Homeಕರ್ನಾಟಕಉಡುಪಿ ಸರ್ಕಾರಿ ಕಾಲೇಜ್ ಹಿಜಾಬ್ ವಿವಾದ: ಭಿತ್ತಿಪತ್ರ ಪ್ರದರ್ಶಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿನಿಯರ ಒತ್ತಾಯ

ಉಡುಪಿ ಸರ್ಕಾರಿ ಕಾಲೇಜ್ ಹಿಜಾಬ್ ವಿವಾದ: ಭಿತ್ತಿಪತ್ರ ಪ್ರದರ್ಶಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿನಿಯರ ಒತ್ತಾಯ

- Advertisement -
- Advertisement -

ಸ್ಕಾರ್ಫ್ (ಹಿಜಾಬ್) ಹಾಕಿಕೊಂಡು ಬರುತ್ತಾರೆಂದು ಕಳೆದ ಮೂರು ವಾರದಿಂದ ತರಗತಿಯಿಂದ ಹೊರಹಾಕಲ್ಪಟ್ಟ ಉಡುಪಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಐವರು ವಿದ್ಯಾರ್ಥಿನಿಯರು ಗುರುವಾರ ಕಾಲೇಜಿನ ಗೇಟಿನ ಬಳಿ ಭಿತ್ತಿಪತ್ರ ಪ್ರದರ್ಶಿಸಿ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ. “ಹಿಜಾಬ್ ಹಾಕಿದ್ದಕ್ಕಾಗಿ ನಾವು ತರಗತಿಯಿಂದ ಹೊರಗೆ ಕುಳಿತು ಕೊಳ್ಳುವಂತಾಗಿದೆ. ಹಿಜಾಬ್ ನನ್ನ ಹಕ್ಕು, ಅದನ್ನು ಪಡೆದೆ ತೀರುತ್ತೇವೆ, ಇದು ನನ್ನ ಮೂಲಭೂತ ಹಕ್ಕು- ಎಂಬ ಭಿತ್ತಿಪತ್ರವನ್ನು ವಿದ್ಯಾರ್ಥಿನಿಯರು ಪ್ರದರ್ಶಿಸಿದರು.

ನಮ್ಮದು ಒಂದು ವರ್ಷದ ಹೋರಾಟ. ಪ್ರಥಮ ಪಿಯುಸಿಗೆ ಸೇರಿದಾಗ ಸ್ಕಾರ್ಫ್ ಹಾಕಿಕೊಂಡು ಬಂದಾಗಿಂದ ನಮಗೆ ಮಾನಸಿಕ ಹಿಂಸೆ ಕೊಡಲಾಗುತ್ತಿದೆ. ಒತ್ತಡ ಹಾಕಿ ಹಿಜಾಬ್ ತೆಗೆಸಿದರು. ತರಗತಿಯಿಂದ ಹೊರಗೆ ಹಾಕಿದರು. ಮನವಿ ಮಾಡಿದರು ತರಗತಿಗೆ ಸೇರಿಸಲಿಲ್ಲ. ಅಂತೂ ಮೊದಲ ವರ್ಷ ಮಗಿಯಿತು. ದ್ವಿತೀಯ ಪಿಯುಸಿ ಸೇರಿದಾಗ ಮತ್ತೆ ಹಿಜಾಬ್ ಹಾಕದಂತೆ ಹೇಳಲಾಯಿತು. ಪ್ರಾಚಾರ್ಯರಿಗೆ ಪೋಷಕರಿಂದ ಸ್ಕಾರ್ಫ್ ಹಾಕಿಕೊಂಡು ಬರಲು ಅವಕಾಶ ಕೊಡುವಂತೆ ಮನವಿ ಮಾಡಿಸಿದೆವು. ಆದರೆ ಪ್ರಾಚಾರ್ಯರು ನಮ್ಮ ಬೇಡಿಕೆ ತಿರಸ್ಕರಿಸಿದರು ಎಂದು ವಿದ್ಯಾರ್ಥಿನಿಯರು ಬೇಸರ ವ್ಯಕ್ತಪಡಿಸುತ್ತಾರೆ.

ನಮ್ಮ ಬೇಡಿಕೆ ಪ್ರಾಚಾರ್ಯರು ಪರಿಗಣಿಸಬಹುದೆಂದು ಕಾದೆವು. ಆದರೆ ಸಕಾರಾತ್ಮಕ ಸ್ಪಂದನೆ ಬರಲಿಲ್ಲ. ನಾವು ಅನಿವಾರ್ಯವಾಗಿ ಡಿಸೆಂಬರ್ ಕೊನೆಯ ವಾರದಲ್ಲಿ ಸ್ಕಾರ್ಫ್ ಧರಿಸಿ ಕಾಲೇಜಿಗೆ ಬಂದೆವು. ಆಗ ನಮ್ಮನ್ನು ತರಗತಿಗೆ ಪ್ರವೇಶಿಸದಂತೆ ಹೇಳಿ ಹೊರಗಡೆ ಇಟ್ಟರು. ನಾವು ತರಗತಿಯಿಂದ ಹೊರಹಾಕಲ್ಪಟ್ಟಿರುವುದು ಯಾರಿಗೂ ತಿಳಿಯಬಾರದೆಂದು ಲೈಬ್ರರಿ ಮತ್ತು ಸ್ಟಾಫ್ ರೂಮಿನಲ್ಲಿ ಕುಳಿತುಕೊಳ್ಳುವಂತೆ ಹೇಳಲಾಗುತ್ತಿತ್ತು ಎಂದು ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ತಮಗಾಗುತ್ತಿರುವ ಅನ್ಯಾಯ ವಿವರಿಸುತ್ತಾರೆ.

ಕಾಲೇಜಿನಲ್ಲಿ ಪೂಜೆ ಇನ್ನಿತರ ಆಚರಣೆ ನಡೆಯುತ್ತವೆ, ಇದು ಕಾಲೇಜಾದ್ದರಿಂದ ನಾವು ಅದಕ್ಕೆ ಗೌರವ ಕೊಡುತ್ತೇವೆ. ಹಾಗೆಯೆ ನಮ್ಮ ಮೂಲಭೂತ ಹಕ್ಕಾಗಿರುವ ಹಿಜಾಬ್ ಹಾಕಿಕೊಂಡು ಕಾಲೇಜಿಗೆ ಬರಲು ಅವಕಾಶ ಕೊಡಬೇಕು. ನಾವು ಕಪ್ಪು ಬಣ್ಣದ ಹಿಜಾಬ್ ಹಾಕಿಕೊಂಡು ಬರುವುದಿಲ್ಲ. ಕಾಲೇಜಿನ ಸಮವಸ್ತ್ರದಲ್ಲಿರುವ ನೀಲಿ ಬಣ್ಣದ ಹಿಜಾಬ್ ಹಾಕಿಕೊಂಡು ಬರತ್ತೇವೆ. ಇದಕ್ಕಾದರೂ ಅವಕಾಶ ಕೊಡಿಯೆಂದು ಬೇಡುತ್ತಿದ್ದೇವೆ. ಆದರೆ ಅದಕ್ಕೂ ಅವಕಾಶ ಕೊಡುತ್ತಿಲ್ಲ ಎಂದು ತರಗತಿಯಿಂದ ಹೊರ ಹಾಕಲ್ಪಟ್ಟ ವಿದ್ಯಾರ್ಥಿನಿಯರು ತಮ್ಮ ನೋವು ತೋಡಿಕೊಳ್ಳುತ್ತಾರೆ.


ಇದನ್ನೂ ಓದಿ: ಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಜಾಬ್ ಧರಿಸಿರುವವರನ್ನು ತರಗತಿಯಿಂದ ಹೊರಕ್ಕೆ ಹಾಕಿರುವುದು ಅಮಾನವೀಯ ಹಾಗೂ ಕಾನೂನು ಬಾಹಿರ ಕೃತ್ಯ.

  2. ಇವತ್ತು ಹಿಜಾಬ್ ನಾಳೆ ಘೋಷ ನಾಳದು ತರಗತಿಯ ಮಧ್ಯದಲ್ಲಿ ನಮಾಜ್ ಮಾಡಲು ಅವಕಾಶ ನಂತರ ಮಹಿಳೆಯರ ಕಲಾ ಶಾಲೆಯಲ್ಲಿ ಗಂಡಸರು ಪಾಠ ಮಾಡಬಾರದು ಕೊನೆಗೆ ಶರಿಯತ್ತನ್ನು ಪಾಲಿಸಬೇಕು ಎಂದು ತಕರಾರು ಮಾಡುತ್ತಾರೆ ಇವರು ಶಾಲೆಗೆ ಬರುವುದು ವಿದ್ಯೆ ಕಲಿಯಲು ಇವರಿಗೆ ಎಲ್ಲಿ ಸರಿಯಾಗುತ್ತದೆಯೊ ಅಲ್ಲಿಗೆ ಹೋಗಲಿ ಆದುದರಿಂದ ಶಾಲ ಆಡಳಿತ ಮಂಡಳಿಯು ಇವರ ಬೇಡಿಕೆಯನ್ನು ಇಡೇರಿಸ ಬಾರದು ಶಾಲೆಯಲ್ಲಿ ಅದರ ನಿಯಮಗಳನ್ನು ವಿರೋಧಸಿದ್ದಕ್ಕೆ ಅವರನ್ನು ಶಾಲೆಯಿಂದ ತೆಗೆದು ಹಾಕಬೇಕು

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...