Homeಕರ್ನಾಟಕಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು: ಬೆಳಿಗ್ಗೆ ಹೊರಡಿಸಿದ್ದ ಸುತ್ತೋಲೆ ಸಂಜೆ ವಾಪಸ್!

ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು: ಬೆಳಿಗ್ಗೆ ಹೊರಡಿಸಿದ್ದ ಸುತ್ತೋಲೆ ಸಂಜೆ ವಾಪಸ್!

‘ಸುತ್ತೋಲೆ ಹೊರಡಿಸಿ ವಾಪಸ್‌ ಪಡೆಯುವ ಸರ್ಕಾರ’ ಎಂಬ ಟೀಕೆಗೆ ರಾಜ್ಯ ಸರ್ಕಾರ ಗುರಿಯಾಗಿದೆ. ಅಲ್ಪಾವಧಿಯಲ್ಲಿ ನಾಲ್ಕು ಸುತ್ತೋಲೆಗಳನ್ನು ವಾಪಸ್ ಪಡೆಯಲಾಗಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರಬೇಕೆಂದು ಹೊರಡಿಸಿದ್ದ ಸುತ್ತೋಲೆಯನ್ನು ಒಂದೇ ದಿನದಲ್ಲಿ ವಾಪಸ್ ಪಡೆಯಲಾಗಿದ್ದು, ‘ಸುತ್ತೋಲೆ ಹೊರಡಿಸಿ ವಾಪಸ್‌ ಪಡೆಯುವ ಸರ್ಕಾರ’ ಎಂಬ ಟೀಕೆಗೆ ಮತ್ತೊಮ್ಮೆ ರಾಜ್ಯ ಸರ್ಕಾರ ಗುರಿಯಾಗಿದೆ.

ನವೆಂಬರ್ 11ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಪಿಯುಸಿ ವಿದ್ಯಾರ್ಥಿಗಳನ್ನು ಕರೆತರುವಂತೆ ನವೆಂಬರ್ 8ರಂದು ಬೆಳಿಗ್ಗೆ ಹೊರಡಿಸಿದ್ದ ಸುತ್ತೋಲೆಯನ್ನು ಸಂಜೆ ವೇಳೆಗೆ ವಾಪಸ್ ಪಡೆಯಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಈ ಆದೇಶ ಹೊರಡಿಸಿದ್ದರು. ಜಿಲ್ಲೆಯ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಕಾಲೇಜುಗಳಿಂದ ಪ್ರಧಾನಿಯವರ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಕರೆತರಬೇಕೆಂಬ ಆದೇಶಕ್ಕೆ ಸಾರ್ವಜನಿಕ ವಲಯದಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಈ ನಡೆಯ ವಿರುದ್ಧ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕಿಸಿದ್ದರು. ವಿರೋಧ ವ್ಯಾಪಕವಾಗಬಹುದು ಎಂಬ ಕಾರಣದಿಂದ ಇಲಾಖೆಯ ಅಧಿಕಾರಿಗಳ ಸೂಚನೆಯ ಮೇರೆಗೆ ಉಪನಿರ್ದೇಶಕರು ಸದರಿ ಸುತ್ತೋಲೆ ಹಿಂಪಡೆದು ಇನ್ನೊಂದು ಸುತ್ತೋಲೆ ಹೊರಡಿಸಿದ್ದಾರೆ.

“ಸುತ್ತೋಲೆ ಹೊರಡಿಸಿ ನಂತರ ವಾಪಸ್‌ ಪಡೆಯುವ ಸರ್ಕಾರವಿದು” ಎಂಬ ಟೀಕೆಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಗುರಿಯಾಗಿದೆ. ಅಲ್ಪಾವಧಿಯಲ್ಲಿ ನಾಲ್ಕು ಸುತ್ತೋಲೆಗಳನ್ನು ವಾಪಸ್ ಪಡೆದಿರುವುದು ಇದಕ್ಕೆ ಸಾಕ್ಷಿಯಾಗಿದೆ.

ಸರ್ಕಾರಗಳು ಸಾಮಾನ್ಯವಾಗಿ ಯಾರದೋ ಹಿತಾಸಕ್ತಿಯ ಪರವಾಗಿ ತಪ್ಪು ಹೆಜ್ಜೆ ಇಡುವುದು ಸಾಮಾನ್ಯ. ಆದರೆ ಪದೇಪದೇ ಇದೇ ತಪ್ಪುಗಳು ಮರುಕಳಿಸುತ್ತಿರುವುದಕ್ಕೆ ಜನರು ವಿಷಾದ ವ್ಯಕ್ತಪಡಿಸುತ್ತಿದ್ದಾರೆ. ಮುಂದಾಲೋಚನೆ ಮಾಡದೆ ಜನವಿರೋಧಿ ಕ್ರಮಗಳನ್ನು ಜರುಗಿಸಿ, ಆಕ್ಷೇಪಗಳು ವ್ಯಕ್ತವಾದ ಬಳಿಕ ಸುತ್ತೋಲೆ ಹಿಂಪಡೆಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಒಂದೂವರೆ ತಿಂಗಳ ಅವಧಿಯಲ್ಲಿ ಇಂತಹ ನಾಲ್ಕು ಪ್ರಕರಣಗಳು ನಡೆದಿವೆ.

ನಾಡಗೀತೆಗೆ ಅವಮಾನ ಮಾಡಿದ ಆರೋಪವನ್ನು ಹೊತ್ತಿರುವ ರೋಹಿತ್ ಚಕ್ರತೀರ್ಥ ಎಂಬವರು ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆಗೆ ನಾಡಿನ ಹಿರಿಯ ಲೇಖಕರು ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರ ಅಂತಿಮವಾಗಿ ಏಳು ಲೇಖಕರ ಪಠ್ಯವನ್ನು ಕೈಬಿಟ್ಟಿತ್ತು. ನಾಡಿನ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಹಾಗೂ ಡಾ. ಜಿ.ರಾಮಕೃಷ್ಣ ಅವರು ಸೇರಿದಂತೆ ಏಳು ಲೇಖಕರ ಪಠ್ಯವನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದ ಸೆ.23ರ ಆದೇಶವನ್ನು ಶಿಕ್ಷಣ ಇಲಾಖೆ ಅ.28ರಂದು ವಾಪಸ್‌ ಪಡೆಯಲಾಗಿತ್ತು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಅಕ್ಟೋಬರ್ 19ರಂದು ಸುತ್ತೋಲೆಯೊಂದನ್ನು ಹೊರಡಿಸಿ,  ‘ನಮ್ಮ ಶಾಲೆ – ನನ್ನ ಕೊಡುಗೆ’ ಯೋಜನೆ ಘೋಷಿಸಿದ್ದರು. ಆ ಮೂಲಕ ಪೋಷಕರು ನೀಡುವ ದೇಣಿಗೆಯನ್ನು ಶಾಲೆ- ಶೌಚಾಲಯಗಳ ಸ್ವಚ್ಛತೆ, ಕುಡಿಯುವ ನೀರಿನ ಸೌಲಭ್ಯ, ವಿದ್ಯುತ್ ಬಿಲ್ ಪಾವತಿ, ಆಟದ ಮೈದಾನದ ಸುಧಾರಣೆ, ಗಣಕ ಯಂತ್ರಗಳ ರಿಪೇರಿ, ಬೋಧನೋಪಕರಣಗಳು, ಅಗತ್ಯವಾದ ಅತಿಥಿ ಶಿಕ್ಷಕರ ವೇತನಗಳು ಸೇರಿದಂತೆ ಮೊದಲ ಮತ್ತು ಎರಡನೇ ಆದ್ಯತೆಯಲ್ಲಿ ಪಟ್ಟಿ ಮಾಡಿದ ಸುಮಾರು 17 ಅಗತ್ಯಗಳಿಗಾಗಿ ಎಸ್‌ಡಿಎಂಸಿಗಳು ದೇಣಿಗೆ ಸಂಗ್ರಹಿಸಬೇಕೆಂದು ಸರ್ಕಾರ ಸೂಚಿಸಿತ್ತು.

ಈ ಯೋಜನೆಗೆ ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆ ಮುಖಂಡರು, ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಮಠಗಳಿಗೆ, ವಿವಾದಾತ್ಮಕ ಸ್ವಾಮೀಜಿಗಳಿಗೆ ನೂರಾರು ಕೋಟಿ ಹಣ ನೀಡುವ ಸರ್ಕಾರ ಬಡಮಕ್ಕಳ ಶಿಕ್ಷಣಕ್ಕೆ ಕೊಡಲು ಹಣವಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ತದನಂತರ ಈ ಸುತ್ತೋಲೆಯನ್ನೂ ವಾಪಸ್ ಪಡೆಯಲಾಯಿತು.

ದಲಿತ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಯನ್ನು ರೂಪಿಸಿದ್ದ ಸರ್ಕಾರ, ತೀವ್ರ ವಿರೋಧದ ಬಳಿಕ ತನ್ನ ನಿರ್ಧಾರದಿಂದ ಹಿಂದೆ ಸರಿಯಿತು. ಹೀಗಾಗಿ ದಲಿತರಿಗೆ ಮೀಸಲಾಗಿದ್ದ ಕೋಟ್ಯಂತರ ಹಣ ದುರುಪಯೋಗ ಆಗುವುದು ತಪ್ಪಿತು.

ಇದನ್ನೂ ಓದಿರಿ: ತುಮಕೂರು ಜಿಲ್ಲಾಸ್ಪತ್ರೆ ದುರಂತ: ಅಮಾನತಾದ ವೈದ್ಯೆಯಿಂದ ಪತ್ರ

ವೇದಗಣಿತ ನೆಪದಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕುರಿತು ದೂರುಗಳು ಬಂದಿದ್ದವು. ದಲಿತ ಹೋರಾಟಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ದಲಿತರಿಗೆ ಮೀಸಲಾದ ಹಣವನ್ನು ಖಾಸಗಿ ಸಂಸ್ಥೆಗಳು ದುರುಪಯೋಗ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ‘ನಾನುಗೌರಿ.ಕಾಂ’ ಸರಣಿಯಾಗಿ ವರದಿ ಮಾಡಿತ್ತು. ವೇದಗಣಿತದಿಂದ ದಲಿತ ಮಕ್ಕಳ ಮೇಲೆ ಬೀರುವ ದೂರಗಾಮಿ ಪರಿಣಾಮಗಳ ಕುರಿತು ಬೆಳಕು ಚೆಲ್ಲಲಾಗಿತ್ತು. ಶಿಕ್ಷಣ ಇಲಾಖೆ ವ್ಯಾಪ್ತಿಯ ಕೆಲಸವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಾಡುತ್ತಿರುವುದು ಕೂಡ ಅನುಮಾನಗಳಿಗೆ ಆಸ್ಪದ ನೀಡಿತ್ತು. ಜನಾಕ್ರೋಶಕ್ಕೆ ಮಣಿದು ಈ ಸುತ್ತೋಲೆಯನ್ನೂ ವಾಪಸ್ ಪಡೆಯಿತು.

ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರುವಂತೆ ಸೂಚಿಸಿದ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕರು, ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿದ್ದರು. ತಕ್ಷಣ ಎಚ್ಚೆತ್ತುಕೊಂಡ ಸರ್ಕಾರ ಈ ಸುತ್ತೋಲೆಯನ್ನೂ ವಾಪಸ್ ಪಡೆದಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

0
ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಕೆಲ ಕ್ಷೇತ್ರಗಳ ಬೂತ್‌ಗಳಲ್ಲಿ ಮತದಾನದ ದಿನ ಮತಗಟ್ಟೆಗೆ ತೆರಳಿದ್ದ ನಾಗರಿಕರಿಗೆ ತಮ್ಮ ಹೆಸರು ಪಟ್ಟಿಯಿಂದ ನಾಪತ್ತೆಯಾಗಿರುವುದು, ತಪ್ಪಾಗಿ ನಮೂದಿಸಿರುವುದು ಕಂಡುಬಂದಿದೆ. ಮಥುರಾ...