Homeಕರ್ನಾಟಕಮಂಗಳೂರು: ಅಮ್ಮನಿಗೆ ಜನ್ಮದಿನದ ಶುಭ ಕೋರಲು ಬಿಡದ ಶಾಲಾ ಮಂಡಲಿ; ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ಅಮ್ಮನಿಗೆ ಜನ್ಮದಿನದ ಶುಭ ಕೋರಲು ಬಿಡದ ಶಾಲಾ ಮಂಡಲಿ; ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

“ತಾಯಿಗೆ ಜನ್ಮದಿನದ ಶುಭಾಶಯಗಳು. ಎಲ್ಲರೂ ಖುಷಿಯಾಗಿರಿ, ಶಾಲೆಗೆ ತನಗಾಗಿ ಕಟ್ಟಿರುವ ಶುಲ್ಕವನ್ನು ವಾಪಸ್‌ ಪಡೆದುಕೊಳ್ಳಿ. ನಿಮ್ಮಿಂದ ನಾನು ದೂರವಾಗುತ್ತಿದ್ದೇನೆ. ನೀವು ನನ್ನನ್ನು ದುಃಖಕ್ಕೆ ತಳ್ಳಿದಿರಿ. ಯಾರೂ ಅಳಬೇಡಿ.”

-ಹೀಗೆ ಇಂಗ್ಲಿಷ್‌ನಲ್ಲಿ ಡೆತ್‌ ನೋಟ್ ಬರೆದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ತಲಪಾಡಿಯ ದೇವಿನಗರದ ಶಾರದಾ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿಲಯದಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ರಮೇಶ್‌- ಮಂಜುಳಾ ದಂಪತಿಯ ಪುತ್ರ ಪೂರ್ವಜ್‌ (14) ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾನಿಕೇತನ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.

ಶನಿವಾರ ಪೂರ್ವಜ್ ತಾಯಿಯ ಜನ್ಮದಿನವಿತ್ತು. ಅಮ್ಮನಿಗೆ ಶುಭಕೋರಲು ಬಯಸಿದ್ದ ಪೂರ್ವಜ್‌ಗೆ ಹಾಸ್ಟೆಲ್‌ ವಾರ್ಡನ್ ಅವಕಾಶ ನೀಡಲಿಲ್ಲ. ಶಾಲಾ ಆಡಳಿತ ಮಂಡಳಿಯ ನಿಯಮದಂತೆ ಹಾಸ್ಟೆಲ್‌ ವಾರ್ಡನ್‌ ಮೊಬೈಲ್‌ ನೀಡಲು ನಿರಾಕರಿಸಿದ್ದರು ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

ರಾತ್ರಿ 12 ಗಂಟೆಯವರೆಗೂ ಮಂಕಾಗಿ ಕುಳಿತಿದ್ದ  ಪೂರ್ವಜ್‌ ಡೆತ್‌ನೋಟ್‌ ಬರೆದಿಟ್ಟು ಹಾಸ್ಟೆಲ್‌ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಭಾನುವಾರ ಬೆಳಿಗ್ಗೆ ವಿದ್ಯಾರ್ಥಿಯೊಬ್ಬ ಪೂರ್ವಜ್‌ ಶವ ನೋಡಿ, ವಾರ್ಡನ್‌ ಗಮನಕ್ಕೆ ತಂದಿದ್ದಾನೆ.

ವಿದ್ಯಾಸಂಸ್ಥೆ, ಶಾಲಾ ಪ್ರಾಂಶುಪಾಲರು ಹಾಗೂ ಹಾಸ್ಟೆಲ್‌ ವಾರ್ಡನ್‌ ವಿರುದ್ಧ ಮಂಜುಳಾ (ಸಾವಿಗೀಡಾದ ವಿದ್ಯಾರ್ಥಿಯ ತಾಯಿ) ಸಹೋದರ ಅರುಣ್‌ ಅವರು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

‘ಶಾಲಾ ಆಡಳಿತ ಮಂಡಳಿಯ ಕಿರುಕುಳದಿಂದ ಪೂರ್ವಜ್‌ ಆತ್ಮಹತ್ಯೆ ಮಾಡಿದ್ದು, ಶಾಲಾ ಸೇರ್ಪಡೆ ವೇಳೆ ವಿದ್ಯಾರ್ಥಿಯ ಚಲನವಲನವನ್ನು ಪೋಷಕರಿಗೆ ತಿಳಿಸುತ್ತೇನೆ ಅಂದಿದ್ದರೂ ಈವರೆಗೆ ಪೂರ್ವಜ್‌ ಕುರಿತು ಯಾವುದೇ ಮಾಹಿತಿಯನ್ನು ನೀಡಿಲ್ಲ. ಹೆತ್ತವರು ಕರೆ ಮಾಡಿದರೂ ಸಂಭಾಷಣೆಗೆ ಶಾಲಾಡಳಿತ ಮಂಡಳಿ ಅವಕಾಶ ನೀಡುತ್ತಿರಲಿಲ್ಲ’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಕುರಿತು ಶಿಕ್ಷಕ ಲಕ್ಷ್ಮಿಕಾಂತ ಮಿರಜಕರ ಪೋಸ್ಟ್‌ ಮಾಡಿದ್ದು, “ಕರ್ನಾಟಕ ರಾಜ್ಯದಲ್ಲಿ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ 826 ವಸತಿ ಶಾಲೆಗಳಿವೆ. ಬಡ ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಸರಕಾರ ಸ್ಥಾಪಿಸಿರುವ ಈ ವಸತಿ ಶಾಲೆಗಳು ಇಡಿದೇಶಕ್ಕೆ ಮಾದರಿಯಾಗಿವೆ. ಆದರೆ ಕೇವಲ ಹಣ ಮಾಡುವ ಉದ್ದೇಶಕ್ಕೋಸ್ಕರ ಹುಟ್ಟಿಕೊಂಡಿರುವ ಇಂತಹ ಖಾಸಗಿ ವಸತಿ ಶಾಲೆಗಳು ತಮ್ಮ ಅತಿಯಾದ ನೀತಿ ನಿಯಮಗಳಿಂದಾಗಿ ಇಂತಹ ಶೋಚನೀಯ ಘಟನೆಗಳು ನಡೆಯಲು ಕಾರಣವಾಗುತ್ತಿವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಸಂಬಂಧಗಳ ಬೆಲೆ ಅರಿಯದೇ ಮಾನವೀಯತೆ ಮರೆತು ವರ್ತಿಸುವ ಇಂತಹ ಧನದಾಹಿ ರಕ್ಕಸ ವಸತಿ ಶಾಲೆಗಳ ವಿರುದ್ಧ ಸರಕಾರ ಕ್ರಮ ಕೈಗೊಳ್ಳುವ ಅಗತ್ಯವಿದೆ. ಪ್ರತಿಷ್ಟೆಗೆಂದು, ಹಣವಿದೆಯೆಂದು ಇಂತಹ ಶಾಲೆಗಳ ಆಡಳಿತ ಮಂಡಳಿಗೆ ಬೆನ್ನು ಬಗ್ಗಿಸುವ ಪೋಷಕರು ತಮ್ಮ ಮಕ್ಕಳ ಜೀವದ ಬಗ್ಗೆ ಯೋಚಿಸಬೇಕಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹ ಶಿಕ್ಷಣ ಸಂಸ್ಥೆಗೆ ತಮ್ಮ ಮಕ್ಕಳನ್ನು ಸೇರಿಸುವ ಹೆತ್ತವರು ಇನ್ನು ಮುಂದೆಯಾದರೂ ಯೋಚನೆ ಮಾಡಿ… ಇದರ ಒಳ ಮರ್ಮವನ್ನು ದೇವರೇ ಬಲ್ಲ…

  2. ಇತ ಬರೆದಿದ್ದು ಎಲ್ಲಾ ಸುಳ್ಳು ಕಟ್ಟುಕಥೆ, ಪೀರ್ ಪಾಷಾ ಬಂಗ್ಲಾ ಚಾಲುಕ್ಯ ಶೈಲಿಯಲ್ಲಿ 12ನೇ ಶತಮಾನದಲ್ಲಿ ನಿರ್ಮಾಣವಾಗಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...