Homeಕರ್ನಾಟಕJNU, ಜಾಮಿಯ ಮಾದರಿಯಲ್ಲಿ ದಾಳಿ ಎದುರಿಸಬೇಕಾಗುತ್ತದೆ; ಬಿಜೆಪಿಗರ ಬೆದರಿಕೆಗೆ ಸೊಪ್ಪು ಹಾಕದ ವಿದ್ಯಾರ್ಥಿಗಳು

JNU, ಜಾಮಿಯ ಮಾದರಿಯಲ್ಲಿ ದಾಳಿ ಎದುರಿಸಬೇಕಾಗುತ್ತದೆ; ಬಿಜೆಪಿಗರ ಬೆದರಿಕೆಗೆ ಸೊಪ್ಪು ಹಾಕದ ವಿದ್ಯಾರ್ಥಿಗಳು

- Advertisement -
- Advertisement -

ಬೆಂಗಳೂರಿನ ಕೋರಮಂಗಲದ ಜ್ಯೋತಿ ನಿವಾಸ್ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಕಾಲೇಜಿನ ಮುಂದೆ ಇಂಡಿಯಾ ಸಪೋರ್ಟ್‌ ಸಿಎಎ ಎಂದು ಬ್ಯಾನರ್‌ ಹಾಕಲು ಬಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರೊಂದಿಗೆ ವಾಗ್ವಾದ ಮಾಡಿ, ಕೊನೆಗೂ ಪೊಲೀಸರ ಸಹಾಯದಿಂದ ಹೊರಹೋಗುವಂತೆ ಮಾಡಿದ ಘಟನೆ ಜರುಗಿದೆ.

ಆದರೆ ಈ ವಾಗ್ವಾದದಲ್ಲಿ ಬಿಜೆಪಿಯ ಕೆಲವರು ನೀವು ಹೀಗೆ ಮಾಡಿದರೆ ನಿಮ್ಮ ಮೇಲೆ JNU, ಜಾಮಿಯ ಮಾದರಿಯಲ್ಲಿ ದಾಳಿ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳನ್ನು ಅಶಿಕ್ಷಿತ ಮತ್ತು ರಾಷ್ಟ್ರ ವಿರೋಧಿಗಳು ಎಂದು ಕರೆದಿದ್ದಲ್ಲದೇ ವಿದ್ಯಾರ್ಥಿಯೊಬ್ಬರ ಪ್ರಕಾರ “ಪಾಕಿಸ್ತಾನಕ್ಕೆ ಹೋಗಿ” ಎಂದೂ ತಮ್ಮ ಹಳೆಯ ಚಾಳಿಯನ್ನು ಮುಂದುವರೆಸಿದ್ದಾರೆ.

ಬಿಜೆಪಿಯ ಹಲವು ಪುರುಷರರನ್ನು ಕೆಲವೇ ವಿದ್ಯಾರ್ಥಿನಿಯರು ತಡೆಗಟ್ಟಿ ವಾದ ಮಾಡಿದ್ದಲ್ಲದೇ ಪೊಲೀಸರನ್ನು ಕರೆಸಿ ಕೊನೆಗೂ ಅವರನ್ನು ಹೊರಹಾಕಲಾಗಿದೆ. ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಹೊರಹೋಗುವಂತೆ ಸೂಚಿಸಿದ್ದಾರೆ.

ನಡೆದಿದ್ದೇನು?

ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಿಜೆಪಿ ಕಾರ್ಯಕರ್ತರ ಗುಂಪೊಂದು ಸಿಎಎ ಪರ ಬ್ಯಾನರ್ ಅನ್ನು ಕಾಲೇಜು ಗೋಡೆಗೆ ಅಂಟಿಸಿದಾಗ ಈ ವಿಷಯ ಭುಗಿಲೆದ್ದಿತು. ಬ್ಯಾನರ್‌ನಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಮತ್ತು ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಅವರ ಚಿತ್ರಗಳಿದ್ದವು. ಕಾಲೇಜಿನ ಗೋಡೆಯ ಮೇಲೆ ಬ್ಯಾನರ್ ಹಾಕಲು ವಿದ್ಯಾರ್ಥಿಗಳ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿತು. ಆಗ ಬಿಜೆಪಿ ಕಾರ್ಯಕರ್ತರು ತಮ್ಮ ಆಕ್ಷೇಪಣೆಗಳನ್ನು ಲೆಕ್ಕಿಸದೆ ವಿದ್ಯಾರ್ಥಿಗಳು ಮತ್ತು ಪಾದಚಾರಿಗಳು ಬ್ಯಾನರ್‌ಗೆ ಸಹಿ ಹಾಕಬೇಕೆಂದು ಒತ್ತಾಯಿಸಿದರು.

ವಿದ್ಯಾರ್ಥಿಗಲು ತಮ್ಮ ಪ್ರತಿರೋಧವನ್ನು ಹೆಚ್ಚು ಮಾಡಿದಾಗ ಒಬ್ಬ ಬಿಜೆಪಿ ವ್ಯಕ್ತಿಯು “ನಿಮಗೆ ಜನರ ಪೌರತ್ವದ ಬಗ್ಗೆ ಕಾಳಜಿಯಿಲ್ಲ, ನಿಮ್ಮ ಬಗ್ಗೆ ಮಾತ್ರ ಕಾಳಜಿ ವಹಿಸುತ್ತೀರಿ … ನೀವು ಭಾರತೀಯರಲ್ಲ” ಎಂದು ಹೇಳಿದ್ದಾರೆ. ಆಗ ವಿದ್ಯಾರ್ಥಿಗಳು ನಮಗೆ ದೇಶದ ಎಲ್ಲಾ ಧರ್ಮದ ಜನರ ಬಗ್ಗೆ ಕಾಳಜಿಯಿದೆ. ಹಾಗಾಗಿಯೇ ಸಿಎಎ ನಮಗೆ ಬೇಡ, ಇಲ್ಲಿಂದ ಹೊರಡಿ ಎಂದಿದ್ದಾರೆ. ನಂತರ ಬಿಜೆಪಿಗರು ನೀವು ಕಾಲೇಜಿನ ಮಾಲೀಕರಲ್ಲ ಮತ್ತು ಮಾಲೀಕರು ಮಾತ್ರ ಗೋಡೆಗೆ ಬ್ಯಾನರ್ ಅಂಟಿಕೊಂಡಿರುವುದನ್ನು ಆಕ್ಷೇಪಿಸಬಹುದು ಎಂದಿದ್ದಾರೆ.

ಆ ಪುರುಷರು ಹುಡುಗಿಯರ ಮೇಲೆ ಭಯಂಕರವಾಗಿ ಕೂಗಾಡಿದ್ದಾರೆ. ಆದರೆ ವಿದ್ಯಾರ್ಥಿನಿಯರು ಹಿಂದೆ ಸರಿಯಲು ನಿರಾಕರಿಸುತ್ತಾರೆ ಮತ್ತು ಬ್ಯಾನರ್ ತೆಗೆಯುವವರೆಗೂ ಬಿಡುವದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ನಿಮಗೆ ಬಿಜೆಪಿಗರಿಗೆ ಸಂವಾದ ಮಾಡಲು ಬರುವುದಿಲ್ಲ ಬರೀ ಕೂಗಾಡುತ್ತೀರಿ ಎಂದು ವಿದ್ಯಾರ್ಥಿನಿಯರು ದಬಾಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಲೇಜಿನ ಉಪನ್ಯಾಸಕರು, ರಸ್ತೆಯಲ್ಲಿ ಸಾಕಷ್ಟು ಜನರು ಸೇರಿದ್ದರಿಂದ ಅದೃಷ್ಟವಶಾತ್ ನಮ್ಮ ವಿದ್ಯಾರ್ಥಿಗಳ ಮೇಲೆ ಯಾವುದೇ ದೊಡ್ಡ ದೈಹಿಕ ಹಲ್ಲೆ ನಡೆದಿಲ್ಲ. ಆದರೆ ವೀಡಿಯೊದಲ್ಲಿ ನೋಡಿದಂತೆ, ನಮ್ಮ ವಿದ್ಯಾರ್ಥಿಗಳ ವಿರುದ್ಧ ಬಿಜೆಪಿ ಕಾರ್ಯಕರ್ತರು ಸಾಕಷ್ಟು ವೈಯಕ್ತಿಕ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಅವರು ನಮ್ಮ ವಿದ್ಯಾರ್ಥಿಗಳನ್ನು ಅಶಿಕ್ಷಿತ ಮತ್ತು ರಾಷ್ಟ್ರ ವಿರೋಧಿ ಎಂದು ಕರೆದರು. ಕೆಲವು ವಿದ್ಯಾರ್ಥಿಗಳು ಮುಸ್ಲಿಮರು ಎಂದು ಗಮನಿಸಿ, ಅವರು ಪಾಕಿಸ್ತಾನಕ್ಕೆ ಹೋಗಬೇಕೆಂದು ಹೇಳಿದ್ದಾರೆ ಇದು ಸರಿಯಲ್ಲ. ನಾವು ಸುರಕ್ಷತಾ ವಿಷಯಗಳ ಬಗ್ಗೆ ಯೋಚಿಸುತ್ತಾ, ನಮ್ಮ ವಿದ್ಯಾರ್ಥಿಗಳನ್ನು ಹೊರಹೋಗುವಂತೆ ಕೇಳಬೇಕಾಗಿತ್ತು ಎಂದಿದ್ದಾರೆ.

ಅಂತಿಮವಾಗಿ ಪೊಲೀಸರು ಬುಧವಾರ ಬಿಜೆಪಿ ಕಾರ್ಯಕರ್ತರನ್ನು ಕಳಿಸಿದರೂ ಸಹ ವಿದ್ಯಾರ್ಥಿ ಸಂಘವು ಅವರ ಸುರಕ್ಷತೆಯ ಬಗ್ಗೆ ಆತಂಕದಲ್ಲಿದೆ ಎಂದು ಪ್ರಾಧ್ಯಾಪಕರು ಹೇಳಿದರು. ಏಕೆಂದರೆ ಇದು ಆಕಸ್ಮಿಕವಾಗಿ ನಡೆದ ಘಟನೆಯಲ್ಲ. ಬದಲಿಗೆ ಬಿಜೆಪಿಗರು ಕೆಲವರನ್ನು ಗುರಿಯಾಗಿಸಿಕೊಂಡು ಅವರಿಂದ ಸಿಎಎ ಪರ ಸಹಿ ಮಾಡಿಸಲು ಮುಂದಾಗಿದ್ದಾರೆ. ಮುಖ್ಯವಾಗಿ ಮುಸ್ಲಿಂ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಂದ. ಹಾಗಾಗಿ ಕಛೇರಿ ಮುಗಿಸಿ ಹೊರಬರುತ್ತಿದ್ದ ನಮ್ಮ ಪಕ್ಕದ ಮನೆಯವರಿಗೂ ಇದೇ ರೀತಿ ಸಹಿ ಹಾಕಲು ಪೀಡಿಸಿದ್ದಾರೆ ಎಂದು ಪ್ರಾಧ್ಯಾಪಕರು ತಿಳಿಸಿದ್ದಾರೆ. ಇಂದು ಕಾಲೇಜು ಆಡಳಿತ ಈ ಕುರಿತು ಹೇಳಿಕೆ ನೀಡುವ ನಿರೀಕ್ಷೆಯಿದೆ.

ಜಯನಗರ ಶಾಸಕಿ ಸೌಮ್ಯ ರೆಡ್ಡಿ, ಅವರ ತಂದೆ ಸ್ಥಳೀಯ ಶಾಸಕ ರಾಮಲಿಂಗ ರೆಡ್ಡಿ ಅವರೊಂದಿಗೆ ಆಗ್ನೇಯ ಡಿಸಿಪಿ ಇಶಾ ಪಂತ್ ಮತ್ತು ಕಾಲೇಜು ಪ್ರಾಂಶುಪಾಲರೊಂದಿಗೆ ಈ ವಿಷಯವನ್ನು ಮಾತಾಡುವುದಾಗಿ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...