Homeಕರ್ನಾಟಕವಿದ್ಯಾರ್ಥಿ ಯಲ್ಲಾಲಿಂಗ ಸಾವು ಪ್ರಕರಣ: ಎಲ್ಲ 9 ಆರೋಪಿಗಳು ಖುಲಾಸೆ

ವಿದ್ಯಾರ್ಥಿ ಯಲ್ಲಾಲಿಂಗ ಸಾವು ಪ್ರಕರಣ: ಎಲ್ಲ 9 ಆರೋಪಿಗಳು ಖುಲಾಸೆ

- Advertisement -
- Advertisement -

ದಶಕದ ಹಿಂದೆ (2015ರಲ್ಲಿ) ನಡೆದಿದ್ದ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ಅವರ ಸಾವಿನ ಪ್ರಕರಣದ ತೀರ್ಪನ್ನು ಕೊಪ್ಪಳದ ಜಿಲ್ಲಾ ನ್ಯಾಯಾಲಯ ಶುಕ್ರವಾರ (ಅಕ್ಟೋಬರ್ 3) ಪ್ರಕಟಿಸಿದೆ.

ಸೆಪ್ಟೆಂಬರ್ 24ರಂದು ಅಂತಿಮ ವಿಚಾರಣೆ ನಡೆಸಿ ಕಾಯ್ದರಿಸಿದ್ದ ತೀರ್ಪನ್ನು ನ್ಯಾಯಾಲಯ ಪ್ರಕಟಿಸಿದ್ದು, ಸಚಿವ ಶಿವರಾಜ್ ತಂಗಡಗಿ ಅವರ ಆಪ್ತ ಹನುಮೇಶ್ ನಾಯಕ್ ಸೇರಿದಂತೆ ಪ್ರಕರಣದ ಎಲ್ಲಾ 9 ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಆರೋಪಿಗಳ ಪರ ವಕೀಲರು, “ಒಟ್ಟು 9 ಜನರ ವಿರುದ್ದ ಸಿಐಡಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ನ್ಯಾಯಾಲಯ 76 ಸಾಕ್ಷಿಗಳನ್ನು ವಿಚಾರಣೆ ನಡೆಸಿತ್ತು. ಈ ಪೈಕಿ 56 ಜನರು ಪ್ರಾಸಿಕ್ಯೂಷನ್ ಪರವಾಗಿ ಸಾಕ್ಷ್ಯ ನುಡಿದಿಲ್ಲ ಎಂಬುವುದನ್ನು ನ್ಯಾಯಾಲಯ ಪರಿಗಣಿಸಿದೆ ಎಂದಿದ್ದಾರೆ.

ಮುಂದುವರಿದು, ಯಲ್ಲಾಲಿಂಗ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಅಣ್ಣ ವೀರಭದ್ರಪ್ಪ ಅವರು ಪೊಲೀಸರ ಮುಂದೆ ಕೊಟ್ಟಿರುವ ಲಿಖಿತ ಹೇಳಿಕೆ ಮತ್ತು ಯಲ್ಲಾಲಿಂಗನ ಮೃತದೇಹದ ಮೇಲಿನ ಗಾಯಗಳು ರೈಲು ಡಿಕ್ಕಿಯಿಂದ ಆಗಿರುವ ಸಾಧ್ಯತೆ ಹೆಚ್ಚಿದೆ ಎಂದು ಮರಣೋತ್ತ ಪರೀಕ್ಷೆ ನಡೆಸಿದ ವೈದ್ಯರು ಕೊಟ್ಟಿರುವ ವರದಿಯನ್ನು ನ್ಯಾಯಾಲಯ ಪರಿಗಣನೆಗೆ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಹನುಮೇಶ್ ನಾಯಕ್ ಅವರ ಪಾತ್ರ ಇಲ್ಲ ಎಂಬುವುದು ಗೊತ್ತಿದ್ದರೂ, ಅವರನ್ನು ಸುಖಾಸುಮ್ಮನೆ ಬಂಧಿಸಿ ನ್ಯಾಯಾಂಗ ಬಂಧನದಲ್ಲಿ ಇಡಲಾಗಿತ್ತು. ಇದರ ಹಿಂದೆ ರಾಜಕೀಯ ಷಡ್ಯಂತ್ರ ಇತ್ತು ಎಂದು ಆರೋಪಿಸಿದ್ದಾರೆ.

ಹನುಮೇಶ್ ನಾಯಕ್ ಮಾತನಾಡಿ, “ಶಿವರಾಜ್ ತಂಗಡಗಿ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು ಎಂದು ನನ್ನನ್ನು ಬಂಧಿಸಿದ್ದರು. ಕಳೆದ 10 ವರ್ಷಗಳಿಂದ ನಾವು ಆರೋಪ ಹೊತ್ತಿದ್ದೆವು. ನ್ಯಾಯಾಲಯದ ತೀರ್ಪಿನಿಂದ ನಾವು ನಿರ್ದೋರ್ಷಿಗಳು ಎಂಬುವುದು ಖಚಿತವಾಗಿದೆ. ನಮ್ಮ ಮೇಲಿನ ಆರೋಪ ಸುಳ್ಳಾಗಿತ್ತು. ಇದೀಗ ನ್ಯಾಯಾಲಯದಲ್ಲೂ ಸಾಬೀತಾಗಿದೆ. ನ್ಯಾಯ ದೇವತೆ ನಮಗೆ ನ್ಯಾಯ ದೊರಕಿಸಿ ಕೊಟ್ಟಿದ್ದಾಳೆ” ಎಂದಿದ್ದಾರೆ.

ನ್ಯಾಯಾಲಯದ ತೀರ್ಪಿನ ಕುರಿತು ಟಿವಿ ವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಯಲ್ಲಾಲಿಂಗ ಅವರ ತಾಯಿ, “ನ್ಯಾಯಾಲಯದ ತೀರ್ಪಿನ ಬಗ್ಗೆ ನನಗೆ ಇನ್ನೂ ಯಾವುದೇ ಮಾಹಿತಿ ದೊರೆತಿಲ್ಲ. ನಾನು ಸರ್ಕಾರಿ ವಕೀಲರನ್ನು ಭೇಟಿಯಾಗುತ್ತೇನೆ, ಮುಂದೆ ಏನು ಮಾಡಬೇಕು ಎಂದು ಚರ್ಚೆ ಮಾಡುತ್ತೇನೆ. ನನ್ನ ಮಗನನ್ನು ಕೊಲೆ ಮಾಡಿರುವುದು ಸತ್ಯ, ನನಗೆ ಸುಳ್ಳು ಹೇಳಲು ಬರುವುದಿಲ್ಲ” ಎಂದು ಕಣ್ಣೀರು ಹಾಕಿದ್ದಾರೆ.

ಮುಂದುವರಿದು, “ಹೋರಾಟಗಳಿಂದ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದು ಹೇಳಲಾಗಿತ್ತು. ನಾವು ಸಾಕಷ್ಟು ಹೋರಾಟ ಮಾಡಿದ್ದೇವೆ. ಆದರೆ, ಏನೂ ಪ್ರಯೋಜನ ಆಗಿಲ್ಲ. ದುಡ್ಡಿದ್ದವರು ಏನು ಬೇಕಾದರು ಮಾಡುತ್ತಾರೆ, ನಮ್ಮಂತ ಅಮಾಯಕರು ಏನು ಮಾಡೋದು?” ಎಂದು ನಿರಾಸೆ ವ್ಯಕ್ತಪಡಿಸಿದ್ದಾರೆ.

ನಿಮ್ಮ ಮಗ ವೀರಭದ್ರಪ್ಪ ವ್ಯತಿರಿಕ್ತ ಹೇಳಿಕೆ ಕೊಟ್ಟಿದ್ದಾರಲ್ಲ? ಎಂಬ ಟಿವಿ ವಾಹಿನಿಯವ ಪ್ರಶ್ನೆಗೆ ಉತ್ತರಿಸಿದ ಅವರು, “ಆತನಿಗೆ ಜೀವ ಬೆದರಿಕೆ ಇದೆ. ಅವನಿಗೆ ಏನು ಮಾಡಿದ್ದಾರೆ ಗೊತ್ತಿಲ್ಲ. ಆತನನ್ನೇ ಕೇಳಬೇಕು” ಎಂದಿದ್ದಾರೆ. ಯಾರು ಕೊಲೆ ಮಾಡಿದ್ದಾರೆ ಎನ್ನುವುದು ನಿಮ್ಮ ಆರೋಪ ಎಂದು ಕೇಳಿದಾಗ, “ಹನುಮೇಶ್ ನಾಯಕ್ ಕೊಲೆ ಮಾಡಿದ್ದಾರೆ ಎಂದು ನಾನು ಹೇಳಿದ್ದೆ” ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ: ಗದಗದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಕೊಪ್ಪಳದ ಕನಕಗಿರಿಯ ಹುಲಿಹೈದರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ತನ್ನ ಗ್ರಾಮದ ಅವ್ಯವಸ್ಥೆ ಕುರಿತು ಟಿವಿ ವಾಹಿನಿಯೊಂದರ ಜೊತೆ ಮಾತನಾಡಿದ್ದರು. ಆ ಬಳಿಕ ಅವರಿಗೆ ಬೆದರಿಕೆಗಳು ಬಂದಿತ್ತು ಎಂದು ಹೇಳಲಾಗ್ತಿದೆ. ಇದಾಗಿ ಕೆಲ ದಿನಗಳಲ್ಲಿ, ಅಂದರೆ 2015ರ ಜನವರಿ 11ರಂದು ಅವರ ಶವ ಕೊಪ್ಪಳ ನಗರದ ರೈಲ್ವೆ ನಿಲ್ದಾಣದ ಬಳಿ ಪತ್ತೆಯಾಗಿತ್ತು.

ಆರಂಭದಲ್ಲಿ ಬೆದರಿಕೆ ಅಂಜಿ ಯಲ್ಲಾಲಿಂಗ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಂದುಕೊಳ್ಳಲಾಗಿತ್ತು. ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಯುಡಿಆರ್‌ ದಾಖಲಿಸಿಕೊಂಡಿದ್ದರು. ಆದರೆ, ನಂತರ ಕುಟುಂಬಸ್ಥರು ಯಲ್ಲಾಲಿಂಗ ಸಾವಿನ ಕುರಿತು ಧ್ವನಿ ಎತ್ತಿದ್ದರು. ಯಲ್ಲಾಲಿಂಗ ತನಗೆ ಬೆದರಿಕೆ ಇದೆ ಎಂದು ಚೀಟಿಯಲ್ಲಿ ಕೆಲವರ ಹೆಸರು ಬರೆದಿಟ್ಟಿದ್ದರು ಎಂದು ಹೇಳಿದ್ದರು. ಯಲ್ಲಾಲಿಂಗನ ಕೊಲೆಯಾಗಿದೆ ಎಂದು ಆರೋಪಿಸಿದ್ದರು.

ನಂತರ ಈ ಪ್ರಕರಣ ದೇಶದಾದ್ಯಂತ ಸುದ್ದಿಯಾಗಿತ್ತು. ಹಲವೆಡೆ ಪ್ರತಿಭಟನೆಗಳು ನಡೆದಿತ್ತು. ರಾಜಕೀಯ ತಿರುವುಗಳನ್ನೂ ಪಡೆದುಕೊಂಡಿತ್ತು. ಆ ಬಳಿಕ ಪೊಲೀಸರು ಯಲ್ಲಾಲಿಂಗ ಸಾವಿನ ಸಂಬಂಧ ಕುಟುಂಬಸ್ಥರ ದೂರು ದಾಖಲಿಸಿಕೊಂಡಿದ್ದರು.

ಈ ಪ್ರಕರಣದಲ್ಲಿ, ಈಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿರುವ, ಆಗ ಸಣ್ಣ ನೀರಾವರಿ ಇಲಾಖೆ ಸಚಿವರಾಗಿದ್ದ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕನಕಗಿರಿಯ ಕಾಂಗ್ರೆಸ್ ಶಾಸಕ ಶಿವರಾಜ್ ತಂಗಡಗಿ ಅವರ ಆಪ್ತ ಹನುಮೇಶ್ ನಾಯಕ್ ಅವರ ಹೆಸರು ಪ್ರಮುಖವಾಗಿ ಕೇಳಿ ಬಂದಿತ್ತು.

ಒತ್ತಡ ಹೆಚ್ಚಾಗುತ್ತಿದ್ದಂತೆ ಪೊಲೀಸರು ಹನುಮೇಶ್ ನಾಯಕ್ ಅವರ ಮಗ ಮಹಾಂತೇಶ್ ನಾಯಕ್, ಮನೋಜ್ ಪಾಟೀಲ್, ಬಾಳನಗೌಡ, ಕಾಡ ಮಂಜ, ಯಮನೂರಪ್ಪ, ದುರ್ಗಪ್ಪ, ನಂದೀಶ್, ಪರಶುರಾಮ್ ಎಂಬವರ ವಿರುದ್ದ ಪ್ರಕರಣ ದಾಖಲಿಸಿದ್ದರು.

ಆದರೆ, ಎಫ್‌ಐಆರ್ ದಾಖಲಾಗಿದ್ದರೂ ಆರೋಪಿಗಳ ಬಂಧನ ಆಗಿರಲಿಲ್ಲ. ಆರೋಪಿಗಳನ್ನು ಬಂಧಿಸುವಂತೆ ಆಗಿನ ವಿಪಕ್ಷ ನಾಯಕರಾಗಿದ್ದ ಬಿ.ಎಸ್‌ ಯಡಿಯೂರಪ್ಪ ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿದ್ದರು. ಅಲ್ಲದೆ, ಯಲ್ಲಾಲಿಂಗನ ಸಾವಿನ ಸಂಬಂಧ ವಿಧಾನಮಂಡಲದಲ್ಲೂ ಚರ್ಚೆಯಾಗಿತ್ತು.

ಪ್ರಕರಣದ ಕಾವು ಪಡೆಯುತ್ತಿದ್ದಂತೆ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಇದೇ ಸಂದರ್ಭದಲ್ಲಿ ವಿಪಕ್ಷಗಳ ಒತ್ತಡಕ್ಕೆ ಮಣಿದು ಸಚಿವ ಶಿವರಾಜ್ ತಂಗಡಗಿ ತನ್ನ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು.

ಪ್ರಕರಣದ ತನಿಖೆ ವಹಿಸಿಕೊಂಡ ಸಿಐಡಿ, ಹನುಮೇಶ್ ನಾಯಕ್ ಸೇರಿದಂತೆ 9 ಜನ ಆರೋಪಿತರನ್ನು ಬಂಧಿಸಿತ್ತು. ಇವರು ಜಾಮೀನು ಕೋರಿ ಸುಪ್ರೀಂ ಕೋರ್ಟ್‌ವರೆಗೆ ಹೋದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಜಾಮೀನು ನಿರಾಕರಿಸಲು ಆರೋಪಿಗಳು ಪ್ರಭಾವಿಗಳು ಎಂಬ ಕಾರಣವನ್ನು ನ್ಯಾಯಾಲಯಗಳು ಕೊಟ್ಟಿತ್ತು. ಪರಿಣಾಮ ಸುಮಾರು ಮೂರು ವರ್ಷಗಳ ಕಾಲ ಹನುಮೇಶ್ ನಾಯಕ್ ಸೇರಿದಂತೆ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದರು.

ನಂತರ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಕೊಟ್ಟಿತ್ತು. ಈ ನಡುವೆ ಪ್ರಕರಣವನ್ನು ಸಿಬಿಐ ವಹಿಸುವಂತೆ ಯಲ್ಲಾಲಿಂಗನ ತಾಯಿ ಮನವಿ ಮಾಡಿದ್ದರು. ಆದರೆ, ಯಾವುದೇ ಪ್ರಯೋಜನ ಆಗಿರಲಿಲ್ಲ. ನಂತರ ಸಿಐಡಿ ತನ್ನ ತನಿಖೆ ಮುಗಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ನ್ಯಾಯಾಲಯ ವಿಚಾರಣೆ ನಡೆಸಿ ತೀರ್ಪು ನೀಡಿದೆ.

ಜೆಡಿಎಸ್ ‘ಜಾತ್ಯತೀತ’ ಪದವನ್ನು ಕೈಬಿಟ್ಟು ರಾಜಕಾರಣ ಮಾಡಲಿ: ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...