Homeಕರ್ನಾಟಕPUC ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್!: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೇಕಾ?

PUC ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್!: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೇಕಾ?

- Advertisement -
- Advertisement -

ನಿನ್ನೆ ನಡೆದ ದ್ವಿತೀಯ PUC ಪರೀಕ್ಷೆಯಲ್ಲಿ ಪಾಲ್ಗೊಂಡ ಬೆಂಗಳೂರಿನ ವಿದ್ಯಾರ್ಥಿನಿಯೊ‍ರ್ವಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದು ತೀವ್ರ ಆತಂಕಕ್ಕೆ ಒಳಗಾಗಿದ್ದು ಜೂನ್‌ 25 ರಿಂದ ನಡೆಯಬೇಕಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೇಕಾ ಎಂಬ ಪ್ರ‍ಶ್ನೆಯನ್ನು ಮುನ್ನೆಲೆಗೆ ತಂದಿದೆ.

ಜಯನಗರ 4 ನೇ ಬ್ಲಾಕ್ ನಲ್ಲಿ ನಿನ್ನೆ PUC ಪರೀಕ್ಷೆ ಬರೆದ ವಿದ್ಯಾರ್ಥಿನಿಯೋರ್ವಳ ಕೊರೊನಾ ಪರೀಕ್ಷೆಯ ವರದಿ ಇಂದು ಬಿಡುಗಡೆಯಾಗಿದ್ದು ಆಕೆಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ವಿದ್ಯಾರ್ಥಿನಿ ಕಳೆದ ಒಂದು ವಾರದಿಂದ ಕ್ವಾರಂಟೈನ್‌ಗೆ ಒಳಗಾಗಿದ್ದರು. ಮೂರು ದಿನಗಳ ಹಿಂದೆ ಆಕೆಯ ರಕ್ತ ಮತ್ತು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಆದರೂ ಸಹ ಆಕೆ ಪರೀಕ್ಷೆ ತಪ್ಪಿಸಬಾರದೆಂಬ ಆತಂಕದಿಂದ ಪರೀಕ್ಷೆ ಹಾಜರಾಗಿದ್ದಾಳೆ. ಇಂದು ಪಾಸಿಟಿವ್‌ ಬಂದಿದ್ದು ದೊಡ್ಡ ಆತಂಕಕ್ಕೆ ಕಾರಣವಾಗಿದೆ.

ಈಗ ಆಕೆಯೊಂದಿಗೆ ಪರೀಕ್ಷೆ ಬರೆದ ಆ ಕೊಠಡಿಯಲಿದ್ದ ಎಲ್ಲಾ ವಿದ್ಯಾರ್ಥಿಗಳನ್ನೂ ಸಹ ಕ್ವಾರಂಟೈನ್‌ ಮಾಡುವುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಅಲ್ಲದೇ ಜೂನ್‌ 25 ರಿಂದ ಆರಂಭವಾಗಲಿರುವ ಮಹತ್ವದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ರಿಸ್ಕ್‌ ತೆಗೆದುಕೊಳ್ಳಬೇಕೆ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.

ಈ ಬಾರಿ SSLC ಪರೀಕ್ಷೆಯನ್ನು ತೆಗೆದುಕೊಳ್ಳಬಹುದಾದ ವಿದ್ಯಾರ್ಥಿಗಳ ಅಂದಾಜು ಸಂಖ್ಯೆ 8.5 ಲಕ್ಷ (ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ ಸೈಟ್ ಮಾಹಿತಿಯಂತೆ). ಪರೀಕ್ಷೆಯ ನಿರ್ವಾಹಕ ಸಿಬ್ಬಂದಿ ಅಂದಾಜು 2.2 ಲಕ್ಷ. ಇವರಲ್ಲಿ ದುರದೃಷ್ಟವಶಾತ್ ಯಾರಿಗಾದರೂ ಸೋಂಕು ಉಂಟಾಗಿ ಅಲ್ಲಿಂದ ಹರಡಿದರೆ ಯಾರು ಜವಾಬ್ದಾರರು ಎಂಬ ಪ್ರಶ್ನೆ ಕುಟುಂಬದವರಿಗೆ ಕಾಡುತ್ತಿದೆ ಎಂದು ಚಿಂತಕರು ಆತಂಕ ವ್ಯಕ್ತಪಡಿಸಿದ್ದರು.

ಈಗಾಗಲೇ ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳಿಗೆ ಬಡ್ತಿ ನೀಡಲಾಗುತ್ತಿದೆ. ಆದರೆ ಕರ್ನಾಟಕ ಮಾತ್ರ ಪರೀಕ್ಷೆ ನಡೆಸಿಯೇ ಸಿದ್ಧ ಎಂದು ತೀರ್ಮಾನಿಸಿದೆ.  ಕೇರಳದಲ್ಲಿ ಮೇ 28ಕ್ಕೆ ಉಳಿದಿದ್ದ ಮೂರು ವಿಷಯಗಳಲ್ಲಿ ಪರೀಕ್ಷೆ ನಡೆಸಿದೆ. ಅದೃಷ್ಟವಶಾತ್‌ ಯಾರೊಬ್ಬ ವಿದ್ಯಾರ್ಥಿಗೂ ಇದರಿಂದ ತೊಂದರೆಯಾದ ಪ್ರಕರಣಗಳು ವರದಿಯಾಗಿಲ್ಲ ಎಂದು ಅಲ್ಲಿನ ಸಚಿವರಾದ ಥಾಮಸ್‌ ಐಸಾಕ್‌ ಸ್ಪಷ್ಟಪಡಿಸಿದ್ದಾರೆ.


ಇಂದಿನ ಪರಿಸ್ಥಿತಿಯಲ್ಲಿ SSLC ಪರೀಕ್ಷೆ ನಡೆಸುವುದು ಸೂಕ್ತವಲ್ಲ : ಶಿಕ್ಷಣ ತಜ್ಞರು, ಹೋರಾಟಗಾರರ ಅಭಿಮತ


ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಲೇ ಇವೆ. ಇಂತಹ ಸಮಯದಲಿ ಪರೀಕ್ಷೆ ನಡೆಸುವುದು ಬೇಡ ಎಂದು ಮೇ ತಿಂಗಳಿನಲ್ಲಿಯೇ ಕರ್ನಾಟಕ ವಿದ್ಯಾರ್ಥಿ ಸಂಘಟನೆಗಳು, ಚಿಂತಕರು, ಶಿಕ್ಷಣ ತಜ್ಞರು ಆಗ್ರಹಿಸಿದ್ದರು. ಕೆಲವರು ಈ ವಿಚಾರವಾಗಿ ಕೋರ್ಟ್‌ ಮೆಟ್ಟಿಲು ಸಹ ಏರಿದ್ದರು. ಆದರೆ ಕೋರ್ಟ್‌ ಆ ಅರ್ಜಿಯನ್ನು ತಿರಸ್ಕರಿಸಿತ್ತು. ಕರ್ನಾಟಕ ಸರ್ಕಾರ ಸೂಕ್ತ ಮುನ್ನೆಚ್ಚರಿಕೆ ಮತ್ತು ಸಿದ್ಧತೆಗಳೊಂದಿಗೆ ಪರೀಕ್ಷೆ ನಡೆಸುತ್ತೇವೆ ಎಂದು ತೀರ್ಮಾನಿಸಿದೆ.

ಈಗ ನಿನ್ನೆ ಪರೀಕ್ಷೆ ಬರೆದ ಒಬ್ಬ ವಿದ್ಯಾರ್ಥಿನಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನ್ನ ನಿಲುವನ್ನು ಮರುಪರಿಶೀಲನೆ ನಡೆಸುತ್ತದೆಯೇ ಅಥವಾ ಭಾರೀ ಮುನ್ನೆಚ್ಚರಿಕೆಗಳೊಂದಿಗೆ ಪರೀಕ್ಷೆ ನಡೆಸುತ್ತದೆಯೇ ಕಾದು ನೋಡಬೇಕಿದೆ.


ಇದನ್ನೂ ಓದಿ: ತಮಿಳುನಾಡಿನಲ್ಲೂ SSLC ಪರೀಕ್ಷೆ ರದ್ದು: ವಿದ್ಯಾರ್ಥಿಗಳಿಗೆ ಮುಂಬಡ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...