Homeಕರ್ನಾಟಕಮಂಗಳೂರು: ಅಮ್ಮನಿಗೆ ಜನ್ಮದಿನದ ಶುಭ ಕೋರಲು ಬಿಡದ ಶಾಲಾ ಮಂಡಲಿ; ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ಅಮ್ಮನಿಗೆ ಜನ್ಮದಿನದ ಶುಭ ಕೋರಲು ಬಿಡದ ಶಾಲಾ ಮಂಡಲಿ; ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

“ತಾಯಿಗೆ ಜನ್ಮದಿನದ ಶುಭಾಶಯಗಳು. ಎಲ್ಲರೂ ಖುಷಿಯಾಗಿರಿ, ಶಾಲೆಗೆ ತನಗಾಗಿ ಕಟ್ಟಿರುವ ಶುಲ್ಕವನ್ನು ವಾಪಸ್‌ ಪಡೆದುಕೊಳ್ಳಿ. ನಿಮ್ಮಿಂದ ನಾನು ದೂರವಾಗುತ್ತಿದ್ದೇನೆ. ನೀವು ನನ್ನನ್ನು ದುಃಖಕ್ಕೆ ತಳ್ಳಿದಿರಿ. ಯಾರೂ ಅಳಬೇಡಿ.”

-ಹೀಗೆ ಇಂಗ್ಲಿಷ್‌ನಲ್ಲಿ ಡೆತ್‌ ನೋಟ್ ಬರೆದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ತಲಪಾಡಿಯ ದೇವಿನಗರದ ಶಾರದಾ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿಲಯದಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ರಮೇಶ್‌- ಮಂಜುಳಾ ದಂಪತಿಯ ಪುತ್ರ ಪೂರ್ವಜ್‌ (14) ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾನಿಕೇತನ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.

ಶನಿವಾರ ಪೂರ್ವಜ್ ತಾಯಿಯ ಜನ್ಮದಿನವಿತ್ತು. ಅಮ್ಮನಿಗೆ ಶುಭಕೋರಲು ಬಯಸಿದ್ದ ಪೂರ್ವಜ್‌ಗೆ ಹಾಸ್ಟೆಲ್‌ ವಾರ್ಡನ್ ಅವಕಾಶ ನೀಡಲಿಲ್ಲ. ಶಾಲಾ ಆಡಳಿತ ಮಂಡಳಿಯ ನಿಯಮದಂತೆ ಹಾಸ್ಟೆಲ್‌ ವಾರ್ಡನ್‌ ಮೊಬೈಲ್‌ ನೀಡಲು ನಿರಾಕರಿಸಿದ್ದರು ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

ರಾತ್ರಿ 12 ಗಂಟೆಯವರೆಗೂ ಮಂಕಾಗಿ ಕುಳಿತಿದ್ದ  ಪೂರ್ವಜ್‌ ಡೆತ್‌ನೋಟ್‌ ಬರೆದಿಟ್ಟು ಹಾಸ್ಟೆಲ್‌ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಭಾನುವಾರ ಬೆಳಿಗ್ಗೆ ವಿದ್ಯಾರ್ಥಿಯೊಬ್ಬ ಪೂರ್ವಜ್‌ ಶವ ನೋಡಿ, ವಾರ್ಡನ್‌ ಗಮನಕ್ಕೆ ತಂದಿದ್ದಾನೆ.

ವಿದ್ಯಾಸಂಸ್ಥೆ, ಶಾಲಾ ಪ್ರಾಂಶುಪಾಲರು ಹಾಗೂ ಹಾಸ್ಟೆಲ್‌ ವಾರ್ಡನ್‌ ವಿರುದ್ಧ ಮಂಜುಳಾ (ಸಾವಿಗೀಡಾದ ವಿದ್ಯಾರ್ಥಿಯ ತಾಯಿ) ಸಹೋದರ ಅರುಣ್‌ ಅವರು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

‘ಶಾಲಾ ಆಡಳಿತ ಮಂಡಳಿಯ ಕಿರುಕುಳದಿಂದ ಪೂರ್ವಜ್‌ ಆತ್ಮಹತ್ಯೆ ಮಾಡಿದ್ದು, ಶಾಲಾ ಸೇರ್ಪಡೆ ವೇಳೆ ವಿದ್ಯಾರ್ಥಿಯ ಚಲನವಲನವನ್ನು ಪೋಷಕರಿಗೆ ತಿಳಿಸುತ್ತೇನೆ ಅಂದಿದ್ದರೂ ಈವರೆಗೆ ಪೂರ್ವಜ್‌ ಕುರಿತು ಯಾವುದೇ ಮಾಹಿತಿಯನ್ನು ನೀಡಿಲ್ಲ. ಹೆತ್ತವರು ಕರೆ ಮಾಡಿದರೂ ಸಂಭಾಷಣೆಗೆ ಶಾಲಾಡಳಿತ ಮಂಡಳಿ ಅವಕಾಶ ನೀಡುತ್ತಿರಲಿಲ್ಲ’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಕುರಿತು ಶಿಕ್ಷಕ ಲಕ್ಷ್ಮಿಕಾಂತ ಮಿರಜಕರ ಪೋಸ್ಟ್‌ ಮಾಡಿದ್ದು, “ಕರ್ನಾಟಕ ರಾಜ್ಯದಲ್ಲಿ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ 826 ವಸತಿ ಶಾಲೆಗಳಿವೆ. ಬಡ ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಸರಕಾರ ಸ್ಥಾಪಿಸಿರುವ ಈ ವಸತಿ ಶಾಲೆಗಳು ಇಡಿದೇಶಕ್ಕೆ ಮಾದರಿಯಾಗಿವೆ. ಆದರೆ ಕೇವಲ ಹಣ ಮಾಡುವ ಉದ್ದೇಶಕ್ಕೋಸ್ಕರ ಹುಟ್ಟಿಕೊಂಡಿರುವ ಇಂತಹ ಖಾಸಗಿ ವಸತಿ ಶಾಲೆಗಳು ತಮ್ಮ ಅತಿಯಾದ ನೀತಿ ನಿಯಮಗಳಿಂದಾಗಿ ಇಂತಹ ಶೋಚನೀಯ ಘಟನೆಗಳು ನಡೆಯಲು ಕಾರಣವಾಗುತ್ತಿವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಸಂಬಂಧಗಳ ಬೆಲೆ ಅರಿಯದೇ ಮಾನವೀಯತೆ ಮರೆತು ವರ್ತಿಸುವ ಇಂತಹ ಧನದಾಹಿ ರಕ್ಕಸ ವಸತಿ ಶಾಲೆಗಳ ವಿರುದ್ಧ ಸರಕಾರ ಕ್ರಮ ಕೈಗೊಳ್ಳುವ ಅಗತ್ಯವಿದೆ. ಪ್ರತಿಷ್ಟೆಗೆಂದು, ಹಣವಿದೆಯೆಂದು ಇಂತಹ ಶಾಲೆಗಳ ಆಡಳಿತ ಮಂಡಳಿಗೆ ಬೆನ್ನು ಬಗ್ಗಿಸುವ ಪೋಷಕರು ತಮ್ಮ ಮಕ್ಕಳ ಜೀವದ ಬಗ್ಗೆ ಯೋಚಿಸಬೇಕಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹ ಶಿಕ್ಷಣ ಸಂಸ್ಥೆಗೆ ತಮ್ಮ ಮಕ್ಕಳನ್ನು ಸೇರಿಸುವ ಹೆತ್ತವರು ಇನ್ನು ಮುಂದೆಯಾದರೂ ಯೋಚನೆ ಮಾಡಿ… ಇದರ ಒಳ ಮರ್ಮವನ್ನು ದೇವರೇ ಬಲ್ಲ…

  2. ಇತ ಬರೆದಿದ್ದು ಎಲ್ಲಾ ಸುಳ್ಳು ಕಟ್ಟುಕಥೆ, ಪೀರ್ ಪಾಷಾ ಬಂಗ್ಲಾ ಚಾಲುಕ್ಯ ಶೈಲಿಯಲ್ಲಿ 12ನೇ ಶತಮಾನದಲ್ಲಿ ನಿರ್ಮಾಣವಾಗಿದೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...