Homeಕರ್ನಾಟಕವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮೇ 15, 2024ರಂದು ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಸಾಮಾಜಿಕ ಹೋರಾಟಗಾರರೂ ಆಗಿರುವ ಕೆ.ಆರ್ ಸೌಮ್ಯ ಅವರು ತಮ್ಮ ಪುತ್ರಿ ಪ್ರಬುದ್ದ ಕೊಲೆ ಪ್ರಕರಣದಲ್ಲಿ ಪೊಲೀಸರಿಂದ ನ್ಯಾಯ ಸಿಗುತ್ತಿಲ್ಲ. ಅದೆಷ್ಟೋ ಜನರ ಪರವಾಗಿ ಹೋರಾಟ ಮಾಡಿರುವ ನಾನೀಗ, ನನ್ನ ಮಗಳ ಕೊಲೆ ಪ್ರಕರಣದಲ್ಲಿ ನ್ಯಾಯ ಪಡೆಯಲು ಆಗುತ್ತಿಲ್ಲ. ಸುಬ್ರಹ್ಮಣ್ಯಪುರ ಪೊಲೀಸರು ನನಗೆ ನ್ಯಾಯ ಕೊಡುವ ಬದಲು ಆರೋಪಿಗಳೊಂದಿಗೆ ಸೇರಿಕೊಂಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಸಿಎಂಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿ ಸಿಎಂ, ಸಿಐಡಿ ತನಿಖೆಗೆ ವಹಿಸಿದ್ದಾರೆ.

“ಬೆಂಗಳೂರಿನ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ದ್ವಿತೀಯ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಕ್ರಿಯಾಶೀಲೆಯಾದ ನನ್ನ ಮಗಳು ಪ್ರಬುದ್ಧಳನ್ನು 2024ರ ಮೇ 15ರಂದು ಸಾಯಂಕಾಲ ನನ್ನ ಮನೆಯಲ್ಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯ ಮೊದಲ ದಿನದಿಂದಲೂ ಸುಬ್ರಮಣ್ಯಪುರ ಪೊಲೀಸ್ ಠಾಣೆಯ ತನಿಖಾಧಿಕಾರಿಗಳು ಮತ್ತು ಅವರ ತಂಡ ಸಂಶಯಾಸ್ಪದವಾಗಿ ವರ್ತಿಸುತ್ತಾ ನನ್ನ ಮನಸ್ಸಿಗೆ ನೋವುಂಟು ಮಾಡಿದ್ದಾರೆ. ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ ಎಂದು ಪದೇ ಪದೇ ಹೇಳಿದರೂ ಕೇಳಿಸಿಕೊಳ್ಳದ ತನಿಖಾ ತಂಡ, ಮೊದಲ ಮೂರ್ನಾಲ್ಕು ದಿನಗಳ ಕಾಲ ಘಟನೆಯನ್ನು ಆತ್ಮಹತ್ಯೆ ಎಂದೇ ಬಿಂಬಿಸುವ ಪ್ರಯತ್ನ ಮಾಡಿತ್ತು. ಕೊಲೆಗಡುಕನಿಗೆ ಎಲ್ಲಾ ರೀತಿಯ ಸಹಾಯ ಮಾಡಿ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿದೆ. ಕೊಲೆಗಡುಕನ ತಂದೆ, ತಾಯಿಯರನ್ನೂ ರಕ್ಷಿಸುವ ದುರುದ್ದೇಶದ ಕೃತ್ಯಗಳನ್ನು ಮಾಡುತ್ತಲೇ ಬರುತ್ತಿದ್ದಾರೆ” ಎಂದು ಕೆ.ಆರ್ ಸೌಮ್ಯ ಆರೋಪಿಸಿದ್ದಾರೆ.

“ಮಗಳನ್ನು ಕಳೆದುಕೊಂಡ ನೋವಿನಲ್ಲೂ ನಾನು ನ್ಯಾಯಕ್ಕಾಗಿ ಶ್ರಮವಹಿಸಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲು ಒತ್ತಾಯಿಸಿದ್ದೇನೆ. ಆದರೆ, ಪೊಲೀಸರು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ನನಗೆ ಗೊತ್ತಿರುವ ಸತ್ಯವನ್ನು ಕೇಳಿಸಿಕೊಳ್ಳಲೂ ನಿರಾಕರಿಸುತ್ತಿದ್ದಾರೆ. ಕೊಲೆಗಾರನ ತಂದೆ ಸ್ಥಳೀಯ ಠಾಣಾ ವ್ಯಾಪ್ತಿಯಲ್ಲಿ ಬಾರ್ ನಡೆಸುತ್ತಿದ್ದು, ಪೊಲೀಸರೊಂದಿಗೆ ನಿಕಟ ಸಂಪರ್ಕವಿಟ್ಟುಕೊಂಡಿದ್ದಾರೆ. ಸಾಕ್ಷ್ಯಗಳನ್ನು ನಾಶಪಡಿಸಿದ್ದರೂ, ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ಕಾಟಾಚಾರಕ್ಕೆ ಮಹಜರು ನಡೆಸಿದ್ದಾರೆ. ಆಪಾದಿತನು ಹತ್ತೇ ದಿನಕ್ಕೆ ಜಾಮೀನು ಪಡೆದು ನಿಶ್ಚಿಂತನಾಗಿ ಓಡಾಡಿಕೊಂಡಿದ್ದಾನೆ” ಎಂದಿದ್ದಾರೆ.

“ಸಿಂಗಲ್ ಪೇರೆಂಟ್ ಆಗಿ ಮಕ್ಕಳನ್ನು ಕಷ್ಟಪಟ್ಟು ಓದಿಸುತ್ತಿದ್ದ ನನಗೆ, ಈಗ ಜೀವ ಭಯವೂ ಉಂಟಾಗಿದೆ. ನನ್ನ ವಯಸ್ಸಾದ ತಾಯಿ ಮತ್ತು ಮಗನ ಕುರಿತೂ ಆತಂಕವಾಗಿದೆ. ಪೊಲೀಸರ ತನಿಖೆಯ ಕುರಿತ ನನಗೆ ಆತಂಕ ಹಾಗೂ ಸಂದೇಹಗಳಿವೆ. ಪ್ರಬುದ್ಧ ಹತ್ಯೆಯನ್ನು ಸಿಐಡಿಗೆ ವಹಿಸಿ ಅಪರಾಧಿ ಮತ್ತು ಅವನಿಗೆ ಬೆಂಬಲ ನೀಡಿದವರಿಗೆ ತಕ್ಕ ಶಿಕ್ಷೆ ವಿಧಿಸಲು ನೆರವಾಗಿ ಎಂದು ಮನವಿಯಲ್ಲಿ ಪ್ರಬುದ್ಧ ತಾಯಿ ಕೆ.ಆರ್.ಸೌಮ್ಯ ಕೋರಿದ್ದಾರೆ.

ಹಣದ ವಿಚಾರಕ್ಕೆ ಕೊಲೆ ಎಂದ ಪೊಲೀಸರು

ಹತ್ಯೆಯಾದ ಪ್ರಬುದ್ದ ಅವರ ಸಹೋದರ ಹಾಗೂ ಆರೋಪಿ ಸ್ನೇಹಿತರಾಗಿದ್ದು, ಅದೇ ಸಲುಗೆಯಲ್ಲಿ ಆರೋಪಿ ಆಗಾಗ ಪ್ರಬುದ್ದಳ ಮನೆಗೆ ಬಂದು ಹೋಗುತ್ತಿದ್ದ. ಆಟವಾಡುವಾಗ ತನ್ನ ಇನ್ನೊಬ್ಬ ಸ್ನೇಹಿತನ ಕನ್ನಡಕ ಮುರಿದಿದ್ದ ಆರೋಪಿಗೆ, ಅದನ್ನು ಸರಿ ಮಾಡಿಸಿಕೊಡಲು ಹಣದ ಅವಶ್ಯಕತೆಯಿತ್ತು. ಕೃತ್ಯಕ್ಕಿಂತ ಕೆಲವು ದಿನಗಳ ಹಿಂದಷ್ಟೇ ಪ್ರಬುದ್ಧಳ ಮನೆಗೆ ಬಂದಿದ್ದ ಆತ, ಇದಕ್ಕಾಗಿಯೇ ಆಕೆಯ ಪರ್ಸ್​ನಲ್ಲಿದ್ದ 2 ಸಾವಿರ ರೂ. ಹಣ ಕಳ್ಳತನ ಮಾಡಿದ್ದ. ಈ ವಿಚಾರ ಆಕೆಗೆ ಗೊತ್ತಾಗಿದ್ದರಿಂದ ವ್ಯವಸ್ಥಿತವಾಗಿ ಕೊಲೆಗೈದು, ಆತ್ಮಹತ್ಯೆ ಎಂಬಂತೆ ಬಿಂಬಿಸಿದ್ದ ಎಂದು ತನಿಖೆ ನಡೆಸಿದ್ದ ಪೊಲೀಸರು ತಿಳಿಸಿದ್ದರು.

ಇದನ್ನೂ ಓದಿ : ಕಾಂಗ್ರೆಸ್ ಬೆಂಬಲಿಸುವ ಅನೇಕ ಸಮುದಾಯಗಳಿಗೆ ಡಿಸಿಎಂ ಪ್ರಾತಿನಿಧ್ಯ ನೀಡಬೇಕು: ಕೆ.ಎನ್. ರಾಜಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...