Homeಕರ್ನಾಟಕಉಡುಪಿ ಸರ್ಕಾರಿ ಕಾಲೇಜ್ ಹಿಜಾಬ್ ವಿವಾದ: ಭಿತ್ತಿಪತ್ರ ಪ್ರದರ್ಶಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿನಿಯರ ಒತ್ತಾಯ

ಉಡುಪಿ ಸರ್ಕಾರಿ ಕಾಲೇಜ್ ಹಿಜಾಬ್ ವಿವಾದ: ಭಿತ್ತಿಪತ್ರ ಪ್ರದರ್ಶಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿನಿಯರ ಒತ್ತಾಯ

- Advertisement -
- Advertisement -

ಸ್ಕಾರ್ಫ್ (ಹಿಜಾಬ್) ಹಾಕಿಕೊಂಡು ಬರುತ್ತಾರೆಂದು ಕಳೆದ ಮೂರು ವಾರದಿಂದ ತರಗತಿಯಿಂದ ಹೊರಹಾಕಲ್ಪಟ್ಟ ಉಡುಪಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಐವರು ವಿದ್ಯಾರ್ಥಿನಿಯರು ಗುರುವಾರ ಕಾಲೇಜಿನ ಗೇಟಿನ ಬಳಿ ಭಿತ್ತಿಪತ್ರ ಪ್ರದರ್ಶಿಸಿ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ. “ಹಿಜಾಬ್ ಹಾಕಿದ್ದಕ್ಕಾಗಿ ನಾವು ತರಗತಿಯಿಂದ ಹೊರಗೆ ಕುಳಿತು ಕೊಳ್ಳುವಂತಾಗಿದೆ. ಹಿಜಾಬ್ ನನ್ನ ಹಕ್ಕು, ಅದನ್ನು ಪಡೆದೆ ತೀರುತ್ತೇವೆ, ಇದು ನನ್ನ ಮೂಲಭೂತ ಹಕ್ಕು- ಎಂಬ ಭಿತ್ತಿಪತ್ರವನ್ನು ವಿದ್ಯಾರ್ಥಿನಿಯರು ಪ್ರದರ್ಶಿಸಿದರು.

ನಮ್ಮದು ಒಂದು ವರ್ಷದ ಹೋರಾಟ. ಪ್ರಥಮ ಪಿಯುಸಿಗೆ ಸೇರಿದಾಗ ಸ್ಕಾರ್ಫ್ ಹಾಕಿಕೊಂಡು ಬಂದಾಗಿಂದ ನಮಗೆ ಮಾನಸಿಕ ಹಿಂಸೆ ಕೊಡಲಾಗುತ್ತಿದೆ. ಒತ್ತಡ ಹಾಕಿ ಹಿಜಾಬ್ ತೆಗೆಸಿದರು. ತರಗತಿಯಿಂದ ಹೊರಗೆ ಹಾಕಿದರು. ಮನವಿ ಮಾಡಿದರು ತರಗತಿಗೆ ಸೇರಿಸಲಿಲ್ಲ. ಅಂತೂ ಮೊದಲ ವರ್ಷ ಮಗಿಯಿತು. ದ್ವಿತೀಯ ಪಿಯುಸಿ ಸೇರಿದಾಗ ಮತ್ತೆ ಹಿಜಾಬ್ ಹಾಕದಂತೆ ಹೇಳಲಾಯಿತು. ಪ್ರಾಚಾರ್ಯರಿಗೆ ಪೋಷಕರಿಂದ ಸ್ಕಾರ್ಫ್ ಹಾಕಿಕೊಂಡು ಬರಲು ಅವಕಾಶ ಕೊಡುವಂತೆ ಮನವಿ ಮಾಡಿಸಿದೆವು. ಆದರೆ ಪ್ರಾಚಾರ್ಯರು ನಮ್ಮ ಬೇಡಿಕೆ ತಿರಸ್ಕರಿಸಿದರು ಎಂದು ವಿದ್ಯಾರ್ಥಿನಿಯರು ಬೇಸರ ವ್ಯಕ್ತಪಡಿಸುತ್ತಾರೆ.

ನಮ್ಮ ಬೇಡಿಕೆ ಪ್ರಾಚಾರ್ಯರು ಪರಿಗಣಿಸಬಹುದೆಂದು ಕಾದೆವು. ಆದರೆ ಸಕಾರಾತ್ಮಕ ಸ್ಪಂದನೆ ಬರಲಿಲ್ಲ. ನಾವು ಅನಿವಾರ್ಯವಾಗಿ ಡಿಸೆಂಬರ್ ಕೊನೆಯ ವಾರದಲ್ಲಿ ಸ್ಕಾರ್ಫ್ ಧರಿಸಿ ಕಾಲೇಜಿಗೆ ಬಂದೆವು. ಆಗ ನಮ್ಮನ್ನು ತರಗತಿಗೆ ಪ್ರವೇಶಿಸದಂತೆ ಹೇಳಿ ಹೊರಗಡೆ ಇಟ್ಟರು. ನಾವು ತರಗತಿಯಿಂದ ಹೊರಹಾಕಲ್ಪಟ್ಟಿರುವುದು ಯಾರಿಗೂ ತಿಳಿಯಬಾರದೆಂದು ಲೈಬ್ರರಿ ಮತ್ತು ಸ್ಟಾಫ್ ರೂಮಿನಲ್ಲಿ ಕುಳಿತುಕೊಳ್ಳುವಂತೆ ಹೇಳಲಾಗುತ್ತಿತ್ತು ಎಂದು ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ತಮಗಾಗುತ್ತಿರುವ ಅನ್ಯಾಯ ವಿವರಿಸುತ್ತಾರೆ.

ಕಾಲೇಜಿನಲ್ಲಿ ಪೂಜೆ ಇನ್ನಿತರ ಆಚರಣೆ ನಡೆಯುತ್ತವೆ, ಇದು ಕಾಲೇಜಾದ್ದರಿಂದ ನಾವು ಅದಕ್ಕೆ ಗೌರವ ಕೊಡುತ್ತೇವೆ. ಹಾಗೆಯೆ ನಮ್ಮ ಮೂಲಭೂತ ಹಕ್ಕಾಗಿರುವ ಹಿಜಾಬ್ ಹಾಕಿಕೊಂಡು ಕಾಲೇಜಿಗೆ ಬರಲು ಅವಕಾಶ ಕೊಡಬೇಕು. ನಾವು ಕಪ್ಪು ಬಣ್ಣದ ಹಿಜಾಬ್ ಹಾಕಿಕೊಂಡು ಬರುವುದಿಲ್ಲ. ಕಾಲೇಜಿನ ಸಮವಸ್ತ್ರದಲ್ಲಿರುವ ನೀಲಿ ಬಣ್ಣದ ಹಿಜಾಬ್ ಹಾಕಿಕೊಂಡು ಬರತ್ತೇವೆ. ಇದಕ್ಕಾದರೂ ಅವಕಾಶ ಕೊಡಿಯೆಂದು ಬೇಡುತ್ತಿದ್ದೇವೆ. ಆದರೆ ಅದಕ್ಕೂ ಅವಕಾಶ ಕೊಡುತ್ತಿಲ್ಲ ಎಂದು ತರಗತಿಯಿಂದ ಹೊರ ಹಾಕಲ್ಪಟ್ಟ ವಿದ್ಯಾರ್ಥಿನಿಯರು ತಮ್ಮ ನೋವು ತೋಡಿಕೊಳ್ಳುತ್ತಾರೆ.


ಇದನ್ನೂ ಓದಿ: ಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಜಾಬ್ ಧರಿಸಿರುವವರನ್ನು ತರಗತಿಯಿಂದ ಹೊರಕ್ಕೆ ಹಾಕಿರುವುದು ಅಮಾನವೀಯ ಹಾಗೂ ಕಾನೂನು ಬಾಹಿರ ಕೃತ್ಯ.

  2. ಇವತ್ತು ಹಿಜಾಬ್ ನಾಳೆ ಘೋಷ ನಾಳದು ತರಗತಿಯ ಮಧ್ಯದಲ್ಲಿ ನಮಾಜ್ ಮಾಡಲು ಅವಕಾಶ ನಂತರ ಮಹಿಳೆಯರ ಕಲಾ ಶಾಲೆಯಲ್ಲಿ ಗಂಡಸರು ಪಾಠ ಮಾಡಬಾರದು ಕೊನೆಗೆ ಶರಿಯತ್ತನ್ನು ಪಾಲಿಸಬೇಕು ಎಂದು ತಕರಾರು ಮಾಡುತ್ತಾರೆ ಇವರು ಶಾಲೆಗೆ ಬರುವುದು ವಿದ್ಯೆ ಕಲಿಯಲು ಇವರಿಗೆ ಎಲ್ಲಿ ಸರಿಯಾಗುತ್ತದೆಯೊ ಅಲ್ಲಿಗೆ ಹೋಗಲಿ ಆದುದರಿಂದ ಶಾಲ ಆಡಳಿತ ಮಂಡಳಿಯು ಇವರ ಬೇಡಿಕೆಯನ್ನು ಇಡೇರಿಸ ಬಾರದು ಶಾಲೆಯಲ್ಲಿ ಅದರ ನಿಯಮಗಳನ್ನು ವಿರೋಧಸಿದ್ದಕ್ಕೆ ಅವರನ್ನು ಶಾಲೆಯಿಂದ ತೆಗೆದು ಹಾಕಬೇಕು

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...