Homeಕರ್ನಾಟಕವಿದ್ಯಾರ್ಥಿ ಯಲ್ಲಾಲಿಂಗ ಸಾವು ಪ್ರಕರಣ: ಎಲ್ಲ 9 ಆರೋಪಿಗಳು ಖುಲಾಸೆ

ವಿದ್ಯಾರ್ಥಿ ಯಲ್ಲಾಲಿಂಗ ಸಾವು ಪ್ರಕರಣ: ಎಲ್ಲ 9 ಆರೋಪಿಗಳು ಖುಲಾಸೆ

- Advertisement -
- Advertisement -

ದಶಕದ ಹಿಂದೆ (2015ರಲ್ಲಿ) ನಡೆದಿದ್ದ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ಅವರ ಸಾವಿನ ಪ್ರಕರಣದ ತೀರ್ಪನ್ನು ಕೊಪ್ಪಳದ ಜಿಲ್ಲಾ ನ್ಯಾಯಾಲಯ ಶುಕ್ರವಾರ (ಅಕ್ಟೋಬರ್ 3) ಪ್ರಕಟಿಸಿದೆ.

ಸೆಪ್ಟೆಂಬರ್ 24ರಂದು ಅಂತಿಮ ವಿಚಾರಣೆ ನಡೆಸಿ ಕಾಯ್ದರಿಸಿದ್ದ ತೀರ್ಪನ್ನು ನ್ಯಾಯಾಲಯ ಪ್ರಕಟಿಸಿದ್ದು, ಸಚಿವ ಶಿವರಾಜ್ ತಂಗಡಗಿ ಅವರ ಆಪ್ತ ಹನುಮೇಶ್ ನಾಯಕ್ ಸೇರಿದಂತೆ ಪ್ರಕರಣದ ಎಲ್ಲಾ 9 ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಆರೋಪಿಗಳ ಪರ ವಕೀಲರು, “ಒಟ್ಟು 9 ಜನರ ವಿರುದ್ದ ಸಿಐಡಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ನ್ಯಾಯಾಲಯ 76 ಸಾಕ್ಷಿಗಳನ್ನು ವಿಚಾರಣೆ ನಡೆಸಿತ್ತು. ಈ ಪೈಕಿ 56 ಜನರು ಪ್ರಾಸಿಕ್ಯೂಷನ್ ಪರವಾಗಿ ಸಾಕ್ಷ್ಯ ನುಡಿದಿಲ್ಲ ಎಂಬುವುದನ್ನು ನ್ಯಾಯಾಲಯ ಪರಿಗಣಿಸಿದೆ ಎಂದಿದ್ದಾರೆ.

ಮುಂದುವರಿದು, ಯಲ್ಲಾಲಿಂಗ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಅಣ್ಣ ವೀರಭದ್ರಪ್ಪ ಅವರು ಪೊಲೀಸರ ಮುಂದೆ ಕೊಟ್ಟಿರುವ ಲಿಖಿತ ಹೇಳಿಕೆ ಮತ್ತು ಯಲ್ಲಾಲಿಂಗನ ಮೃತದೇಹದ ಮೇಲಿನ ಗಾಯಗಳು ರೈಲು ಡಿಕ್ಕಿಯಿಂದ ಆಗಿರುವ ಸಾಧ್ಯತೆ ಹೆಚ್ಚಿದೆ ಎಂದು ಮರಣೋತ್ತ ಪರೀಕ್ಷೆ ನಡೆಸಿದ ವೈದ್ಯರು ಕೊಟ್ಟಿರುವ ವರದಿಯನ್ನು ನ್ಯಾಯಾಲಯ ಪರಿಗಣನೆಗೆ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಹನುಮೇಶ್ ನಾಯಕ್ ಅವರ ಪಾತ್ರ ಇಲ್ಲ ಎಂಬುವುದು ಗೊತ್ತಿದ್ದರೂ, ಅವರನ್ನು ಸುಖಾಸುಮ್ಮನೆ ಬಂಧಿಸಿ ನ್ಯಾಯಾಂಗ ಬಂಧನದಲ್ಲಿ ಇಡಲಾಗಿತ್ತು. ಇದರ ಹಿಂದೆ ರಾಜಕೀಯ ಷಡ್ಯಂತ್ರ ಇತ್ತು ಎಂದು ಆರೋಪಿಸಿದ್ದಾರೆ.

ಹನುಮೇಶ್ ನಾಯಕ್ ಮಾತನಾಡಿ, “ಶಿವರಾಜ್ ತಂಗಡಗಿ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು ಎಂದು ನನ್ನನ್ನು ಬಂಧಿಸಿದ್ದರು. ಕಳೆದ 10 ವರ್ಷಗಳಿಂದ ನಾವು ಆರೋಪ ಹೊತ್ತಿದ್ದೆವು. ನ್ಯಾಯಾಲಯದ ತೀರ್ಪಿನಿಂದ ನಾವು ನಿರ್ದೋರ್ಷಿಗಳು ಎಂಬುವುದು ಖಚಿತವಾಗಿದೆ. ನಮ್ಮ ಮೇಲಿನ ಆರೋಪ ಸುಳ್ಳಾಗಿತ್ತು. ಇದೀಗ ನ್ಯಾಯಾಲಯದಲ್ಲೂ ಸಾಬೀತಾಗಿದೆ. ನ್ಯಾಯ ದೇವತೆ ನಮಗೆ ನ್ಯಾಯ ದೊರಕಿಸಿ ಕೊಟ್ಟಿದ್ದಾಳೆ” ಎಂದಿದ್ದಾರೆ.

ನ್ಯಾಯಾಲಯದ ತೀರ್ಪಿನ ಕುರಿತು ಟಿವಿ ವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಯಲ್ಲಾಲಿಂಗ ಅವರ ತಾಯಿ, “ನ್ಯಾಯಾಲಯದ ತೀರ್ಪಿನ ಬಗ್ಗೆ ನನಗೆ ಇನ್ನೂ ಯಾವುದೇ ಮಾಹಿತಿ ದೊರೆತಿಲ್ಲ. ನಾನು ಸರ್ಕಾರಿ ವಕೀಲರನ್ನು ಭೇಟಿಯಾಗುತ್ತೇನೆ, ಮುಂದೆ ಏನು ಮಾಡಬೇಕು ಎಂದು ಚರ್ಚೆ ಮಾಡುತ್ತೇನೆ. ನನ್ನ ಮಗನನ್ನು ಕೊಲೆ ಮಾಡಿರುವುದು ಸತ್ಯ, ನನಗೆ ಸುಳ್ಳು ಹೇಳಲು ಬರುವುದಿಲ್ಲ” ಎಂದು ಕಣ್ಣೀರು ಹಾಕಿದ್ದಾರೆ.

ಮುಂದುವರಿದು, “ಹೋರಾಟಗಳಿಂದ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದು ಹೇಳಲಾಗಿತ್ತು. ನಾವು ಸಾಕಷ್ಟು ಹೋರಾಟ ಮಾಡಿದ್ದೇವೆ. ಆದರೆ, ಏನೂ ಪ್ರಯೋಜನ ಆಗಿಲ್ಲ. ದುಡ್ಡಿದ್ದವರು ಏನು ಬೇಕಾದರು ಮಾಡುತ್ತಾರೆ, ನಮ್ಮಂತ ಅಮಾಯಕರು ಏನು ಮಾಡೋದು?” ಎಂದು ನಿರಾಸೆ ವ್ಯಕ್ತಪಡಿಸಿದ್ದಾರೆ.

ನಿಮ್ಮ ಮಗ ವೀರಭದ್ರಪ್ಪ ವ್ಯತಿರಿಕ್ತ ಹೇಳಿಕೆ ಕೊಟ್ಟಿದ್ದಾರಲ್ಲ? ಎಂಬ ಟಿವಿ ವಾಹಿನಿಯವ ಪ್ರಶ್ನೆಗೆ ಉತ್ತರಿಸಿದ ಅವರು, “ಆತನಿಗೆ ಜೀವ ಬೆದರಿಕೆ ಇದೆ. ಅವನಿಗೆ ಏನು ಮಾಡಿದ್ದಾರೆ ಗೊತ್ತಿಲ್ಲ. ಆತನನ್ನೇ ಕೇಳಬೇಕು” ಎಂದಿದ್ದಾರೆ. ಯಾರು ಕೊಲೆ ಮಾಡಿದ್ದಾರೆ ಎನ್ನುವುದು ನಿಮ್ಮ ಆರೋಪ ಎಂದು ಕೇಳಿದಾಗ, “ಹನುಮೇಶ್ ನಾಯಕ್ ಕೊಲೆ ಮಾಡಿದ್ದಾರೆ ಎಂದು ನಾನು ಹೇಳಿದ್ದೆ” ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ: ಗದಗದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಕೊಪ್ಪಳದ ಕನಕಗಿರಿಯ ಹುಲಿಹೈದರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ತನ್ನ ಗ್ರಾಮದ ಅವ್ಯವಸ್ಥೆ ಕುರಿತು ಟಿವಿ ವಾಹಿನಿಯೊಂದರ ಜೊತೆ ಮಾತನಾಡಿದ್ದರು. ಆ ಬಳಿಕ ಅವರಿಗೆ ಬೆದರಿಕೆಗಳು ಬಂದಿತ್ತು ಎಂದು ಹೇಳಲಾಗ್ತಿದೆ. ಇದಾಗಿ ಕೆಲ ದಿನಗಳಲ್ಲಿ, ಅಂದರೆ 2015ರ ಜನವರಿ 11ರಂದು ಅವರ ಶವ ಕೊಪ್ಪಳ ನಗರದ ರೈಲ್ವೆ ನಿಲ್ದಾಣದ ಬಳಿ ಪತ್ತೆಯಾಗಿತ್ತು.

ಆರಂಭದಲ್ಲಿ ಬೆದರಿಕೆ ಅಂಜಿ ಯಲ್ಲಾಲಿಂಗ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಂದುಕೊಳ್ಳಲಾಗಿತ್ತು. ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಯುಡಿಆರ್‌ ದಾಖಲಿಸಿಕೊಂಡಿದ್ದರು. ಆದರೆ, ನಂತರ ಕುಟುಂಬಸ್ಥರು ಯಲ್ಲಾಲಿಂಗ ಸಾವಿನ ಕುರಿತು ಧ್ವನಿ ಎತ್ತಿದ್ದರು. ಯಲ್ಲಾಲಿಂಗ ತನಗೆ ಬೆದರಿಕೆ ಇದೆ ಎಂದು ಚೀಟಿಯಲ್ಲಿ ಕೆಲವರ ಹೆಸರು ಬರೆದಿಟ್ಟಿದ್ದರು ಎಂದು ಹೇಳಿದ್ದರು. ಯಲ್ಲಾಲಿಂಗನ ಕೊಲೆಯಾಗಿದೆ ಎಂದು ಆರೋಪಿಸಿದ್ದರು.

ನಂತರ ಈ ಪ್ರಕರಣ ದೇಶದಾದ್ಯಂತ ಸುದ್ದಿಯಾಗಿತ್ತು. ಹಲವೆಡೆ ಪ್ರತಿಭಟನೆಗಳು ನಡೆದಿತ್ತು. ರಾಜಕೀಯ ತಿರುವುಗಳನ್ನೂ ಪಡೆದುಕೊಂಡಿತ್ತು. ಆ ಬಳಿಕ ಪೊಲೀಸರು ಯಲ್ಲಾಲಿಂಗ ಸಾವಿನ ಸಂಬಂಧ ಕುಟುಂಬಸ್ಥರ ದೂರು ದಾಖಲಿಸಿಕೊಂಡಿದ್ದರು.

ಈ ಪ್ರಕರಣದಲ್ಲಿ, ಈಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿರುವ, ಆಗ ಸಣ್ಣ ನೀರಾವರಿ ಇಲಾಖೆ ಸಚಿವರಾಗಿದ್ದ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕನಕಗಿರಿಯ ಕಾಂಗ್ರೆಸ್ ಶಾಸಕ ಶಿವರಾಜ್ ತಂಗಡಗಿ ಅವರ ಆಪ್ತ ಹನುಮೇಶ್ ನಾಯಕ್ ಅವರ ಹೆಸರು ಪ್ರಮುಖವಾಗಿ ಕೇಳಿ ಬಂದಿತ್ತು.

ಒತ್ತಡ ಹೆಚ್ಚಾಗುತ್ತಿದ್ದಂತೆ ಪೊಲೀಸರು ಹನುಮೇಶ್ ನಾಯಕ್ ಅವರ ಮಗ ಮಹಾಂತೇಶ್ ನಾಯಕ್, ಮನೋಜ್ ಪಾಟೀಲ್, ಬಾಳನಗೌಡ, ಕಾಡ ಮಂಜ, ಯಮನೂರಪ್ಪ, ದುರ್ಗಪ್ಪ, ನಂದೀಶ್, ಪರಶುರಾಮ್ ಎಂಬವರ ವಿರುದ್ದ ಪ್ರಕರಣ ದಾಖಲಿಸಿದ್ದರು.

ಆದರೆ, ಎಫ್‌ಐಆರ್ ದಾಖಲಾಗಿದ್ದರೂ ಆರೋಪಿಗಳ ಬಂಧನ ಆಗಿರಲಿಲ್ಲ. ಆರೋಪಿಗಳನ್ನು ಬಂಧಿಸುವಂತೆ ಆಗಿನ ವಿಪಕ್ಷ ನಾಯಕರಾಗಿದ್ದ ಬಿ.ಎಸ್‌ ಯಡಿಯೂರಪ್ಪ ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿದ್ದರು. ಅಲ್ಲದೆ, ಯಲ್ಲಾಲಿಂಗನ ಸಾವಿನ ಸಂಬಂಧ ವಿಧಾನಮಂಡಲದಲ್ಲೂ ಚರ್ಚೆಯಾಗಿತ್ತು.

ಪ್ರಕರಣದ ಕಾವು ಪಡೆಯುತ್ತಿದ್ದಂತೆ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಇದೇ ಸಂದರ್ಭದಲ್ಲಿ ವಿಪಕ್ಷಗಳ ಒತ್ತಡಕ್ಕೆ ಮಣಿದು ಸಚಿವ ಶಿವರಾಜ್ ತಂಗಡಗಿ ತನ್ನ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು.

ಪ್ರಕರಣದ ತನಿಖೆ ವಹಿಸಿಕೊಂಡ ಸಿಐಡಿ, ಹನುಮೇಶ್ ನಾಯಕ್ ಸೇರಿದಂತೆ 9 ಜನ ಆರೋಪಿತರನ್ನು ಬಂಧಿಸಿತ್ತು. ಇವರು ಜಾಮೀನು ಕೋರಿ ಸುಪ್ರೀಂ ಕೋರ್ಟ್‌ವರೆಗೆ ಹೋದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಜಾಮೀನು ನಿರಾಕರಿಸಲು ಆರೋಪಿಗಳು ಪ್ರಭಾವಿಗಳು ಎಂಬ ಕಾರಣವನ್ನು ನ್ಯಾಯಾಲಯಗಳು ಕೊಟ್ಟಿತ್ತು. ಪರಿಣಾಮ ಸುಮಾರು ಮೂರು ವರ್ಷಗಳ ಕಾಲ ಹನುಮೇಶ್ ನಾಯಕ್ ಸೇರಿದಂತೆ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದರು.

ನಂತರ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಕೊಟ್ಟಿತ್ತು. ಈ ನಡುವೆ ಪ್ರಕರಣವನ್ನು ಸಿಬಿಐ ವಹಿಸುವಂತೆ ಯಲ್ಲಾಲಿಂಗನ ತಾಯಿ ಮನವಿ ಮಾಡಿದ್ದರು. ಆದರೆ, ಯಾವುದೇ ಪ್ರಯೋಜನ ಆಗಿರಲಿಲ್ಲ. ನಂತರ ಸಿಐಡಿ ತನ್ನ ತನಿಖೆ ಮುಗಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ನ್ಯಾಯಾಲಯ ವಿಚಾರಣೆ ನಡೆಸಿ ತೀರ್ಪು ನೀಡಿದೆ.

ಜೆಡಿಎಸ್ ‘ಜಾತ್ಯತೀತ’ ಪದವನ್ನು ಕೈಬಿಟ್ಟು ರಾಜಕಾರಣ ಮಾಡಲಿ: ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...