Homeಕರ್ನಾಟಕಉಡುಪಿ ಸರ್ಕಾರಿ ಕಾಲೇಜ್ ಹಿಜಾಬ್ ವಿವಾದ: ಭಿತ್ತಿಪತ್ರ ಪ್ರದರ್ಶಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿನಿಯರ ಒತ್ತಾಯ

ಉಡುಪಿ ಸರ್ಕಾರಿ ಕಾಲೇಜ್ ಹಿಜಾಬ್ ವಿವಾದ: ಭಿತ್ತಿಪತ್ರ ಪ್ರದರ್ಶಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿನಿಯರ ಒತ್ತಾಯ

- Advertisement -
- Advertisement -

ಸ್ಕಾರ್ಫ್ (ಹಿಜಾಬ್) ಹಾಕಿಕೊಂಡು ಬರುತ್ತಾರೆಂದು ಕಳೆದ ಮೂರು ವಾರದಿಂದ ತರಗತಿಯಿಂದ ಹೊರಹಾಕಲ್ಪಟ್ಟ ಉಡುಪಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಐವರು ವಿದ್ಯಾರ್ಥಿನಿಯರು ಗುರುವಾರ ಕಾಲೇಜಿನ ಗೇಟಿನ ಬಳಿ ಭಿತ್ತಿಪತ್ರ ಪ್ರದರ್ಶಿಸಿ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ. “ಹಿಜಾಬ್ ಹಾಕಿದ್ದಕ್ಕಾಗಿ ನಾವು ತರಗತಿಯಿಂದ ಹೊರಗೆ ಕುಳಿತು ಕೊಳ್ಳುವಂತಾಗಿದೆ. ಹಿಜಾಬ್ ನನ್ನ ಹಕ್ಕು, ಅದನ್ನು ಪಡೆದೆ ತೀರುತ್ತೇವೆ, ಇದು ನನ್ನ ಮೂಲಭೂತ ಹಕ್ಕು- ಎಂಬ ಭಿತ್ತಿಪತ್ರವನ್ನು ವಿದ್ಯಾರ್ಥಿನಿಯರು ಪ್ರದರ್ಶಿಸಿದರು.

ನಮ್ಮದು ಒಂದು ವರ್ಷದ ಹೋರಾಟ. ಪ್ರಥಮ ಪಿಯುಸಿಗೆ ಸೇರಿದಾಗ ಸ್ಕಾರ್ಫ್ ಹಾಕಿಕೊಂಡು ಬಂದಾಗಿಂದ ನಮಗೆ ಮಾನಸಿಕ ಹಿಂಸೆ ಕೊಡಲಾಗುತ್ತಿದೆ. ಒತ್ತಡ ಹಾಕಿ ಹಿಜಾಬ್ ತೆಗೆಸಿದರು. ತರಗತಿಯಿಂದ ಹೊರಗೆ ಹಾಕಿದರು. ಮನವಿ ಮಾಡಿದರು ತರಗತಿಗೆ ಸೇರಿಸಲಿಲ್ಲ. ಅಂತೂ ಮೊದಲ ವರ್ಷ ಮಗಿಯಿತು. ದ್ವಿತೀಯ ಪಿಯುಸಿ ಸೇರಿದಾಗ ಮತ್ತೆ ಹಿಜಾಬ್ ಹಾಕದಂತೆ ಹೇಳಲಾಯಿತು. ಪ್ರಾಚಾರ್ಯರಿಗೆ ಪೋಷಕರಿಂದ ಸ್ಕಾರ್ಫ್ ಹಾಕಿಕೊಂಡು ಬರಲು ಅವಕಾಶ ಕೊಡುವಂತೆ ಮನವಿ ಮಾಡಿಸಿದೆವು. ಆದರೆ ಪ್ರಾಚಾರ್ಯರು ನಮ್ಮ ಬೇಡಿಕೆ ತಿರಸ್ಕರಿಸಿದರು ಎಂದು ವಿದ್ಯಾರ್ಥಿನಿಯರು ಬೇಸರ ವ್ಯಕ್ತಪಡಿಸುತ್ತಾರೆ.

ನಮ್ಮ ಬೇಡಿಕೆ ಪ್ರಾಚಾರ್ಯರು ಪರಿಗಣಿಸಬಹುದೆಂದು ಕಾದೆವು. ಆದರೆ ಸಕಾರಾತ್ಮಕ ಸ್ಪಂದನೆ ಬರಲಿಲ್ಲ. ನಾವು ಅನಿವಾರ್ಯವಾಗಿ ಡಿಸೆಂಬರ್ ಕೊನೆಯ ವಾರದಲ್ಲಿ ಸ್ಕಾರ್ಫ್ ಧರಿಸಿ ಕಾಲೇಜಿಗೆ ಬಂದೆವು. ಆಗ ನಮ್ಮನ್ನು ತರಗತಿಗೆ ಪ್ರವೇಶಿಸದಂತೆ ಹೇಳಿ ಹೊರಗಡೆ ಇಟ್ಟರು. ನಾವು ತರಗತಿಯಿಂದ ಹೊರಹಾಕಲ್ಪಟ್ಟಿರುವುದು ಯಾರಿಗೂ ತಿಳಿಯಬಾರದೆಂದು ಲೈಬ್ರರಿ ಮತ್ತು ಸ್ಟಾಫ್ ರೂಮಿನಲ್ಲಿ ಕುಳಿತುಕೊಳ್ಳುವಂತೆ ಹೇಳಲಾಗುತ್ತಿತ್ತು ಎಂದು ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ತಮಗಾಗುತ್ತಿರುವ ಅನ್ಯಾಯ ವಿವರಿಸುತ್ತಾರೆ.

ಕಾಲೇಜಿನಲ್ಲಿ ಪೂಜೆ ಇನ್ನಿತರ ಆಚರಣೆ ನಡೆಯುತ್ತವೆ, ಇದು ಕಾಲೇಜಾದ್ದರಿಂದ ನಾವು ಅದಕ್ಕೆ ಗೌರವ ಕೊಡುತ್ತೇವೆ. ಹಾಗೆಯೆ ನಮ್ಮ ಮೂಲಭೂತ ಹಕ್ಕಾಗಿರುವ ಹಿಜಾಬ್ ಹಾಕಿಕೊಂಡು ಕಾಲೇಜಿಗೆ ಬರಲು ಅವಕಾಶ ಕೊಡಬೇಕು. ನಾವು ಕಪ್ಪು ಬಣ್ಣದ ಹಿಜಾಬ್ ಹಾಕಿಕೊಂಡು ಬರುವುದಿಲ್ಲ. ಕಾಲೇಜಿನ ಸಮವಸ್ತ್ರದಲ್ಲಿರುವ ನೀಲಿ ಬಣ್ಣದ ಹಿಜಾಬ್ ಹಾಕಿಕೊಂಡು ಬರತ್ತೇವೆ. ಇದಕ್ಕಾದರೂ ಅವಕಾಶ ಕೊಡಿಯೆಂದು ಬೇಡುತ್ತಿದ್ದೇವೆ. ಆದರೆ ಅದಕ್ಕೂ ಅವಕಾಶ ಕೊಡುತ್ತಿಲ್ಲ ಎಂದು ತರಗತಿಯಿಂದ ಹೊರ ಹಾಕಲ್ಪಟ್ಟ ವಿದ್ಯಾರ್ಥಿನಿಯರು ತಮ್ಮ ನೋವು ತೋಡಿಕೊಳ್ಳುತ್ತಾರೆ.


ಇದನ್ನೂ ಓದಿ: ಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಜಾಬ್ ಧರಿಸಿರುವವರನ್ನು ತರಗತಿಯಿಂದ ಹೊರಕ್ಕೆ ಹಾಕಿರುವುದು ಅಮಾನವೀಯ ಹಾಗೂ ಕಾನೂನು ಬಾಹಿರ ಕೃತ್ಯ.

  2. ಇವತ್ತು ಹಿಜಾಬ್ ನಾಳೆ ಘೋಷ ನಾಳದು ತರಗತಿಯ ಮಧ್ಯದಲ್ಲಿ ನಮಾಜ್ ಮಾಡಲು ಅವಕಾಶ ನಂತರ ಮಹಿಳೆಯರ ಕಲಾ ಶಾಲೆಯಲ್ಲಿ ಗಂಡಸರು ಪಾಠ ಮಾಡಬಾರದು ಕೊನೆಗೆ ಶರಿಯತ್ತನ್ನು ಪಾಲಿಸಬೇಕು ಎಂದು ತಕರಾರು ಮಾಡುತ್ತಾರೆ ಇವರು ಶಾಲೆಗೆ ಬರುವುದು ವಿದ್ಯೆ ಕಲಿಯಲು ಇವರಿಗೆ ಎಲ್ಲಿ ಸರಿಯಾಗುತ್ತದೆಯೊ ಅಲ್ಲಿಗೆ ಹೋಗಲಿ ಆದುದರಿಂದ ಶಾಲ ಆಡಳಿತ ಮಂಡಳಿಯು ಇವರ ಬೇಡಿಕೆಯನ್ನು ಇಡೇರಿಸ ಬಾರದು ಶಾಲೆಯಲ್ಲಿ ಅದರ ನಿಯಮಗಳನ್ನು ವಿರೋಧಸಿದ್ದಕ್ಕೆ ಅವರನ್ನು ಶಾಲೆಯಿಂದ ತೆಗೆದು ಹಾಕಬೇಕು

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...