Homeಕರ್ನಾಟಕಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು: ಬೆಳಿಗ್ಗೆ ಹೊರಡಿಸಿದ್ದ ಸುತ್ತೋಲೆ ಸಂಜೆ ವಾಪಸ್!

ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು: ಬೆಳಿಗ್ಗೆ ಹೊರಡಿಸಿದ್ದ ಸುತ್ತೋಲೆ ಸಂಜೆ ವಾಪಸ್!

‘ಸುತ್ತೋಲೆ ಹೊರಡಿಸಿ ವಾಪಸ್‌ ಪಡೆಯುವ ಸರ್ಕಾರ’ ಎಂಬ ಟೀಕೆಗೆ ರಾಜ್ಯ ಸರ್ಕಾರ ಗುರಿಯಾಗಿದೆ. ಅಲ್ಪಾವಧಿಯಲ್ಲಿ ನಾಲ್ಕು ಸುತ್ತೋಲೆಗಳನ್ನು ವಾಪಸ್ ಪಡೆಯಲಾಗಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರಬೇಕೆಂದು ಹೊರಡಿಸಿದ್ದ ಸುತ್ತೋಲೆಯನ್ನು ಒಂದೇ ದಿನದಲ್ಲಿ ವಾಪಸ್ ಪಡೆಯಲಾಗಿದ್ದು, ‘ಸುತ್ತೋಲೆ ಹೊರಡಿಸಿ ವಾಪಸ್‌ ಪಡೆಯುವ ಸರ್ಕಾರ’ ಎಂಬ ಟೀಕೆಗೆ ಮತ್ತೊಮ್ಮೆ ರಾಜ್ಯ ಸರ್ಕಾರ ಗುರಿಯಾಗಿದೆ.

ನವೆಂಬರ್ 11ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಪಿಯುಸಿ ವಿದ್ಯಾರ್ಥಿಗಳನ್ನು ಕರೆತರುವಂತೆ ನವೆಂಬರ್ 8ರಂದು ಬೆಳಿಗ್ಗೆ ಹೊರಡಿಸಿದ್ದ ಸುತ್ತೋಲೆಯನ್ನು ಸಂಜೆ ವೇಳೆಗೆ ವಾಪಸ್ ಪಡೆಯಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಈ ಆದೇಶ ಹೊರಡಿಸಿದ್ದರು. ಜಿಲ್ಲೆಯ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಕಾಲೇಜುಗಳಿಂದ ಪ್ರಧಾನಿಯವರ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಕರೆತರಬೇಕೆಂಬ ಆದೇಶಕ್ಕೆ ಸಾರ್ವಜನಿಕ ವಲಯದಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಈ ನಡೆಯ ವಿರುದ್ಧ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕಿಸಿದ್ದರು. ವಿರೋಧ ವ್ಯಾಪಕವಾಗಬಹುದು ಎಂಬ ಕಾರಣದಿಂದ ಇಲಾಖೆಯ ಅಧಿಕಾರಿಗಳ ಸೂಚನೆಯ ಮೇರೆಗೆ ಉಪನಿರ್ದೇಶಕರು ಸದರಿ ಸುತ್ತೋಲೆ ಹಿಂಪಡೆದು ಇನ್ನೊಂದು ಸುತ್ತೋಲೆ ಹೊರಡಿಸಿದ್ದಾರೆ.

“ಸುತ್ತೋಲೆ ಹೊರಡಿಸಿ ನಂತರ ವಾಪಸ್‌ ಪಡೆಯುವ ಸರ್ಕಾರವಿದು” ಎಂಬ ಟೀಕೆಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಗುರಿಯಾಗಿದೆ. ಅಲ್ಪಾವಧಿಯಲ್ಲಿ ನಾಲ್ಕು ಸುತ್ತೋಲೆಗಳನ್ನು ವಾಪಸ್ ಪಡೆದಿರುವುದು ಇದಕ್ಕೆ ಸಾಕ್ಷಿಯಾಗಿದೆ.

ಸರ್ಕಾರಗಳು ಸಾಮಾನ್ಯವಾಗಿ ಯಾರದೋ ಹಿತಾಸಕ್ತಿಯ ಪರವಾಗಿ ತಪ್ಪು ಹೆಜ್ಜೆ ಇಡುವುದು ಸಾಮಾನ್ಯ. ಆದರೆ ಪದೇಪದೇ ಇದೇ ತಪ್ಪುಗಳು ಮರುಕಳಿಸುತ್ತಿರುವುದಕ್ಕೆ ಜನರು ವಿಷಾದ ವ್ಯಕ್ತಪಡಿಸುತ್ತಿದ್ದಾರೆ. ಮುಂದಾಲೋಚನೆ ಮಾಡದೆ ಜನವಿರೋಧಿ ಕ್ರಮಗಳನ್ನು ಜರುಗಿಸಿ, ಆಕ್ಷೇಪಗಳು ವ್ಯಕ್ತವಾದ ಬಳಿಕ ಸುತ್ತೋಲೆ ಹಿಂಪಡೆಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಒಂದೂವರೆ ತಿಂಗಳ ಅವಧಿಯಲ್ಲಿ ಇಂತಹ ನಾಲ್ಕು ಪ್ರಕರಣಗಳು ನಡೆದಿವೆ.

ನಾಡಗೀತೆಗೆ ಅವಮಾನ ಮಾಡಿದ ಆರೋಪವನ್ನು ಹೊತ್ತಿರುವ ರೋಹಿತ್ ಚಕ್ರತೀರ್ಥ ಎಂಬವರು ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆಗೆ ನಾಡಿನ ಹಿರಿಯ ಲೇಖಕರು ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರ ಅಂತಿಮವಾಗಿ ಏಳು ಲೇಖಕರ ಪಠ್ಯವನ್ನು ಕೈಬಿಟ್ಟಿತ್ತು. ನಾಡಿನ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಹಾಗೂ ಡಾ. ಜಿ.ರಾಮಕೃಷ್ಣ ಅವರು ಸೇರಿದಂತೆ ಏಳು ಲೇಖಕರ ಪಠ್ಯವನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದ ಸೆ.23ರ ಆದೇಶವನ್ನು ಶಿಕ್ಷಣ ಇಲಾಖೆ ಅ.28ರಂದು ವಾಪಸ್‌ ಪಡೆಯಲಾಗಿತ್ತು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಅಕ್ಟೋಬರ್ 19ರಂದು ಸುತ್ತೋಲೆಯೊಂದನ್ನು ಹೊರಡಿಸಿ,  ‘ನಮ್ಮ ಶಾಲೆ – ನನ್ನ ಕೊಡುಗೆ’ ಯೋಜನೆ ಘೋಷಿಸಿದ್ದರು. ಆ ಮೂಲಕ ಪೋಷಕರು ನೀಡುವ ದೇಣಿಗೆಯನ್ನು ಶಾಲೆ- ಶೌಚಾಲಯಗಳ ಸ್ವಚ್ಛತೆ, ಕುಡಿಯುವ ನೀರಿನ ಸೌಲಭ್ಯ, ವಿದ್ಯುತ್ ಬಿಲ್ ಪಾವತಿ, ಆಟದ ಮೈದಾನದ ಸುಧಾರಣೆ, ಗಣಕ ಯಂತ್ರಗಳ ರಿಪೇರಿ, ಬೋಧನೋಪಕರಣಗಳು, ಅಗತ್ಯವಾದ ಅತಿಥಿ ಶಿಕ್ಷಕರ ವೇತನಗಳು ಸೇರಿದಂತೆ ಮೊದಲ ಮತ್ತು ಎರಡನೇ ಆದ್ಯತೆಯಲ್ಲಿ ಪಟ್ಟಿ ಮಾಡಿದ ಸುಮಾರು 17 ಅಗತ್ಯಗಳಿಗಾಗಿ ಎಸ್‌ಡಿಎಂಸಿಗಳು ದೇಣಿಗೆ ಸಂಗ್ರಹಿಸಬೇಕೆಂದು ಸರ್ಕಾರ ಸೂಚಿಸಿತ್ತು.

ಈ ಯೋಜನೆಗೆ ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆ ಮುಖಂಡರು, ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಮಠಗಳಿಗೆ, ವಿವಾದಾತ್ಮಕ ಸ್ವಾಮೀಜಿಗಳಿಗೆ ನೂರಾರು ಕೋಟಿ ಹಣ ನೀಡುವ ಸರ್ಕಾರ ಬಡಮಕ್ಕಳ ಶಿಕ್ಷಣಕ್ಕೆ ಕೊಡಲು ಹಣವಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ತದನಂತರ ಈ ಸುತ್ತೋಲೆಯನ್ನೂ ವಾಪಸ್ ಪಡೆಯಲಾಯಿತು.

ದಲಿತ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಯನ್ನು ರೂಪಿಸಿದ್ದ ಸರ್ಕಾರ, ತೀವ್ರ ವಿರೋಧದ ಬಳಿಕ ತನ್ನ ನಿರ್ಧಾರದಿಂದ ಹಿಂದೆ ಸರಿಯಿತು. ಹೀಗಾಗಿ ದಲಿತರಿಗೆ ಮೀಸಲಾಗಿದ್ದ ಕೋಟ್ಯಂತರ ಹಣ ದುರುಪಯೋಗ ಆಗುವುದು ತಪ್ಪಿತು.

ಇದನ್ನೂ ಓದಿರಿ: ತುಮಕೂರು ಜಿಲ್ಲಾಸ್ಪತ್ರೆ ದುರಂತ: ಅಮಾನತಾದ ವೈದ್ಯೆಯಿಂದ ಪತ್ರ

ವೇದಗಣಿತ ನೆಪದಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕುರಿತು ದೂರುಗಳು ಬಂದಿದ್ದವು. ದಲಿತ ಹೋರಾಟಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ದಲಿತರಿಗೆ ಮೀಸಲಾದ ಹಣವನ್ನು ಖಾಸಗಿ ಸಂಸ್ಥೆಗಳು ದುರುಪಯೋಗ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ‘ನಾನುಗೌರಿ.ಕಾಂ’ ಸರಣಿಯಾಗಿ ವರದಿ ಮಾಡಿತ್ತು. ವೇದಗಣಿತದಿಂದ ದಲಿತ ಮಕ್ಕಳ ಮೇಲೆ ಬೀರುವ ದೂರಗಾಮಿ ಪರಿಣಾಮಗಳ ಕುರಿತು ಬೆಳಕು ಚೆಲ್ಲಲಾಗಿತ್ತು. ಶಿಕ್ಷಣ ಇಲಾಖೆ ವ್ಯಾಪ್ತಿಯ ಕೆಲಸವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಾಡುತ್ತಿರುವುದು ಕೂಡ ಅನುಮಾನಗಳಿಗೆ ಆಸ್ಪದ ನೀಡಿತ್ತು. ಜನಾಕ್ರೋಶಕ್ಕೆ ಮಣಿದು ಈ ಸುತ್ತೋಲೆಯನ್ನೂ ವಾಪಸ್ ಪಡೆಯಿತು.

ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರುವಂತೆ ಸೂಚಿಸಿದ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕರು, ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿದ್ದರು. ತಕ್ಷಣ ಎಚ್ಚೆತ್ತುಕೊಂಡ ಸರ್ಕಾರ ಈ ಸುತ್ತೋಲೆಯನ್ನೂ ವಾಪಸ್ ಪಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...