Homeಕರ್ನಾಟಕವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮೇ 15, 2024ರಂದು ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಸಾಮಾಜಿಕ ಹೋರಾಟಗಾರರೂ ಆಗಿರುವ ಕೆ.ಆರ್ ಸೌಮ್ಯ ಅವರು ತಮ್ಮ ಪುತ್ರಿ ಪ್ರಬುದ್ದ ಕೊಲೆ ಪ್ರಕರಣದಲ್ಲಿ ಪೊಲೀಸರಿಂದ ನ್ಯಾಯ ಸಿಗುತ್ತಿಲ್ಲ. ಅದೆಷ್ಟೋ ಜನರ ಪರವಾಗಿ ಹೋರಾಟ ಮಾಡಿರುವ ನಾನೀಗ, ನನ್ನ ಮಗಳ ಕೊಲೆ ಪ್ರಕರಣದಲ್ಲಿ ನ್ಯಾಯ ಪಡೆಯಲು ಆಗುತ್ತಿಲ್ಲ. ಸುಬ್ರಹ್ಮಣ್ಯಪುರ ಪೊಲೀಸರು ನನಗೆ ನ್ಯಾಯ ಕೊಡುವ ಬದಲು ಆರೋಪಿಗಳೊಂದಿಗೆ ಸೇರಿಕೊಂಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಸಿಎಂಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿ ಸಿಎಂ, ಸಿಐಡಿ ತನಿಖೆಗೆ ವಹಿಸಿದ್ದಾರೆ.

“ಬೆಂಗಳೂರಿನ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ದ್ವಿತೀಯ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಕ್ರಿಯಾಶೀಲೆಯಾದ ನನ್ನ ಮಗಳು ಪ್ರಬುದ್ಧಳನ್ನು 2024ರ ಮೇ 15ರಂದು ಸಾಯಂಕಾಲ ನನ್ನ ಮನೆಯಲ್ಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯ ಮೊದಲ ದಿನದಿಂದಲೂ ಸುಬ್ರಮಣ್ಯಪುರ ಪೊಲೀಸ್ ಠಾಣೆಯ ತನಿಖಾಧಿಕಾರಿಗಳು ಮತ್ತು ಅವರ ತಂಡ ಸಂಶಯಾಸ್ಪದವಾಗಿ ವರ್ತಿಸುತ್ತಾ ನನ್ನ ಮನಸ್ಸಿಗೆ ನೋವುಂಟು ಮಾಡಿದ್ದಾರೆ. ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ ಎಂದು ಪದೇ ಪದೇ ಹೇಳಿದರೂ ಕೇಳಿಸಿಕೊಳ್ಳದ ತನಿಖಾ ತಂಡ, ಮೊದಲ ಮೂರ್ನಾಲ್ಕು ದಿನಗಳ ಕಾಲ ಘಟನೆಯನ್ನು ಆತ್ಮಹತ್ಯೆ ಎಂದೇ ಬಿಂಬಿಸುವ ಪ್ರಯತ್ನ ಮಾಡಿತ್ತು. ಕೊಲೆಗಡುಕನಿಗೆ ಎಲ್ಲಾ ರೀತಿಯ ಸಹಾಯ ಮಾಡಿ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿದೆ. ಕೊಲೆಗಡುಕನ ತಂದೆ, ತಾಯಿಯರನ್ನೂ ರಕ್ಷಿಸುವ ದುರುದ್ದೇಶದ ಕೃತ್ಯಗಳನ್ನು ಮಾಡುತ್ತಲೇ ಬರುತ್ತಿದ್ದಾರೆ” ಎಂದು ಕೆ.ಆರ್ ಸೌಮ್ಯ ಆರೋಪಿಸಿದ್ದಾರೆ.

“ಮಗಳನ್ನು ಕಳೆದುಕೊಂಡ ನೋವಿನಲ್ಲೂ ನಾನು ನ್ಯಾಯಕ್ಕಾಗಿ ಶ್ರಮವಹಿಸಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲು ಒತ್ತಾಯಿಸಿದ್ದೇನೆ. ಆದರೆ, ಪೊಲೀಸರು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ನನಗೆ ಗೊತ್ತಿರುವ ಸತ್ಯವನ್ನು ಕೇಳಿಸಿಕೊಳ್ಳಲೂ ನಿರಾಕರಿಸುತ್ತಿದ್ದಾರೆ. ಕೊಲೆಗಾರನ ತಂದೆ ಸ್ಥಳೀಯ ಠಾಣಾ ವ್ಯಾಪ್ತಿಯಲ್ಲಿ ಬಾರ್ ನಡೆಸುತ್ತಿದ್ದು, ಪೊಲೀಸರೊಂದಿಗೆ ನಿಕಟ ಸಂಪರ್ಕವಿಟ್ಟುಕೊಂಡಿದ್ದಾರೆ. ಸಾಕ್ಷ್ಯಗಳನ್ನು ನಾಶಪಡಿಸಿದ್ದರೂ, ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ಕಾಟಾಚಾರಕ್ಕೆ ಮಹಜರು ನಡೆಸಿದ್ದಾರೆ. ಆಪಾದಿತನು ಹತ್ತೇ ದಿನಕ್ಕೆ ಜಾಮೀನು ಪಡೆದು ನಿಶ್ಚಿಂತನಾಗಿ ಓಡಾಡಿಕೊಂಡಿದ್ದಾನೆ” ಎಂದಿದ್ದಾರೆ.

“ಸಿಂಗಲ್ ಪೇರೆಂಟ್ ಆಗಿ ಮಕ್ಕಳನ್ನು ಕಷ್ಟಪಟ್ಟು ಓದಿಸುತ್ತಿದ್ದ ನನಗೆ, ಈಗ ಜೀವ ಭಯವೂ ಉಂಟಾಗಿದೆ. ನನ್ನ ವಯಸ್ಸಾದ ತಾಯಿ ಮತ್ತು ಮಗನ ಕುರಿತೂ ಆತಂಕವಾಗಿದೆ. ಪೊಲೀಸರ ತನಿಖೆಯ ಕುರಿತ ನನಗೆ ಆತಂಕ ಹಾಗೂ ಸಂದೇಹಗಳಿವೆ. ಪ್ರಬುದ್ಧ ಹತ್ಯೆಯನ್ನು ಸಿಐಡಿಗೆ ವಹಿಸಿ ಅಪರಾಧಿ ಮತ್ತು ಅವನಿಗೆ ಬೆಂಬಲ ನೀಡಿದವರಿಗೆ ತಕ್ಕ ಶಿಕ್ಷೆ ವಿಧಿಸಲು ನೆರವಾಗಿ ಎಂದು ಮನವಿಯಲ್ಲಿ ಪ್ರಬುದ್ಧ ತಾಯಿ ಕೆ.ಆರ್.ಸೌಮ್ಯ ಕೋರಿದ್ದಾರೆ.

ಹಣದ ವಿಚಾರಕ್ಕೆ ಕೊಲೆ ಎಂದ ಪೊಲೀಸರು

ಹತ್ಯೆಯಾದ ಪ್ರಬುದ್ದ ಅವರ ಸಹೋದರ ಹಾಗೂ ಆರೋಪಿ ಸ್ನೇಹಿತರಾಗಿದ್ದು, ಅದೇ ಸಲುಗೆಯಲ್ಲಿ ಆರೋಪಿ ಆಗಾಗ ಪ್ರಬುದ್ದಳ ಮನೆಗೆ ಬಂದು ಹೋಗುತ್ತಿದ್ದ. ಆಟವಾಡುವಾಗ ತನ್ನ ಇನ್ನೊಬ್ಬ ಸ್ನೇಹಿತನ ಕನ್ನಡಕ ಮುರಿದಿದ್ದ ಆರೋಪಿಗೆ, ಅದನ್ನು ಸರಿ ಮಾಡಿಸಿಕೊಡಲು ಹಣದ ಅವಶ್ಯಕತೆಯಿತ್ತು. ಕೃತ್ಯಕ್ಕಿಂತ ಕೆಲವು ದಿನಗಳ ಹಿಂದಷ್ಟೇ ಪ್ರಬುದ್ಧಳ ಮನೆಗೆ ಬಂದಿದ್ದ ಆತ, ಇದಕ್ಕಾಗಿಯೇ ಆಕೆಯ ಪರ್ಸ್​ನಲ್ಲಿದ್ದ 2 ಸಾವಿರ ರೂ. ಹಣ ಕಳ್ಳತನ ಮಾಡಿದ್ದ. ಈ ವಿಚಾರ ಆಕೆಗೆ ಗೊತ್ತಾಗಿದ್ದರಿಂದ ವ್ಯವಸ್ಥಿತವಾಗಿ ಕೊಲೆಗೈದು, ಆತ್ಮಹತ್ಯೆ ಎಂಬಂತೆ ಬಿಂಬಿಸಿದ್ದ ಎಂದು ತನಿಖೆ ನಡೆಸಿದ್ದ ಪೊಲೀಸರು ತಿಳಿಸಿದ್ದರು.

ಇದನ್ನೂ ಓದಿ : ಕಾಂಗ್ರೆಸ್ ಬೆಂಬಲಿಸುವ ಅನೇಕ ಸಮುದಾಯಗಳಿಗೆ ಡಿಸಿಎಂ ಪ್ರಾತಿನಿಧ್ಯ ನೀಡಬೇಕು: ಕೆ.ಎನ್. ರಾಜಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...