Homeಕರ್ನಾಟಕ5 ವರ್ಷಗಳ ಕಾನೂನು ಪದವಿಯ 2 & 4ನೇ ಸೆಮಿಸ್ಟರ್‌ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು

5 ವರ್ಷಗಳ ಕಾನೂನು ಪದವಿಯ 2 & 4ನೇ ಸೆಮಿಸ್ಟರ್‌ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು

- Advertisement -
- Advertisement -

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಮೂರು ವರ್ಷದ ಕಾನೂನು ವ್ಯಾಸಂಗ ಮಾಡುವ ವಿದ್ಯಾರ್ಥಿಗಳ 2ನೇ ಮತ್ತು 4ನೇ ಸೆಮಿಸ್ಟರ್‌ ಪರೀಕ್ಷೆಗಳನ್ನು ಹೈಕೋರ್ಟ್‌ ರದ್ದುಗೊಳಿಸಿದೆ. ಆದರೆ ಐದು ವರ್ಷದ ಕಾನೂನು ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಮಾತ್ರ ನಡೆಸುತ್ತಿದ್ದು, “ನಮಗೆ ತಾರತಮ್ಯವಾಗಿದೆ” ಎಂದು ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬಹಿಷ್ಕರಿಸಿದ್ದಾರೆ. ಮೂರನೇ ದಿನವೂ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗಿಲ್ಲ.

ಮೂರು ವರ್ಷ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಪರೀಕ್ಷೆಗಳು ರದ್ದಾಗಿರುವ ಬಗ್ಗೆ ಕೆಲವು ಪತ್ರಿಕೆಗಳು ಗೊಂದಲಕಾರಿಯಾಗಿ ವರದಿ ಮಾಡಿದವು. ಈ ಹಿನ್ನೆಲೆಯಲ್ಲಿ ಐದು ವರ್ಷ ಕಾನೂನು ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಾಗುವುದೇ ಅಥವಾ ಬೇಡವೇ ಎಂಬ ಗೊಂದಲಲ್ಲಿ ಬಿದ್ದಿದ್ದರು ಎನ್ನುತ್ತಾರೆ ವಿದ್ಯಾರ್ಥಿಗಳು.

ಮೂರು ವರ್ಷದ ಕಾನೂನು ಪದವಿಯ ಎರಡು ಮತ್ತು ನಾಲ್ಕನೇ ಸೆಮಿಸ್ಟರ್‌ ಪರೀಕ್ಷೆಗಳನ್ನು ರದ್ದುಗೊಳಿಸಿ, ಐದು ವರ್ಷದ ಕಾನೂನು ಪದವಿಯ ಎರಡು ಮತ್ತು ನಾಲ್ಕನೇ ಸೆಮಿಸ್ಟರ್‌ ಪರೀಕ್ಷೆಗಳನ್ನು ನಡೆಸುತ್ತಿರುವುದು ಸರಿಯೇ ಎಂಬ ಪ್ರಶ್ನೆಯನ್ನು ಕಾನೂನು ವಿದ್ಯಾರ್ಥಿಗಳು ಕೇಳುತ್ತಿದ್ದು, ಇದರ ಭಾಗವಾಗಿ ಪರೀಕ್ಷೆಗಳನ್ನು ಬಹಿಷ್ಕರಿಸಿದ್ದಾರೆ.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಸೇರಿದ ರಾಜ್ಯದ ವಿವಿಧ ಕಾಲೇಜುಗಳಲ್ಲಿ ಅನೇಕ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬಹಿಷ್ಕರಿಸಿದ್ದರೆ ಮತ್ತಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ತುಮಕೂರಿನ ಸೂಫಿಯಾ ಲಾ ಕಾಲೇಜು ವಿದ್ಯಾರ್ಥಿ ಡಿ.ಆರ್‌.ಅನಂತಕುಮಾರ್‌‌, “ತರಗತಿ ನಡೆಯದೆಯೇ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಈ ಹಿಂದೆ ಪರೀಕ್ಷೆ ನಿಗದಿಯಾಗಿ ಮುಂದೂಡಲಾಗಿತ್ತು. ಆದರೆ ಈ ಹಿಂದೆ ರೂಪಿಸಿರುವ ಪ್ರಶ್ನೆ ಪತ್ರಿಕೆಯನ್ನೇ ಈಗಿನ ಪರೀಕ್ಷೆಗೂ ನೀಡಲಾಗಿದೆ. ಪ್ರಶ್ನೆ ಪತ್ರಿಕೆಯಲ್ಲಿ ಅಕ್ಟೋಬರ್‌, ನವೆಂಬರ್‌ ಎಂದಿರುವುದನ್ನು ನಾವು ಗಮನಿಸಬಹುದು” ಎಂದು ತಿಳಿಸಿದರು.

ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಡೋಲಾಯಮಾನವಾಗಿದೆ. ಆಗಿರುವ ಲೋಪವನ್ನು ಸರಿದೂಗಿಸಲು ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುತ್ತಾರೋ, ಅಥವಾ ಪರೀಕ್ಷೆ ರದ್ದು ಮಾಡಬೇಕೆಂಬ ಆದೇಶವನ್ನು ಐದನೇ ವರ್ಷದ ಕಾನೂನು ವಿದ್ಯಾರ್ಥಿಗಳಿಗೂ ಅನ್ವಯಿಸುತ್ತಾರೋ ಎಂಬ ಗೊಂದಲು ಹಾಗೇ ಉಳಿದಿದೆ.

ಈ ಕುರಿತು ಪ್ರತಿಕ್ರಿಯೆ ಪಡೆಯಲು ಕಾನೂನು ವಿವಿಯ ಕುಲಪತಿಯವರಿಗೆ, ಕುಲಸಚಿವರಿಗೆ ಸಾಕಷ್ಟು ಸಲ ಕರೆ ಮಾಡಿದೆವು. ಆದರೆ ನಮ್ಮ ಕರೆಯನ್ನು ಯಾರೂ ಸ್ವೀಕರಿಸಲಿಲ್ಲ. (ಪ್ರತಿಕ್ರಿಯೆ ಸಿಕ್ಕರೆ ಅಪ್ಡೇಟ್‌ ಮಾಡಲಾಗುವುದು)

ಏನಿದು ವಿವಾದ?

ಕೋವಿಡ್ ಕಾರಣಕ್ಕೆ ಕೊನೆಯ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಉಳಿದ ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನದ ಆಧಾರದಲ್ಲಿ ಮುಂದಿನ ತರಗತಿಗಳಿಗೆ ಬಡ್ತಿ ನೀಡುವಂತೆ ಯುಜಿಸಿ, ಸರ್ಕಾರ ಸೂಚಿಸಿದ್ದರೂ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದ್ದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕ್ರಮಕ್ಕೆ ಹೈಕೋರ್ಟ್‌ ತಡೆ ನೀಡಿತ್ತು.

ಪರೀಕ್ಷೆ ನಡೆಸಲು ತೀರ್ಮಾನಿಸಿದ್ದ ವಿಶ್ವವಿದ್ಯಾಲಯದ ನಿರ್ಣಯವನ್ನು ಪ್ರಶ್ನಿಸಿ ಮೂರು ವರ್ಷಗಳ ಅವಧಿಯ 2ನೇ ಸೆಮಿಸ್ಟರ್ ವಿದ್ಯಾರ್ಥಿಗಳು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ದಾಖಲಿಸಿದ್ದರು. ಕೋವಿಡ್ ಕಾರಣದಿಂದ ಕಾಲೇಜುಗಳಲ್ಲಿ ತರಗತಿಗಳು ನಡೆದಿಲ್ಲ. ಹಲವಾರು ಕಾರಣಗಳಿಂದ ಆನ್‌ಲೈನ್ ತರಗತಿಗಳು ವಿದ್ಯಾರ್ಥಿಗಳನ್ನು ತಲುಪಲು, ಪರೀಕ್ಷೆಗೆ ಸಿದ್ಧಗೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸದೆ ಆಂತರಿಕ ಮೌಲ್ಯಮಾಪನ ಆಧಾರದಲ್ಲಿ ಮುಂದಿನ ತರಗತಿಗಳಿಗೆ ಬಡ್ತಿ ನೀಡುವಂತೆ ಯುಜಿಸಿ, ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಎಲ್ಲ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದ್ದವು.

ಐದು ವರ್ಷದ ಕಾನೂನು ಪದವಿ ವಿದ್ಯಾರ್ಥಿಗಳೂ ಇದೇ ಸಮಸ್ಯೆಯನ್ನು ಹೇಳುತ್ತಿದ್ದು, ಮೂರು ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ ಎಂಬುದು ವಿವಾದದ ಮೂಲ.


ಇದನ್ನೂ ಓದಿರಿ: ʼದತ್ತಜಯಂತಿ ಹಿನ್ನೆಲೆʼ: ಮದ್ಯ ಮಾರಾಟ ನಿಷೇಧಕ್ಕೆ ಹಾಸನ ಡಿಸಿ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...