Homeಕರ್ನಾಟಕPUC ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್!: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೇಕಾ?

PUC ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್!: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೇಕಾ?

- Advertisement -
- Advertisement -

ನಿನ್ನೆ ನಡೆದ ದ್ವಿತೀಯ PUC ಪರೀಕ್ಷೆಯಲ್ಲಿ ಪಾಲ್ಗೊಂಡ ಬೆಂಗಳೂರಿನ ವಿದ್ಯಾರ್ಥಿನಿಯೊ‍ರ್ವಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದು ತೀವ್ರ ಆತಂಕಕ್ಕೆ ಒಳಗಾಗಿದ್ದು ಜೂನ್‌ 25 ರಿಂದ ನಡೆಯಬೇಕಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೇಕಾ ಎಂಬ ಪ್ರ‍ಶ್ನೆಯನ್ನು ಮುನ್ನೆಲೆಗೆ ತಂದಿದೆ.

ಜಯನಗರ 4 ನೇ ಬ್ಲಾಕ್ ನಲ್ಲಿ ನಿನ್ನೆ PUC ಪರೀಕ್ಷೆ ಬರೆದ ವಿದ್ಯಾರ್ಥಿನಿಯೋರ್ವಳ ಕೊರೊನಾ ಪರೀಕ್ಷೆಯ ವರದಿ ಇಂದು ಬಿಡುಗಡೆಯಾಗಿದ್ದು ಆಕೆಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ವಿದ್ಯಾರ್ಥಿನಿ ಕಳೆದ ಒಂದು ವಾರದಿಂದ ಕ್ವಾರಂಟೈನ್‌ಗೆ ಒಳಗಾಗಿದ್ದರು. ಮೂರು ದಿನಗಳ ಹಿಂದೆ ಆಕೆಯ ರಕ್ತ ಮತ್ತು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಆದರೂ ಸಹ ಆಕೆ ಪರೀಕ್ಷೆ ತಪ್ಪಿಸಬಾರದೆಂಬ ಆತಂಕದಿಂದ ಪರೀಕ್ಷೆ ಹಾಜರಾಗಿದ್ದಾಳೆ. ಇಂದು ಪಾಸಿಟಿವ್‌ ಬಂದಿದ್ದು ದೊಡ್ಡ ಆತಂಕಕ್ಕೆ ಕಾರಣವಾಗಿದೆ.

ಈಗ ಆಕೆಯೊಂದಿಗೆ ಪರೀಕ್ಷೆ ಬರೆದ ಆ ಕೊಠಡಿಯಲಿದ್ದ ಎಲ್ಲಾ ವಿದ್ಯಾರ್ಥಿಗಳನ್ನೂ ಸಹ ಕ್ವಾರಂಟೈನ್‌ ಮಾಡುವುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಅಲ್ಲದೇ ಜೂನ್‌ 25 ರಿಂದ ಆರಂಭವಾಗಲಿರುವ ಮಹತ್ವದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ರಿಸ್ಕ್‌ ತೆಗೆದುಕೊಳ್ಳಬೇಕೆ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.

ಈ ಬಾರಿ SSLC ಪರೀಕ್ಷೆಯನ್ನು ತೆಗೆದುಕೊಳ್ಳಬಹುದಾದ ವಿದ್ಯಾರ್ಥಿಗಳ ಅಂದಾಜು ಸಂಖ್ಯೆ 8.5 ಲಕ್ಷ (ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ ಸೈಟ್ ಮಾಹಿತಿಯಂತೆ). ಪರೀಕ್ಷೆಯ ನಿರ್ವಾಹಕ ಸಿಬ್ಬಂದಿ ಅಂದಾಜು 2.2 ಲಕ್ಷ. ಇವರಲ್ಲಿ ದುರದೃಷ್ಟವಶಾತ್ ಯಾರಿಗಾದರೂ ಸೋಂಕು ಉಂಟಾಗಿ ಅಲ್ಲಿಂದ ಹರಡಿದರೆ ಯಾರು ಜವಾಬ್ದಾರರು ಎಂಬ ಪ್ರಶ್ನೆ ಕುಟುಂಬದವರಿಗೆ ಕಾಡುತ್ತಿದೆ ಎಂದು ಚಿಂತಕರು ಆತಂಕ ವ್ಯಕ್ತಪಡಿಸಿದ್ದರು.

ಈಗಾಗಲೇ ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳಿಗೆ ಬಡ್ತಿ ನೀಡಲಾಗುತ್ತಿದೆ. ಆದರೆ ಕರ್ನಾಟಕ ಮಾತ್ರ ಪರೀಕ್ಷೆ ನಡೆಸಿಯೇ ಸಿದ್ಧ ಎಂದು ತೀರ್ಮಾನಿಸಿದೆ.  ಕೇರಳದಲ್ಲಿ ಮೇ 28ಕ್ಕೆ ಉಳಿದಿದ್ದ ಮೂರು ವಿಷಯಗಳಲ್ಲಿ ಪರೀಕ್ಷೆ ನಡೆಸಿದೆ. ಅದೃಷ್ಟವಶಾತ್‌ ಯಾರೊಬ್ಬ ವಿದ್ಯಾರ್ಥಿಗೂ ಇದರಿಂದ ತೊಂದರೆಯಾದ ಪ್ರಕರಣಗಳು ವರದಿಯಾಗಿಲ್ಲ ಎಂದು ಅಲ್ಲಿನ ಸಚಿವರಾದ ಥಾಮಸ್‌ ಐಸಾಕ್‌ ಸ್ಪಷ್ಟಪಡಿಸಿದ್ದಾರೆ.


ಇಂದಿನ ಪರಿಸ್ಥಿತಿಯಲ್ಲಿ SSLC ಪರೀಕ್ಷೆ ನಡೆಸುವುದು ಸೂಕ್ತವಲ್ಲ : ಶಿಕ್ಷಣ ತಜ್ಞರು, ಹೋರಾಟಗಾರರ ಅಭಿಮತ


ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಲೇ ಇವೆ. ಇಂತಹ ಸಮಯದಲಿ ಪರೀಕ್ಷೆ ನಡೆಸುವುದು ಬೇಡ ಎಂದು ಮೇ ತಿಂಗಳಿನಲ್ಲಿಯೇ ಕರ್ನಾಟಕ ವಿದ್ಯಾರ್ಥಿ ಸಂಘಟನೆಗಳು, ಚಿಂತಕರು, ಶಿಕ್ಷಣ ತಜ್ಞರು ಆಗ್ರಹಿಸಿದ್ದರು. ಕೆಲವರು ಈ ವಿಚಾರವಾಗಿ ಕೋರ್ಟ್‌ ಮೆಟ್ಟಿಲು ಸಹ ಏರಿದ್ದರು. ಆದರೆ ಕೋರ್ಟ್‌ ಆ ಅರ್ಜಿಯನ್ನು ತಿರಸ್ಕರಿಸಿತ್ತು. ಕರ್ನಾಟಕ ಸರ್ಕಾರ ಸೂಕ್ತ ಮುನ್ನೆಚ್ಚರಿಕೆ ಮತ್ತು ಸಿದ್ಧತೆಗಳೊಂದಿಗೆ ಪರೀಕ್ಷೆ ನಡೆಸುತ್ತೇವೆ ಎಂದು ತೀರ್ಮಾನಿಸಿದೆ.

ಈಗ ನಿನ್ನೆ ಪರೀಕ್ಷೆ ಬರೆದ ಒಬ್ಬ ವಿದ್ಯಾರ್ಥಿನಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನ್ನ ನಿಲುವನ್ನು ಮರುಪರಿಶೀಲನೆ ನಡೆಸುತ್ತದೆಯೇ ಅಥವಾ ಭಾರೀ ಮುನ್ನೆಚ್ಚರಿಕೆಗಳೊಂದಿಗೆ ಪರೀಕ್ಷೆ ನಡೆಸುತ್ತದೆಯೇ ಕಾದು ನೋಡಬೇಕಿದೆ.


ಇದನ್ನೂ ಓದಿ: ತಮಿಳುನಾಡಿನಲ್ಲೂ SSLC ಪರೀಕ್ಷೆ ರದ್ದು: ವಿದ್ಯಾರ್ಥಿಗಳಿಗೆ ಮುಂಬಡ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...