಳನ್ನು ಅರಿಯದೆ ಜಾರಿ ಮಾಡಲು ಹೊರಟಿರುವುದು ಪ್ರಜಾಪ್ರಭುತ್ವದ ಕಗ್ಗೂಲೆಯಾಗುತ್ತದೆ” ಎಡ ವಿದ್ಯಾರ್ಥಿ ಸಂಘಟನೆಗಳ ಜಂಟಿ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಹೊಸ ಶಿಕ್ಷಣ ನೀತಿ: ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ ಮಾಡಿದ ವ್ಯವಸ್ಥಿತ ವಂಚನೆ!

“ಮೇಲುನೋಟಕ್ಕೆ ಹೊಸ ಶಿಕ್ಷಣ ನೀತಿ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ, ಅದರ ಆಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ, ಕೇಸರಿಕರಣ, ಇತಿಹಾಸ ತಿರುಚುಏಕೆ ಈ ರೀತಿ ಹತ್ತು ಹಲವು ಅಂಶಗಳು ಅಡಕವಾಗಿರುವುದು ಕಾಣುತ್ತದೆ. ನಮ್ಮ ರಾಜ್ಯದಲ್ಲೂ ಸಹ ಕೇಂದ್ರದ ಒತ್ತಡದ ಮೇರೆಗೆ ಯಾವುದೇ ರೀತಿಯ ಜನಾಭಿಪ್ರಾಯ ಸಂಗ್ರಹಿಸದೆ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರುತ್ತಿರುವುದು ಖಂಡನೀಯ” ಎಂದು ಅದು ಹೇಳಿದೆ.

ರಾಜ್ಯ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಯನ್ನು ಚರ್ಚೆಗೆ ಬಿಡಬೇಕು ಎಂದು ಹೇಳಿರುವ ಸಂಘಟನೆಗಳು, ಅದರಲ್ಲಿನ ಶಿಕ್ಷಣದ ಕೇಸರೀಕರಣ, ಕೇಂದ್ರೀಕರಣ, ಕೋಮುವಾದೀಕರಣ ಹೇರುವ ಅಂಶಗಳನ್ನು ಕೈಬಿಡಬೇಕು ಹಾಗೂ ಅದರ ಸಾಧಕ-ಬಾಧಕಗಳನ್ನು ಅರಿತು ನಂತರ ಲೋಪ ದೋಷಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ಶಿಕ್ಷಣವನ್ನು ವೇಗವಾಗಿ ವ್ಯಾಪಾರ ಮಾಡಲು ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ತರುತ್ತಿದೆ; ರಮೇಶ್ ಪಟ್ನಾಯಕ್

ಇಷ್ಟೇ ಅಲ್ಲದೆ ವಿದ್ಯಾರ್ಥಿ ಸಂಘಟನೆಗಳು ತಮ್ಮ ಬೇಡಿಕೆಯನ್ನು ಕೂಡಾ ಸರ್ಕಾರಗಳ ಮುಂದೆ ಇಟ್ಟಿದೆ.

  •  ಶಿಕ್ಷಣ ಕ್ಷೇತ್ರ ಸಂವಿಧಾನದ ಶೆಡ್ಯೂಲ್ -07 ರಂತೆ ಸಮವರ್ತಿ ಪಟ್ಟಿಯಲ್ಲಿ ಬರುತ್ತದೆ. ಆದರೆ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ರಾಜ್ಯ ಸರ್ಕಾರಗಳಿಗೆ ಇರುವ ಶಿಕ್ಷಣ ಕ್ಷೇತ್ರ ಅಧಿಕಾರ, ಹಕ್ಕುಗಳನ್ನು ಮೊಟಕುಗೊಳಿಸಿ ಶಿಕ್ಷಣವನ್ನು ನೀತಿ ನಿರೂಪಣೆಯ ಅಧಿಕಾರಿಗಳನ್ನು ಕೇಂದ್ರೀಕರಣಗೊಳಿಸುವ ಅಂಶಗಳನ್ನು ರಾಜ್ಯ ಸರ್ಕಾರ ವಿರೋಧಿಸಬೇಕು. ಅಲ್ಲದೆ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದ ಸರ್ಕಾರಕ್ಕಿರುವ ಅಧಿಕಾರ ಹಕ್ಕುಗಳನ್ನು ಕಾಯ್ದಿರಿಸಲು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಉಳಿಸಲು ಮುಂದಾಗಬೇಕು.
  • ಸರ್ಕಾರವೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ಸಂವಿಧಾನದ ಮಾನ್ಯತೆ ಪಡೆದ ಎಲ್ಲ ಭಾಷೆಗಳಿಗೆ ಅನುವಾದಿಸಿ ಅಧ್ಯಯನಕ್ಕೆ ಅವಕಾಶ ನೀಡಿ, ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು, ಅಂಗನವಾಡಿ, ಬಿಸಿಯೂಟ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲರೂ ಚರ್ಚಿಸಿ ತಿದ್ದುಪಡಿ ಸಲಹೆಗಳನ್ನು ನೀಡಲು ಅಗತ್ಯವಾದ ಕಾಲವಕಾಶ ನೀಡಬೇಕು.
  • ಕೇಂದ್ರ ಸರ್ಕಾರದ ಸಚಿವ ಸಂಪುಟ ಅನುಮೋದಿತ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ರಾಜ್ಯ ವಿಧಾನಸಭೆ, ವಿಧಾನ ಪರಿಷತ್ತಿನ ಉಭಯ ಸದನಗಳಲ್ಲಿ ಸಮಗ್ರ ಚರ್ಚೆ ನಡೆಸಬೇಕು. ಈ ಸದನದಲ್ಲಿ ಈ ಕುರಿತು ಜನಪ್ರತಿನಿಧಿಗಳು ಮಾತನಾಡಬೇಕು.
  • ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಪ್ರಸ್ತಾಪಿಸಿರುವ ತ್ರಿಭಾಷಾ ಸೂತ್ರವನ್ನು ತಮಿಳುನಾಡು ರಾಜ್ಯ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರ ವಿರೋಧಿಸಬೇಕು.
  • ಕೊರೊನಾ-ಕಾಲಾವಧಿಯಲ್ಲಿ ದೇಶದ ಭವಿಷ್ಯವನ್ನು ರೂಪಿಸುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಯ ಕುರಿತು ರಾಜ್ಯ ಸರ್ಕಾರದ ಮಂತ್ರಿಗಳು ನಡೆಸುತ್ತಿರುವ ಏಕಮುಖವಾದ, ಅಪ್ರಜಾಸತ್ತಾತ್ಮಕವಾದ ಅನುಷ್ಠಾನದ ತಯಾರಿಗಳನ್ನು ಕೈ ಬಿಡಲು ಒತ್ತಾಯಿಸಬೇಕು.

ಇದನ್ನೂ ಓದಿ: ಹೊಸ ಶಿಕ್ಷಣ ನೀತಿ ಏನು? ಎತ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...