Homeಕರ್ನಾಟಕನವೆಂಬರ್‌ 26 ರ ಅಖಿಲ ಭಾರತ ಮುಷ್ಕರಕ್ಕೆ ವಿದ್ಯಾರ್ಥಿ ಸಂಘಟನೆಗಳ ಬೆಂಬಲ

ನವೆಂಬರ್‌ 26 ರ ಅಖಿಲ ಭಾರತ ಮುಷ್ಕರಕ್ಕೆ ವಿದ್ಯಾರ್ಥಿ ಸಂಘಟನೆಗಳ ಬೆಂಬಲ

ರಾಷ್ಟ್ರೀಯ ಶಿಕ್ಷಣ ನೀತಿ-2020 ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಮುಷ್ಕರವನ್ನು ಬೆಂಬಲಿಸಿದ್ದು, ಹೊಸ ಶಿಕ್ಷಣ ನೀತಿ ಮೇಲುನೋಟಕ್ಕೆ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ ಆಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ, ಕೇಸರೀಕರಣ, ಇತಿಹಾಸ ತಿರುಚುವಿಕೆ ಸೇರಿದಂತೆ ಹಲವು ಅಂಶಗಳು ಅಡಕವಾಗಿದೆ ಎಂದು ಅದು ಹೇಳಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಅಸಂವಿಧಾನಿಕವಾಗಿ ಜಾರಿಗೊಳಿಸುತ್ತಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ- 2020 ವಿರೋಧಿಸಿ ನವೆಂಬರ್-26 ರಂದು ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಎಡ ವಿದ್ಯಾರ್ಥಿ ಸಂಘಟನೆಗಳ ಜಂಟಿ ಒಕ್ಕೂಟ ಕರೆ ನೀಡಿದೆ. ಇಂದು ಬೆಂಗಳೂರಿನ ಸೂರಿ ಭವನದಲ್ಲಿ ಸಭೆ ಸೇರಿದ ಎಡ ವಿದ್ಯಾರ್ಥಿ ಸಂಘಟನೆಗಳಾದ AISF, SFI, AIDSO, AISA ಮತ್ತು KVS, “ಹೊಸ ಶಿಕ್ಷಣ ನೀತಿ ಮೇಲುನೋಟಕ್ಕೆ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ ಅದರ ಆಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ, ಕೇಸರೀಕರಣ, ಇತಿಹಾಸ ತಿರುಚುವಿಕೆ ಸೇರಿದಂತೆ ಹಲವು ಅಂಶಗಳು ಅಡಕವಾಗಿದೆ ಎಂದು ಹೇಳಿದೆ.

“ಕೇಂದ್ರ ಸರ್ಕಾರವು ಜಾರಿ ಮಾಡಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಹಿಂದಿ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಇದ್ದು, ಭಾರತದ ಇನ್ನುಳಿದ ರಾಷ್ಟ್ರೀಯ ಪ್ರಾದೇಶಿಕ ಭಾಷೆಗಳಲ್ಲಿ ಇಲ್ಲ. ಸಾರ್ವಜನಿಕವಾಗಿ ಹಾಗೂ ಕೇಂದ್ರ ಮತ್ತು ರಾಜ್ಯಗಳ ಶಾಸನ ಸಭೆಯಲ್ಲಿ ಚರ್ಚೆಯಾಗದೆ, ಅದರ ಸಾಧಕ-ಬಾಧಕಗಳನ್ನು ಅರಿಯದೆ ಜಾರಿ ಮಾಡಲು ಹೊರಟಿರುವುದು ಪ್ರಜಾಪ್ರಭುತ್ವದ ಕಗ್ಗೂಲೆಯಾಗುತ್ತದೆ” ಎಡ ವಿದ್ಯಾರ್ಥಿ ಸಂಘಟನೆಗಳ ಜಂಟಿ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಹೊಸ ಶಿಕ್ಷಣ ನೀತಿ: ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ ಮಾಡಿದ ವ್ಯವಸ್ಥಿತ ವಂಚನೆ!

“ಮೇಲುನೋಟಕ್ಕೆ ಹೊಸ ಶಿಕ್ಷಣ ನೀತಿ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ, ಅದರ ಆಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ, ಕೇಸರಿಕರಣ, ಇತಿಹಾಸ ತಿರುಚುಏಕೆ ಈ ರೀತಿ ಹತ್ತು ಹಲವು ಅಂಶಗಳು ಅಡಕವಾಗಿರುವುದು ಕಾಣುತ್ತದೆ. ನಮ್ಮ ರಾಜ್ಯದಲ್ಲೂ ಸಹ ಕೇಂದ್ರದ ಒತ್ತಡದ ಮೇರೆಗೆ ಯಾವುದೇ ರೀತಿಯ ಜನಾಭಿಪ್ರಾಯ ಸಂಗ್ರಹಿಸದೆ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರುತ್ತಿರುವುದು ಖಂಡನೀಯ” ಎಂದು ಅದು ಹೇಳಿದೆ.

ರಾಜ್ಯ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಯನ್ನು ಚರ್ಚೆಗೆ ಬಿಡಬೇಕು ಎಂದು ಹೇಳಿರುವ ಸಂಘಟನೆಗಳು, ಅದರಲ್ಲಿನ ಶಿಕ್ಷಣದ ಕೇಸರೀಕರಣ, ಕೇಂದ್ರೀಕರಣ, ಕೋಮುವಾದೀಕರಣ ಹೇರುವ ಅಂಶಗಳನ್ನು ಕೈಬಿಡಬೇಕು ಹಾಗೂ ಅದರ ಸಾಧಕ-ಬಾಧಕಗಳನ್ನು ಅರಿತು ನಂತರ ಲೋಪ ದೋಷಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ಶಿಕ್ಷಣವನ್ನು ವೇಗವಾಗಿ ವ್ಯಾಪಾರ ಮಾಡಲು ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ತರುತ್ತಿದೆ; ರಮೇಶ್ ಪಟ್ನಾಯಕ್

ಇಷ್ಟೇ ಅಲ್ಲದೆ ವಿದ್ಯಾರ್ಥಿ ಸಂಘಟನೆಗಳು ತಮ್ಮ ಬೇಡಿಕೆಯನ್ನು ಕೂಡಾ ಸರ್ಕಾರಗಳ ಮುಂದೆ ಇಟ್ಟಿದೆ.

  •  ಶಿಕ್ಷಣ ಕ್ಷೇತ್ರ ಸಂವಿಧಾನದ ಶೆಡ್ಯೂಲ್ -07 ರಂತೆ ಸಮವರ್ತಿ ಪಟ್ಟಿಯಲ್ಲಿ ಬರುತ್ತದೆ. ಆದರೆ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ರಾಜ್ಯ ಸರ್ಕಾರಗಳಿಗೆ ಇರುವ ಶಿಕ್ಷಣ ಕ್ಷೇತ್ರ ಅಧಿಕಾರ, ಹಕ್ಕುಗಳನ್ನು ಮೊಟಕುಗೊಳಿಸಿ ಶಿಕ್ಷಣವನ್ನು ನೀತಿ ನಿರೂಪಣೆಯ ಅಧಿಕಾರಿಗಳನ್ನು ಕೇಂದ್ರೀಕರಣಗೊಳಿಸುವ ಅಂಶಗಳನ್ನು ರಾಜ್ಯ ಸರ್ಕಾರ ವಿರೋಧಿಸಬೇಕು. ಅಲ್ಲದೆ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದ ಸರ್ಕಾರಕ್ಕಿರುವ ಅಧಿಕಾರ ಹಕ್ಕುಗಳನ್ನು ಕಾಯ್ದಿರಿಸಲು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಉಳಿಸಲು ಮುಂದಾಗಬೇಕು.
  • ಸರ್ಕಾರವೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ಸಂವಿಧಾನದ ಮಾನ್ಯತೆ ಪಡೆದ ಎಲ್ಲ ಭಾಷೆಗಳಿಗೆ ಅನುವಾದಿಸಿ ಅಧ್ಯಯನಕ್ಕೆ ಅವಕಾಶ ನೀಡಿ, ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು, ಅಂಗನವಾಡಿ, ಬಿಸಿಯೂಟ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲರೂ ಚರ್ಚಿಸಿ ತಿದ್ದುಪಡಿ ಸಲಹೆಗಳನ್ನು ನೀಡಲು ಅಗತ್ಯವಾದ ಕಾಲವಕಾಶ ನೀಡಬೇಕು.
  • ಕೇಂದ್ರ ಸರ್ಕಾರದ ಸಚಿವ ಸಂಪುಟ ಅನುಮೋದಿತ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ರಾಜ್ಯ ವಿಧಾನಸಭೆ, ವಿಧಾನ ಪರಿಷತ್ತಿನ ಉಭಯ ಸದನಗಳಲ್ಲಿ ಸಮಗ್ರ ಚರ್ಚೆ ನಡೆಸಬೇಕು. ಈ ಸದನದಲ್ಲಿ ಈ ಕುರಿತು ಜನಪ್ರತಿನಿಧಿಗಳು ಮಾತನಾಡಬೇಕು.
  • ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಪ್ರಸ್ತಾಪಿಸಿರುವ ತ್ರಿಭಾಷಾ ಸೂತ್ರವನ್ನು ತಮಿಳುನಾಡು ರಾಜ್ಯ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರ ವಿರೋಧಿಸಬೇಕು.
  • ಕೊರೊನಾ-ಕಾಲಾವಧಿಯಲ್ಲಿ ದೇಶದ ಭವಿಷ್ಯವನ್ನು ರೂಪಿಸುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಯ ಕುರಿತು ರಾಜ್ಯ ಸರ್ಕಾರದ ಮಂತ್ರಿಗಳು ನಡೆಸುತ್ತಿರುವ ಏಕಮುಖವಾದ, ಅಪ್ರಜಾಸತ್ತಾತ್ಮಕವಾದ ಅನುಷ್ಠಾನದ ತಯಾರಿಗಳನ್ನು ಕೈ ಬಿಡಲು ಒತ್ತಾಯಿಸಬೇಕು.

ಇದನ್ನೂ ಓದಿ: ಹೊಸ ಶಿಕ್ಷಣ ನೀತಿ ಏನು? ಎತ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...