HomeUncategorizedವಿದ್ಯಾರ್ಥಿಗಳು ರಾಜಕಾರಣ ಮಾಡುವುದು ಸರಿಯೇ ತಪ್ಪೆ? ಇಲ್ಲಿದೆ ನೋಡಿ ಸ್ಪಷ್ಟ ಉತ್ತರ...

ವಿದ್ಯಾರ್ಥಿಗಳು ರಾಜಕಾರಣ ಮಾಡುವುದು ಸರಿಯೇ ತಪ್ಪೆ? ಇಲ್ಲಿದೆ ನೋಡಿ ಸ್ಪಷ್ಟ ಉತ್ತರ…

ವಿದ್ಯಾರ್ಥಿಗಳು ಓದೋದು ಬಿಟ್ಟು ಬೇರೆ ಏನೂ ಮಾಡಬಾರದು ಅನ್ನೋ ಪಕ್ಷದವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಅನ್ನೋ ಸಂಘಟನೆ ಯಾಕ ಕಟ್ಟಿದರು?

- Advertisement -
- Advertisement -

ಲೆನಿನ್ ಅವರನ್ನು ಯಾರೋ ಬೇ-ಧಂಧಾ ಪತ್ರಕರ್ತ ರೊಬ್ಬರು ಕೇಳಿದರಂತ. ವಿದ್ಯಾರ್ಥಿಗಳ ಕೆಲಸ ಏನು? ಅವರು ವಿದ್ಯಾರ್ಥಿಗಳಿಗೆ ಐದು ಕೆಲಸಗಳು ಅಂತ ಅಂದರಂತ. ಅದು ಅಧ್ಯಯನ, ಅಧ್ಯಯನ, ಅಧ್ಯಯನ, ಅಧ್ಯಯನ ಹಾಗೂ ಅಧ್ಯಯನ ಅಂತ ಹೇಳಿದರಂತ. ಹಂಗಂತ ಯಾರೋ ಲೆನಿನ್ ವಿರೋಧಿಗಳು ವಾಮಪಂಥದ ಹುಡುಗರು ಪ್ರತಿಭಟನೆ ಮಾಡುವಾಗ ಅದನ್ನು ವಿರೋಧಿಸಲಿಕ್ಕೆ ಹೇಳಿದ್ದಾಗ ಪತ್ರಿಕೆಗಳಲ್ಲಿ ಬಂದಿತ್ತು. ನೋಡಿ ನಿಮ್ಮ ದೇವರೇ ವಿರೋಧ ಮಾಡಿದ್ದಾರೆ. ನೀವು ಯಾಕೆ ಅದನ್ನು ಪಾಲಿಸುತ್ತೀರಿ ಅನ್ನುವ ಅಮೃತವಾಣಿ ಅದು. ಲೆನಿನ್ ಅವರು ಈ ರೀತಿ ಹೇಳಿದ್ದಕ್ಕೆ ಈವರೆಗೆ ಪುರಾವೆ ಇಲ್ಲ. ಮುಂದೆ ಸಿಗಬಹುದು. ಬೇರೆ ಮಹಾನುಭಾವರು ಹೇಳಿರಬಹುದು. ಕೆಲವರಿಗೆ ಇದು ಸರಿ ಅಂತ ಅನ್ನಿಸಲೂ ಬಹುದು.

ನಿಮ್ಮ ಮಾತಿಗೆ ಬೀಗ, ನಮ್ಮ ಪ್ರತ್ಯುತ್ತರ ಲಾಠಿ, ಬೂಟು, ಗೋಲಿಬಾರಿನಿಂದ, ಅಂತ ಆಳುವವರು ಹೇಳಲಿಕ್ಕೆ ಹತ್ಯಾರ. ಎಲ್ಲ ಕಡೆ ಪ್ರತಿಭಟನೆ ಬಂದ್ ಮಾಡಲಿಕ್ಕೆ ಪೊಲೀಸ್ ಹಿಂಸೆಯೊಂದರ ಉಪಯೋಗ ಆಗಲಿಕ್ಕೆ ಹತ್ತೇದ.

ವಾಕ್ ಸ್ವಾತಂತ್ರ್ಯ ಹತ್ತಿಕ್ಕಲಿಕ್ಕೆ ಎಷ್ಟು ಬೇಕೋ ಅಷ್ಟು ಬಲ ಪ್ರಯೋಗ ಆಗಲಿಕ್ಕೆ ಹತ್ತೇದ. ವಿದ್ಯಾರ್ಥಿಗಳು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಹಬ್ಬಿಸಬಾರದು. ಹಾಗೆ ಮಾಡಿದರೆ ಶಿಕ್ಷೆ ಆಗುತ್ತದೆ. ಅವರು ಹಾಗೆ ಮಾಡುತ್ತಾರೋ ಇಲ್ಲವೋ ಅನ್ನುವುದನ್ನು ನೋಡಲು ಶಿಕ್ಷಣ ಸಂಸ್ಥೆಗಳು ತಮ್ಮ ವಿದ್ಯಾರ್ಥಿಗಳ ಸಾಮಾಜಿಕ ಮಾಧ್ಯಮಗಳ ಚಟುವಟಿಕೆಗಳ ಮೇಲೆ ನಿಗಾ ಇಡಲಾಗುವುದು ಅಂತ ಕೇಂದ್ರ ಸರಕಾರ ಹೇಳೇದ. ದೂರದರ್ಶನ, ಪ್ರಿಂಟ್ ಹಾಗೂ ಇತರ ಮಾಧ್ಯಮಗಳಲ್ಲಿ ಸುಳ್ಳು ಹಬ್ಬಿಸಬಾರದು ಅಂತ ಹೇಳಿ ಕೇಂದ್ರ ವಾರ್ತಾ ಇಲಾಖೆ ಹೊಸ ನಿಯಮಾವಳಿ ಮಾಡೇದ.

ಆಳುವವರು ವಿದ್ಯಾರ್ಥಿಗಳನ್ನು ಹಿಂಸೆ ಪ್ರಚೋದಿಸುತ್ತಿರುವವರು ಕಾಂಗ್ರೆಸ್ಸನವರು ಅಂತ ಹೇಳಿ ಮನಿಯೊಳಗ ಮಲಕೊಂಡವರಿಗೆ ಸುಳ್ಳ -ಸುಳ್ಳ ಪ್ರಚಾರ ಕೊಟ್ಟರು.

ಸುಮ್ಮನೇ ಮನೆಯಲ್ಲಿ ಇರಿ. ಹೊರಗೆ ಹೋದರ ಹೊಡತಾ ತಿಂತೀರಿ ಅಂತ ಹೇಳಿದರು. ವಿದ್ಯಾರ್ಥಿಗಳು ಅಭ್ಯಾಸ ಬಿಟ್ಟು ಬೇರೆ ಮಾಡಬಾರದು ಅಂತ ಸಲಹೆ ಕೊಟ್ಟರು.

ಹಂಗಾರ ಈ ಥರಾ ಪ್ರವಚನ ಮಾಡೋರು ತಾವು ಈ ನಿಯಮಗಳನ್ನ ಪಾಲಿಸಿದರ? ಇಲ್ಲಾ. ಕೇಸರಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ ಶಾ ರಿಂದ ಹಿಡದು ಪಕ್ಷದ ಸಾಮಾನ್ಯ ಕಾರ್ಯಕರ್ತರ ವರೆಗೆ ಎಲ್ಲರೂ ವಿದ್ಯಾರ್ಥಿ ರಾಜಕೀಯ ಮಾಡಿಕೊಂಡು ಬಂದವರು. ವಿದ್ಯಾರ್ಥಿಗಳು ಓದೋದು ಬಿಟ್ಟು ಬೇರೆ ಏನೂ ಮಾಡಬಾರದು ಅನ್ನೋ ಪಕ್ಷದವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಅನ್ನೋ ಸಂಘಟನೆ ಯಾಕ ಕಟ್ಟಿದರು?

ಆಳುವ ಪಕ್ಷದ ಯಾವಾವ ನಾಯಕರು ವಿದ್ಯಾರ್ಥಿ ರಾಜಕಾರಣದಿಂದ ಬಂದವರು ಅಂತ ನೋಡಿದರ ಸಿಗೋದು ಈ ಪಟ್ಟಿ.

ಅಮಿತ ಶಾ ಅವರು 1983 ದಾಗ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ವಿದ್ಯಾರ್ಥಿ ನಾಯಕರಾಗಿದ್ದರು. ನಂತರ 86 ದಾಗ ಪಕ್ಷ ಸೇರಿದರು. ನಂತರ ಗುಜರಾತಿನ ಸಚಿವರಾಗಿ, ಕೇಂದ್ರದ ಸಚಿವರಾದರು.

ದಿವಂಗತ  ಸುಷ್ಮಾ‌ಸ್ವರಾಜ್ ಅವರು ವಿದ್ಯಾರ್ಥಿ ನಾಯಕಿಯಾಗಿದ್ದರು. ಆ ನಂತರ ಅತಿ ಸಣ್ಣ ವಯಸ್ಸಿನಲ್ಲಿಯೇ ಸಚಿವರಾದರು.

ದಿವಂಗತ ಅನಂತ ಕುಮಾರ್ ಅವರು ವಿದ್ಯಾರ್ಥಿ ನಾಯಕರಾಗಿದ್ದರು. 85 ರಲ್ಲಿ ಎಬಿವಿಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದು, ನಂತರ 87 ರೊಳಗ ಪಕ್ಷ ಸೇರಿದರು.

ಈಗಿನ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು 1964 ರೊಳಗ ಸಂಘ ಪರಿವಾರದ ಸಂಪರ್ಕಕ್ಕ ಬಂದವರು 71 ರೊಳಗ ಗೋರಖಪುರದಾಗ ಎಬಿವಿಪಿ ನಾಯಕರಾಗಿದ್ದರು.

ದಿವಂಗತ ಅರುಣ ಜೇಟಲಿ ಯವರು ದೆಹಲಿಯೊಳಗ 70 ರ ದಶಕದಾಗ ವಿದ್ಯಾರ್ಥಿ ನಾಯಕ ರಾಗಿದ್ದರು. ದೆಹಲಿ ಹಾಗೂ ಇತರ ಪ್ರದೇಶದೊಳಗ ಹಿಂಸಾತ್ಮಕ ಪ್ರತಿಭಟನೆ ನಡೆಸಿದರು. ರೈಲು, ಬಸ್ಸು ಎಲ್ಲಾ ಸುಡಲಾಯಿತು. 77 ರೊಳಗ ದೆಹಲಿ ಎಬಿವಿಪಿ ಅಧ್ಯಕ್ಷರಾಗಿ ರಾಷ್ಟ್ರ ಘಟಕದ ಕಾರ್ಯದರ್ಶಿಯಾಗಿದ್ದರು.

ನಿತಿನ ಗಡಕರಿ ಅವರು ವಿದ್ಯಾರ್ಥಿ ನಾಯಕರಾಗಿದ್ದರು. 76 ರಲ್ಲಿ ಸೇರಿದ ಸಂಘಟನೆಯ ಕೇಂದ್ರ ಘಟಕದ ನಾಯಕರಾಗಿದ್ದರು. 24 ರ ಸಣ್ಣ ವಯಸ್ಸಿದಾಗ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿದ್ದರು.

75-77 ರ ತುರ್ತು ಪರಿಸ್ಥಿತಿ ವಿರೋಧ ಮಾಡಿದವರೊಳಗ, ಅದರ ನಂತರ ಬೇರೆ ಬೇರೆ ಪಕ್ಷಗಳನ್ನು ಸೇರಿದವರೊಳಗ ಸಂಘ ಪರಿವಾರದ ಅನೇಕ ನಾಯಕರು ಇದ್ದರು. 80 ರೊಳಗ ಬಿಜೆಪಿ ಹುಟ್ಟಿಕೊಂಡಾಗ ಅದರೊಳಗ ಸೇರಿಕೊಂಡವರೊಳಗ ಅಸಂಖ್ಯರು ತುರ್ತು ಪರಿಸ್ಥಿತಿಯೊಳಗ ವಿದ್ಯಾರ್ಥಿ ರಾಜಕಾರಣ ಮಾಡಿದವರು ಆಗಿದ್ದರು. ಅವರು ಜೈಲಿಗೆ ಹೋಗಿದ್ದವರು.

ಕೇಂದ್ರ ಸಚಿವ ಪ್ರಕಾಶ ಜಾವಡೇಕರ ಅವರು ಪುಣೆ ಯೊಳಗ ತುರ್ತು ಪರಿಸ್ಥಿತಿ ವಿರುದ್ಧ ಪ್ರತಿಭಟನೆ ಮುಂದಾಳತ್ವ ವಹಿಸಿದ್ದರು. ಕೇಂದ್ರ ಮಂತ್ರಿ ಹಾಗೂ ರಾಜ್ಯದ ಉಸ್ತುವಾರಿ ಆಗಿದ್ದ ಧಮೇರ್ಂದ್ರ ಪ್ರಧಾನ ಅವರು ಒರಿಸಾದ ಎಬಿವಿಪಿ ನಾಯಕರಾಗಿದ್ದರು. ಅದರ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನಂತರ ಬಿಜೆಪಿ ಯುವಾ ಮೋರ್ಚಾದ ಕಾರ್ಯದರ್ಶಿಯಾಗಿದ್ದರು.

ರವಿ ಶಂಕರ ಪ್ರಸಾದ ಅವರು ಬಿಹಾರದಾಗ, ಜಯಪ್ರಕಾಶ ನಾರಾಯಣ ಅವರ ಶಿಷ್ಯರಾಗಿ, ವಿದ್ಯಾರ್ಥಿ ರಾಜಕೀಯ ಮಾಡಿದರು. ಬಿಜೆಪಿ ಕಾರ್ಯಾಧ್ಯಕ್ಷ ಜೆ. ಪಿ. ನಡ್ಡಾ ಬಿಹಾರ ಹಾಗೂ ಹಿಮಾಚಲ ಪ್ರದೇಶದಾಗ ವಿದ್ಯಾರ್ಥಿ ಚಳವಳಿ ಮಾಡಿದರು. ತಾವು ಅಧಿಕಾರದಲ್ಲಿ ಇರುವವರೆಗೂ ರೈತರ ಬಗ್ಗೆ ಮಾತೇ ಆಡದ ಕೇಂದ್ರ ಕೃಷಿ ಮಂತ್ರಿ ರಾಧಾ ಮೋಹನ ಸಿಂಗ್ ಅವರು ಬಿಹಾರದ ವಿದ್ಯಾರ್ಥಿ ನಾಯಕರಾಗಿದ್ದರು. ಈಗಿನ ಕೃಷಿಮಂತ್ರಿ ನರೇಂದ್ರ ಸಿಂಗ್ ತೋಮರ್ ಅವರು ಸಹ ವಿದ್ಯಾರ್ಥಿ ನಾಯಕರಾಗಿದ್ದರು.

ಇನ್ನು ಇತರ ಪಕ್ಷಗಳ ನಾಯಕರಾದ ಲಾಲೂ ಪ್ರಸಾದ ಯಾದವ, ನಿತೀಶ ಕುಮಾರ, ಮಮತಾ ಬ್ಯಾನರ್ಜಿ, ಅಜಯ ಮಾಕನ, ಸೀತಾರಾಂ ಯಚೂರಿ, ಪ್ರಫುಲ್ಲಾ ಕುಮಾರ ಮಹಾಂತ, ವಿಜಯ ಗೋಯಲ್, ಅಲ್ಕಾ ಲಾಂಬಾ, ಡಿ. ರಾಜಾ ಅಂತಹ ವಿದ್ಯಾರ್ಥಿ ನಾಯಕರ ಉದಾಹರಣೆಗಳು ಅನೇಕ.

ಇನ್ನು ಕೆಲವರು ನಮ್ಮ ಸುತ್ತ ಮುತ್ತ  ಇಷ್ಟೆಲ್ಲಾ ನಡೀತಾ ಇದ್ದಾಗ ನಾವೇನು ಮಾಡಬಹುದು? ಬೀದಿ ಹೋರಾಟದ ಪ್ರತಿಕ್ರಿಯೆಗೆ ಭಿನ್ನವಾಗಿಯೂ ಅನೇಕ ಪ್ರತಿಕ್ರಿಯೆಗಳು ಸಾಧ್ಯಅವ. ಜನ ಜಾಗೃತಿ, ಜ್ಞಾನ ವಿಸ್ತಾರ, ವಿವರಣೆ ಸಂಘಟನೆ, ಸಂಪರ್ಕ ಮುಂತಾದ ಕೆಲಸಗಳನ್ನು ಗದ್ದಲವಿಲ್ಲದೇ ಮಾಡೋ ಲಕ್ಷಾಂತರ ಜನ ಈ ದೇಶದಾಗ ಇದ್ದಾರ.

ಈ ರೀತಿಯ ಕ್ರಿಯಾತ್ಮಕ ಪ್ರತಿಕ್ರಿಯೆ ಅಥವಾ ಸೃಜನಾತ್ಮಕ ವಿರೋಧ ಮಾಡುವ ಕೆಲವರು ಯುವಜನರನ್ನ ರಾಷ್ಟ್ರ ಮಟ್ಟದ ಸಂಸ್ಥೆಗಳಿಗೆ ಪ್ರವೇಶ ಕೊಡಿಸುವ ಪರೀಕ್ಷಾ ತರಬೇತಿ ಕೊಡಸತಾರ. ಮಹಾರಾಷ್ಟ್ರದ ವಾರ್ಧಾದ ಹತ್ತಿರ ಇರುವ ನಲಂದಾ ಸಂಸ್ಥೆಯ ಅನೂಪ ಕುಮಾರ ಮತ್ತು ಅವರ ಗುಂಪು ಇದನ್ನ ಸದ್ದಿಲ್ಲದೆ ಮಾಡ್ತದ.

ಬಡ, ಹಿಂದುಳಿದ ಅವಕಾಶ ವಂಚಿತ ಸಮುದಾಯದ ಜನರಿಗೆ ಕಾನೂನು ಶಿಕ್ಷಣ ಕೊಡಿಸುವ ಕೆಲಸವನ್ನು ಬೆಂಗಳೂರಿನ ಕಾನೂನು ನೆರವು ಸಂಸ್ಥೆ ಮಾಡ್ತದ.

ಈ ದೇಶದ ಏಕತೆ ಹಾಗೂ ಅಖಂಡತೆ ಉಳಿದು ಬೆಳೀಲಿಕ್ಕೆ ಯಾರು ಯಾರು ಏನೇನು ಮಾಡಬಹುದೋ ಅದನ್ನು ಮಾಡಬಹುದು.

ಎಲ್ಲಕ್ಕಿಂತ ಮುಖ್ಯವಾಗಿ ಮಾಡಬೇಕಾದ ಕೆಲಸ ಅಂದರ ಎಲ್ಲ ಅವಕಾಶ ವಂಚಿತರಲ್ಲಿ ಜಾಗೃತಿ ಮೂಡಿಸೋದು, ನಿಮ್ಮ ಹಕ್ಕು ಗಳನ್ನು ನೀವು ಪಡೆದುಕೊಳ್ಳೋದು ಹೆಂಗ ಅಂತ ಹೇಳಿಕೋಡೋದು.

ಇಂಥ ಪ್ರಕ್ಷುಬ್ಧ ಪರಿಸ್ಥಿತಿ ಸಹ ಸಮಾಧಾನದ ಮಂದಹಾಸ ಮೂಡಿಸಬಲ್ಲದು ಅನಲಿಕ್ಕೆ ಒಂದು ಮಾತು ಹೇಳತೇನಿ. ದೆಹಲಿ ಪ್ರತಿಭಟನೆ ಯೊಳಗ ಒಬ್ಬ ಹುಡುಗ ಈ  ಪೋಸ್ಟರ್‌ ಹಿಡಕೊಂಡಿದ್ದ: ಹಿಂದೂ ಮುಸ್ಲೀಮ ರಾಜಿ, ತೋ ಕ್ಯಾ ಕರೇಗಾ ನಾಜಿ? (ಹಿಂದೂ ಮುಸ್ಲಿಂ ಆದರೆ ರಾಜಿ, ಆಗೇನು ಮಾಡ್ತೀಯಾ ನಾಜಿ?) ಸರಳ ಸುಂದರ ಸತ್ಯ, ಅಲ್ಲವೇ?

ಪಶ್ಚಿಮದ ವಿದ್ಯಾರ್ಥಿ ಚಳವಳಿಗೆ ಪ್ರೇರಕ ಶಕ್ತಿಯಾದ ವಿ ಶಾಲ್ ಓವರ್ ಕಂ ಅನ್ನೋ ಜಾನಪದ ಹಾಡನ್ನು ಪೀಟರ್ ಸೀಗಲ್ ಅವರು ಹಾಡಿ ಜನಪ್ರಿಯಗೊಳಿಸಿದರು.

ಅದು ಹಿಂಗದ
ನಾವು ಗೆಲ್ಲತೇವಿ
ನಾವು ಗೆಲ್ಲತೇವಿ ಒಂದು ದಿವಸ
ನನಗ ಅಗದೀ ಖರೆಗೂ
ಅನಸ್ತದ
ನಾವು ಗೆಲ್ಲತೇವಿ
ಕೈಯೊಳಗ ಕೈ ಇಟ್ಟು
ಶಾಂತಿಯಿಂದ ಇರತೇವಿ
ನಾವು ಹೆದರಂಗಿಲ್ಲ
ನಾವು ಗೆಲ್ಲತೇವಿ
ನಾವು ಗೆಲ್ಲತೇವಿ ಒಂದು ದಿವಸ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...