Homeಮುಖಪುಟ‘ಈ ಗುಲಾಬಿಯಿಂದ ಏನು ಮಾಡುವುದು?’: ಕೇಂದ್ರ ಸರ್ಕಾರದ ವಿರುದ್ಧ ಉಕ್ರೇನ್‌ನಿಂದ ಹಿಂತಿರುಗಿದ ವಿದ್ಯಾರ್ಥಿ ಆಕ್ರೋಶ

‘ಈ ಗುಲಾಬಿಯಿಂದ ಏನು ಮಾಡುವುದು?’: ಕೇಂದ್ರ ಸರ್ಕಾರದ ವಿರುದ್ಧ ಉಕ್ರೇನ್‌ನಿಂದ ಹಿಂತಿರುಗಿದ ವಿದ್ಯಾರ್ಥಿ ಆಕ್ರೋಶ

- Advertisement -
- Advertisement -

ಬಿಹಾರ ಮೋತಿಹಾರಿ ಮೂಲದ ದಿವ್ಯಾಂಶು ಸಿಂಗ್ ಎಂಬ ವಿದ್ಯಾರ್ಥಿ ಉಕ್ರೇನ್‌ನಿಂದ ಹಂಗೇರಿ ಮೂಲಕ ಗುರುವಾರ ಮಧ್ಯಾಹ್ನ ದೆಹಲಿಗೆ ಬಂದಿಳಿದಿದ್ದು ಅವರನ್ನು ಗುಲಾಬಿಯೊಂದಿಗೆ ಸ್ವಾಗತಿಸಲಾಗಿತ್ತು. ಈ ವೇಳೆ ಒಕ್ಕೂಟ ಸರ್ಕಾರವು ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳಿಗೆ ಅಗತ್ಯ ನೆರವು ನೀಡುತ್ತಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು “ಉಕ್ರೇನ್‌ನಿಂದ ನಾಗರಿಕರನ್ನು ರಕ್ಷಿಸಲು ಸಮಯೋಚಿತ ಕ್ರಮಗಳನ್ನು ತೆಗೆದುಕೊಳ್ಳದೆ ಹೂವುಗಳನ್ನು ವಿತರಿಸುವುದು ಅರ್ಥಹೀನ” ಎಂದು ಹೇಳಿದ್ದಾರೆ.

ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ನಿಮಗೆ ಸಹಾಯ ಸಿಕ್ಕಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, “ನಾವು ಹಂಗೇರಿಗೆ ಗಡಿ ದಾಟಿದ ನಂತರವೇ ನಮಗೆ ಸಹಾಯ ಸಿಕ್ಕಿತು. ಅದಕ್ಕೂ ಮೊದಲು ಯಾವುದೇ ಸಹಾಯ ಮಾಡಲಿಲ್ಲ. ನಾವಾಗಿಯೆ ಬಂದಿದ್ದು, ನಮ್ಮ ಹತ್ತು ಮಂದಿಯ ಗುಂಪು ರೈಲಿನಲ್ಲಿ ಹತ್ತಿ ಬಂದಿದ್ದೇವೆ. ಆ ರೈಲು ತುಂಬಿ ತುಳುಕುತ್ತಿತ್ತು” ಎಂದು ಹೇಳಿದ್ದಾರೆ.

ರೈಲು ಹತ್ತಲು ಅಥವಾ ಗಡಿ ದಾಟಲು ಪ್ರಯತ್ನಿಸುವಾಗ ಭಾರತೀಯ ವಿದ್ಯಾರ್ಥಿಗಳು ಕಿರುಕುಳವನ್ನು ಎದುರಿಸುತ್ತಿದ್ದಾರೆ ಎಂದು ಈಗಾಗಲೆ ಹಲವು ವರದಿಗಳಾಗಿದೆ. ಆದರೆ ದಿವ್ಯಾಂಶು ಸಿಂಗ್ ಅವರು ಸ್ಥಳೀಯರಿಂದ ಸಹಾಯ ಪಡೆದಿದ್ದಾಗಿ ಹೇಳಿದ್ದಾರೆ.

“ಸ್ಥಳೀಯ ಜನರು ನಮಗೆ ಸಹಾಯ ಮಾಡಿದ್ದಾರೆ, ಯಾರೂ ನಮ್ಮೊಂದಿಗೆ ಅನುಚಿತವಾಗಿ ವರ್ತಿಸಿಲ್ಲ. ಪೋಲೆಂಡ್ ಗಡಿಯಲ್ಲಿ ಕೆಲವು ವಿದ್ಯಾರ್ಥಿಗಳು ಕಿರುಕುಳ ಎದುರಿಸಿದ್ದು ನಿಜ, ಅದಕ್ಕೆ ನಮ್ಮ ಸರ್ಕಾರವೇ ಹೊಣೆ. ಸರಿಯಾದ ಸಮಯದಲ್ಲಿ ಕ್ರಮ ಕೈಗೊಂಡಿದ್ದರೆ, ನಮಗೆ ಇಷ್ಟು ಸಮಸ್ಯೆಗಳು ಎದುರಾಗುತ್ತಿರಲಿಲ್ಲ. ತನ್ನ ನಾಗರಿಕರು ಉಕ್ರೇನ್‌ನಿಂದ ಹೊರಹೋಗುವಂತೆ ಕೇಳಿಕೊಂಡ ಮೊದಲ ದೇಶ ಅಮೆರಿಕ ಆಗಿದೆ” ಎಂದು ಅವರು ಹೇಳಿದ್ದಾರೆ.

ದೆಹಲಿಗೆ ಬಂದಿಳಿದ ನಂತರ ಅವರಿಗೆ ನೀಡಿದ ಗುಲಾಬಿಯನ್ನು ಹಿಡಿದುಕೊಂಡು ಮಾತನಾಡಿದ ಅವರು, “ನಾವೀಗ ಇಲ್ಲಿದ್ದೇವೆ, ಇದನ್ನು ನಮಗೆ ನೀಡಲಾಗುತ್ತಿದೆ. ಆದರೆ ಇದರಿಂದ ಪ್ರಯೋಜನ ಏನು? ಇದನ್ನು ನಾವು ಏನು ಮಾಡಲು ಸಾಧ್ಯ? ಅಲ್ಲಿ ನಮಗೆ ಏನಾದರೂ ಆಗಿದ್ದರೆ ನಮ್ಮ ಕುಟುಂಬಗಳು ಮಾಡಬಹುದಿತ್ತು?” ಎಂದು ಅವರು ಹೇಳಿದ್ದಾರೆ.

ತಾನು ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಿರುವುದರಿಂದ ಕಡಿಮೆ ತೊಂದರೆಗಳನ್ನು ಎದುರಿಸಿದೆ ಎಂದು ದಿವ್ಯಾಂಶು ಸಿಂಗ್ ಹೇಳಿದ್ದಾರೆ. ಸರಕಾರ ಸಕಾಲದಲ್ಲಿ ಕ್ರಮಕೈಗೊಂಡಿದ್ದರೆ ಈಗ ಹೂವು ವಿತರಿಸುವ ಅಗತ್ಯವಿರಲಿಲ್ಲ ಎಂದು ಹೇಳಿದ ಅವರು, “ಸಕಾಲಿಕ ಕ್ರಮಗಳನ್ನು ಮಾಡಿದ್ದರೆ, ಇಂತಹ ಪ್ರದರ್ಶನಗಳ ಅಗತ್ಯವಿರುವುದಿಲ್ಲ. ನಮ್ಮ ಕುಟುಂಬಗಳು ತುಂಬಾ ಚಿಂತಿತರಾಗಿದ್ದರು” ಎಂದು ಹೇಳಿದ್ದಾರೆ.

 

ಎಂಟು ವಿಮಾನಗಳಲ್ಲಿ 3,726 ಭಾರತೀಯರನ್ನು ಇಂದು ಭಾರತಕ್ಕೆ ವಾಪಾಸು ಕರೆತರಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.

798 ಭಾರತೀಯರೊಂದಿಗೆ ನಾಲ್ಕು ವಾಯುಪಡೆಯ ವಿಮಾನಗಳು ಇಂದು ದೆಹಲಿ ಬಳಿಯ ಹಿಂಡನ್ ವಾಯುನೆಲೆಗೆ ಬಂದಿಳಿದಿವೆ. ಬುಕಾರೆಸ್ಟ್‌ನಿಂದ 183 ಭಾರತೀಯರೊಂದಿಗೆ ಮುಂಬೈಗೆ ಒಂದು ವಿಮಾನ ಬಂದಿಳಿದಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರೊಂದಿಗೆ ರಷ್ಯಾ ಅಧ್ಯಕ್ಷ ಸಂವಾದ ನಡೆಸಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...