Homeಕರ್ನಾಟಕಕುಡಿಯುವ ನೀರನ್ನು ಮಕ್ಕಳೇ ತಂದರೆ ಒಳ್ಳೆಯದು: ಹೀಗೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದೇಕೆ?

ಕುಡಿಯುವ ನೀರನ್ನು ಮಕ್ಕಳೇ ತಂದರೆ ಒಳ್ಳೆಯದು: ಹೀಗೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದೇಕೆ?

- Advertisement -
- Advertisement -

ಜೂನ್ 25 ರಿಂದ ಆರಂಭವಾಗಲಿರುವ ಎಸ್ಎಸ್ಎಲ್‌ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳೇ ಕುಡಿಯುವ ನೀರು ತಂದರೆ ಒಳ್ಳೆಯದು. ಅದರಲ್ಲೂ ಬಿಸಿನೀರು ತಂದರೆ ಉತ್ತಮ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ.

ತುಮಕೂರಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಲ್ಲೂ ಬಿಸಿನೀರು ಇರುತ್ತದೆ. ಆದರೆ ಕೊರೊನಾ ಸೋಂಕು ಭಯದ ಕಾರಣಕ್ಕೆ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿ ನೀರು ಕುಡಿದ ನಂತರ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಇದು ಸ್ವಲ್ಪ ಕಷ್ಟವಾಗಬಹುದು. ಹಾಗಾಗಿ ವಿದ್ಯಾರ್ಥಿಗಳೇ ಮನೆಯಿಂದ ನೀರು ತಂದರೆ ಉತ್ತಮ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಬಿಡಲು ಖಾಸಗಿ ಶಾಲೆಗಳ ಬಸ್‌ಗಳನ್ನು ಬಳಸಿಕೊಳ್ಳಲು ಯೋಜಿಸಲಾಗುತ್ತಿದೆ. ಹೇಗಿದ್ದರೂ 1 ರಿಂದ 9ನೇ ತರಗತಿವರೆಗೆ ಪರೀಕ್ಷೆಗಳು ಇಲ್ಲದಿರುವುದರಿಂದ ಬಸ್‌ಗಳು ಲಭ್ಯವಿರುತ್ತವೆ. ಆ ಬಸ್‌ಗಳಿಗೆ ಡೀಸೆಲ್ ಮತ್ತು ಪೆಟ್ರೊಲ್ ವೆಚ್ಚವನ್ನು ಶಿಕ್ಷಣ ಇಲಾಖೆಯಿಂದ ಭರಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ವಾಹನಗಳನ್ನು ಬಳಸಿಕೊಳ್ಳುವ ಸಂಬಂಧ ಜೂನ್ 1ರಂದು ಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆ ಕರೆದಿದೆ. ಪ್ರತಿ ವರ್ಷ ವಾಹನಗಳನ್ನು ಆರ್.ಟಿ.ಒ ಇಲಾಖೆ ಒದಗಿಸುತ್ತಿತ್ತು. ಇದರ ಜೊತೆ ಪೊಲೀಸ್‌ ಇಲಾಖೆಯ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ 500 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡುವಂತೆ ಸೂಚಿಸಲಾಗುವುದು ಎಂದರು.

ಭಾರತ್ ಸ್ಕೌಟ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳು 75 ಲಕ್ಷ ಮಾಸ್ಕ್‌ಗಳನ್ನು ಕೈಯಾರ ತಯಾರು ಮಾಡಿದ್ದು ಅವುಗಳನ್ನು ನಮಗೆ ನೀಡಲಾಗಿದೆ. ಅದರಲ್ಲಿ ವಿದ್ಯಾರ್ಥಿಗಳ ಶ್ರಮವಿದೆ. ಉತ್ತಮ ಗುಣಮಟ್ಟದ ಮಾಸ್ಕ್‌ಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ 8.48 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಈಗಿನ ಸನ್ನಿವೇಶದಲ್ಲಿ ಇದು ಸಾಹಸದ ಕೆಲಸ. ಮಕ್ಕಳ ಸುರಕ್ಷತೆ ಮತ್ತು ಆತ್ಮವಿಶ್ವಾಸ ಹೆಚ್ಚಿಸಲು ಪೋಷಕರು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ವಾಟ್ಸಪ್ ಸಂದೇಶಗಳನ್ನು ನಂಬಬಾರದು. ಶಿಕ್ಷಣ ಇಲಾಖೆ ನೀಡುವ ಮಾಹಿತಿಗೆ ಹೆಚ್ಚು ಒತ್ತು ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಈ ನಡುವೆ ದಿನೇ ದಿನೇ ಕೊರೊನಾ ಸೋಂಕಿತರ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವುದರಿಂದ ಪರೀಕ್ಷೆ ನಡೆಸುವುದು ಬೇಡ ಎಂದು ಚಿಂತಕರು, ಶಿಕ್ಷಣ ತಜ್ಞರು ಮತ್ತು ವಿದ್ಯಾರ್ಥಿ ಮುಖಂಡರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇನ್ನು ಹಲವು ಚಿಂತಕರು ಸದ್ಯಕ್ಕೆ ಶಿಕ್ಷಣಕ್ಕಿಂತ ಆರೋಗ್ಯ ರಕ್ಷಿಸುವುದಕ್ಕಾಗಿ ಸರ್ಕಾರ ಗಮನ ಕೊಡಬೇಕಿದೆ. ಈ ಕುರಿತು ಸುರೇಶ್ ಕುಮಾರ್ ರವರು ಚಿಂತಸಬೇಕು ಎಂದು ಆಗ್ರಹಿಸಿದ್ದು, ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಚರ್ಚೆ ನಡೆಯುತ್ತಿದೆ.


ಇದನ್ನೂ ಓದಿ: ಇಂದಿನ ಪರಿಸ್ಥಿತಿಯಲ್ಲಿ SSLC ಪರೀಕ್ಷೆ ನಡೆಸುವುದು ಸೂಕ್ತವಲ್ಲ : ಶಿಕ್ಷಣ ತಜ್ಞರು, ಹೋರಾಟಗಾರರ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...