Homeಕರ್ನಾಟಕJNU, ಜಾಮಿಯ ಮಾದರಿಯಲ್ಲಿ ದಾಳಿ ಎದುರಿಸಬೇಕಾಗುತ್ತದೆ; ಬಿಜೆಪಿಗರ ಬೆದರಿಕೆಗೆ ಸೊಪ್ಪು ಹಾಕದ ವಿದ್ಯಾರ್ಥಿಗಳು

JNU, ಜಾಮಿಯ ಮಾದರಿಯಲ್ಲಿ ದಾಳಿ ಎದುರಿಸಬೇಕಾಗುತ್ತದೆ; ಬಿಜೆಪಿಗರ ಬೆದರಿಕೆಗೆ ಸೊಪ್ಪು ಹಾಕದ ವಿದ್ಯಾರ್ಥಿಗಳು

- Advertisement -
- Advertisement -

ಬೆಂಗಳೂರಿನ ಕೋರಮಂಗಲದ ಜ್ಯೋತಿ ನಿವಾಸ್ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಕಾಲೇಜಿನ ಮುಂದೆ ಇಂಡಿಯಾ ಸಪೋರ್ಟ್‌ ಸಿಎಎ ಎಂದು ಬ್ಯಾನರ್‌ ಹಾಕಲು ಬಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರೊಂದಿಗೆ ವಾಗ್ವಾದ ಮಾಡಿ, ಕೊನೆಗೂ ಪೊಲೀಸರ ಸಹಾಯದಿಂದ ಹೊರಹೋಗುವಂತೆ ಮಾಡಿದ ಘಟನೆ ಜರುಗಿದೆ.

ಆದರೆ ಈ ವಾಗ್ವಾದದಲ್ಲಿ ಬಿಜೆಪಿಯ ಕೆಲವರು ನೀವು ಹೀಗೆ ಮಾಡಿದರೆ ನಿಮ್ಮ ಮೇಲೆ JNU, ಜಾಮಿಯ ಮಾದರಿಯಲ್ಲಿ ದಾಳಿ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳನ್ನು ಅಶಿಕ್ಷಿತ ಮತ್ತು ರಾಷ್ಟ್ರ ವಿರೋಧಿಗಳು ಎಂದು ಕರೆದಿದ್ದಲ್ಲದೇ ವಿದ್ಯಾರ್ಥಿಯೊಬ್ಬರ ಪ್ರಕಾರ “ಪಾಕಿಸ್ತಾನಕ್ಕೆ ಹೋಗಿ” ಎಂದೂ ತಮ್ಮ ಹಳೆಯ ಚಾಳಿಯನ್ನು ಮುಂದುವರೆಸಿದ್ದಾರೆ.

ಬಿಜೆಪಿಯ ಹಲವು ಪುರುಷರರನ್ನು ಕೆಲವೇ ವಿದ್ಯಾರ್ಥಿನಿಯರು ತಡೆಗಟ್ಟಿ ವಾದ ಮಾಡಿದ್ದಲ್ಲದೇ ಪೊಲೀಸರನ್ನು ಕರೆಸಿ ಕೊನೆಗೂ ಅವರನ್ನು ಹೊರಹಾಕಲಾಗಿದೆ. ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಹೊರಹೋಗುವಂತೆ ಸೂಚಿಸಿದ್ದಾರೆ.

ನಡೆದಿದ್ದೇನು?

ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಿಜೆಪಿ ಕಾರ್ಯಕರ್ತರ ಗುಂಪೊಂದು ಸಿಎಎ ಪರ ಬ್ಯಾನರ್ ಅನ್ನು ಕಾಲೇಜು ಗೋಡೆಗೆ ಅಂಟಿಸಿದಾಗ ಈ ವಿಷಯ ಭುಗಿಲೆದ್ದಿತು. ಬ್ಯಾನರ್‌ನಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಮತ್ತು ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಅವರ ಚಿತ್ರಗಳಿದ್ದವು. ಕಾಲೇಜಿನ ಗೋಡೆಯ ಮೇಲೆ ಬ್ಯಾನರ್ ಹಾಕಲು ವಿದ್ಯಾರ್ಥಿಗಳ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿತು. ಆಗ ಬಿಜೆಪಿ ಕಾರ್ಯಕರ್ತರು ತಮ್ಮ ಆಕ್ಷೇಪಣೆಗಳನ್ನು ಲೆಕ್ಕಿಸದೆ ವಿದ್ಯಾರ್ಥಿಗಳು ಮತ್ತು ಪಾದಚಾರಿಗಳು ಬ್ಯಾನರ್‌ಗೆ ಸಹಿ ಹಾಕಬೇಕೆಂದು ಒತ್ತಾಯಿಸಿದರು.

ವಿದ್ಯಾರ್ಥಿಗಲು ತಮ್ಮ ಪ್ರತಿರೋಧವನ್ನು ಹೆಚ್ಚು ಮಾಡಿದಾಗ ಒಬ್ಬ ಬಿಜೆಪಿ ವ್ಯಕ್ತಿಯು “ನಿಮಗೆ ಜನರ ಪೌರತ್ವದ ಬಗ್ಗೆ ಕಾಳಜಿಯಿಲ್ಲ, ನಿಮ್ಮ ಬಗ್ಗೆ ಮಾತ್ರ ಕಾಳಜಿ ವಹಿಸುತ್ತೀರಿ … ನೀವು ಭಾರತೀಯರಲ್ಲ” ಎಂದು ಹೇಳಿದ್ದಾರೆ. ಆಗ ವಿದ್ಯಾರ್ಥಿಗಳು ನಮಗೆ ದೇಶದ ಎಲ್ಲಾ ಧರ್ಮದ ಜನರ ಬಗ್ಗೆ ಕಾಳಜಿಯಿದೆ. ಹಾಗಾಗಿಯೇ ಸಿಎಎ ನಮಗೆ ಬೇಡ, ಇಲ್ಲಿಂದ ಹೊರಡಿ ಎಂದಿದ್ದಾರೆ. ನಂತರ ಬಿಜೆಪಿಗರು ನೀವು ಕಾಲೇಜಿನ ಮಾಲೀಕರಲ್ಲ ಮತ್ತು ಮಾಲೀಕರು ಮಾತ್ರ ಗೋಡೆಗೆ ಬ್ಯಾನರ್ ಅಂಟಿಕೊಂಡಿರುವುದನ್ನು ಆಕ್ಷೇಪಿಸಬಹುದು ಎಂದಿದ್ದಾರೆ.

ಆ ಪುರುಷರು ಹುಡುಗಿಯರ ಮೇಲೆ ಭಯಂಕರವಾಗಿ ಕೂಗಾಡಿದ್ದಾರೆ. ಆದರೆ ವಿದ್ಯಾರ್ಥಿನಿಯರು ಹಿಂದೆ ಸರಿಯಲು ನಿರಾಕರಿಸುತ್ತಾರೆ ಮತ್ತು ಬ್ಯಾನರ್ ತೆಗೆಯುವವರೆಗೂ ಬಿಡುವದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ನಿಮಗೆ ಬಿಜೆಪಿಗರಿಗೆ ಸಂವಾದ ಮಾಡಲು ಬರುವುದಿಲ್ಲ ಬರೀ ಕೂಗಾಡುತ್ತೀರಿ ಎಂದು ವಿದ್ಯಾರ್ಥಿನಿಯರು ದಬಾಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಲೇಜಿನ ಉಪನ್ಯಾಸಕರು, ರಸ್ತೆಯಲ್ಲಿ ಸಾಕಷ್ಟು ಜನರು ಸೇರಿದ್ದರಿಂದ ಅದೃಷ್ಟವಶಾತ್ ನಮ್ಮ ವಿದ್ಯಾರ್ಥಿಗಳ ಮೇಲೆ ಯಾವುದೇ ದೊಡ್ಡ ದೈಹಿಕ ಹಲ್ಲೆ ನಡೆದಿಲ್ಲ. ಆದರೆ ವೀಡಿಯೊದಲ್ಲಿ ನೋಡಿದಂತೆ, ನಮ್ಮ ವಿದ್ಯಾರ್ಥಿಗಳ ವಿರುದ್ಧ ಬಿಜೆಪಿ ಕಾರ್ಯಕರ್ತರು ಸಾಕಷ್ಟು ವೈಯಕ್ತಿಕ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಅವರು ನಮ್ಮ ವಿದ್ಯಾರ್ಥಿಗಳನ್ನು ಅಶಿಕ್ಷಿತ ಮತ್ತು ರಾಷ್ಟ್ರ ವಿರೋಧಿ ಎಂದು ಕರೆದರು. ಕೆಲವು ವಿದ್ಯಾರ್ಥಿಗಳು ಮುಸ್ಲಿಮರು ಎಂದು ಗಮನಿಸಿ, ಅವರು ಪಾಕಿಸ್ತಾನಕ್ಕೆ ಹೋಗಬೇಕೆಂದು ಹೇಳಿದ್ದಾರೆ ಇದು ಸರಿಯಲ್ಲ. ನಾವು ಸುರಕ್ಷತಾ ವಿಷಯಗಳ ಬಗ್ಗೆ ಯೋಚಿಸುತ್ತಾ, ನಮ್ಮ ವಿದ್ಯಾರ್ಥಿಗಳನ್ನು ಹೊರಹೋಗುವಂತೆ ಕೇಳಬೇಕಾಗಿತ್ತು ಎಂದಿದ್ದಾರೆ.

ಅಂತಿಮವಾಗಿ ಪೊಲೀಸರು ಬುಧವಾರ ಬಿಜೆಪಿ ಕಾರ್ಯಕರ್ತರನ್ನು ಕಳಿಸಿದರೂ ಸಹ ವಿದ್ಯಾರ್ಥಿ ಸಂಘವು ಅವರ ಸುರಕ್ಷತೆಯ ಬಗ್ಗೆ ಆತಂಕದಲ್ಲಿದೆ ಎಂದು ಪ್ರಾಧ್ಯಾಪಕರು ಹೇಳಿದರು. ಏಕೆಂದರೆ ಇದು ಆಕಸ್ಮಿಕವಾಗಿ ನಡೆದ ಘಟನೆಯಲ್ಲ. ಬದಲಿಗೆ ಬಿಜೆಪಿಗರು ಕೆಲವರನ್ನು ಗುರಿಯಾಗಿಸಿಕೊಂಡು ಅವರಿಂದ ಸಿಎಎ ಪರ ಸಹಿ ಮಾಡಿಸಲು ಮುಂದಾಗಿದ್ದಾರೆ. ಮುಖ್ಯವಾಗಿ ಮುಸ್ಲಿಂ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಂದ. ಹಾಗಾಗಿ ಕಛೇರಿ ಮುಗಿಸಿ ಹೊರಬರುತ್ತಿದ್ದ ನಮ್ಮ ಪಕ್ಕದ ಮನೆಯವರಿಗೂ ಇದೇ ರೀತಿ ಸಹಿ ಹಾಕಲು ಪೀಡಿಸಿದ್ದಾರೆ ಎಂದು ಪ್ರಾಧ್ಯಾಪಕರು ತಿಳಿಸಿದ್ದಾರೆ. ಇಂದು ಕಾಲೇಜು ಆಡಳಿತ ಈ ಕುರಿತು ಹೇಳಿಕೆ ನೀಡುವ ನಿರೀಕ್ಷೆಯಿದೆ.

ಜಯನಗರ ಶಾಸಕಿ ಸೌಮ್ಯ ರೆಡ್ಡಿ, ಅವರ ತಂದೆ ಸ್ಥಳೀಯ ಶಾಸಕ ರಾಮಲಿಂಗ ರೆಡ್ಡಿ ಅವರೊಂದಿಗೆ ಆಗ್ನೇಯ ಡಿಸಿಪಿ ಇಶಾ ಪಂತ್ ಮತ್ತು ಕಾಲೇಜು ಪ್ರಾಂಶುಪಾಲರೊಂದಿಗೆ ಈ ವಿಷಯವನ್ನು ಮಾತಾಡುವುದಾಗಿ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...