Homeಕರ್ನಾಟಕPUC ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್!: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೇಕಾ?

PUC ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್!: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೇಕಾ?

- Advertisement -
- Advertisement -

ನಿನ್ನೆ ನಡೆದ ದ್ವಿತೀಯ PUC ಪರೀಕ್ಷೆಯಲ್ಲಿ ಪಾಲ್ಗೊಂಡ ಬೆಂಗಳೂರಿನ ವಿದ್ಯಾರ್ಥಿನಿಯೊ‍ರ್ವಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದು ತೀವ್ರ ಆತಂಕಕ್ಕೆ ಒಳಗಾಗಿದ್ದು ಜೂನ್‌ 25 ರಿಂದ ನಡೆಯಬೇಕಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೇಕಾ ಎಂಬ ಪ್ರ‍ಶ್ನೆಯನ್ನು ಮುನ್ನೆಲೆಗೆ ತಂದಿದೆ.

ಜಯನಗರ 4 ನೇ ಬ್ಲಾಕ್ ನಲ್ಲಿ ನಿನ್ನೆ PUC ಪರೀಕ್ಷೆ ಬರೆದ ವಿದ್ಯಾರ್ಥಿನಿಯೋರ್ವಳ ಕೊರೊನಾ ಪರೀಕ್ಷೆಯ ವರದಿ ಇಂದು ಬಿಡುಗಡೆಯಾಗಿದ್ದು ಆಕೆಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ವಿದ್ಯಾರ್ಥಿನಿ ಕಳೆದ ಒಂದು ವಾರದಿಂದ ಕ್ವಾರಂಟೈನ್‌ಗೆ ಒಳಗಾಗಿದ್ದರು. ಮೂರು ದಿನಗಳ ಹಿಂದೆ ಆಕೆಯ ರಕ್ತ ಮತ್ತು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಆದರೂ ಸಹ ಆಕೆ ಪರೀಕ್ಷೆ ತಪ್ಪಿಸಬಾರದೆಂಬ ಆತಂಕದಿಂದ ಪರೀಕ್ಷೆ ಹಾಜರಾಗಿದ್ದಾಳೆ. ಇಂದು ಪಾಸಿಟಿವ್‌ ಬಂದಿದ್ದು ದೊಡ್ಡ ಆತಂಕಕ್ಕೆ ಕಾರಣವಾಗಿದೆ.

ಈಗ ಆಕೆಯೊಂದಿಗೆ ಪರೀಕ್ಷೆ ಬರೆದ ಆ ಕೊಠಡಿಯಲಿದ್ದ ಎಲ್ಲಾ ವಿದ್ಯಾರ್ಥಿಗಳನ್ನೂ ಸಹ ಕ್ವಾರಂಟೈನ್‌ ಮಾಡುವುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಅಲ್ಲದೇ ಜೂನ್‌ 25 ರಿಂದ ಆರಂಭವಾಗಲಿರುವ ಮಹತ್ವದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ರಿಸ್ಕ್‌ ತೆಗೆದುಕೊಳ್ಳಬೇಕೆ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.

ಈ ಬಾರಿ SSLC ಪರೀಕ್ಷೆಯನ್ನು ತೆಗೆದುಕೊಳ್ಳಬಹುದಾದ ವಿದ್ಯಾರ್ಥಿಗಳ ಅಂದಾಜು ಸಂಖ್ಯೆ 8.5 ಲಕ್ಷ (ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ ಸೈಟ್ ಮಾಹಿತಿಯಂತೆ). ಪರೀಕ್ಷೆಯ ನಿರ್ವಾಹಕ ಸಿಬ್ಬಂದಿ ಅಂದಾಜು 2.2 ಲಕ್ಷ. ಇವರಲ್ಲಿ ದುರದೃಷ್ಟವಶಾತ್ ಯಾರಿಗಾದರೂ ಸೋಂಕು ಉಂಟಾಗಿ ಅಲ್ಲಿಂದ ಹರಡಿದರೆ ಯಾರು ಜವಾಬ್ದಾರರು ಎಂಬ ಪ್ರಶ್ನೆ ಕುಟುಂಬದವರಿಗೆ ಕಾಡುತ್ತಿದೆ ಎಂದು ಚಿಂತಕರು ಆತಂಕ ವ್ಯಕ್ತಪಡಿಸಿದ್ದರು.

ಈಗಾಗಲೇ ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳಿಗೆ ಬಡ್ತಿ ನೀಡಲಾಗುತ್ತಿದೆ. ಆದರೆ ಕರ್ನಾಟಕ ಮಾತ್ರ ಪರೀಕ್ಷೆ ನಡೆಸಿಯೇ ಸಿದ್ಧ ಎಂದು ತೀರ್ಮಾನಿಸಿದೆ.  ಕೇರಳದಲ್ಲಿ ಮೇ 28ಕ್ಕೆ ಉಳಿದಿದ್ದ ಮೂರು ವಿಷಯಗಳಲ್ಲಿ ಪರೀಕ್ಷೆ ನಡೆಸಿದೆ. ಅದೃಷ್ಟವಶಾತ್‌ ಯಾರೊಬ್ಬ ವಿದ್ಯಾರ್ಥಿಗೂ ಇದರಿಂದ ತೊಂದರೆಯಾದ ಪ್ರಕರಣಗಳು ವರದಿಯಾಗಿಲ್ಲ ಎಂದು ಅಲ್ಲಿನ ಸಚಿವರಾದ ಥಾಮಸ್‌ ಐಸಾಕ್‌ ಸ್ಪಷ್ಟಪಡಿಸಿದ್ದಾರೆ.


ಇಂದಿನ ಪರಿಸ್ಥಿತಿಯಲ್ಲಿ SSLC ಪರೀಕ್ಷೆ ನಡೆಸುವುದು ಸೂಕ್ತವಲ್ಲ : ಶಿಕ್ಷಣ ತಜ್ಞರು, ಹೋರಾಟಗಾರರ ಅಭಿಮತ


ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಲೇ ಇವೆ. ಇಂತಹ ಸಮಯದಲಿ ಪರೀಕ್ಷೆ ನಡೆಸುವುದು ಬೇಡ ಎಂದು ಮೇ ತಿಂಗಳಿನಲ್ಲಿಯೇ ಕರ್ನಾಟಕ ವಿದ್ಯಾರ್ಥಿ ಸಂಘಟನೆಗಳು, ಚಿಂತಕರು, ಶಿಕ್ಷಣ ತಜ್ಞರು ಆಗ್ರಹಿಸಿದ್ದರು. ಕೆಲವರು ಈ ವಿಚಾರವಾಗಿ ಕೋರ್ಟ್‌ ಮೆಟ್ಟಿಲು ಸಹ ಏರಿದ್ದರು. ಆದರೆ ಕೋರ್ಟ್‌ ಆ ಅರ್ಜಿಯನ್ನು ತಿರಸ್ಕರಿಸಿತ್ತು. ಕರ್ನಾಟಕ ಸರ್ಕಾರ ಸೂಕ್ತ ಮುನ್ನೆಚ್ಚರಿಕೆ ಮತ್ತು ಸಿದ್ಧತೆಗಳೊಂದಿಗೆ ಪರೀಕ್ಷೆ ನಡೆಸುತ್ತೇವೆ ಎಂದು ತೀರ್ಮಾನಿಸಿದೆ.

ಈಗ ನಿನ್ನೆ ಪರೀಕ್ಷೆ ಬರೆದ ಒಬ್ಬ ವಿದ್ಯಾರ್ಥಿನಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನ್ನ ನಿಲುವನ್ನು ಮರುಪರಿಶೀಲನೆ ನಡೆಸುತ್ತದೆಯೇ ಅಥವಾ ಭಾರೀ ಮುನ್ನೆಚ್ಚರಿಕೆಗಳೊಂದಿಗೆ ಪರೀಕ್ಷೆ ನಡೆಸುತ್ತದೆಯೇ ಕಾದು ನೋಡಬೇಕಿದೆ.


ಇದನ್ನೂ ಓದಿ: ತಮಿಳುನಾಡಿನಲ್ಲೂ SSLC ಪರೀಕ್ಷೆ ರದ್ದು: ವಿದ್ಯಾರ್ಥಿಗಳಿಗೆ ಮುಂಬಡ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...