Homeಕರ್ನಾಟಕಉಡುಪಿ ಸರ್ಕಾರಿ ಕಾಲೇಜ್ ಹಿಜಾಬ್ ವಿವಾದ: ಭಿತ್ತಿಪತ್ರ ಪ್ರದರ್ಶಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿನಿಯರ ಒತ್ತಾಯ

ಉಡುಪಿ ಸರ್ಕಾರಿ ಕಾಲೇಜ್ ಹಿಜಾಬ್ ವಿವಾದ: ಭಿತ್ತಿಪತ್ರ ಪ್ರದರ್ಶಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿನಿಯರ ಒತ್ತಾಯ

- Advertisement -
- Advertisement -

ಸ್ಕಾರ್ಫ್ (ಹಿಜಾಬ್) ಹಾಕಿಕೊಂಡು ಬರುತ್ತಾರೆಂದು ಕಳೆದ ಮೂರು ವಾರದಿಂದ ತರಗತಿಯಿಂದ ಹೊರಹಾಕಲ್ಪಟ್ಟ ಉಡುಪಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಐವರು ವಿದ್ಯಾರ್ಥಿನಿಯರು ಗುರುವಾರ ಕಾಲೇಜಿನ ಗೇಟಿನ ಬಳಿ ಭಿತ್ತಿಪತ್ರ ಪ್ರದರ್ಶಿಸಿ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ. “ಹಿಜಾಬ್ ಹಾಕಿದ್ದಕ್ಕಾಗಿ ನಾವು ತರಗತಿಯಿಂದ ಹೊರಗೆ ಕುಳಿತು ಕೊಳ್ಳುವಂತಾಗಿದೆ. ಹಿಜಾಬ್ ನನ್ನ ಹಕ್ಕು, ಅದನ್ನು ಪಡೆದೆ ತೀರುತ್ತೇವೆ, ಇದು ನನ್ನ ಮೂಲಭೂತ ಹಕ್ಕು- ಎಂಬ ಭಿತ್ತಿಪತ್ರವನ್ನು ವಿದ್ಯಾರ್ಥಿನಿಯರು ಪ್ರದರ್ಶಿಸಿದರು.

ನಮ್ಮದು ಒಂದು ವರ್ಷದ ಹೋರಾಟ. ಪ್ರಥಮ ಪಿಯುಸಿಗೆ ಸೇರಿದಾಗ ಸ್ಕಾರ್ಫ್ ಹಾಕಿಕೊಂಡು ಬಂದಾಗಿಂದ ನಮಗೆ ಮಾನಸಿಕ ಹಿಂಸೆ ಕೊಡಲಾಗುತ್ತಿದೆ. ಒತ್ತಡ ಹಾಕಿ ಹಿಜಾಬ್ ತೆಗೆಸಿದರು. ತರಗತಿಯಿಂದ ಹೊರಗೆ ಹಾಕಿದರು. ಮನವಿ ಮಾಡಿದರು ತರಗತಿಗೆ ಸೇರಿಸಲಿಲ್ಲ. ಅಂತೂ ಮೊದಲ ವರ್ಷ ಮಗಿಯಿತು. ದ್ವಿತೀಯ ಪಿಯುಸಿ ಸೇರಿದಾಗ ಮತ್ತೆ ಹಿಜಾಬ್ ಹಾಕದಂತೆ ಹೇಳಲಾಯಿತು. ಪ್ರಾಚಾರ್ಯರಿಗೆ ಪೋಷಕರಿಂದ ಸ್ಕಾರ್ಫ್ ಹಾಕಿಕೊಂಡು ಬರಲು ಅವಕಾಶ ಕೊಡುವಂತೆ ಮನವಿ ಮಾಡಿಸಿದೆವು. ಆದರೆ ಪ್ರಾಚಾರ್ಯರು ನಮ್ಮ ಬೇಡಿಕೆ ತಿರಸ್ಕರಿಸಿದರು ಎಂದು ವಿದ್ಯಾರ್ಥಿನಿಯರು ಬೇಸರ ವ್ಯಕ್ತಪಡಿಸುತ್ತಾರೆ.

ನಮ್ಮ ಬೇಡಿಕೆ ಪ್ರಾಚಾರ್ಯರು ಪರಿಗಣಿಸಬಹುದೆಂದು ಕಾದೆವು. ಆದರೆ ಸಕಾರಾತ್ಮಕ ಸ್ಪಂದನೆ ಬರಲಿಲ್ಲ. ನಾವು ಅನಿವಾರ್ಯವಾಗಿ ಡಿಸೆಂಬರ್ ಕೊನೆಯ ವಾರದಲ್ಲಿ ಸ್ಕಾರ್ಫ್ ಧರಿಸಿ ಕಾಲೇಜಿಗೆ ಬಂದೆವು. ಆಗ ನಮ್ಮನ್ನು ತರಗತಿಗೆ ಪ್ರವೇಶಿಸದಂತೆ ಹೇಳಿ ಹೊರಗಡೆ ಇಟ್ಟರು. ನಾವು ತರಗತಿಯಿಂದ ಹೊರಹಾಕಲ್ಪಟ್ಟಿರುವುದು ಯಾರಿಗೂ ತಿಳಿಯಬಾರದೆಂದು ಲೈಬ್ರರಿ ಮತ್ತು ಸ್ಟಾಫ್ ರೂಮಿನಲ್ಲಿ ಕುಳಿತುಕೊಳ್ಳುವಂತೆ ಹೇಳಲಾಗುತ್ತಿತ್ತು ಎಂದು ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ತಮಗಾಗುತ್ತಿರುವ ಅನ್ಯಾಯ ವಿವರಿಸುತ್ತಾರೆ.

ಕಾಲೇಜಿನಲ್ಲಿ ಪೂಜೆ ಇನ್ನಿತರ ಆಚರಣೆ ನಡೆಯುತ್ತವೆ, ಇದು ಕಾಲೇಜಾದ್ದರಿಂದ ನಾವು ಅದಕ್ಕೆ ಗೌರವ ಕೊಡುತ್ತೇವೆ. ಹಾಗೆಯೆ ನಮ್ಮ ಮೂಲಭೂತ ಹಕ್ಕಾಗಿರುವ ಹಿಜಾಬ್ ಹಾಕಿಕೊಂಡು ಕಾಲೇಜಿಗೆ ಬರಲು ಅವಕಾಶ ಕೊಡಬೇಕು. ನಾವು ಕಪ್ಪು ಬಣ್ಣದ ಹಿಜಾಬ್ ಹಾಕಿಕೊಂಡು ಬರುವುದಿಲ್ಲ. ಕಾಲೇಜಿನ ಸಮವಸ್ತ್ರದಲ್ಲಿರುವ ನೀಲಿ ಬಣ್ಣದ ಹಿಜಾಬ್ ಹಾಕಿಕೊಂಡು ಬರತ್ತೇವೆ. ಇದಕ್ಕಾದರೂ ಅವಕಾಶ ಕೊಡಿಯೆಂದು ಬೇಡುತ್ತಿದ್ದೇವೆ. ಆದರೆ ಅದಕ್ಕೂ ಅವಕಾಶ ಕೊಡುತ್ತಿಲ್ಲ ಎಂದು ತರಗತಿಯಿಂದ ಹೊರ ಹಾಕಲ್ಪಟ್ಟ ವಿದ್ಯಾರ್ಥಿನಿಯರು ತಮ್ಮ ನೋವು ತೋಡಿಕೊಳ್ಳುತ್ತಾರೆ.


ಇದನ್ನೂ ಓದಿ: ಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಜಾಬ್ ಧರಿಸಿರುವವರನ್ನು ತರಗತಿಯಿಂದ ಹೊರಕ್ಕೆ ಹಾಕಿರುವುದು ಅಮಾನವೀಯ ಹಾಗೂ ಕಾನೂನು ಬಾಹಿರ ಕೃತ್ಯ.

  2. ಇವತ್ತು ಹಿಜಾಬ್ ನಾಳೆ ಘೋಷ ನಾಳದು ತರಗತಿಯ ಮಧ್ಯದಲ್ಲಿ ನಮಾಜ್ ಮಾಡಲು ಅವಕಾಶ ನಂತರ ಮಹಿಳೆಯರ ಕಲಾ ಶಾಲೆಯಲ್ಲಿ ಗಂಡಸರು ಪಾಠ ಮಾಡಬಾರದು ಕೊನೆಗೆ ಶರಿಯತ್ತನ್ನು ಪಾಲಿಸಬೇಕು ಎಂದು ತಕರಾರು ಮಾಡುತ್ತಾರೆ ಇವರು ಶಾಲೆಗೆ ಬರುವುದು ವಿದ್ಯೆ ಕಲಿಯಲು ಇವರಿಗೆ ಎಲ್ಲಿ ಸರಿಯಾಗುತ್ತದೆಯೊ ಅಲ್ಲಿಗೆ ಹೋಗಲಿ ಆದುದರಿಂದ ಶಾಲ ಆಡಳಿತ ಮಂಡಳಿಯು ಇವರ ಬೇಡಿಕೆಯನ್ನು ಇಡೇರಿಸ ಬಾರದು ಶಾಲೆಯಲ್ಲಿ ಅದರ ನಿಯಮಗಳನ್ನು ವಿರೋಧಸಿದ್ದಕ್ಕೆ ಅವರನ್ನು ಶಾಲೆಯಿಂದ ತೆಗೆದು ಹಾಕಬೇಕು

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...