Homeಕರ್ನಾಟಕವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮೇ 15, 2024ರಂದು ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಸಾಮಾಜಿಕ ಹೋರಾಟಗಾರರೂ ಆಗಿರುವ ಕೆ.ಆರ್ ಸೌಮ್ಯ ಅವರು ತಮ್ಮ ಪುತ್ರಿ ಪ್ರಬುದ್ದ ಕೊಲೆ ಪ್ರಕರಣದಲ್ಲಿ ಪೊಲೀಸರಿಂದ ನ್ಯಾಯ ಸಿಗುತ್ತಿಲ್ಲ. ಅದೆಷ್ಟೋ ಜನರ ಪರವಾಗಿ ಹೋರಾಟ ಮಾಡಿರುವ ನಾನೀಗ, ನನ್ನ ಮಗಳ ಕೊಲೆ ಪ್ರಕರಣದಲ್ಲಿ ನ್ಯಾಯ ಪಡೆಯಲು ಆಗುತ್ತಿಲ್ಲ. ಸುಬ್ರಹ್ಮಣ್ಯಪುರ ಪೊಲೀಸರು ನನಗೆ ನ್ಯಾಯ ಕೊಡುವ ಬದಲು ಆರೋಪಿಗಳೊಂದಿಗೆ ಸೇರಿಕೊಂಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಸಿಎಂಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿ ಸಿಎಂ, ಸಿಐಡಿ ತನಿಖೆಗೆ ವಹಿಸಿದ್ದಾರೆ.

“ಬೆಂಗಳೂರಿನ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ದ್ವಿತೀಯ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಕ್ರಿಯಾಶೀಲೆಯಾದ ನನ್ನ ಮಗಳು ಪ್ರಬುದ್ಧಳನ್ನು 2024ರ ಮೇ 15ರಂದು ಸಾಯಂಕಾಲ ನನ್ನ ಮನೆಯಲ್ಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯ ಮೊದಲ ದಿನದಿಂದಲೂ ಸುಬ್ರಮಣ್ಯಪುರ ಪೊಲೀಸ್ ಠಾಣೆಯ ತನಿಖಾಧಿಕಾರಿಗಳು ಮತ್ತು ಅವರ ತಂಡ ಸಂಶಯಾಸ್ಪದವಾಗಿ ವರ್ತಿಸುತ್ತಾ ನನ್ನ ಮನಸ್ಸಿಗೆ ನೋವುಂಟು ಮಾಡಿದ್ದಾರೆ. ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ ಎಂದು ಪದೇ ಪದೇ ಹೇಳಿದರೂ ಕೇಳಿಸಿಕೊಳ್ಳದ ತನಿಖಾ ತಂಡ, ಮೊದಲ ಮೂರ್ನಾಲ್ಕು ದಿನಗಳ ಕಾಲ ಘಟನೆಯನ್ನು ಆತ್ಮಹತ್ಯೆ ಎಂದೇ ಬಿಂಬಿಸುವ ಪ್ರಯತ್ನ ಮಾಡಿತ್ತು. ಕೊಲೆಗಡುಕನಿಗೆ ಎಲ್ಲಾ ರೀತಿಯ ಸಹಾಯ ಮಾಡಿ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿದೆ. ಕೊಲೆಗಡುಕನ ತಂದೆ, ತಾಯಿಯರನ್ನೂ ರಕ್ಷಿಸುವ ದುರುದ್ದೇಶದ ಕೃತ್ಯಗಳನ್ನು ಮಾಡುತ್ತಲೇ ಬರುತ್ತಿದ್ದಾರೆ” ಎಂದು ಕೆ.ಆರ್ ಸೌಮ್ಯ ಆರೋಪಿಸಿದ್ದಾರೆ.

“ಮಗಳನ್ನು ಕಳೆದುಕೊಂಡ ನೋವಿನಲ್ಲೂ ನಾನು ನ್ಯಾಯಕ್ಕಾಗಿ ಶ್ರಮವಹಿಸಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲು ಒತ್ತಾಯಿಸಿದ್ದೇನೆ. ಆದರೆ, ಪೊಲೀಸರು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ನನಗೆ ಗೊತ್ತಿರುವ ಸತ್ಯವನ್ನು ಕೇಳಿಸಿಕೊಳ್ಳಲೂ ನಿರಾಕರಿಸುತ್ತಿದ್ದಾರೆ. ಕೊಲೆಗಾರನ ತಂದೆ ಸ್ಥಳೀಯ ಠಾಣಾ ವ್ಯಾಪ್ತಿಯಲ್ಲಿ ಬಾರ್ ನಡೆಸುತ್ತಿದ್ದು, ಪೊಲೀಸರೊಂದಿಗೆ ನಿಕಟ ಸಂಪರ್ಕವಿಟ್ಟುಕೊಂಡಿದ್ದಾರೆ. ಸಾಕ್ಷ್ಯಗಳನ್ನು ನಾಶಪಡಿಸಿದ್ದರೂ, ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ಕಾಟಾಚಾರಕ್ಕೆ ಮಹಜರು ನಡೆಸಿದ್ದಾರೆ. ಆಪಾದಿತನು ಹತ್ತೇ ದಿನಕ್ಕೆ ಜಾಮೀನು ಪಡೆದು ನಿಶ್ಚಿಂತನಾಗಿ ಓಡಾಡಿಕೊಂಡಿದ್ದಾನೆ” ಎಂದಿದ್ದಾರೆ.

“ಸಿಂಗಲ್ ಪೇರೆಂಟ್ ಆಗಿ ಮಕ್ಕಳನ್ನು ಕಷ್ಟಪಟ್ಟು ಓದಿಸುತ್ತಿದ್ದ ನನಗೆ, ಈಗ ಜೀವ ಭಯವೂ ಉಂಟಾಗಿದೆ. ನನ್ನ ವಯಸ್ಸಾದ ತಾಯಿ ಮತ್ತು ಮಗನ ಕುರಿತೂ ಆತಂಕವಾಗಿದೆ. ಪೊಲೀಸರ ತನಿಖೆಯ ಕುರಿತ ನನಗೆ ಆತಂಕ ಹಾಗೂ ಸಂದೇಹಗಳಿವೆ. ಪ್ರಬುದ್ಧ ಹತ್ಯೆಯನ್ನು ಸಿಐಡಿಗೆ ವಹಿಸಿ ಅಪರಾಧಿ ಮತ್ತು ಅವನಿಗೆ ಬೆಂಬಲ ನೀಡಿದವರಿಗೆ ತಕ್ಕ ಶಿಕ್ಷೆ ವಿಧಿಸಲು ನೆರವಾಗಿ ಎಂದು ಮನವಿಯಲ್ಲಿ ಪ್ರಬುದ್ಧ ತಾಯಿ ಕೆ.ಆರ್.ಸೌಮ್ಯ ಕೋರಿದ್ದಾರೆ.

ಹಣದ ವಿಚಾರಕ್ಕೆ ಕೊಲೆ ಎಂದ ಪೊಲೀಸರು

ಹತ್ಯೆಯಾದ ಪ್ರಬುದ್ದ ಅವರ ಸಹೋದರ ಹಾಗೂ ಆರೋಪಿ ಸ್ನೇಹಿತರಾಗಿದ್ದು, ಅದೇ ಸಲುಗೆಯಲ್ಲಿ ಆರೋಪಿ ಆಗಾಗ ಪ್ರಬುದ್ದಳ ಮನೆಗೆ ಬಂದು ಹೋಗುತ್ತಿದ್ದ. ಆಟವಾಡುವಾಗ ತನ್ನ ಇನ್ನೊಬ್ಬ ಸ್ನೇಹಿತನ ಕನ್ನಡಕ ಮುರಿದಿದ್ದ ಆರೋಪಿಗೆ, ಅದನ್ನು ಸರಿ ಮಾಡಿಸಿಕೊಡಲು ಹಣದ ಅವಶ್ಯಕತೆಯಿತ್ತು. ಕೃತ್ಯಕ್ಕಿಂತ ಕೆಲವು ದಿನಗಳ ಹಿಂದಷ್ಟೇ ಪ್ರಬುದ್ಧಳ ಮನೆಗೆ ಬಂದಿದ್ದ ಆತ, ಇದಕ್ಕಾಗಿಯೇ ಆಕೆಯ ಪರ್ಸ್​ನಲ್ಲಿದ್ದ 2 ಸಾವಿರ ರೂ. ಹಣ ಕಳ್ಳತನ ಮಾಡಿದ್ದ. ಈ ವಿಚಾರ ಆಕೆಗೆ ಗೊತ್ತಾಗಿದ್ದರಿಂದ ವ್ಯವಸ್ಥಿತವಾಗಿ ಕೊಲೆಗೈದು, ಆತ್ಮಹತ್ಯೆ ಎಂಬಂತೆ ಬಿಂಬಿಸಿದ್ದ ಎಂದು ತನಿಖೆ ನಡೆಸಿದ್ದ ಪೊಲೀಸರು ತಿಳಿಸಿದ್ದರು.

ಇದನ್ನೂ ಓದಿ : ಕಾಂಗ್ರೆಸ್ ಬೆಂಬಲಿಸುವ ಅನೇಕ ಸಮುದಾಯಗಳಿಗೆ ಡಿಸಿಎಂ ಪ್ರಾತಿನಿಧ್ಯ ನೀಡಬೇಕು: ಕೆ.ಎನ್. ರಾಜಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...