Homeಕರ್ನಾಟಕಉಡುಪಿ ಸರ್ಕಾರಿ ಕಾಲೇಜ್ ಹಿಜಾಬ್ ವಿವಾದ: ಭಿತ್ತಿಪತ್ರ ಪ್ರದರ್ಶಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿನಿಯರ ಒತ್ತಾಯ

ಉಡುಪಿ ಸರ್ಕಾರಿ ಕಾಲೇಜ್ ಹಿಜಾಬ್ ವಿವಾದ: ಭಿತ್ತಿಪತ್ರ ಪ್ರದರ್ಶಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿನಿಯರ ಒತ್ತಾಯ

- Advertisement -
- Advertisement -

ಸ್ಕಾರ್ಫ್ (ಹಿಜಾಬ್) ಹಾಕಿಕೊಂಡು ಬರುತ್ತಾರೆಂದು ಕಳೆದ ಮೂರು ವಾರದಿಂದ ತರಗತಿಯಿಂದ ಹೊರಹಾಕಲ್ಪಟ್ಟ ಉಡುಪಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಐವರು ವಿದ್ಯಾರ್ಥಿನಿಯರು ಗುರುವಾರ ಕಾಲೇಜಿನ ಗೇಟಿನ ಬಳಿ ಭಿತ್ತಿಪತ್ರ ಪ್ರದರ್ಶಿಸಿ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ. “ಹಿಜಾಬ್ ಹಾಕಿದ್ದಕ್ಕಾಗಿ ನಾವು ತರಗತಿಯಿಂದ ಹೊರಗೆ ಕುಳಿತು ಕೊಳ್ಳುವಂತಾಗಿದೆ. ಹಿಜಾಬ್ ನನ್ನ ಹಕ್ಕು, ಅದನ್ನು ಪಡೆದೆ ತೀರುತ್ತೇವೆ, ಇದು ನನ್ನ ಮೂಲಭೂತ ಹಕ್ಕು- ಎಂಬ ಭಿತ್ತಿಪತ್ರವನ್ನು ವಿದ್ಯಾರ್ಥಿನಿಯರು ಪ್ರದರ್ಶಿಸಿದರು.

ನಮ್ಮದು ಒಂದು ವರ್ಷದ ಹೋರಾಟ. ಪ್ರಥಮ ಪಿಯುಸಿಗೆ ಸೇರಿದಾಗ ಸ್ಕಾರ್ಫ್ ಹಾಕಿಕೊಂಡು ಬಂದಾಗಿಂದ ನಮಗೆ ಮಾನಸಿಕ ಹಿಂಸೆ ಕೊಡಲಾಗುತ್ತಿದೆ. ಒತ್ತಡ ಹಾಕಿ ಹಿಜಾಬ್ ತೆಗೆಸಿದರು. ತರಗತಿಯಿಂದ ಹೊರಗೆ ಹಾಕಿದರು. ಮನವಿ ಮಾಡಿದರು ತರಗತಿಗೆ ಸೇರಿಸಲಿಲ್ಲ. ಅಂತೂ ಮೊದಲ ವರ್ಷ ಮಗಿಯಿತು. ದ್ವಿತೀಯ ಪಿಯುಸಿ ಸೇರಿದಾಗ ಮತ್ತೆ ಹಿಜಾಬ್ ಹಾಕದಂತೆ ಹೇಳಲಾಯಿತು. ಪ್ರಾಚಾರ್ಯರಿಗೆ ಪೋಷಕರಿಂದ ಸ್ಕಾರ್ಫ್ ಹಾಕಿಕೊಂಡು ಬರಲು ಅವಕಾಶ ಕೊಡುವಂತೆ ಮನವಿ ಮಾಡಿಸಿದೆವು. ಆದರೆ ಪ್ರಾಚಾರ್ಯರು ನಮ್ಮ ಬೇಡಿಕೆ ತಿರಸ್ಕರಿಸಿದರು ಎಂದು ವಿದ್ಯಾರ್ಥಿನಿಯರು ಬೇಸರ ವ್ಯಕ್ತಪಡಿಸುತ್ತಾರೆ.

ನಮ್ಮ ಬೇಡಿಕೆ ಪ್ರಾಚಾರ್ಯರು ಪರಿಗಣಿಸಬಹುದೆಂದು ಕಾದೆವು. ಆದರೆ ಸಕಾರಾತ್ಮಕ ಸ್ಪಂದನೆ ಬರಲಿಲ್ಲ. ನಾವು ಅನಿವಾರ್ಯವಾಗಿ ಡಿಸೆಂಬರ್ ಕೊನೆಯ ವಾರದಲ್ಲಿ ಸ್ಕಾರ್ಫ್ ಧರಿಸಿ ಕಾಲೇಜಿಗೆ ಬಂದೆವು. ಆಗ ನಮ್ಮನ್ನು ತರಗತಿಗೆ ಪ್ರವೇಶಿಸದಂತೆ ಹೇಳಿ ಹೊರಗಡೆ ಇಟ್ಟರು. ನಾವು ತರಗತಿಯಿಂದ ಹೊರಹಾಕಲ್ಪಟ್ಟಿರುವುದು ಯಾರಿಗೂ ತಿಳಿಯಬಾರದೆಂದು ಲೈಬ್ರರಿ ಮತ್ತು ಸ್ಟಾಫ್ ರೂಮಿನಲ್ಲಿ ಕುಳಿತುಕೊಳ್ಳುವಂತೆ ಹೇಳಲಾಗುತ್ತಿತ್ತು ಎಂದು ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ತಮಗಾಗುತ್ತಿರುವ ಅನ್ಯಾಯ ವಿವರಿಸುತ್ತಾರೆ.

ಕಾಲೇಜಿನಲ್ಲಿ ಪೂಜೆ ಇನ್ನಿತರ ಆಚರಣೆ ನಡೆಯುತ್ತವೆ, ಇದು ಕಾಲೇಜಾದ್ದರಿಂದ ನಾವು ಅದಕ್ಕೆ ಗೌರವ ಕೊಡುತ್ತೇವೆ. ಹಾಗೆಯೆ ನಮ್ಮ ಮೂಲಭೂತ ಹಕ್ಕಾಗಿರುವ ಹಿಜಾಬ್ ಹಾಕಿಕೊಂಡು ಕಾಲೇಜಿಗೆ ಬರಲು ಅವಕಾಶ ಕೊಡಬೇಕು. ನಾವು ಕಪ್ಪು ಬಣ್ಣದ ಹಿಜಾಬ್ ಹಾಕಿಕೊಂಡು ಬರುವುದಿಲ್ಲ. ಕಾಲೇಜಿನ ಸಮವಸ್ತ್ರದಲ್ಲಿರುವ ನೀಲಿ ಬಣ್ಣದ ಹಿಜಾಬ್ ಹಾಕಿಕೊಂಡು ಬರತ್ತೇವೆ. ಇದಕ್ಕಾದರೂ ಅವಕಾಶ ಕೊಡಿಯೆಂದು ಬೇಡುತ್ತಿದ್ದೇವೆ. ಆದರೆ ಅದಕ್ಕೂ ಅವಕಾಶ ಕೊಡುತ್ತಿಲ್ಲ ಎಂದು ತರಗತಿಯಿಂದ ಹೊರ ಹಾಕಲ್ಪಟ್ಟ ವಿದ್ಯಾರ್ಥಿನಿಯರು ತಮ್ಮ ನೋವು ತೋಡಿಕೊಳ್ಳುತ್ತಾರೆ.


ಇದನ್ನೂ ಓದಿ: ಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಜಾಬ್ ಧರಿಸಿರುವವರನ್ನು ತರಗತಿಯಿಂದ ಹೊರಕ್ಕೆ ಹಾಕಿರುವುದು ಅಮಾನವೀಯ ಹಾಗೂ ಕಾನೂನು ಬಾಹಿರ ಕೃತ್ಯ.

  2. ಇವತ್ತು ಹಿಜಾಬ್ ನಾಳೆ ಘೋಷ ನಾಳದು ತರಗತಿಯ ಮಧ್ಯದಲ್ಲಿ ನಮಾಜ್ ಮಾಡಲು ಅವಕಾಶ ನಂತರ ಮಹಿಳೆಯರ ಕಲಾ ಶಾಲೆಯಲ್ಲಿ ಗಂಡಸರು ಪಾಠ ಮಾಡಬಾರದು ಕೊನೆಗೆ ಶರಿಯತ್ತನ್ನು ಪಾಲಿಸಬೇಕು ಎಂದು ತಕರಾರು ಮಾಡುತ್ತಾರೆ ಇವರು ಶಾಲೆಗೆ ಬರುವುದು ವಿದ್ಯೆ ಕಲಿಯಲು ಇವರಿಗೆ ಎಲ್ಲಿ ಸರಿಯಾಗುತ್ತದೆಯೊ ಅಲ್ಲಿಗೆ ಹೋಗಲಿ ಆದುದರಿಂದ ಶಾಲ ಆಡಳಿತ ಮಂಡಳಿಯು ಇವರ ಬೇಡಿಕೆಯನ್ನು ಇಡೇರಿಸ ಬಾರದು ಶಾಲೆಯಲ್ಲಿ ಅದರ ನಿಯಮಗಳನ್ನು ವಿರೋಧಸಿದ್ದಕ್ಕೆ ಅವರನ್ನು ಶಾಲೆಯಿಂದ ತೆಗೆದು ಹಾಕಬೇಕು

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...