Homeಕರ್ನಾಟಕJNU, ಜಾಮಿಯ ಮಾದರಿಯಲ್ಲಿ ದಾಳಿ ಎದುರಿಸಬೇಕಾಗುತ್ತದೆ; ಬಿಜೆಪಿಗರ ಬೆದರಿಕೆಗೆ ಸೊಪ್ಪು ಹಾಕದ ವಿದ್ಯಾರ್ಥಿಗಳು

JNU, ಜಾಮಿಯ ಮಾದರಿಯಲ್ಲಿ ದಾಳಿ ಎದುರಿಸಬೇಕಾಗುತ್ತದೆ; ಬಿಜೆಪಿಗರ ಬೆದರಿಕೆಗೆ ಸೊಪ್ಪು ಹಾಕದ ವಿದ್ಯಾರ್ಥಿಗಳು

- Advertisement -
- Advertisement -

ಬೆಂಗಳೂರಿನ ಕೋರಮಂಗಲದ ಜ್ಯೋತಿ ನಿವಾಸ್ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಕಾಲೇಜಿನ ಮುಂದೆ ಇಂಡಿಯಾ ಸಪೋರ್ಟ್‌ ಸಿಎಎ ಎಂದು ಬ್ಯಾನರ್‌ ಹಾಕಲು ಬಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರೊಂದಿಗೆ ವಾಗ್ವಾದ ಮಾಡಿ, ಕೊನೆಗೂ ಪೊಲೀಸರ ಸಹಾಯದಿಂದ ಹೊರಹೋಗುವಂತೆ ಮಾಡಿದ ಘಟನೆ ಜರುಗಿದೆ.

ಆದರೆ ಈ ವಾಗ್ವಾದದಲ್ಲಿ ಬಿಜೆಪಿಯ ಕೆಲವರು ನೀವು ಹೀಗೆ ಮಾಡಿದರೆ ನಿಮ್ಮ ಮೇಲೆ JNU, ಜಾಮಿಯ ಮಾದರಿಯಲ್ಲಿ ದಾಳಿ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳನ್ನು ಅಶಿಕ್ಷಿತ ಮತ್ತು ರಾಷ್ಟ್ರ ವಿರೋಧಿಗಳು ಎಂದು ಕರೆದಿದ್ದಲ್ಲದೇ ವಿದ್ಯಾರ್ಥಿಯೊಬ್ಬರ ಪ್ರಕಾರ “ಪಾಕಿಸ್ತಾನಕ್ಕೆ ಹೋಗಿ” ಎಂದೂ ತಮ್ಮ ಹಳೆಯ ಚಾಳಿಯನ್ನು ಮುಂದುವರೆಸಿದ್ದಾರೆ.

ಬಿಜೆಪಿಯ ಹಲವು ಪುರುಷರರನ್ನು ಕೆಲವೇ ವಿದ್ಯಾರ್ಥಿನಿಯರು ತಡೆಗಟ್ಟಿ ವಾದ ಮಾಡಿದ್ದಲ್ಲದೇ ಪೊಲೀಸರನ್ನು ಕರೆಸಿ ಕೊನೆಗೂ ಅವರನ್ನು ಹೊರಹಾಕಲಾಗಿದೆ. ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಹೊರಹೋಗುವಂತೆ ಸೂಚಿಸಿದ್ದಾರೆ.

ನಡೆದಿದ್ದೇನು?

ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಿಜೆಪಿ ಕಾರ್ಯಕರ್ತರ ಗುಂಪೊಂದು ಸಿಎಎ ಪರ ಬ್ಯಾನರ್ ಅನ್ನು ಕಾಲೇಜು ಗೋಡೆಗೆ ಅಂಟಿಸಿದಾಗ ಈ ವಿಷಯ ಭುಗಿಲೆದ್ದಿತು. ಬ್ಯಾನರ್‌ನಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಮತ್ತು ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಅವರ ಚಿತ್ರಗಳಿದ್ದವು. ಕಾಲೇಜಿನ ಗೋಡೆಯ ಮೇಲೆ ಬ್ಯಾನರ್ ಹಾಕಲು ವಿದ್ಯಾರ್ಥಿಗಳ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿತು. ಆಗ ಬಿಜೆಪಿ ಕಾರ್ಯಕರ್ತರು ತಮ್ಮ ಆಕ್ಷೇಪಣೆಗಳನ್ನು ಲೆಕ್ಕಿಸದೆ ವಿದ್ಯಾರ್ಥಿಗಳು ಮತ್ತು ಪಾದಚಾರಿಗಳು ಬ್ಯಾನರ್‌ಗೆ ಸಹಿ ಹಾಕಬೇಕೆಂದು ಒತ್ತಾಯಿಸಿದರು.

ವಿದ್ಯಾರ್ಥಿಗಲು ತಮ್ಮ ಪ್ರತಿರೋಧವನ್ನು ಹೆಚ್ಚು ಮಾಡಿದಾಗ ಒಬ್ಬ ಬಿಜೆಪಿ ವ್ಯಕ್ತಿಯು “ನಿಮಗೆ ಜನರ ಪೌರತ್ವದ ಬಗ್ಗೆ ಕಾಳಜಿಯಿಲ್ಲ, ನಿಮ್ಮ ಬಗ್ಗೆ ಮಾತ್ರ ಕಾಳಜಿ ವಹಿಸುತ್ತೀರಿ … ನೀವು ಭಾರತೀಯರಲ್ಲ” ಎಂದು ಹೇಳಿದ್ದಾರೆ. ಆಗ ವಿದ್ಯಾರ್ಥಿಗಳು ನಮಗೆ ದೇಶದ ಎಲ್ಲಾ ಧರ್ಮದ ಜನರ ಬಗ್ಗೆ ಕಾಳಜಿಯಿದೆ. ಹಾಗಾಗಿಯೇ ಸಿಎಎ ನಮಗೆ ಬೇಡ, ಇಲ್ಲಿಂದ ಹೊರಡಿ ಎಂದಿದ್ದಾರೆ. ನಂತರ ಬಿಜೆಪಿಗರು ನೀವು ಕಾಲೇಜಿನ ಮಾಲೀಕರಲ್ಲ ಮತ್ತು ಮಾಲೀಕರು ಮಾತ್ರ ಗೋಡೆಗೆ ಬ್ಯಾನರ್ ಅಂಟಿಕೊಂಡಿರುವುದನ್ನು ಆಕ್ಷೇಪಿಸಬಹುದು ಎಂದಿದ್ದಾರೆ.

ಆ ಪುರುಷರು ಹುಡುಗಿಯರ ಮೇಲೆ ಭಯಂಕರವಾಗಿ ಕೂಗಾಡಿದ್ದಾರೆ. ಆದರೆ ವಿದ್ಯಾರ್ಥಿನಿಯರು ಹಿಂದೆ ಸರಿಯಲು ನಿರಾಕರಿಸುತ್ತಾರೆ ಮತ್ತು ಬ್ಯಾನರ್ ತೆಗೆಯುವವರೆಗೂ ಬಿಡುವದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ನಿಮಗೆ ಬಿಜೆಪಿಗರಿಗೆ ಸಂವಾದ ಮಾಡಲು ಬರುವುದಿಲ್ಲ ಬರೀ ಕೂಗಾಡುತ್ತೀರಿ ಎಂದು ವಿದ್ಯಾರ್ಥಿನಿಯರು ದಬಾಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಲೇಜಿನ ಉಪನ್ಯಾಸಕರು, ರಸ್ತೆಯಲ್ಲಿ ಸಾಕಷ್ಟು ಜನರು ಸೇರಿದ್ದರಿಂದ ಅದೃಷ್ಟವಶಾತ್ ನಮ್ಮ ವಿದ್ಯಾರ್ಥಿಗಳ ಮೇಲೆ ಯಾವುದೇ ದೊಡ್ಡ ದೈಹಿಕ ಹಲ್ಲೆ ನಡೆದಿಲ್ಲ. ಆದರೆ ವೀಡಿಯೊದಲ್ಲಿ ನೋಡಿದಂತೆ, ನಮ್ಮ ವಿದ್ಯಾರ್ಥಿಗಳ ವಿರುದ್ಧ ಬಿಜೆಪಿ ಕಾರ್ಯಕರ್ತರು ಸಾಕಷ್ಟು ವೈಯಕ್ತಿಕ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಅವರು ನಮ್ಮ ವಿದ್ಯಾರ್ಥಿಗಳನ್ನು ಅಶಿಕ್ಷಿತ ಮತ್ತು ರಾಷ್ಟ್ರ ವಿರೋಧಿ ಎಂದು ಕರೆದರು. ಕೆಲವು ವಿದ್ಯಾರ್ಥಿಗಳು ಮುಸ್ಲಿಮರು ಎಂದು ಗಮನಿಸಿ, ಅವರು ಪಾಕಿಸ್ತಾನಕ್ಕೆ ಹೋಗಬೇಕೆಂದು ಹೇಳಿದ್ದಾರೆ ಇದು ಸರಿಯಲ್ಲ. ನಾವು ಸುರಕ್ಷತಾ ವಿಷಯಗಳ ಬಗ್ಗೆ ಯೋಚಿಸುತ್ತಾ, ನಮ್ಮ ವಿದ್ಯಾರ್ಥಿಗಳನ್ನು ಹೊರಹೋಗುವಂತೆ ಕೇಳಬೇಕಾಗಿತ್ತು ಎಂದಿದ್ದಾರೆ.

ಅಂತಿಮವಾಗಿ ಪೊಲೀಸರು ಬುಧವಾರ ಬಿಜೆಪಿ ಕಾರ್ಯಕರ್ತರನ್ನು ಕಳಿಸಿದರೂ ಸಹ ವಿದ್ಯಾರ್ಥಿ ಸಂಘವು ಅವರ ಸುರಕ್ಷತೆಯ ಬಗ್ಗೆ ಆತಂಕದಲ್ಲಿದೆ ಎಂದು ಪ್ರಾಧ್ಯಾಪಕರು ಹೇಳಿದರು. ಏಕೆಂದರೆ ಇದು ಆಕಸ್ಮಿಕವಾಗಿ ನಡೆದ ಘಟನೆಯಲ್ಲ. ಬದಲಿಗೆ ಬಿಜೆಪಿಗರು ಕೆಲವರನ್ನು ಗುರಿಯಾಗಿಸಿಕೊಂಡು ಅವರಿಂದ ಸಿಎಎ ಪರ ಸಹಿ ಮಾಡಿಸಲು ಮುಂದಾಗಿದ್ದಾರೆ. ಮುಖ್ಯವಾಗಿ ಮುಸ್ಲಿಂ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಂದ. ಹಾಗಾಗಿ ಕಛೇರಿ ಮುಗಿಸಿ ಹೊರಬರುತ್ತಿದ್ದ ನಮ್ಮ ಪಕ್ಕದ ಮನೆಯವರಿಗೂ ಇದೇ ರೀತಿ ಸಹಿ ಹಾಕಲು ಪೀಡಿಸಿದ್ದಾರೆ ಎಂದು ಪ್ರಾಧ್ಯಾಪಕರು ತಿಳಿಸಿದ್ದಾರೆ. ಇಂದು ಕಾಲೇಜು ಆಡಳಿತ ಈ ಕುರಿತು ಹೇಳಿಕೆ ನೀಡುವ ನಿರೀಕ್ಷೆಯಿದೆ.

ಜಯನಗರ ಶಾಸಕಿ ಸೌಮ್ಯ ರೆಡ್ಡಿ, ಅವರ ತಂದೆ ಸ್ಥಳೀಯ ಶಾಸಕ ರಾಮಲಿಂಗ ರೆಡ್ಡಿ ಅವರೊಂದಿಗೆ ಆಗ್ನೇಯ ಡಿಸಿಪಿ ಇಶಾ ಪಂತ್ ಮತ್ತು ಕಾಲೇಜು ಪ್ರಾಂಶುಪಾಲರೊಂದಿಗೆ ಈ ವಿಷಯವನ್ನು ಮಾತಾಡುವುದಾಗಿ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...