Homeಕರ್ನಾಟಕವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮೇ 15, 2024ರಂದು ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಸಾಮಾಜಿಕ ಹೋರಾಟಗಾರರೂ ಆಗಿರುವ ಕೆ.ಆರ್ ಸೌಮ್ಯ ಅವರು ತಮ್ಮ ಪುತ್ರಿ ಪ್ರಬುದ್ದ ಕೊಲೆ ಪ್ರಕರಣದಲ್ಲಿ ಪೊಲೀಸರಿಂದ ನ್ಯಾಯ ಸಿಗುತ್ತಿಲ್ಲ. ಅದೆಷ್ಟೋ ಜನರ ಪರವಾಗಿ ಹೋರಾಟ ಮಾಡಿರುವ ನಾನೀಗ, ನನ್ನ ಮಗಳ ಕೊಲೆ ಪ್ರಕರಣದಲ್ಲಿ ನ್ಯಾಯ ಪಡೆಯಲು ಆಗುತ್ತಿಲ್ಲ. ಸುಬ್ರಹ್ಮಣ್ಯಪುರ ಪೊಲೀಸರು ನನಗೆ ನ್ಯಾಯ ಕೊಡುವ ಬದಲು ಆರೋಪಿಗಳೊಂದಿಗೆ ಸೇರಿಕೊಂಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಸಿಎಂಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿ ಸಿಎಂ, ಸಿಐಡಿ ತನಿಖೆಗೆ ವಹಿಸಿದ್ದಾರೆ.

“ಬೆಂಗಳೂರಿನ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ದ್ವಿತೀಯ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಕ್ರಿಯಾಶೀಲೆಯಾದ ನನ್ನ ಮಗಳು ಪ್ರಬುದ್ಧಳನ್ನು 2024ರ ಮೇ 15ರಂದು ಸಾಯಂಕಾಲ ನನ್ನ ಮನೆಯಲ್ಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯ ಮೊದಲ ದಿನದಿಂದಲೂ ಸುಬ್ರಮಣ್ಯಪುರ ಪೊಲೀಸ್ ಠಾಣೆಯ ತನಿಖಾಧಿಕಾರಿಗಳು ಮತ್ತು ಅವರ ತಂಡ ಸಂಶಯಾಸ್ಪದವಾಗಿ ವರ್ತಿಸುತ್ತಾ ನನ್ನ ಮನಸ್ಸಿಗೆ ನೋವುಂಟು ಮಾಡಿದ್ದಾರೆ. ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ ಎಂದು ಪದೇ ಪದೇ ಹೇಳಿದರೂ ಕೇಳಿಸಿಕೊಳ್ಳದ ತನಿಖಾ ತಂಡ, ಮೊದಲ ಮೂರ್ನಾಲ್ಕು ದಿನಗಳ ಕಾಲ ಘಟನೆಯನ್ನು ಆತ್ಮಹತ್ಯೆ ಎಂದೇ ಬಿಂಬಿಸುವ ಪ್ರಯತ್ನ ಮಾಡಿತ್ತು. ಕೊಲೆಗಡುಕನಿಗೆ ಎಲ್ಲಾ ರೀತಿಯ ಸಹಾಯ ಮಾಡಿ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿದೆ. ಕೊಲೆಗಡುಕನ ತಂದೆ, ತಾಯಿಯರನ್ನೂ ರಕ್ಷಿಸುವ ದುರುದ್ದೇಶದ ಕೃತ್ಯಗಳನ್ನು ಮಾಡುತ್ತಲೇ ಬರುತ್ತಿದ್ದಾರೆ” ಎಂದು ಕೆ.ಆರ್ ಸೌಮ್ಯ ಆರೋಪಿಸಿದ್ದಾರೆ.

“ಮಗಳನ್ನು ಕಳೆದುಕೊಂಡ ನೋವಿನಲ್ಲೂ ನಾನು ನ್ಯಾಯಕ್ಕಾಗಿ ಶ್ರಮವಹಿಸಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲು ಒತ್ತಾಯಿಸಿದ್ದೇನೆ. ಆದರೆ, ಪೊಲೀಸರು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ನನಗೆ ಗೊತ್ತಿರುವ ಸತ್ಯವನ್ನು ಕೇಳಿಸಿಕೊಳ್ಳಲೂ ನಿರಾಕರಿಸುತ್ತಿದ್ದಾರೆ. ಕೊಲೆಗಾರನ ತಂದೆ ಸ್ಥಳೀಯ ಠಾಣಾ ವ್ಯಾಪ್ತಿಯಲ್ಲಿ ಬಾರ್ ನಡೆಸುತ್ತಿದ್ದು, ಪೊಲೀಸರೊಂದಿಗೆ ನಿಕಟ ಸಂಪರ್ಕವಿಟ್ಟುಕೊಂಡಿದ್ದಾರೆ. ಸಾಕ್ಷ್ಯಗಳನ್ನು ನಾಶಪಡಿಸಿದ್ದರೂ, ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ಕಾಟಾಚಾರಕ್ಕೆ ಮಹಜರು ನಡೆಸಿದ್ದಾರೆ. ಆಪಾದಿತನು ಹತ್ತೇ ದಿನಕ್ಕೆ ಜಾಮೀನು ಪಡೆದು ನಿಶ್ಚಿಂತನಾಗಿ ಓಡಾಡಿಕೊಂಡಿದ್ದಾನೆ” ಎಂದಿದ್ದಾರೆ.

“ಸಿಂಗಲ್ ಪೇರೆಂಟ್ ಆಗಿ ಮಕ್ಕಳನ್ನು ಕಷ್ಟಪಟ್ಟು ಓದಿಸುತ್ತಿದ್ದ ನನಗೆ, ಈಗ ಜೀವ ಭಯವೂ ಉಂಟಾಗಿದೆ. ನನ್ನ ವಯಸ್ಸಾದ ತಾಯಿ ಮತ್ತು ಮಗನ ಕುರಿತೂ ಆತಂಕವಾಗಿದೆ. ಪೊಲೀಸರ ತನಿಖೆಯ ಕುರಿತ ನನಗೆ ಆತಂಕ ಹಾಗೂ ಸಂದೇಹಗಳಿವೆ. ಪ್ರಬುದ್ಧ ಹತ್ಯೆಯನ್ನು ಸಿಐಡಿಗೆ ವಹಿಸಿ ಅಪರಾಧಿ ಮತ್ತು ಅವನಿಗೆ ಬೆಂಬಲ ನೀಡಿದವರಿಗೆ ತಕ್ಕ ಶಿಕ್ಷೆ ವಿಧಿಸಲು ನೆರವಾಗಿ ಎಂದು ಮನವಿಯಲ್ಲಿ ಪ್ರಬುದ್ಧ ತಾಯಿ ಕೆ.ಆರ್.ಸೌಮ್ಯ ಕೋರಿದ್ದಾರೆ.

ಹಣದ ವಿಚಾರಕ್ಕೆ ಕೊಲೆ ಎಂದ ಪೊಲೀಸರು

ಹತ್ಯೆಯಾದ ಪ್ರಬುದ್ದ ಅವರ ಸಹೋದರ ಹಾಗೂ ಆರೋಪಿ ಸ್ನೇಹಿತರಾಗಿದ್ದು, ಅದೇ ಸಲುಗೆಯಲ್ಲಿ ಆರೋಪಿ ಆಗಾಗ ಪ್ರಬುದ್ದಳ ಮನೆಗೆ ಬಂದು ಹೋಗುತ್ತಿದ್ದ. ಆಟವಾಡುವಾಗ ತನ್ನ ಇನ್ನೊಬ್ಬ ಸ್ನೇಹಿತನ ಕನ್ನಡಕ ಮುರಿದಿದ್ದ ಆರೋಪಿಗೆ, ಅದನ್ನು ಸರಿ ಮಾಡಿಸಿಕೊಡಲು ಹಣದ ಅವಶ್ಯಕತೆಯಿತ್ತು. ಕೃತ್ಯಕ್ಕಿಂತ ಕೆಲವು ದಿನಗಳ ಹಿಂದಷ್ಟೇ ಪ್ರಬುದ್ಧಳ ಮನೆಗೆ ಬಂದಿದ್ದ ಆತ, ಇದಕ್ಕಾಗಿಯೇ ಆಕೆಯ ಪರ್ಸ್​ನಲ್ಲಿದ್ದ 2 ಸಾವಿರ ರೂ. ಹಣ ಕಳ್ಳತನ ಮಾಡಿದ್ದ. ಈ ವಿಚಾರ ಆಕೆಗೆ ಗೊತ್ತಾಗಿದ್ದರಿಂದ ವ್ಯವಸ್ಥಿತವಾಗಿ ಕೊಲೆಗೈದು, ಆತ್ಮಹತ್ಯೆ ಎಂಬಂತೆ ಬಿಂಬಿಸಿದ್ದ ಎಂದು ತನಿಖೆ ನಡೆಸಿದ್ದ ಪೊಲೀಸರು ತಿಳಿಸಿದ್ದರು.

ಇದನ್ನೂ ಓದಿ : ಕಾಂಗ್ರೆಸ್ ಬೆಂಬಲಿಸುವ ಅನೇಕ ಸಮುದಾಯಗಳಿಗೆ ಡಿಸಿಎಂ ಪ್ರಾತಿನಿಧ್ಯ ನೀಡಬೇಕು: ಕೆ.ಎನ್. ರಾಜಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...