Homeಕರ್ನಾಟಕವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮೇ 15, 2024ರಂದು ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಸಾಮಾಜಿಕ ಹೋರಾಟಗಾರರೂ ಆಗಿರುವ ಕೆ.ಆರ್ ಸೌಮ್ಯ ಅವರು ತಮ್ಮ ಪುತ್ರಿ ಪ್ರಬುದ್ದ ಕೊಲೆ ಪ್ರಕರಣದಲ್ಲಿ ಪೊಲೀಸರಿಂದ ನ್ಯಾಯ ಸಿಗುತ್ತಿಲ್ಲ. ಅದೆಷ್ಟೋ ಜನರ ಪರವಾಗಿ ಹೋರಾಟ ಮಾಡಿರುವ ನಾನೀಗ, ನನ್ನ ಮಗಳ ಕೊಲೆ ಪ್ರಕರಣದಲ್ಲಿ ನ್ಯಾಯ ಪಡೆಯಲು ಆಗುತ್ತಿಲ್ಲ. ಸುಬ್ರಹ್ಮಣ್ಯಪುರ ಪೊಲೀಸರು ನನಗೆ ನ್ಯಾಯ ಕೊಡುವ ಬದಲು ಆರೋಪಿಗಳೊಂದಿಗೆ ಸೇರಿಕೊಂಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಸಿಎಂಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿ ಸಿಎಂ, ಸಿಐಡಿ ತನಿಖೆಗೆ ವಹಿಸಿದ್ದಾರೆ.

“ಬೆಂಗಳೂರಿನ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ದ್ವಿತೀಯ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಕ್ರಿಯಾಶೀಲೆಯಾದ ನನ್ನ ಮಗಳು ಪ್ರಬುದ್ಧಳನ್ನು 2024ರ ಮೇ 15ರಂದು ಸಾಯಂಕಾಲ ನನ್ನ ಮನೆಯಲ್ಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯ ಮೊದಲ ದಿನದಿಂದಲೂ ಸುಬ್ರಮಣ್ಯಪುರ ಪೊಲೀಸ್ ಠಾಣೆಯ ತನಿಖಾಧಿಕಾರಿಗಳು ಮತ್ತು ಅವರ ತಂಡ ಸಂಶಯಾಸ್ಪದವಾಗಿ ವರ್ತಿಸುತ್ತಾ ನನ್ನ ಮನಸ್ಸಿಗೆ ನೋವುಂಟು ಮಾಡಿದ್ದಾರೆ. ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ ಎಂದು ಪದೇ ಪದೇ ಹೇಳಿದರೂ ಕೇಳಿಸಿಕೊಳ್ಳದ ತನಿಖಾ ತಂಡ, ಮೊದಲ ಮೂರ್ನಾಲ್ಕು ದಿನಗಳ ಕಾಲ ಘಟನೆಯನ್ನು ಆತ್ಮಹತ್ಯೆ ಎಂದೇ ಬಿಂಬಿಸುವ ಪ್ರಯತ್ನ ಮಾಡಿತ್ತು. ಕೊಲೆಗಡುಕನಿಗೆ ಎಲ್ಲಾ ರೀತಿಯ ಸಹಾಯ ಮಾಡಿ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿದೆ. ಕೊಲೆಗಡುಕನ ತಂದೆ, ತಾಯಿಯರನ್ನೂ ರಕ್ಷಿಸುವ ದುರುದ್ದೇಶದ ಕೃತ್ಯಗಳನ್ನು ಮಾಡುತ್ತಲೇ ಬರುತ್ತಿದ್ದಾರೆ” ಎಂದು ಕೆ.ಆರ್ ಸೌಮ್ಯ ಆರೋಪಿಸಿದ್ದಾರೆ.

“ಮಗಳನ್ನು ಕಳೆದುಕೊಂಡ ನೋವಿನಲ್ಲೂ ನಾನು ನ್ಯಾಯಕ್ಕಾಗಿ ಶ್ರಮವಹಿಸಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲು ಒತ್ತಾಯಿಸಿದ್ದೇನೆ. ಆದರೆ, ಪೊಲೀಸರು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ನನಗೆ ಗೊತ್ತಿರುವ ಸತ್ಯವನ್ನು ಕೇಳಿಸಿಕೊಳ್ಳಲೂ ನಿರಾಕರಿಸುತ್ತಿದ್ದಾರೆ. ಕೊಲೆಗಾರನ ತಂದೆ ಸ್ಥಳೀಯ ಠಾಣಾ ವ್ಯಾಪ್ತಿಯಲ್ಲಿ ಬಾರ್ ನಡೆಸುತ್ತಿದ್ದು, ಪೊಲೀಸರೊಂದಿಗೆ ನಿಕಟ ಸಂಪರ್ಕವಿಟ್ಟುಕೊಂಡಿದ್ದಾರೆ. ಸಾಕ್ಷ್ಯಗಳನ್ನು ನಾಶಪಡಿಸಿದ್ದರೂ, ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ಕಾಟಾಚಾರಕ್ಕೆ ಮಹಜರು ನಡೆಸಿದ್ದಾರೆ. ಆಪಾದಿತನು ಹತ್ತೇ ದಿನಕ್ಕೆ ಜಾಮೀನು ಪಡೆದು ನಿಶ್ಚಿಂತನಾಗಿ ಓಡಾಡಿಕೊಂಡಿದ್ದಾನೆ” ಎಂದಿದ್ದಾರೆ.

“ಸಿಂಗಲ್ ಪೇರೆಂಟ್ ಆಗಿ ಮಕ್ಕಳನ್ನು ಕಷ್ಟಪಟ್ಟು ಓದಿಸುತ್ತಿದ್ದ ನನಗೆ, ಈಗ ಜೀವ ಭಯವೂ ಉಂಟಾಗಿದೆ. ನನ್ನ ವಯಸ್ಸಾದ ತಾಯಿ ಮತ್ತು ಮಗನ ಕುರಿತೂ ಆತಂಕವಾಗಿದೆ. ಪೊಲೀಸರ ತನಿಖೆಯ ಕುರಿತ ನನಗೆ ಆತಂಕ ಹಾಗೂ ಸಂದೇಹಗಳಿವೆ. ಪ್ರಬುದ್ಧ ಹತ್ಯೆಯನ್ನು ಸಿಐಡಿಗೆ ವಹಿಸಿ ಅಪರಾಧಿ ಮತ್ತು ಅವನಿಗೆ ಬೆಂಬಲ ನೀಡಿದವರಿಗೆ ತಕ್ಕ ಶಿಕ್ಷೆ ವಿಧಿಸಲು ನೆರವಾಗಿ ಎಂದು ಮನವಿಯಲ್ಲಿ ಪ್ರಬುದ್ಧ ತಾಯಿ ಕೆ.ಆರ್.ಸೌಮ್ಯ ಕೋರಿದ್ದಾರೆ.

ಹಣದ ವಿಚಾರಕ್ಕೆ ಕೊಲೆ ಎಂದ ಪೊಲೀಸರು

ಹತ್ಯೆಯಾದ ಪ್ರಬುದ್ದ ಅವರ ಸಹೋದರ ಹಾಗೂ ಆರೋಪಿ ಸ್ನೇಹಿತರಾಗಿದ್ದು, ಅದೇ ಸಲುಗೆಯಲ್ಲಿ ಆರೋಪಿ ಆಗಾಗ ಪ್ರಬುದ್ದಳ ಮನೆಗೆ ಬಂದು ಹೋಗುತ್ತಿದ್ದ. ಆಟವಾಡುವಾಗ ತನ್ನ ಇನ್ನೊಬ್ಬ ಸ್ನೇಹಿತನ ಕನ್ನಡಕ ಮುರಿದಿದ್ದ ಆರೋಪಿಗೆ, ಅದನ್ನು ಸರಿ ಮಾಡಿಸಿಕೊಡಲು ಹಣದ ಅವಶ್ಯಕತೆಯಿತ್ತು. ಕೃತ್ಯಕ್ಕಿಂತ ಕೆಲವು ದಿನಗಳ ಹಿಂದಷ್ಟೇ ಪ್ರಬುದ್ಧಳ ಮನೆಗೆ ಬಂದಿದ್ದ ಆತ, ಇದಕ್ಕಾಗಿಯೇ ಆಕೆಯ ಪರ್ಸ್​ನಲ್ಲಿದ್ದ 2 ಸಾವಿರ ರೂ. ಹಣ ಕಳ್ಳತನ ಮಾಡಿದ್ದ. ಈ ವಿಚಾರ ಆಕೆಗೆ ಗೊತ್ತಾಗಿದ್ದರಿಂದ ವ್ಯವಸ್ಥಿತವಾಗಿ ಕೊಲೆಗೈದು, ಆತ್ಮಹತ್ಯೆ ಎಂಬಂತೆ ಬಿಂಬಿಸಿದ್ದ ಎಂದು ತನಿಖೆ ನಡೆಸಿದ್ದ ಪೊಲೀಸರು ತಿಳಿಸಿದ್ದರು.

ಇದನ್ನೂ ಓದಿ : ಕಾಂಗ್ರೆಸ್ ಬೆಂಬಲಿಸುವ ಅನೇಕ ಸಮುದಾಯಗಳಿಗೆ ಡಿಸಿಎಂ ಪ್ರಾತಿನಿಧ್ಯ ನೀಡಬೇಕು: ಕೆ.ಎನ್. ರಾಜಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...