Homeಕರ್ನಾಟಕಉಡುಪಿ ಸರ್ಕಾರಿ ಕಾಲೇಜ್ ಹಿಜಾಬ್ ವಿವಾದ: ಭಿತ್ತಿಪತ್ರ ಪ್ರದರ್ಶಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿನಿಯರ ಒತ್ತಾಯ

ಉಡುಪಿ ಸರ್ಕಾರಿ ಕಾಲೇಜ್ ಹಿಜಾಬ್ ವಿವಾದ: ಭಿತ್ತಿಪತ್ರ ಪ್ರದರ್ಶಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿನಿಯರ ಒತ್ತಾಯ

- Advertisement -
- Advertisement -

ಸ್ಕಾರ್ಫ್ (ಹಿಜಾಬ್) ಹಾಕಿಕೊಂಡು ಬರುತ್ತಾರೆಂದು ಕಳೆದ ಮೂರು ವಾರದಿಂದ ತರಗತಿಯಿಂದ ಹೊರಹಾಕಲ್ಪಟ್ಟ ಉಡುಪಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಐವರು ವಿದ್ಯಾರ್ಥಿನಿಯರು ಗುರುವಾರ ಕಾಲೇಜಿನ ಗೇಟಿನ ಬಳಿ ಭಿತ್ತಿಪತ್ರ ಪ್ರದರ್ಶಿಸಿ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ. “ಹಿಜಾಬ್ ಹಾಕಿದ್ದಕ್ಕಾಗಿ ನಾವು ತರಗತಿಯಿಂದ ಹೊರಗೆ ಕುಳಿತು ಕೊಳ್ಳುವಂತಾಗಿದೆ. ಹಿಜಾಬ್ ನನ್ನ ಹಕ್ಕು, ಅದನ್ನು ಪಡೆದೆ ತೀರುತ್ತೇವೆ, ಇದು ನನ್ನ ಮೂಲಭೂತ ಹಕ್ಕು- ಎಂಬ ಭಿತ್ತಿಪತ್ರವನ್ನು ವಿದ್ಯಾರ್ಥಿನಿಯರು ಪ್ರದರ್ಶಿಸಿದರು.

ನಮ್ಮದು ಒಂದು ವರ್ಷದ ಹೋರಾಟ. ಪ್ರಥಮ ಪಿಯುಸಿಗೆ ಸೇರಿದಾಗ ಸ್ಕಾರ್ಫ್ ಹಾಕಿಕೊಂಡು ಬಂದಾಗಿಂದ ನಮಗೆ ಮಾನಸಿಕ ಹಿಂಸೆ ಕೊಡಲಾಗುತ್ತಿದೆ. ಒತ್ತಡ ಹಾಕಿ ಹಿಜಾಬ್ ತೆಗೆಸಿದರು. ತರಗತಿಯಿಂದ ಹೊರಗೆ ಹಾಕಿದರು. ಮನವಿ ಮಾಡಿದರು ತರಗತಿಗೆ ಸೇರಿಸಲಿಲ್ಲ. ಅಂತೂ ಮೊದಲ ವರ್ಷ ಮಗಿಯಿತು. ದ್ವಿತೀಯ ಪಿಯುಸಿ ಸೇರಿದಾಗ ಮತ್ತೆ ಹಿಜಾಬ್ ಹಾಕದಂತೆ ಹೇಳಲಾಯಿತು. ಪ್ರಾಚಾರ್ಯರಿಗೆ ಪೋಷಕರಿಂದ ಸ್ಕಾರ್ಫ್ ಹಾಕಿಕೊಂಡು ಬರಲು ಅವಕಾಶ ಕೊಡುವಂತೆ ಮನವಿ ಮಾಡಿಸಿದೆವು. ಆದರೆ ಪ್ರಾಚಾರ್ಯರು ನಮ್ಮ ಬೇಡಿಕೆ ತಿರಸ್ಕರಿಸಿದರು ಎಂದು ವಿದ್ಯಾರ್ಥಿನಿಯರು ಬೇಸರ ವ್ಯಕ್ತಪಡಿಸುತ್ತಾರೆ.

ನಮ್ಮ ಬೇಡಿಕೆ ಪ್ರಾಚಾರ್ಯರು ಪರಿಗಣಿಸಬಹುದೆಂದು ಕಾದೆವು. ಆದರೆ ಸಕಾರಾತ್ಮಕ ಸ್ಪಂದನೆ ಬರಲಿಲ್ಲ. ನಾವು ಅನಿವಾರ್ಯವಾಗಿ ಡಿಸೆಂಬರ್ ಕೊನೆಯ ವಾರದಲ್ಲಿ ಸ್ಕಾರ್ಫ್ ಧರಿಸಿ ಕಾಲೇಜಿಗೆ ಬಂದೆವು. ಆಗ ನಮ್ಮನ್ನು ತರಗತಿಗೆ ಪ್ರವೇಶಿಸದಂತೆ ಹೇಳಿ ಹೊರಗಡೆ ಇಟ್ಟರು. ನಾವು ತರಗತಿಯಿಂದ ಹೊರಹಾಕಲ್ಪಟ್ಟಿರುವುದು ಯಾರಿಗೂ ತಿಳಿಯಬಾರದೆಂದು ಲೈಬ್ರರಿ ಮತ್ತು ಸ್ಟಾಫ್ ರೂಮಿನಲ್ಲಿ ಕುಳಿತುಕೊಳ್ಳುವಂತೆ ಹೇಳಲಾಗುತ್ತಿತ್ತು ಎಂದು ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ತಮಗಾಗುತ್ತಿರುವ ಅನ್ಯಾಯ ವಿವರಿಸುತ್ತಾರೆ.

ಕಾಲೇಜಿನಲ್ಲಿ ಪೂಜೆ ಇನ್ನಿತರ ಆಚರಣೆ ನಡೆಯುತ್ತವೆ, ಇದು ಕಾಲೇಜಾದ್ದರಿಂದ ನಾವು ಅದಕ್ಕೆ ಗೌರವ ಕೊಡುತ್ತೇವೆ. ಹಾಗೆಯೆ ನಮ್ಮ ಮೂಲಭೂತ ಹಕ್ಕಾಗಿರುವ ಹಿಜಾಬ್ ಹಾಕಿಕೊಂಡು ಕಾಲೇಜಿಗೆ ಬರಲು ಅವಕಾಶ ಕೊಡಬೇಕು. ನಾವು ಕಪ್ಪು ಬಣ್ಣದ ಹಿಜಾಬ್ ಹಾಕಿಕೊಂಡು ಬರುವುದಿಲ್ಲ. ಕಾಲೇಜಿನ ಸಮವಸ್ತ್ರದಲ್ಲಿರುವ ನೀಲಿ ಬಣ್ಣದ ಹಿಜಾಬ್ ಹಾಕಿಕೊಂಡು ಬರತ್ತೇವೆ. ಇದಕ್ಕಾದರೂ ಅವಕಾಶ ಕೊಡಿಯೆಂದು ಬೇಡುತ್ತಿದ್ದೇವೆ. ಆದರೆ ಅದಕ್ಕೂ ಅವಕಾಶ ಕೊಡುತ್ತಿಲ್ಲ ಎಂದು ತರಗತಿಯಿಂದ ಹೊರ ಹಾಕಲ್ಪಟ್ಟ ವಿದ್ಯಾರ್ಥಿನಿಯರು ತಮ್ಮ ನೋವು ತೋಡಿಕೊಳ್ಳುತ್ತಾರೆ.


ಇದನ್ನೂ ಓದಿ: ಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಜಾಬ್ ಧರಿಸಿರುವವರನ್ನು ತರಗತಿಯಿಂದ ಹೊರಕ್ಕೆ ಹಾಕಿರುವುದು ಅಮಾನವೀಯ ಹಾಗೂ ಕಾನೂನು ಬಾಹಿರ ಕೃತ್ಯ.

  2. ಇವತ್ತು ಹಿಜಾಬ್ ನಾಳೆ ಘೋಷ ನಾಳದು ತರಗತಿಯ ಮಧ್ಯದಲ್ಲಿ ನಮಾಜ್ ಮಾಡಲು ಅವಕಾಶ ನಂತರ ಮಹಿಳೆಯರ ಕಲಾ ಶಾಲೆಯಲ್ಲಿ ಗಂಡಸರು ಪಾಠ ಮಾಡಬಾರದು ಕೊನೆಗೆ ಶರಿಯತ್ತನ್ನು ಪಾಲಿಸಬೇಕು ಎಂದು ತಕರಾರು ಮಾಡುತ್ತಾರೆ ಇವರು ಶಾಲೆಗೆ ಬರುವುದು ವಿದ್ಯೆ ಕಲಿಯಲು ಇವರಿಗೆ ಎಲ್ಲಿ ಸರಿಯಾಗುತ್ತದೆಯೊ ಅಲ್ಲಿಗೆ ಹೋಗಲಿ ಆದುದರಿಂದ ಶಾಲ ಆಡಳಿತ ಮಂಡಳಿಯು ಇವರ ಬೇಡಿಕೆಯನ್ನು ಇಡೇರಿಸ ಬಾರದು ಶಾಲೆಯಲ್ಲಿ ಅದರ ನಿಯಮಗಳನ್ನು ವಿರೋಧಸಿದ್ದಕ್ಕೆ ಅವರನ್ನು ಶಾಲೆಯಿಂದ ತೆಗೆದು ಹಾಕಬೇಕು

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...