Homeಕರ್ನಾಟಕನವೆಂಬರ್‌ 26 ರ ಅಖಿಲ ಭಾರತ ಮುಷ್ಕರಕ್ಕೆ ವಿದ್ಯಾರ್ಥಿ ಸಂಘಟನೆಗಳ ಬೆಂಬಲ

ನವೆಂಬರ್‌ 26 ರ ಅಖಿಲ ಭಾರತ ಮುಷ್ಕರಕ್ಕೆ ವಿದ್ಯಾರ್ಥಿ ಸಂಘಟನೆಗಳ ಬೆಂಬಲ

ರಾಷ್ಟ್ರೀಯ ಶಿಕ್ಷಣ ನೀತಿ-2020 ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಮುಷ್ಕರವನ್ನು ಬೆಂಬಲಿಸಿದ್ದು, ಹೊಸ ಶಿಕ್ಷಣ ನೀತಿ ಮೇಲುನೋಟಕ್ಕೆ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ ಆಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ, ಕೇಸರೀಕರಣ, ಇತಿಹಾಸ ತಿರುಚುವಿಕೆ ಸೇರಿದಂತೆ ಹಲವು ಅಂಶಗಳು ಅಡಕವಾಗಿದೆ ಎಂದು ಅದು ಹೇಳಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಅಸಂವಿಧಾನಿಕವಾಗಿ ಜಾರಿಗೊಳಿಸುತ್ತಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ- 2020 ವಿರೋಧಿಸಿ ನವೆಂಬರ್-26 ರಂದು ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಎಡ ವಿದ್ಯಾರ್ಥಿ ಸಂಘಟನೆಗಳ ಜಂಟಿ ಒಕ್ಕೂಟ ಕರೆ ನೀಡಿದೆ. ಇಂದು ಬೆಂಗಳೂರಿನ ಸೂರಿ ಭವನದಲ್ಲಿ ಸಭೆ ಸೇರಿದ ಎಡ ವಿದ್ಯಾರ್ಥಿ ಸಂಘಟನೆಗಳಾದ AISF, SFI, AIDSO, AISA ಮತ್ತು KVS, “ಹೊಸ ಶಿಕ್ಷಣ ನೀತಿ ಮೇಲುನೋಟಕ್ಕೆ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ ಅದರ ಆಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ, ಕೇಸರೀಕರಣ, ಇತಿಹಾಸ ತಿರುಚುವಿಕೆ ಸೇರಿದಂತೆ ಹಲವು ಅಂಶಗಳು ಅಡಕವಾಗಿದೆ ಎಂದು ಹೇಳಿದೆ.

“ಕೇಂದ್ರ ಸರ್ಕಾರವು ಜಾರಿ ಮಾಡಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಹಿಂದಿ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಇದ್ದು, ಭಾರತದ ಇನ್ನುಳಿದ ರಾಷ್ಟ್ರೀಯ ಪ್ರಾದೇಶಿಕ ಭಾಷೆಗಳಲ್ಲಿ ಇಲ್ಲ. ಸಾರ್ವಜನಿಕವಾಗಿ ಹಾಗೂ ಕೇಂದ್ರ ಮತ್ತು ರಾಜ್ಯಗಳ ಶಾಸನ ಸಭೆಯಲ್ಲಿ ಚರ್ಚೆಯಾಗದೆ, ಅದರ ಸಾಧಕ-ಬಾಧಕಗಳನ್ನು ಅರಿಯದೆ ಜಾರಿ ಮಾಡಲು ಹೊರಟಿರುವುದು ಪ್ರಜಾಪ್ರಭುತ್ವದ ಕಗ್ಗೂಲೆಯಾಗುತ್ತದೆ” ಎಡ ವಿದ್ಯಾರ್ಥಿ ಸಂಘಟನೆಗಳ ಜಂಟಿ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಹೊಸ ಶಿಕ್ಷಣ ನೀತಿ: ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ ಮಾಡಿದ ವ್ಯವಸ್ಥಿತ ವಂಚನೆ!

“ಮೇಲುನೋಟಕ್ಕೆ ಹೊಸ ಶಿಕ್ಷಣ ನೀತಿ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ, ಅದರ ಆಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ, ಕೇಸರಿಕರಣ, ಇತಿಹಾಸ ತಿರುಚುಏಕೆ ಈ ರೀತಿ ಹತ್ತು ಹಲವು ಅಂಶಗಳು ಅಡಕವಾಗಿರುವುದು ಕಾಣುತ್ತದೆ. ನಮ್ಮ ರಾಜ್ಯದಲ್ಲೂ ಸಹ ಕೇಂದ್ರದ ಒತ್ತಡದ ಮೇರೆಗೆ ಯಾವುದೇ ರೀತಿಯ ಜನಾಭಿಪ್ರಾಯ ಸಂಗ್ರಹಿಸದೆ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರುತ್ತಿರುವುದು ಖಂಡನೀಯ” ಎಂದು ಅದು ಹೇಳಿದೆ.

ರಾಜ್ಯ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಯನ್ನು ಚರ್ಚೆಗೆ ಬಿಡಬೇಕು ಎಂದು ಹೇಳಿರುವ ಸಂಘಟನೆಗಳು, ಅದರಲ್ಲಿನ ಶಿಕ್ಷಣದ ಕೇಸರೀಕರಣ, ಕೇಂದ್ರೀಕರಣ, ಕೋಮುವಾದೀಕರಣ ಹೇರುವ ಅಂಶಗಳನ್ನು ಕೈಬಿಡಬೇಕು ಹಾಗೂ ಅದರ ಸಾಧಕ-ಬಾಧಕಗಳನ್ನು ಅರಿತು ನಂತರ ಲೋಪ ದೋಷಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ಶಿಕ್ಷಣವನ್ನು ವೇಗವಾಗಿ ವ್ಯಾಪಾರ ಮಾಡಲು ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ತರುತ್ತಿದೆ; ರಮೇಶ್ ಪಟ್ನಾಯಕ್

ಇಷ್ಟೇ ಅಲ್ಲದೆ ವಿದ್ಯಾರ್ಥಿ ಸಂಘಟನೆಗಳು ತಮ್ಮ ಬೇಡಿಕೆಯನ್ನು ಕೂಡಾ ಸರ್ಕಾರಗಳ ಮುಂದೆ ಇಟ್ಟಿದೆ.

  •  ಶಿಕ್ಷಣ ಕ್ಷೇತ್ರ ಸಂವಿಧಾನದ ಶೆಡ್ಯೂಲ್ -07 ರಂತೆ ಸಮವರ್ತಿ ಪಟ್ಟಿಯಲ್ಲಿ ಬರುತ್ತದೆ. ಆದರೆ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ರಾಜ್ಯ ಸರ್ಕಾರಗಳಿಗೆ ಇರುವ ಶಿಕ್ಷಣ ಕ್ಷೇತ್ರ ಅಧಿಕಾರ, ಹಕ್ಕುಗಳನ್ನು ಮೊಟಕುಗೊಳಿಸಿ ಶಿಕ್ಷಣವನ್ನು ನೀತಿ ನಿರೂಪಣೆಯ ಅಧಿಕಾರಿಗಳನ್ನು ಕೇಂದ್ರೀಕರಣಗೊಳಿಸುವ ಅಂಶಗಳನ್ನು ರಾಜ್ಯ ಸರ್ಕಾರ ವಿರೋಧಿಸಬೇಕು. ಅಲ್ಲದೆ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದ ಸರ್ಕಾರಕ್ಕಿರುವ ಅಧಿಕಾರ ಹಕ್ಕುಗಳನ್ನು ಕಾಯ್ದಿರಿಸಲು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಉಳಿಸಲು ಮುಂದಾಗಬೇಕು.
  • ಸರ್ಕಾರವೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ಸಂವಿಧಾನದ ಮಾನ್ಯತೆ ಪಡೆದ ಎಲ್ಲ ಭಾಷೆಗಳಿಗೆ ಅನುವಾದಿಸಿ ಅಧ್ಯಯನಕ್ಕೆ ಅವಕಾಶ ನೀಡಿ, ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು, ಅಂಗನವಾಡಿ, ಬಿಸಿಯೂಟ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲರೂ ಚರ್ಚಿಸಿ ತಿದ್ದುಪಡಿ ಸಲಹೆಗಳನ್ನು ನೀಡಲು ಅಗತ್ಯವಾದ ಕಾಲವಕಾಶ ನೀಡಬೇಕು.
  • ಕೇಂದ್ರ ಸರ್ಕಾರದ ಸಚಿವ ಸಂಪುಟ ಅನುಮೋದಿತ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ರಾಜ್ಯ ವಿಧಾನಸಭೆ, ವಿಧಾನ ಪರಿಷತ್ತಿನ ಉಭಯ ಸದನಗಳಲ್ಲಿ ಸಮಗ್ರ ಚರ್ಚೆ ನಡೆಸಬೇಕು. ಈ ಸದನದಲ್ಲಿ ಈ ಕುರಿತು ಜನಪ್ರತಿನಿಧಿಗಳು ಮಾತನಾಡಬೇಕು.
  • ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಪ್ರಸ್ತಾಪಿಸಿರುವ ತ್ರಿಭಾಷಾ ಸೂತ್ರವನ್ನು ತಮಿಳುನಾಡು ರಾಜ್ಯ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರ ವಿರೋಧಿಸಬೇಕು.
  • ಕೊರೊನಾ-ಕಾಲಾವಧಿಯಲ್ಲಿ ದೇಶದ ಭವಿಷ್ಯವನ್ನು ರೂಪಿಸುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಯ ಕುರಿತು ರಾಜ್ಯ ಸರ್ಕಾರದ ಮಂತ್ರಿಗಳು ನಡೆಸುತ್ತಿರುವ ಏಕಮುಖವಾದ, ಅಪ್ರಜಾಸತ್ತಾತ್ಮಕವಾದ ಅನುಷ್ಠಾನದ ತಯಾರಿಗಳನ್ನು ಕೈ ಬಿಡಲು ಒತ್ತಾಯಿಸಬೇಕು.

ಇದನ್ನೂ ಓದಿ: ಹೊಸ ಶಿಕ್ಷಣ ನೀತಿ ಏನು? ಎತ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...