Homeಕರ್ನಾಟಕಮಂಗಳೂರು: ಅಮ್ಮನಿಗೆ ಜನ್ಮದಿನದ ಶುಭ ಕೋರಲು ಬಿಡದ ಶಾಲಾ ಮಂಡಲಿ; ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ಅಮ್ಮನಿಗೆ ಜನ್ಮದಿನದ ಶುಭ ಕೋರಲು ಬಿಡದ ಶಾಲಾ ಮಂಡಲಿ; ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

“ತಾಯಿಗೆ ಜನ್ಮದಿನದ ಶುಭಾಶಯಗಳು. ಎಲ್ಲರೂ ಖುಷಿಯಾಗಿರಿ, ಶಾಲೆಗೆ ತನಗಾಗಿ ಕಟ್ಟಿರುವ ಶುಲ್ಕವನ್ನು ವಾಪಸ್‌ ಪಡೆದುಕೊಳ್ಳಿ. ನಿಮ್ಮಿಂದ ನಾನು ದೂರವಾಗುತ್ತಿದ್ದೇನೆ. ನೀವು ನನ್ನನ್ನು ದುಃಖಕ್ಕೆ ತಳ್ಳಿದಿರಿ. ಯಾರೂ ಅಳಬೇಡಿ.”

-ಹೀಗೆ ಇಂಗ್ಲಿಷ್‌ನಲ್ಲಿ ಡೆತ್‌ ನೋಟ್ ಬರೆದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ತಲಪಾಡಿಯ ದೇವಿನಗರದ ಶಾರದಾ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿಲಯದಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ರಮೇಶ್‌- ಮಂಜುಳಾ ದಂಪತಿಯ ಪುತ್ರ ಪೂರ್ವಜ್‌ (14) ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾನಿಕೇತನ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.

ಶನಿವಾರ ಪೂರ್ವಜ್ ತಾಯಿಯ ಜನ್ಮದಿನವಿತ್ತು. ಅಮ್ಮನಿಗೆ ಶುಭಕೋರಲು ಬಯಸಿದ್ದ ಪೂರ್ವಜ್‌ಗೆ ಹಾಸ್ಟೆಲ್‌ ವಾರ್ಡನ್ ಅವಕಾಶ ನೀಡಲಿಲ್ಲ. ಶಾಲಾ ಆಡಳಿತ ಮಂಡಳಿಯ ನಿಯಮದಂತೆ ಹಾಸ್ಟೆಲ್‌ ವಾರ್ಡನ್‌ ಮೊಬೈಲ್‌ ನೀಡಲು ನಿರಾಕರಿಸಿದ್ದರು ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

ರಾತ್ರಿ 12 ಗಂಟೆಯವರೆಗೂ ಮಂಕಾಗಿ ಕುಳಿತಿದ್ದ  ಪೂರ್ವಜ್‌ ಡೆತ್‌ನೋಟ್‌ ಬರೆದಿಟ್ಟು ಹಾಸ್ಟೆಲ್‌ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಭಾನುವಾರ ಬೆಳಿಗ್ಗೆ ವಿದ್ಯಾರ್ಥಿಯೊಬ್ಬ ಪೂರ್ವಜ್‌ ಶವ ನೋಡಿ, ವಾರ್ಡನ್‌ ಗಮನಕ್ಕೆ ತಂದಿದ್ದಾನೆ.

ವಿದ್ಯಾಸಂಸ್ಥೆ, ಶಾಲಾ ಪ್ರಾಂಶುಪಾಲರು ಹಾಗೂ ಹಾಸ್ಟೆಲ್‌ ವಾರ್ಡನ್‌ ವಿರುದ್ಧ ಮಂಜುಳಾ (ಸಾವಿಗೀಡಾದ ವಿದ್ಯಾರ್ಥಿಯ ತಾಯಿ) ಸಹೋದರ ಅರುಣ್‌ ಅವರು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

‘ಶಾಲಾ ಆಡಳಿತ ಮಂಡಳಿಯ ಕಿರುಕುಳದಿಂದ ಪೂರ್ವಜ್‌ ಆತ್ಮಹತ್ಯೆ ಮಾಡಿದ್ದು, ಶಾಲಾ ಸೇರ್ಪಡೆ ವೇಳೆ ವಿದ್ಯಾರ್ಥಿಯ ಚಲನವಲನವನ್ನು ಪೋಷಕರಿಗೆ ತಿಳಿಸುತ್ತೇನೆ ಅಂದಿದ್ದರೂ ಈವರೆಗೆ ಪೂರ್ವಜ್‌ ಕುರಿತು ಯಾವುದೇ ಮಾಹಿತಿಯನ್ನು ನೀಡಿಲ್ಲ. ಹೆತ್ತವರು ಕರೆ ಮಾಡಿದರೂ ಸಂಭಾಷಣೆಗೆ ಶಾಲಾಡಳಿತ ಮಂಡಳಿ ಅವಕಾಶ ನೀಡುತ್ತಿರಲಿಲ್ಲ’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಕುರಿತು ಶಿಕ್ಷಕ ಲಕ್ಷ್ಮಿಕಾಂತ ಮಿರಜಕರ ಪೋಸ್ಟ್‌ ಮಾಡಿದ್ದು, “ಕರ್ನಾಟಕ ರಾಜ್ಯದಲ್ಲಿ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ 826 ವಸತಿ ಶಾಲೆಗಳಿವೆ. ಬಡ ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಸರಕಾರ ಸ್ಥಾಪಿಸಿರುವ ಈ ವಸತಿ ಶಾಲೆಗಳು ಇಡಿದೇಶಕ್ಕೆ ಮಾದರಿಯಾಗಿವೆ. ಆದರೆ ಕೇವಲ ಹಣ ಮಾಡುವ ಉದ್ದೇಶಕ್ಕೋಸ್ಕರ ಹುಟ್ಟಿಕೊಂಡಿರುವ ಇಂತಹ ಖಾಸಗಿ ವಸತಿ ಶಾಲೆಗಳು ತಮ್ಮ ಅತಿಯಾದ ನೀತಿ ನಿಯಮಗಳಿಂದಾಗಿ ಇಂತಹ ಶೋಚನೀಯ ಘಟನೆಗಳು ನಡೆಯಲು ಕಾರಣವಾಗುತ್ತಿವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಸಂಬಂಧಗಳ ಬೆಲೆ ಅರಿಯದೇ ಮಾನವೀಯತೆ ಮರೆತು ವರ್ತಿಸುವ ಇಂತಹ ಧನದಾಹಿ ರಕ್ಕಸ ವಸತಿ ಶಾಲೆಗಳ ವಿರುದ್ಧ ಸರಕಾರ ಕ್ರಮ ಕೈಗೊಳ್ಳುವ ಅಗತ್ಯವಿದೆ. ಪ್ರತಿಷ್ಟೆಗೆಂದು, ಹಣವಿದೆಯೆಂದು ಇಂತಹ ಶಾಲೆಗಳ ಆಡಳಿತ ಮಂಡಳಿಗೆ ಬೆನ್ನು ಬಗ್ಗಿಸುವ ಪೋಷಕರು ತಮ್ಮ ಮಕ್ಕಳ ಜೀವದ ಬಗ್ಗೆ ಯೋಚಿಸಬೇಕಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹ ಶಿಕ್ಷಣ ಸಂಸ್ಥೆಗೆ ತಮ್ಮ ಮಕ್ಕಳನ್ನು ಸೇರಿಸುವ ಹೆತ್ತವರು ಇನ್ನು ಮುಂದೆಯಾದರೂ ಯೋಚನೆ ಮಾಡಿ… ಇದರ ಒಳ ಮರ್ಮವನ್ನು ದೇವರೇ ಬಲ್ಲ…

  2. ಇತ ಬರೆದಿದ್ದು ಎಲ್ಲಾ ಸುಳ್ಳು ಕಟ್ಟುಕಥೆ, ಪೀರ್ ಪಾಷಾ ಬಂಗ್ಲಾ ಚಾಲುಕ್ಯ ಶೈಲಿಯಲ್ಲಿ 12ನೇ ಶತಮಾನದಲ್ಲಿ ನಿರ್ಮಾಣವಾಗಿದೆ.

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...