Homeಕರ್ನಾಟಕJNU, ಜಾಮಿಯ ಮಾದರಿಯಲ್ಲಿ ದಾಳಿ ಎದುರಿಸಬೇಕಾಗುತ್ತದೆ; ಬಿಜೆಪಿಗರ ಬೆದರಿಕೆಗೆ ಸೊಪ್ಪು ಹಾಕದ ವಿದ್ಯಾರ್ಥಿಗಳು

JNU, ಜಾಮಿಯ ಮಾದರಿಯಲ್ಲಿ ದಾಳಿ ಎದುರಿಸಬೇಕಾಗುತ್ತದೆ; ಬಿಜೆಪಿಗರ ಬೆದರಿಕೆಗೆ ಸೊಪ್ಪು ಹಾಕದ ವಿದ್ಯಾರ್ಥಿಗಳು

- Advertisement -
- Advertisement -

ಬೆಂಗಳೂರಿನ ಕೋರಮಂಗಲದ ಜ್ಯೋತಿ ನಿವಾಸ್ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಕಾಲೇಜಿನ ಮುಂದೆ ಇಂಡಿಯಾ ಸಪೋರ್ಟ್‌ ಸಿಎಎ ಎಂದು ಬ್ಯಾನರ್‌ ಹಾಕಲು ಬಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರೊಂದಿಗೆ ವಾಗ್ವಾದ ಮಾಡಿ, ಕೊನೆಗೂ ಪೊಲೀಸರ ಸಹಾಯದಿಂದ ಹೊರಹೋಗುವಂತೆ ಮಾಡಿದ ಘಟನೆ ಜರುಗಿದೆ.

ಆದರೆ ಈ ವಾಗ್ವಾದದಲ್ಲಿ ಬಿಜೆಪಿಯ ಕೆಲವರು ನೀವು ಹೀಗೆ ಮಾಡಿದರೆ ನಿಮ್ಮ ಮೇಲೆ JNU, ಜಾಮಿಯ ಮಾದರಿಯಲ್ಲಿ ದಾಳಿ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳನ್ನು ಅಶಿಕ್ಷಿತ ಮತ್ತು ರಾಷ್ಟ್ರ ವಿರೋಧಿಗಳು ಎಂದು ಕರೆದಿದ್ದಲ್ಲದೇ ವಿದ್ಯಾರ್ಥಿಯೊಬ್ಬರ ಪ್ರಕಾರ “ಪಾಕಿಸ್ತಾನಕ್ಕೆ ಹೋಗಿ” ಎಂದೂ ತಮ್ಮ ಹಳೆಯ ಚಾಳಿಯನ್ನು ಮುಂದುವರೆಸಿದ್ದಾರೆ.

ಬಿಜೆಪಿಯ ಹಲವು ಪುರುಷರರನ್ನು ಕೆಲವೇ ವಿದ್ಯಾರ್ಥಿನಿಯರು ತಡೆಗಟ್ಟಿ ವಾದ ಮಾಡಿದ್ದಲ್ಲದೇ ಪೊಲೀಸರನ್ನು ಕರೆಸಿ ಕೊನೆಗೂ ಅವರನ್ನು ಹೊರಹಾಕಲಾಗಿದೆ. ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಹೊರಹೋಗುವಂತೆ ಸೂಚಿಸಿದ್ದಾರೆ.

ನಡೆದಿದ್ದೇನು?

ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಿಜೆಪಿ ಕಾರ್ಯಕರ್ತರ ಗುಂಪೊಂದು ಸಿಎಎ ಪರ ಬ್ಯಾನರ್ ಅನ್ನು ಕಾಲೇಜು ಗೋಡೆಗೆ ಅಂಟಿಸಿದಾಗ ಈ ವಿಷಯ ಭುಗಿಲೆದ್ದಿತು. ಬ್ಯಾನರ್‌ನಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಮತ್ತು ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಅವರ ಚಿತ್ರಗಳಿದ್ದವು. ಕಾಲೇಜಿನ ಗೋಡೆಯ ಮೇಲೆ ಬ್ಯಾನರ್ ಹಾಕಲು ವಿದ್ಯಾರ್ಥಿಗಳ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿತು. ಆಗ ಬಿಜೆಪಿ ಕಾರ್ಯಕರ್ತರು ತಮ್ಮ ಆಕ್ಷೇಪಣೆಗಳನ್ನು ಲೆಕ್ಕಿಸದೆ ವಿದ್ಯಾರ್ಥಿಗಳು ಮತ್ತು ಪಾದಚಾರಿಗಳು ಬ್ಯಾನರ್‌ಗೆ ಸಹಿ ಹಾಕಬೇಕೆಂದು ಒತ್ತಾಯಿಸಿದರು.

ವಿದ್ಯಾರ್ಥಿಗಲು ತಮ್ಮ ಪ್ರತಿರೋಧವನ್ನು ಹೆಚ್ಚು ಮಾಡಿದಾಗ ಒಬ್ಬ ಬಿಜೆಪಿ ವ್ಯಕ್ತಿಯು “ನಿಮಗೆ ಜನರ ಪೌರತ್ವದ ಬಗ್ಗೆ ಕಾಳಜಿಯಿಲ್ಲ, ನಿಮ್ಮ ಬಗ್ಗೆ ಮಾತ್ರ ಕಾಳಜಿ ವಹಿಸುತ್ತೀರಿ … ನೀವು ಭಾರತೀಯರಲ್ಲ” ಎಂದು ಹೇಳಿದ್ದಾರೆ. ಆಗ ವಿದ್ಯಾರ್ಥಿಗಳು ನಮಗೆ ದೇಶದ ಎಲ್ಲಾ ಧರ್ಮದ ಜನರ ಬಗ್ಗೆ ಕಾಳಜಿಯಿದೆ. ಹಾಗಾಗಿಯೇ ಸಿಎಎ ನಮಗೆ ಬೇಡ, ಇಲ್ಲಿಂದ ಹೊರಡಿ ಎಂದಿದ್ದಾರೆ. ನಂತರ ಬಿಜೆಪಿಗರು ನೀವು ಕಾಲೇಜಿನ ಮಾಲೀಕರಲ್ಲ ಮತ್ತು ಮಾಲೀಕರು ಮಾತ್ರ ಗೋಡೆಗೆ ಬ್ಯಾನರ್ ಅಂಟಿಕೊಂಡಿರುವುದನ್ನು ಆಕ್ಷೇಪಿಸಬಹುದು ಎಂದಿದ್ದಾರೆ.

ಆ ಪುರುಷರು ಹುಡುಗಿಯರ ಮೇಲೆ ಭಯಂಕರವಾಗಿ ಕೂಗಾಡಿದ್ದಾರೆ. ಆದರೆ ವಿದ್ಯಾರ್ಥಿನಿಯರು ಹಿಂದೆ ಸರಿಯಲು ನಿರಾಕರಿಸುತ್ತಾರೆ ಮತ್ತು ಬ್ಯಾನರ್ ತೆಗೆಯುವವರೆಗೂ ಬಿಡುವದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ನಿಮಗೆ ಬಿಜೆಪಿಗರಿಗೆ ಸಂವಾದ ಮಾಡಲು ಬರುವುದಿಲ್ಲ ಬರೀ ಕೂಗಾಡುತ್ತೀರಿ ಎಂದು ವಿದ್ಯಾರ್ಥಿನಿಯರು ದಬಾಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಲೇಜಿನ ಉಪನ್ಯಾಸಕರು, ರಸ್ತೆಯಲ್ಲಿ ಸಾಕಷ್ಟು ಜನರು ಸೇರಿದ್ದರಿಂದ ಅದೃಷ್ಟವಶಾತ್ ನಮ್ಮ ವಿದ್ಯಾರ್ಥಿಗಳ ಮೇಲೆ ಯಾವುದೇ ದೊಡ್ಡ ದೈಹಿಕ ಹಲ್ಲೆ ನಡೆದಿಲ್ಲ. ಆದರೆ ವೀಡಿಯೊದಲ್ಲಿ ನೋಡಿದಂತೆ, ನಮ್ಮ ವಿದ್ಯಾರ್ಥಿಗಳ ವಿರುದ್ಧ ಬಿಜೆಪಿ ಕಾರ್ಯಕರ್ತರು ಸಾಕಷ್ಟು ವೈಯಕ್ತಿಕ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಅವರು ನಮ್ಮ ವಿದ್ಯಾರ್ಥಿಗಳನ್ನು ಅಶಿಕ್ಷಿತ ಮತ್ತು ರಾಷ್ಟ್ರ ವಿರೋಧಿ ಎಂದು ಕರೆದರು. ಕೆಲವು ವಿದ್ಯಾರ್ಥಿಗಳು ಮುಸ್ಲಿಮರು ಎಂದು ಗಮನಿಸಿ, ಅವರು ಪಾಕಿಸ್ತಾನಕ್ಕೆ ಹೋಗಬೇಕೆಂದು ಹೇಳಿದ್ದಾರೆ ಇದು ಸರಿಯಲ್ಲ. ನಾವು ಸುರಕ್ಷತಾ ವಿಷಯಗಳ ಬಗ್ಗೆ ಯೋಚಿಸುತ್ತಾ, ನಮ್ಮ ವಿದ್ಯಾರ್ಥಿಗಳನ್ನು ಹೊರಹೋಗುವಂತೆ ಕೇಳಬೇಕಾಗಿತ್ತು ಎಂದಿದ್ದಾರೆ.

ಅಂತಿಮವಾಗಿ ಪೊಲೀಸರು ಬುಧವಾರ ಬಿಜೆಪಿ ಕಾರ್ಯಕರ್ತರನ್ನು ಕಳಿಸಿದರೂ ಸಹ ವಿದ್ಯಾರ್ಥಿ ಸಂಘವು ಅವರ ಸುರಕ್ಷತೆಯ ಬಗ್ಗೆ ಆತಂಕದಲ್ಲಿದೆ ಎಂದು ಪ್ರಾಧ್ಯಾಪಕರು ಹೇಳಿದರು. ಏಕೆಂದರೆ ಇದು ಆಕಸ್ಮಿಕವಾಗಿ ನಡೆದ ಘಟನೆಯಲ್ಲ. ಬದಲಿಗೆ ಬಿಜೆಪಿಗರು ಕೆಲವರನ್ನು ಗುರಿಯಾಗಿಸಿಕೊಂಡು ಅವರಿಂದ ಸಿಎಎ ಪರ ಸಹಿ ಮಾಡಿಸಲು ಮುಂದಾಗಿದ್ದಾರೆ. ಮುಖ್ಯವಾಗಿ ಮುಸ್ಲಿಂ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಂದ. ಹಾಗಾಗಿ ಕಛೇರಿ ಮುಗಿಸಿ ಹೊರಬರುತ್ತಿದ್ದ ನಮ್ಮ ಪಕ್ಕದ ಮನೆಯವರಿಗೂ ಇದೇ ರೀತಿ ಸಹಿ ಹಾಕಲು ಪೀಡಿಸಿದ್ದಾರೆ ಎಂದು ಪ್ರಾಧ್ಯಾಪಕರು ತಿಳಿಸಿದ್ದಾರೆ. ಇಂದು ಕಾಲೇಜು ಆಡಳಿತ ಈ ಕುರಿತು ಹೇಳಿಕೆ ನೀಡುವ ನಿರೀಕ್ಷೆಯಿದೆ.

ಜಯನಗರ ಶಾಸಕಿ ಸೌಮ್ಯ ರೆಡ್ಡಿ, ಅವರ ತಂದೆ ಸ್ಥಳೀಯ ಶಾಸಕ ರಾಮಲಿಂಗ ರೆಡ್ಡಿ ಅವರೊಂದಿಗೆ ಆಗ್ನೇಯ ಡಿಸಿಪಿ ಇಶಾ ಪಂತ್ ಮತ್ತು ಕಾಲೇಜು ಪ್ರಾಂಶುಪಾಲರೊಂದಿಗೆ ಈ ವಿಷಯವನ್ನು ಮಾತಾಡುವುದಾಗಿ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...