Homeಕರ್ನಾಟಕ5 ವರ್ಷಗಳ ಕಾನೂನು ಪದವಿಯ 2 & 4ನೇ ಸೆಮಿಸ್ಟರ್‌ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು

5 ವರ್ಷಗಳ ಕಾನೂನು ಪದವಿಯ 2 & 4ನೇ ಸೆಮಿಸ್ಟರ್‌ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು

- Advertisement -
- Advertisement -

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಮೂರು ವರ್ಷದ ಕಾನೂನು ವ್ಯಾಸಂಗ ಮಾಡುವ ವಿದ್ಯಾರ್ಥಿಗಳ 2ನೇ ಮತ್ತು 4ನೇ ಸೆಮಿಸ್ಟರ್‌ ಪರೀಕ್ಷೆಗಳನ್ನು ಹೈಕೋರ್ಟ್‌ ರದ್ದುಗೊಳಿಸಿದೆ. ಆದರೆ ಐದು ವರ್ಷದ ಕಾನೂನು ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಮಾತ್ರ ನಡೆಸುತ್ತಿದ್ದು, “ನಮಗೆ ತಾರತಮ್ಯವಾಗಿದೆ” ಎಂದು ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬಹಿಷ್ಕರಿಸಿದ್ದಾರೆ. ಮೂರನೇ ದಿನವೂ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗಿಲ್ಲ.

ಮೂರು ವರ್ಷ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಪರೀಕ್ಷೆಗಳು ರದ್ದಾಗಿರುವ ಬಗ್ಗೆ ಕೆಲವು ಪತ್ರಿಕೆಗಳು ಗೊಂದಲಕಾರಿಯಾಗಿ ವರದಿ ಮಾಡಿದವು. ಈ ಹಿನ್ನೆಲೆಯಲ್ಲಿ ಐದು ವರ್ಷ ಕಾನೂನು ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಾಗುವುದೇ ಅಥವಾ ಬೇಡವೇ ಎಂಬ ಗೊಂದಲಲ್ಲಿ ಬಿದ್ದಿದ್ದರು ಎನ್ನುತ್ತಾರೆ ವಿದ್ಯಾರ್ಥಿಗಳು.

ಮೂರು ವರ್ಷದ ಕಾನೂನು ಪದವಿಯ ಎರಡು ಮತ್ತು ನಾಲ್ಕನೇ ಸೆಮಿಸ್ಟರ್‌ ಪರೀಕ್ಷೆಗಳನ್ನು ರದ್ದುಗೊಳಿಸಿ, ಐದು ವರ್ಷದ ಕಾನೂನು ಪದವಿಯ ಎರಡು ಮತ್ತು ನಾಲ್ಕನೇ ಸೆಮಿಸ್ಟರ್‌ ಪರೀಕ್ಷೆಗಳನ್ನು ನಡೆಸುತ್ತಿರುವುದು ಸರಿಯೇ ಎಂಬ ಪ್ರಶ್ನೆಯನ್ನು ಕಾನೂನು ವಿದ್ಯಾರ್ಥಿಗಳು ಕೇಳುತ್ತಿದ್ದು, ಇದರ ಭಾಗವಾಗಿ ಪರೀಕ್ಷೆಗಳನ್ನು ಬಹಿಷ್ಕರಿಸಿದ್ದಾರೆ.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಸೇರಿದ ರಾಜ್ಯದ ವಿವಿಧ ಕಾಲೇಜುಗಳಲ್ಲಿ ಅನೇಕ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬಹಿಷ್ಕರಿಸಿದ್ದರೆ ಮತ್ತಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ತುಮಕೂರಿನ ಸೂಫಿಯಾ ಲಾ ಕಾಲೇಜು ವಿದ್ಯಾರ್ಥಿ ಡಿ.ಆರ್‌.ಅನಂತಕುಮಾರ್‌‌, “ತರಗತಿ ನಡೆಯದೆಯೇ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಈ ಹಿಂದೆ ಪರೀಕ್ಷೆ ನಿಗದಿಯಾಗಿ ಮುಂದೂಡಲಾಗಿತ್ತು. ಆದರೆ ಈ ಹಿಂದೆ ರೂಪಿಸಿರುವ ಪ್ರಶ್ನೆ ಪತ್ರಿಕೆಯನ್ನೇ ಈಗಿನ ಪರೀಕ್ಷೆಗೂ ನೀಡಲಾಗಿದೆ. ಪ್ರಶ್ನೆ ಪತ್ರಿಕೆಯಲ್ಲಿ ಅಕ್ಟೋಬರ್‌, ನವೆಂಬರ್‌ ಎಂದಿರುವುದನ್ನು ನಾವು ಗಮನಿಸಬಹುದು” ಎಂದು ತಿಳಿಸಿದರು.

ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಡೋಲಾಯಮಾನವಾಗಿದೆ. ಆಗಿರುವ ಲೋಪವನ್ನು ಸರಿದೂಗಿಸಲು ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುತ್ತಾರೋ, ಅಥವಾ ಪರೀಕ್ಷೆ ರದ್ದು ಮಾಡಬೇಕೆಂಬ ಆದೇಶವನ್ನು ಐದನೇ ವರ್ಷದ ಕಾನೂನು ವಿದ್ಯಾರ್ಥಿಗಳಿಗೂ ಅನ್ವಯಿಸುತ್ತಾರೋ ಎಂಬ ಗೊಂದಲು ಹಾಗೇ ಉಳಿದಿದೆ.

ಈ ಕುರಿತು ಪ್ರತಿಕ್ರಿಯೆ ಪಡೆಯಲು ಕಾನೂನು ವಿವಿಯ ಕುಲಪತಿಯವರಿಗೆ, ಕುಲಸಚಿವರಿಗೆ ಸಾಕಷ್ಟು ಸಲ ಕರೆ ಮಾಡಿದೆವು. ಆದರೆ ನಮ್ಮ ಕರೆಯನ್ನು ಯಾರೂ ಸ್ವೀಕರಿಸಲಿಲ್ಲ. (ಪ್ರತಿಕ್ರಿಯೆ ಸಿಕ್ಕರೆ ಅಪ್ಡೇಟ್‌ ಮಾಡಲಾಗುವುದು)

ಏನಿದು ವಿವಾದ?

ಕೋವಿಡ್ ಕಾರಣಕ್ಕೆ ಕೊನೆಯ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಉಳಿದ ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನದ ಆಧಾರದಲ್ಲಿ ಮುಂದಿನ ತರಗತಿಗಳಿಗೆ ಬಡ್ತಿ ನೀಡುವಂತೆ ಯುಜಿಸಿ, ಸರ್ಕಾರ ಸೂಚಿಸಿದ್ದರೂ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದ್ದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕ್ರಮಕ್ಕೆ ಹೈಕೋರ್ಟ್‌ ತಡೆ ನೀಡಿತ್ತು.

ಪರೀಕ್ಷೆ ನಡೆಸಲು ತೀರ್ಮಾನಿಸಿದ್ದ ವಿಶ್ವವಿದ್ಯಾಲಯದ ನಿರ್ಣಯವನ್ನು ಪ್ರಶ್ನಿಸಿ ಮೂರು ವರ್ಷಗಳ ಅವಧಿಯ 2ನೇ ಸೆಮಿಸ್ಟರ್ ವಿದ್ಯಾರ್ಥಿಗಳು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ದಾಖಲಿಸಿದ್ದರು. ಕೋವಿಡ್ ಕಾರಣದಿಂದ ಕಾಲೇಜುಗಳಲ್ಲಿ ತರಗತಿಗಳು ನಡೆದಿಲ್ಲ. ಹಲವಾರು ಕಾರಣಗಳಿಂದ ಆನ್‌ಲೈನ್ ತರಗತಿಗಳು ವಿದ್ಯಾರ್ಥಿಗಳನ್ನು ತಲುಪಲು, ಪರೀಕ್ಷೆಗೆ ಸಿದ್ಧಗೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸದೆ ಆಂತರಿಕ ಮೌಲ್ಯಮಾಪನ ಆಧಾರದಲ್ಲಿ ಮುಂದಿನ ತರಗತಿಗಳಿಗೆ ಬಡ್ತಿ ನೀಡುವಂತೆ ಯುಜಿಸಿ, ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಎಲ್ಲ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದ್ದವು.

ಐದು ವರ್ಷದ ಕಾನೂನು ಪದವಿ ವಿದ್ಯಾರ್ಥಿಗಳೂ ಇದೇ ಸಮಸ್ಯೆಯನ್ನು ಹೇಳುತ್ತಿದ್ದು, ಮೂರು ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ ಎಂಬುದು ವಿವಾದದ ಮೂಲ.


ಇದನ್ನೂ ಓದಿರಿ: ʼದತ್ತಜಯಂತಿ ಹಿನ್ನೆಲೆʼ: ಮದ್ಯ ಮಾರಾಟ ನಿಷೇಧಕ್ಕೆ ಹಾಸನ ಡಿಸಿ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...