Homeಕರ್ನಾಟಕವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮೇ 15, 2024ರಂದು ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಸಾಮಾಜಿಕ ಹೋರಾಟಗಾರರೂ ಆಗಿರುವ ಕೆ.ಆರ್ ಸೌಮ್ಯ ಅವರು ತಮ್ಮ ಪುತ್ರಿ ಪ್ರಬುದ್ದ ಕೊಲೆ ಪ್ರಕರಣದಲ್ಲಿ ಪೊಲೀಸರಿಂದ ನ್ಯಾಯ ಸಿಗುತ್ತಿಲ್ಲ. ಅದೆಷ್ಟೋ ಜನರ ಪರವಾಗಿ ಹೋರಾಟ ಮಾಡಿರುವ ನಾನೀಗ, ನನ್ನ ಮಗಳ ಕೊಲೆ ಪ್ರಕರಣದಲ್ಲಿ ನ್ಯಾಯ ಪಡೆಯಲು ಆಗುತ್ತಿಲ್ಲ. ಸುಬ್ರಹ್ಮಣ್ಯಪುರ ಪೊಲೀಸರು ನನಗೆ ನ್ಯಾಯ ಕೊಡುವ ಬದಲು ಆರೋಪಿಗಳೊಂದಿಗೆ ಸೇರಿಕೊಂಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಸಿಎಂಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿ ಸಿಎಂ, ಸಿಐಡಿ ತನಿಖೆಗೆ ವಹಿಸಿದ್ದಾರೆ.

“ಬೆಂಗಳೂರಿನ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ದ್ವಿತೀಯ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಕ್ರಿಯಾಶೀಲೆಯಾದ ನನ್ನ ಮಗಳು ಪ್ರಬುದ್ಧಳನ್ನು 2024ರ ಮೇ 15ರಂದು ಸಾಯಂಕಾಲ ನನ್ನ ಮನೆಯಲ್ಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯ ಮೊದಲ ದಿನದಿಂದಲೂ ಸುಬ್ರಮಣ್ಯಪುರ ಪೊಲೀಸ್ ಠಾಣೆಯ ತನಿಖಾಧಿಕಾರಿಗಳು ಮತ್ತು ಅವರ ತಂಡ ಸಂಶಯಾಸ್ಪದವಾಗಿ ವರ್ತಿಸುತ್ತಾ ನನ್ನ ಮನಸ್ಸಿಗೆ ನೋವುಂಟು ಮಾಡಿದ್ದಾರೆ. ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ ಎಂದು ಪದೇ ಪದೇ ಹೇಳಿದರೂ ಕೇಳಿಸಿಕೊಳ್ಳದ ತನಿಖಾ ತಂಡ, ಮೊದಲ ಮೂರ್ನಾಲ್ಕು ದಿನಗಳ ಕಾಲ ಘಟನೆಯನ್ನು ಆತ್ಮಹತ್ಯೆ ಎಂದೇ ಬಿಂಬಿಸುವ ಪ್ರಯತ್ನ ಮಾಡಿತ್ತು. ಕೊಲೆಗಡುಕನಿಗೆ ಎಲ್ಲಾ ರೀತಿಯ ಸಹಾಯ ಮಾಡಿ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿದೆ. ಕೊಲೆಗಡುಕನ ತಂದೆ, ತಾಯಿಯರನ್ನೂ ರಕ್ಷಿಸುವ ದುರುದ್ದೇಶದ ಕೃತ್ಯಗಳನ್ನು ಮಾಡುತ್ತಲೇ ಬರುತ್ತಿದ್ದಾರೆ” ಎಂದು ಕೆ.ಆರ್ ಸೌಮ್ಯ ಆರೋಪಿಸಿದ್ದಾರೆ.

“ಮಗಳನ್ನು ಕಳೆದುಕೊಂಡ ನೋವಿನಲ್ಲೂ ನಾನು ನ್ಯಾಯಕ್ಕಾಗಿ ಶ್ರಮವಹಿಸಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲು ಒತ್ತಾಯಿಸಿದ್ದೇನೆ. ಆದರೆ, ಪೊಲೀಸರು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ನನಗೆ ಗೊತ್ತಿರುವ ಸತ್ಯವನ್ನು ಕೇಳಿಸಿಕೊಳ್ಳಲೂ ನಿರಾಕರಿಸುತ್ತಿದ್ದಾರೆ. ಕೊಲೆಗಾರನ ತಂದೆ ಸ್ಥಳೀಯ ಠಾಣಾ ವ್ಯಾಪ್ತಿಯಲ್ಲಿ ಬಾರ್ ನಡೆಸುತ್ತಿದ್ದು, ಪೊಲೀಸರೊಂದಿಗೆ ನಿಕಟ ಸಂಪರ್ಕವಿಟ್ಟುಕೊಂಡಿದ್ದಾರೆ. ಸಾಕ್ಷ್ಯಗಳನ್ನು ನಾಶಪಡಿಸಿದ್ದರೂ, ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ಕಾಟಾಚಾರಕ್ಕೆ ಮಹಜರು ನಡೆಸಿದ್ದಾರೆ. ಆಪಾದಿತನು ಹತ್ತೇ ದಿನಕ್ಕೆ ಜಾಮೀನು ಪಡೆದು ನಿಶ್ಚಿಂತನಾಗಿ ಓಡಾಡಿಕೊಂಡಿದ್ದಾನೆ” ಎಂದಿದ್ದಾರೆ.

“ಸಿಂಗಲ್ ಪೇರೆಂಟ್ ಆಗಿ ಮಕ್ಕಳನ್ನು ಕಷ್ಟಪಟ್ಟು ಓದಿಸುತ್ತಿದ್ದ ನನಗೆ, ಈಗ ಜೀವ ಭಯವೂ ಉಂಟಾಗಿದೆ. ನನ್ನ ವಯಸ್ಸಾದ ತಾಯಿ ಮತ್ತು ಮಗನ ಕುರಿತೂ ಆತಂಕವಾಗಿದೆ. ಪೊಲೀಸರ ತನಿಖೆಯ ಕುರಿತ ನನಗೆ ಆತಂಕ ಹಾಗೂ ಸಂದೇಹಗಳಿವೆ. ಪ್ರಬುದ್ಧ ಹತ್ಯೆಯನ್ನು ಸಿಐಡಿಗೆ ವಹಿಸಿ ಅಪರಾಧಿ ಮತ್ತು ಅವನಿಗೆ ಬೆಂಬಲ ನೀಡಿದವರಿಗೆ ತಕ್ಕ ಶಿಕ್ಷೆ ವಿಧಿಸಲು ನೆರವಾಗಿ ಎಂದು ಮನವಿಯಲ್ಲಿ ಪ್ರಬುದ್ಧ ತಾಯಿ ಕೆ.ಆರ್.ಸೌಮ್ಯ ಕೋರಿದ್ದಾರೆ.

ಹಣದ ವಿಚಾರಕ್ಕೆ ಕೊಲೆ ಎಂದ ಪೊಲೀಸರು

ಹತ್ಯೆಯಾದ ಪ್ರಬುದ್ದ ಅವರ ಸಹೋದರ ಹಾಗೂ ಆರೋಪಿ ಸ್ನೇಹಿತರಾಗಿದ್ದು, ಅದೇ ಸಲುಗೆಯಲ್ಲಿ ಆರೋಪಿ ಆಗಾಗ ಪ್ರಬುದ್ದಳ ಮನೆಗೆ ಬಂದು ಹೋಗುತ್ತಿದ್ದ. ಆಟವಾಡುವಾಗ ತನ್ನ ಇನ್ನೊಬ್ಬ ಸ್ನೇಹಿತನ ಕನ್ನಡಕ ಮುರಿದಿದ್ದ ಆರೋಪಿಗೆ, ಅದನ್ನು ಸರಿ ಮಾಡಿಸಿಕೊಡಲು ಹಣದ ಅವಶ್ಯಕತೆಯಿತ್ತು. ಕೃತ್ಯಕ್ಕಿಂತ ಕೆಲವು ದಿನಗಳ ಹಿಂದಷ್ಟೇ ಪ್ರಬುದ್ಧಳ ಮನೆಗೆ ಬಂದಿದ್ದ ಆತ, ಇದಕ್ಕಾಗಿಯೇ ಆಕೆಯ ಪರ್ಸ್​ನಲ್ಲಿದ್ದ 2 ಸಾವಿರ ರೂ. ಹಣ ಕಳ್ಳತನ ಮಾಡಿದ್ದ. ಈ ವಿಚಾರ ಆಕೆಗೆ ಗೊತ್ತಾಗಿದ್ದರಿಂದ ವ್ಯವಸ್ಥಿತವಾಗಿ ಕೊಲೆಗೈದು, ಆತ್ಮಹತ್ಯೆ ಎಂಬಂತೆ ಬಿಂಬಿಸಿದ್ದ ಎಂದು ತನಿಖೆ ನಡೆಸಿದ್ದ ಪೊಲೀಸರು ತಿಳಿಸಿದ್ದರು.

ಇದನ್ನೂ ಓದಿ : ಕಾಂಗ್ರೆಸ್ ಬೆಂಬಲಿಸುವ ಅನೇಕ ಸಮುದಾಯಗಳಿಗೆ ಡಿಸಿಎಂ ಪ್ರಾತಿನಿಧ್ಯ ನೀಡಬೇಕು: ಕೆ.ಎನ್. ರಾಜಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...