Homeಕರ್ನಾಟಕಉಡುಪಿ ಸರ್ಕಾರಿ ಕಾಲೇಜ್ ಹಿಜಾಬ್ ವಿವಾದ: ಭಿತ್ತಿಪತ್ರ ಪ್ರದರ್ಶಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿನಿಯರ ಒತ್ತಾಯ

ಉಡುಪಿ ಸರ್ಕಾರಿ ಕಾಲೇಜ್ ಹಿಜಾಬ್ ವಿವಾದ: ಭಿತ್ತಿಪತ್ರ ಪ್ರದರ್ಶಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿನಿಯರ ಒತ್ತಾಯ

- Advertisement -
- Advertisement -

ಸ್ಕಾರ್ಫ್ (ಹಿಜಾಬ್) ಹಾಕಿಕೊಂಡು ಬರುತ್ತಾರೆಂದು ಕಳೆದ ಮೂರು ವಾರದಿಂದ ತರಗತಿಯಿಂದ ಹೊರಹಾಕಲ್ಪಟ್ಟ ಉಡುಪಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಐವರು ವಿದ್ಯಾರ್ಥಿನಿಯರು ಗುರುವಾರ ಕಾಲೇಜಿನ ಗೇಟಿನ ಬಳಿ ಭಿತ್ತಿಪತ್ರ ಪ್ರದರ್ಶಿಸಿ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ. “ಹಿಜಾಬ್ ಹಾಕಿದ್ದಕ್ಕಾಗಿ ನಾವು ತರಗತಿಯಿಂದ ಹೊರಗೆ ಕುಳಿತು ಕೊಳ್ಳುವಂತಾಗಿದೆ. ಹಿಜಾಬ್ ನನ್ನ ಹಕ್ಕು, ಅದನ್ನು ಪಡೆದೆ ತೀರುತ್ತೇವೆ, ಇದು ನನ್ನ ಮೂಲಭೂತ ಹಕ್ಕು- ಎಂಬ ಭಿತ್ತಿಪತ್ರವನ್ನು ವಿದ್ಯಾರ್ಥಿನಿಯರು ಪ್ರದರ್ಶಿಸಿದರು.

ನಮ್ಮದು ಒಂದು ವರ್ಷದ ಹೋರಾಟ. ಪ್ರಥಮ ಪಿಯುಸಿಗೆ ಸೇರಿದಾಗ ಸ್ಕಾರ್ಫ್ ಹಾಕಿಕೊಂಡು ಬಂದಾಗಿಂದ ನಮಗೆ ಮಾನಸಿಕ ಹಿಂಸೆ ಕೊಡಲಾಗುತ್ತಿದೆ. ಒತ್ತಡ ಹಾಕಿ ಹಿಜಾಬ್ ತೆಗೆಸಿದರು. ತರಗತಿಯಿಂದ ಹೊರಗೆ ಹಾಕಿದರು. ಮನವಿ ಮಾಡಿದರು ತರಗತಿಗೆ ಸೇರಿಸಲಿಲ್ಲ. ಅಂತೂ ಮೊದಲ ವರ್ಷ ಮಗಿಯಿತು. ದ್ವಿತೀಯ ಪಿಯುಸಿ ಸೇರಿದಾಗ ಮತ್ತೆ ಹಿಜಾಬ್ ಹಾಕದಂತೆ ಹೇಳಲಾಯಿತು. ಪ್ರಾಚಾರ್ಯರಿಗೆ ಪೋಷಕರಿಂದ ಸ್ಕಾರ್ಫ್ ಹಾಕಿಕೊಂಡು ಬರಲು ಅವಕಾಶ ಕೊಡುವಂತೆ ಮನವಿ ಮಾಡಿಸಿದೆವು. ಆದರೆ ಪ್ರಾಚಾರ್ಯರು ನಮ್ಮ ಬೇಡಿಕೆ ತಿರಸ್ಕರಿಸಿದರು ಎಂದು ವಿದ್ಯಾರ್ಥಿನಿಯರು ಬೇಸರ ವ್ಯಕ್ತಪಡಿಸುತ್ತಾರೆ.

ನಮ್ಮ ಬೇಡಿಕೆ ಪ್ರಾಚಾರ್ಯರು ಪರಿಗಣಿಸಬಹುದೆಂದು ಕಾದೆವು. ಆದರೆ ಸಕಾರಾತ್ಮಕ ಸ್ಪಂದನೆ ಬರಲಿಲ್ಲ. ನಾವು ಅನಿವಾರ್ಯವಾಗಿ ಡಿಸೆಂಬರ್ ಕೊನೆಯ ವಾರದಲ್ಲಿ ಸ್ಕಾರ್ಫ್ ಧರಿಸಿ ಕಾಲೇಜಿಗೆ ಬಂದೆವು. ಆಗ ನಮ್ಮನ್ನು ತರಗತಿಗೆ ಪ್ರವೇಶಿಸದಂತೆ ಹೇಳಿ ಹೊರಗಡೆ ಇಟ್ಟರು. ನಾವು ತರಗತಿಯಿಂದ ಹೊರಹಾಕಲ್ಪಟ್ಟಿರುವುದು ಯಾರಿಗೂ ತಿಳಿಯಬಾರದೆಂದು ಲೈಬ್ರರಿ ಮತ್ತು ಸ್ಟಾಫ್ ರೂಮಿನಲ್ಲಿ ಕುಳಿತುಕೊಳ್ಳುವಂತೆ ಹೇಳಲಾಗುತ್ತಿತ್ತು ಎಂದು ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ತಮಗಾಗುತ್ತಿರುವ ಅನ್ಯಾಯ ವಿವರಿಸುತ್ತಾರೆ.

ಕಾಲೇಜಿನಲ್ಲಿ ಪೂಜೆ ಇನ್ನಿತರ ಆಚರಣೆ ನಡೆಯುತ್ತವೆ, ಇದು ಕಾಲೇಜಾದ್ದರಿಂದ ನಾವು ಅದಕ್ಕೆ ಗೌರವ ಕೊಡುತ್ತೇವೆ. ಹಾಗೆಯೆ ನಮ್ಮ ಮೂಲಭೂತ ಹಕ್ಕಾಗಿರುವ ಹಿಜಾಬ್ ಹಾಕಿಕೊಂಡು ಕಾಲೇಜಿಗೆ ಬರಲು ಅವಕಾಶ ಕೊಡಬೇಕು. ನಾವು ಕಪ್ಪು ಬಣ್ಣದ ಹಿಜಾಬ್ ಹಾಕಿಕೊಂಡು ಬರುವುದಿಲ್ಲ. ಕಾಲೇಜಿನ ಸಮವಸ್ತ್ರದಲ್ಲಿರುವ ನೀಲಿ ಬಣ್ಣದ ಹಿಜಾಬ್ ಹಾಕಿಕೊಂಡು ಬರತ್ತೇವೆ. ಇದಕ್ಕಾದರೂ ಅವಕಾಶ ಕೊಡಿಯೆಂದು ಬೇಡುತ್ತಿದ್ದೇವೆ. ಆದರೆ ಅದಕ್ಕೂ ಅವಕಾಶ ಕೊಡುತ್ತಿಲ್ಲ ಎಂದು ತರಗತಿಯಿಂದ ಹೊರ ಹಾಕಲ್ಪಟ್ಟ ವಿದ್ಯಾರ್ಥಿನಿಯರು ತಮ್ಮ ನೋವು ತೋಡಿಕೊಳ್ಳುತ್ತಾರೆ.


ಇದನ್ನೂ ಓದಿ: ಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಜಾಬ್ ಧರಿಸಿರುವವರನ್ನು ತರಗತಿಯಿಂದ ಹೊರಕ್ಕೆ ಹಾಕಿರುವುದು ಅಮಾನವೀಯ ಹಾಗೂ ಕಾನೂನು ಬಾಹಿರ ಕೃತ್ಯ.

  2. ಇವತ್ತು ಹಿಜಾಬ್ ನಾಳೆ ಘೋಷ ನಾಳದು ತರಗತಿಯ ಮಧ್ಯದಲ್ಲಿ ನಮಾಜ್ ಮಾಡಲು ಅವಕಾಶ ನಂತರ ಮಹಿಳೆಯರ ಕಲಾ ಶಾಲೆಯಲ್ಲಿ ಗಂಡಸರು ಪಾಠ ಮಾಡಬಾರದು ಕೊನೆಗೆ ಶರಿಯತ್ತನ್ನು ಪಾಲಿಸಬೇಕು ಎಂದು ತಕರಾರು ಮಾಡುತ್ತಾರೆ ಇವರು ಶಾಲೆಗೆ ಬರುವುದು ವಿದ್ಯೆ ಕಲಿಯಲು ಇವರಿಗೆ ಎಲ್ಲಿ ಸರಿಯಾಗುತ್ತದೆಯೊ ಅಲ್ಲಿಗೆ ಹೋಗಲಿ ಆದುದರಿಂದ ಶಾಲ ಆಡಳಿತ ಮಂಡಳಿಯು ಇವರ ಬೇಡಿಕೆಯನ್ನು ಇಡೇರಿಸ ಬಾರದು ಶಾಲೆಯಲ್ಲಿ ಅದರ ನಿಯಮಗಳನ್ನು ವಿರೋಧಸಿದ್ದಕ್ಕೆ ಅವರನ್ನು ಶಾಲೆಯಿಂದ ತೆಗೆದು ಹಾಕಬೇಕು

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....