Homeಕರ್ನಾಟಕJNU, ಜಾಮಿಯ ಮಾದರಿಯಲ್ಲಿ ದಾಳಿ ಎದುರಿಸಬೇಕಾಗುತ್ತದೆ; ಬಿಜೆಪಿಗರ ಬೆದರಿಕೆಗೆ ಸೊಪ್ಪು ಹಾಕದ ವಿದ್ಯಾರ್ಥಿಗಳು

JNU, ಜಾಮಿಯ ಮಾದರಿಯಲ್ಲಿ ದಾಳಿ ಎದುರಿಸಬೇಕಾಗುತ್ತದೆ; ಬಿಜೆಪಿಗರ ಬೆದರಿಕೆಗೆ ಸೊಪ್ಪು ಹಾಕದ ವಿದ್ಯಾರ್ಥಿಗಳು

- Advertisement -
- Advertisement -

ಬೆಂಗಳೂರಿನ ಕೋರಮಂಗಲದ ಜ್ಯೋತಿ ನಿವಾಸ್ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಕಾಲೇಜಿನ ಮುಂದೆ ಇಂಡಿಯಾ ಸಪೋರ್ಟ್‌ ಸಿಎಎ ಎಂದು ಬ್ಯಾನರ್‌ ಹಾಕಲು ಬಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರೊಂದಿಗೆ ವಾಗ್ವಾದ ಮಾಡಿ, ಕೊನೆಗೂ ಪೊಲೀಸರ ಸಹಾಯದಿಂದ ಹೊರಹೋಗುವಂತೆ ಮಾಡಿದ ಘಟನೆ ಜರುಗಿದೆ.

ಆದರೆ ಈ ವಾಗ್ವಾದದಲ್ಲಿ ಬಿಜೆಪಿಯ ಕೆಲವರು ನೀವು ಹೀಗೆ ಮಾಡಿದರೆ ನಿಮ್ಮ ಮೇಲೆ JNU, ಜಾಮಿಯ ಮಾದರಿಯಲ್ಲಿ ದಾಳಿ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳನ್ನು ಅಶಿಕ್ಷಿತ ಮತ್ತು ರಾಷ್ಟ್ರ ವಿರೋಧಿಗಳು ಎಂದು ಕರೆದಿದ್ದಲ್ಲದೇ ವಿದ್ಯಾರ್ಥಿಯೊಬ್ಬರ ಪ್ರಕಾರ “ಪಾಕಿಸ್ತಾನಕ್ಕೆ ಹೋಗಿ” ಎಂದೂ ತಮ್ಮ ಹಳೆಯ ಚಾಳಿಯನ್ನು ಮುಂದುವರೆಸಿದ್ದಾರೆ.

ಬಿಜೆಪಿಯ ಹಲವು ಪುರುಷರರನ್ನು ಕೆಲವೇ ವಿದ್ಯಾರ್ಥಿನಿಯರು ತಡೆಗಟ್ಟಿ ವಾದ ಮಾಡಿದ್ದಲ್ಲದೇ ಪೊಲೀಸರನ್ನು ಕರೆಸಿ ಕೊನೆಗೂ ಅವರನ್ನು ಹೊರಹಾಕಲಾಗಿದೆ. ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಹೊರಹೋಗುವಂತೆ ಸೂಚಿಸಿದ್ದಾರೆ.

ನಡೆದಿದ್ದೇನು?

ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಿಜೆಪಿ ಕಾರ್ಯಕರ್ತರ ಗುಂಪೊಂದು ಸಿಎಎ ಪರ ಬ್ಯಾನರ್ ಅನ್ನು ಕಾಲೇಜು ಗೋಡೆಗೆ ಅಂಟಿಸಿದಾಗ ಈ ವಿಷಯ ಭುಗಿಲೆದ್ದಿತು. ಬ್ಯಾನರ್‌ನಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಮತ್ತು ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಅವರ ಚಿತ್ರಗಳಿದ್ದವು. ಕಾಲೇಜಿನ ಗೋಡೆಯ ಮೇಲೆ ಬ್ಯಾನರ್ ಹಾಕಲು ವಿದ್ಯಾರ್ಥಿಗಳ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿತು. ಆಗ ಬಿಜೆಪಿ ಕಾರ್ಯಕರ್ತರು ತಮ್ಮ ಆಕ್ಷೇಪಣೆಗಳನ್ನು ಲೆಕ್ಕಿಸದೆ ವಿದ್ಯಾರ್ಥಿಗಳು ಮತ್ತು ಪಾದಚಾರಿಗಳು ಬ್ಯಾನರ್‌ಗೆ ಸಹಿ ಹಾಕಬೇಕೆಂದು ಒತ್ತಾಯಿಸಿದರು.

ವಿದ್ಯಾರ್ಥಿಗಲು ತಮ್ಮ ಪ್ರತಿರೋಧವನ್ನು ಹೆಚ್ಚು ಮಾಡಿದಾಗ ಒಬ್ಬ ಬಿಜೆಪಿ ವ್ಯಕ್ತಿಯು “ನಿಮಗೆ ಜನರ ಪೌರತ್ವದ ಬಗ್ಗೆ ಕಾಳಜಿಯಿಲ್ಲ, ನಿಮ್ಮ ಬಗ್ಗೆ ಮಾತ್ರ ಕಾಳಜಿ ವಹಿಸುತ್ತೀರಿ … ನೀವು ಭಾರತೀಯರಲ್ಲ” ಎಂದು ಹೇಳಿದ್ದಾರೆ. ಆಗ ವಿದ್ಯಾರ್ಥಿಗಳು ನಮಗೆ ದೇಶದ ಎಲ್ಲಾ ಧರ್ಮದ ಜನರ ಬಗ್ಗೆ ಕಾಳಜಿಯಿದೆ. ಹಾಗಾಗಿಯೇ ಸಿಎಎ ನಮಗೆ ಬೇಡ, ಇಲ್ಲಿಂದ ಹೊರಡಿ ಎಂದಿದ್ದಾರೆ. ನಂತರ ಬಿಜೆಪಿಗರು ನೀವು ಕಾಲೇಜಿನ ಮಾಲೀಕರಲ್ಲ ಮತ್ತು ಮಾಲೀಕರು ಮಾತ್ರ ಗೋಡೆಗೆ ಬ್ಯಾನರ್ ಅಂಟಿಕೊಂಡಿರುವುದನ್ನು ಆಕ್ಷೇಪಿಸಬಹುದು ಎಂದಿದ್ದಾರೆ.

ಆ ಪುರುಷರು ಹುಡುಗಿಯರ ಮೇಲೆ ಭಯಂಕರವಾಗಿ ಕೂಗಾಡಿದ್ದಾರೆ. ಆದರೆ ವಿದ್ಯಾರ್ಥಿನಿಯರು ಹಿಂದೆ ಸರಿಯಲು ನಿರಾಕರಿಸುತ್ತಾರೆ ಮತ್ತು ಬ್ಯಾನರ್ ತೆಗೆಯುವವರೆಗೂ ಬಿಡುವದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ನಿಮಗೆ ಬಿಜೆಪಿಗರಿಗೆ ಸಂವಾದ ಮಾಡಲು ಬರುವುದಿಲ್ಲ ಬರೀ ಕೂಗಾಡುತ್ತೀರಿ ಎಂದು ವಿದ್ಯಾರ್ಥಿನಿಯರು ದಬಾಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಲೇಜಿನ ಉಪನ್ಯಾಸಕರು, ರಸ್ತೆಯಲ್ಲಿ ಸಾಕಷ್ಟು ಜನರು ಸೇರಿದ್ದರಿಂದ ಅದೃಷ್ಟವಶಾತ್ ನಮ್ಮ ವಿದ್ಯಾರ್ಥಿಗಳ ಮೇಲೆ ಯಾವುದೇ ದೊಡ್ಡ ದೈಹಿಕ ಹಲ್ಲೆ ನಡೆದಿಲ್ಲ. ಆದರೆ ವೀಡಿಯೊದಲ್ಲಿ ನೋಡಿದಂತೆ, ನಮ್ಮ ವಿದ್ಯಾರ್ಥಿಗಳ ವಿರುದ್ಧ ಬಿಜೆಪಿ ಕಾರ್ಯಕರ್ತರು ಸಾಕಷ್ಟು ವೈಯಕ್ತಿಕ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಅವರು ನಮ್ಮ ವಿದ್ಯಾರ್ಥಿಗಳನ್ನು ಅಶಿಕ್ಷಿತ ಮತ್ತು ರಾಷ್ಟ್ರ ವಿರೋಧಿ ಎಂದು ಕರೆದರು. ಕೆಲವು ವಿದ್ಯಾರ್ಥಿಗಳು ಮುಸ್ಲಿಮರು ಎಂದು ಗಮನಿಸಿ, ಅವರು ಪಾಕಿಸ್ತಾನಕ್ಕೆ ಹೋಗಬೇಕೆಂದು ಹೇಳಿದ್ದಾರೆ ಇದು ಸರಿಯಲ್ಲ. ನಾವು ಸುರಕ್ಷತಾ ವಿಷಯಗಳ ಬಗ್ಗೆ ಯೋಚಿಸುತ್ತಾ, ನಮ್ಮ ವಿದ್ಯಾರ್ಥಿಗಳನ್ನು ಹೊರಹೋಗುವಂತೆ ಕೇಳಬೇಕಾಗಿತ್ತು ಎಂದಿದ್ದಾರೆ.

ಅಂತಿಮವಾಗಿ ಪೊಲೀಸರು ಬುಧವಾರ ಬಿಜೆಪಿ ಕಾರ್ಯಕರ್ತರನ್ನು ಕಳಿಸಿದರೂ ಸಹ ವಿದ್ಯಾರ್ಥಿ ಸಂಘವು ಅವರ ಸುರಕ್ಷತೆಯ ಬಗ್ಗೆ ಆತಂಕದಲ್ಲಿದೆ ಎಂದು ಪ್ರಾಧ್ಯಾಪಕರು ಹೇಳಿದರು. ಏಕೆಂದರೆ ಇದು ಆಕಸ್ಮಿಕವಾಗಿ ನಡೆದ ಘಟನೆಯಲ್ಲ. ಬದಲಿಗೆ ಬಿಜೆಪಿಗರು ಕೆಲವರನ್ನು ಗುರಿಯಾಗಿಸಿಕೊಂಡು ಅವರಿಂದ ಸಿಎಎ ಪರ ಸಹಿ ಮಾಡಿಸಲು ಮುಂದಾಗಿದ್ದಾರೆ. ಮುಖ್ಯವಾಗಿ ಮುಸ್ಲಿಂ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಂದ. ಹಾಗಾಗಿ ಕಛೇರಿ ಮುಗಿಸಿ ಹೊರಬರುತ್ತಿದ್ದ ನಮ್ಮ ಪಕ್ಕದ ಮನೆಯವರಿಗೂ ಇದೇ ರೀತಿ ಸಹಿ ಹಾಕಲು ಪೀಡಿಸಿದ್ದಾರೆ ಎಂದು ಪ್ರಾಧ್ಯಾಪಕರು ತಿಳಿಸಿದ್ದಾರೆ. ಇಂದು ಕಾಲೇಜು ಆಡಳಿತ ಈ ಕುರಿತು ಹೇಳಿಕೆ ನೀಡುವ ನಿರೀಕ್ಷೆಯಿದೆ.

ಜಯನಗರ ಶಾಸಕಿ ಸೌಮ್ಯ ರೆಡ್ಡಿ, ಅವರ ತಂದೆ ಸ್ಥಳೀಯ ಶಾಸಕ ರಾಮಲಿಂಗ ರೆಡ್ಡಿ ಅವರೊಂದಿಗೆ ಆಗ್ನೇಯ ಡಿಸಿಪಿ ಇಶಾ ಪಂತ್ ಮತ್ತು ಕಾಲೇಜು ಪ್ರಾಂಶುಪಾಲರೊಂದಿಗೆ ಈ ವಿಷಯವನ್ನು ಮಾತಾಡುವುದಾಗಿ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...