Homeಕರ್ನಾಟಕJNU, ಜಾಮಿಯ ಮಾದರಿಯಲ್ಲಿ ದಾಳಿ ಎದುರಿಸಬೇಕಾಗುತ್ತದೆ; ಬಿಜೆಪಿಗರ ಬೆದರಿಕೆಗೆ ಸೊಪ್ಪು ಹಾಕದ ವಿದ್ಯಾರ್ಥಿಗಳು

JNU, ಜಾಮಿಯ ಮಾದರಿಯಲ್ಲಿ ದಾಳಿ ಎದುರಿಸಬೇಕಾಗುತ್ತದೆ; ಬಿಜೆಪಿಗರ ಬೆದರಿಕೆಗೆ ಸೊಪ್ಪು ಹಾಕದ ವಿದ್ಯಾರ್ಥಿಗಳು

- Advertisement -
- Advertisement -

ಬೆಂಗಳೂರಿನ ಕೋರಮಂಗಲದ ಜ್ಯೋತಿ ನಿವಾಸ್ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಕಾಲೇಜಿನ ಮುಂದೆ ಇಂಡಿಯಾ ಸಪೋರ್ಟ್‌ ಸಿಎಎ ಎಂದು ಬ್ಯಾನರ್‌ ಹಾಕಲು ಬಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರೊಂದಿಗೆ ವಾಗ್ವಾದ ಮಾಡಿ, ಕೊನೆಗೂ ಪೊಲೀಸರ ಸಹಾಯದಿಂದ ಹೊರಹೋಗುವಂತೆ ಮಾಡಿದ ಘಟನೆ ಜರುಗಿದೆ.

ಆದರೆ ಈ ವಾಗ್ವಾದದಲ್ಲಿ ಬಿಜೆಪಿಯ ಕೆಲವರು ನೀವು ಹೀಗೆ ಮಾಡಿದರೆ ನಿಮ್ಮ ಮೇಲೆ JNU, ಜಾಮಿಯ ಮಾದರಿಯಲ್ಲಿ ದಾಳಿ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳನ್ನು ಅಶಿಕ್ಷಿತ ಮತ್ತು ರಾಷ್ಟ್ರ ವಿರೋಧಿಗಳು ಎಂದು ಕರೆದಿದ್ದಲ್ಲದೇ ವಿದ್ಯಾರ್ಥಿಯೊಬ್ಬರ ಪ್ರಕಾರ “ಪಾಕಿಸ್ತಾನಕ್ಕೆ ಹೋಗಿ” ಎಂದೂ ತಮ್ಮ ಹಳೆಯ ಚಾಳಿಯನ್ನು ಮುಂದುವರೆಸಿದ್ದಾರೆ.

ಬಿಜೆಪಿಯ ಹಲವು ಪುರುಷರರನ್ನು ಕೆಲವೇ ವಿದ್ಯಾರ್ಥಿನಿಯರು ತಡೆಗಟ್ಟಿ ವಾದ ಮಾಡಿದ್ದಲ್ಲದೇ ಪೊಲೀಸರನ್ನು ಕರೆಸಿ ಕೊನೆಗೂ ಅವರನ್ನು ಹೊರಹಾಕಲಾಗಿದೆ. ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಹೊರಹೋಗುವಂತೆ ಸೂಚಿಸಿದ್ದಾರೆ.

ನಡೆದಿದ್ದೇನು?

ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಿಜೆಪಿ ಕಾರ್ಯಕರ್ತರ ಗುಂಪೊಂದು ಸಿಎಎ ಪರ ಬ್ಯಾನರ್ ಅನ್ನು ಕಾಲೇಜು ಗೋಡೆಗೆ ಅಂಟಿಸಿದಾಗ ಈ ವಿಷಯ ಭುಗಿಲೆದ್ದಿತು. ಬ್ಯಾನರ್‌ನಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಮತ್ತು ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಅವರ ಚಿತ್ರಗಳಿದ್ದವು. ಕಾಲೇಜಿನ ಗೋಡೆಯ ಮೇಲೆ ಬ್ಯಾನರ್ ಹಾಕಲು ವಿದ್ಯಾರ್ಥಿಗಳ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿತು. ಆಗ ಬಿಜೆಪಿ ಕಾರ್ಯಕರ್ತರು ತಮ್ಮ ಆಕ್ಷೇಪಣೆಗಳನ್ನು ಲೆಕ್ಕಿಸದೆ ವಿದ್ಯಾರ್ಥಿಗಳು ಮತ್ತು ಪಾದಚಾರಿಗಳು ಬ್ಯಾನರ್‌ಗೆ ಸಹಿ ಹಾಕಬೇಕೆಂದು ಒತ್ತಾಯಿಸಿದರು.

ವಿದ್ಯಾರ್ಥಿಗಲು ತಮ್ಮ ಪ್ರತಿರೋಧವನ್ನು ಹೆಚ್ಚು ಮಾಡಿದಾಗ ಒಬ್ಬ ಬಿಜೆಪಿ ವ್ಯಕ್ತಿಯು “ನಿಮಗೆ ಜನರ ಪೌರತ್ವದ ಬಗ್ಗೆ ಕಾಳಜಿಯಿಲ್ಲ, ನಿಮ್ಮ ಬಗ್ಗೆ ಮಾತ್ರ ಕಾಳಜಿ ವಹಿಸುತ್ತೀರಿ … ನೀವು ಭಾರತೀಯರಲ್ಲ” ಎಂದು ಹೇಳಿದ್ದಾರೆ. ಆಗ ವಿದ್ಯಾರ್ಥಿಗಳು ನಮಗೆ ದೇಶದ ಎಲ್ಲಾ ಧರ್ಮದ ಜನರ ಬಗ್ಗೆ ಕಾಳಜಿಯಿದೆ. ಹಾಗಾಗಿಯೇ ಸಿಎಎ ನಮಗೆ ಬೇಡ, ಇಲ್ಲಿಂದ ಹೊರಡಿ ಎಂದಿದ್ದಾರೆ. ನಂತರ ಬಿಜೆಪಿಗರು ನೀವು ಕಾಲೇಜಿನ ಮಾಲೀಕರಲ್ಲ ಮತ್ತು ಮಾಲೀಕರು ಮಾತ್ರ ಗೋಡೆಗೆ ಬ್ಯಾನರ್ ಅಂಟಿಕೊಂಡಿರುವುದನ್ನು ಆಕ್ಷೇಪಿಸಬಹುದು ಎಂದಿದ್ದಾರೆ.

ಆ ಪುರುಷರು ಹುಡುಗಿಯರ ಮೇಲೆ ಭಯಂಕರವಾಗಿ ಕೂಗಾಡಿದ್ದಾರೆ. ಆದರೆ ವಿದ್ಯಾರ್ಥಿನಿಯರು ಹಿಂದೆ ಸರಿಯಲು ನಿರಾಕರಿಸುತ್ತಾರೆ ಮತ್ತು ಬ್ಯಾನರ್ ತೆಗೆಯುವವರೆಗೂ ಬಿಡುವದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ನಿಮಗೆ ಬಿಜೆಪಿಗರಿಗೆ ಸಂವಾದ ಮಾಡಲು ಬರುವುದಿಲ್ಲ ಬರೀ ಕೂಗಾಡುತ್ತೀರಿ ಎಂದು ವಿದ್ಯಾರ್ಥಿನಿಯರು ದಬಾಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಲೇಜಿನ ಉಪನ್ಯಾಸಕರು, ರಸ್ತೆಯಲ್ಲಿ ಸಾಕಷ್ಟು ಜನರು ಸೇರಿದ್ದರಿಂದ ಅದೃಷ್ಟವಶಾತ್ ನಮ್ಮ ವಿದ್ಯಾರ್ಥಿಗಳ ಮೇಲೆ ಯಾವುದೇ ದೊಡ್ಡ ದೈಹಿಕ ಹಲ್ಲೆ ನಡೆದಿಲ್ಲ. ಆದರೆ ವೀಡಿಯೊದಲ್ಲಿ ನೋಡಿದಂತೆ, ನಮ್ಮ ವಿದ್ಯಾರ್ಥಿಗಳ ವಿರುದ್ಧ ಬಿಜೆಪಿ ಕಾರ್ಯಕರ್ತರು ಸಾಕಷ್ಟು ವೈಯಕ್ತಿಕ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಅವರು ನಮ್ಮ ವಿದ್ಯಾರ್ಥಿಗಳನ್ನು ಅಶಿಕ್ಷಿತ ಮತ್ತು ರಾಷ್ಟ್ರ ವಿರೋಧಿ ಎಂದು ಕರೆದರು. ಕೆಲವು ವಿದ್ಯಾರ್ಥಿಗಳು ಮುಸ್ಲಿಮರು ಎಂದು ಗಮನಿಸಿ, ಅವರು ಪಾಕಿಸ್ತಾನಕ್ಕೆ ಹೋಗಬೇಕೆಂದು ಹೇಳಿದ್ದಾರೆ ಇದು ಸರಿಯಲ್ಲ. ನಾವು ಸುರಕ್ಷತಾ ವಿಷಯಗಳ ಬಗ್ಗೆ ಯೋಚಿಸುತ್ತಾ, ನಮ್ಮ ವಿದ್ಯಾರ್ಥಿಗಳನ್ನು ಹೊರಹೋಗುವಂತೆ ಕೇಳಬೇಕಾಗಿತ್ತು ಎಂದಿದ್ದಾರೆ.

ಅಂತಿಮವಾಗಿ ಪೊಲೀಸರು ಬುಧವಾರ ಬಿಜೆಪಿ ಕಾರ್ಯಕರ್ತರನ್ನು ಕಳಿಸಿದರೂ ಸಹ ವಿದ್ಯಾರ್ಥಿ ಸಂಘವು ಅವರ ಸುರಕ್ಷತೆಯ ಬಗ್ಗೆ ಆತಂಕದಲ್ಲಿದೆ ಎಂದು ಪ್ರಾಧ್ಯಾಪಕರು ಹೇಳಿದರು. ಏಕೆಂದರೆ ಇದು ಆಕಸ್ಮಿಕವಾಗಿ ನಡೆದ ಘಟನೆಯಲ್ಲ. ಬದಲಿಗೆ ಬಿಜೆಪಿಗರು ಕೆಲವರನ್ನು ಗುರಿಯಾಗಿಸಿಕೊಂಡು ಅವರಿಂದ ಸಿಎಎ ಪರ ಸಹಿ ಮಾಡಿಸಲು ಮುಂದಾಗಿದ್ದಾರೆ. ಮುಖ್ಯವಾಗಿ ಮುಸ್ಲಿಂ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಂದ. ಹಾಗಾಗಿ ಕಛೇರಿ ಮುಗಿಸಿ ಹೊರಬರುತ್ತಿದ್ದ ನಮ್ಮ ಪಕ್ಕದ ಮನೆಯವರಿಗೂ ಇದೇ ರೀತಿ ಸಹಿ ಹಾಕಲು ಪೀಡಿಸಿದ್ದಾರೆ ಎಂದು ಪ್ರಾಧ್ಯಾಪಕರು ತಿಳಿಸಿದ್ದಾರೆ. ಇಂದು ಕಾಲೇಜು ಆಡಳಿತ ಈ ಕುರಿತು ಹೇಳಿಕೆ ನೀಡುವ ನಿರೀಕ್ಷೆಯಿದೆ.

ಜಯನಗರ ಶಾಸಕಿ ಸೌಮ್ಯ ರೆಡ್ಡಿ, ಅವರ ತಂದೆ ಸ್ಥಳೀಯ ಶಾಸಕ ರಾಮಲಿಂಗ ರೆಡ್ಡಿ ಅವರೊಂದಿಗೆ ಆಗ್ನೇಯ ಡಿಸಿಪಿ ಇಶಾ ಪಂತ್ ಮತ್ತು ಕಾಲೇಜು ಪ್ರಾಂಶುಪಾಲರೊಂದಿಗೆ ಈ ವಿಷಯವನ್ನು ಮಾತಾಡುವುದಾಗಿ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...