HomeಮುಖಪುಟINDIA ಬಣದಿಂದ ವಿದ್ಯಾರ್ಥಿಗಳ ಒಕ್ಕೂಟ ರಚನೆ

INDIA ಬಣದಿಂದ ವಿದ್ಯಾರ್ಥಿಗಳ ಒಕ್ಕೂಟ ರಚನೆ

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲಲ್ಲೆ ಪ್ರತಿಪಕ್ಷಗಳ INDIA ಬಣವು ವಿದ್ಯಾರ್ಥಿ ಸಂಘಟನೆಯನ್ನು ರಚನೆ ಮಾಡುತ್ತಿದ್ದು, ವಿದ್ಯಾರ್ಥಿಗಳು ಮತ್ತು ಯುವಕರಿಗೆ ಉದ್ಯೋಗಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಮುಂದಿಟ್ಟು  ದೆಹಲಿ ಮತ್ತು ಚೆನ್ನೈನಲ್ಲಿ ರ್ಯಾಲಿಗಳನ್ನು ನಡೆಸಲು ಮುಂದಾಗಿದೆ.

ಕಾಂಗ್ರೆಸ್, ಆರ್‌ಜೆಡಿ, ಎಸ್‌ಪಿ, ಎಎಪಿ, ಸಿಪಿಐಎಂ ಮತ್ತು ಸಿಪಿಐ ಮುಂತಾದ ಪಕ್ಷಗಳ ಅಂಗಸಂಸ್ಥೆಗಳಾದ 16 ವಿದ್ಯಾರ್ಥಿ ಸಂಘಟನೆಗಳು ‘ಯುನೈಟೆಡ್ ಸ್ಟೂಡೆಂಟ್ಸ್ ಆಫ್ ಇಂಡಿಯಾ’ ಹೆಂಬ ಹೆಸರಿನಲ್ಲಿ ಒಟ್ಟುಗೂಡಲು ಮುಂದಾಗಿದ್ದಾರೆ.

ವಿದ್ಯಾರ್ಥಿಗಳ ಒಕ್ಕೂಟವು  ಶಿಕ್ಷಣವನ್ನು ಉಳಿಸಿ, ಎನ್‌ಇಪಿಯನ್ನು ತಿರಸ್ಕರಿಸಿ. ಭಾರತ ಉಳಿಸಿ, ಬಿಜೆಪಿಯನ್ನು ತಿರಸ್ಕರಿಸಿ ಎಂಬ ಘೋಷವಾಕ್ಯದೊಂದಿಗೆ ಒಗ್ಗೂಡಿದೆ.

ವಿದ್ಯಾರ್ಥಿ ಸಂಘಟನೆಯ ಒಕ್ಕೂಟ ರಚನೆಯ ಭಾಗವಾಗಿ ನ.1ರಂದು ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಆನ್‌ಲೈನ್‌ ಸಭೆ ನಡೆಸಿದ್ದು, ಶಿಕ್ಷಣ ಮತ್ತು ಉದ್ಯೋಗ ರಕ್ಷಣೆಗಾಗಿ ಹೋರಾಟವನ್ನು ಬಲಪಡಿಸುವ ಬಗ್ಗೆ ನಿರ್ಧಾರವನ್ನು ಕೈಗೊಂಡಿದ್ದಾರೆ.

ವಿದ್ಯಾರ್ಥಿ ಸಂಘಟನೆಗಳಾದ AISA, AISB, AISF, CRJD, CYSS, DMK ವಿದ್ಯಾರ್ಥಿ ವಿಭಾಗ, DSF, ದ್ರಾವಿಡ ವಿದ್ಯಾರ್ಥಿಗಳ ಒಕ್ಕೂಟ, NSUI, ಪ್ರಗತಿಶೀಲ ವಿದ್ಯಾರ್ಥಿಗಳ ವೇದಿಕೆ, PSU, RLD ಛತ್ರ ಸಭಾ, ಸಮಾಜವಾದಿ ಛತ್ರ ಸಭಾ , ಸತ್ರೋ ಮುಕ್ತಿ ಸಂಗ್ರಾಮ್ ವಿದ್ಯಾರ್ಥಿಗಳ ಸಂಘಟನೆಗಳು ಒಕ್ಕೂಟದ ಭಾಗವಾಗಿರಲಿದೆ.

ಸಂಘಪರಿವಾರದ ಶಕ್ತಿಗಳು ದೇಶದ ಶಿಕ್ಷಣ ಕ್ಷೇತ್ರ, ಪ್ರಜಾಸತ್ತಾತ್ಮಕ, ಜಾತ್ಯತೀತ ಮತ್ತು ಪ್ರಗತಿಪರ ಮೌಲ್ಯಗಳ ಮೇಲೆ ತಮ್ಮ ದಾಳಿಯನ್ನು ಹೆಚ್ಚಿಸುವ ಸಾಧ್ಯತೆ ಇದೆ ಎಂದು ಇದರ ವಿರುದ್ಧ ಹೋರಾಡಲು ವಿದ್ಯಾರ್ಥಿಗಳ ಒಕ್ಕೂಟ ರಚನೆಗೆ ಮುಂದಾಗಿದೆ.

ಒಕ್ಕೂಟವು ದೆಹಲಿ ಮತ್ತು ಚೆನ್ನೈನಲ್ಲಿ ಒಕ್ಕೂಟವು ರ್ಯಾಲಿಯನ್ನು ಆಯೋಜಿಸಲು ತೀರ್ಮಾನಿಸಿದೆ. ಇಂದು ಈ ಬಗ್ಗೆ ಮಾತುಕತೆಗೆ ವಿದ್ಯಾರ್ಥಿಗಳ ಸಂಘಟನೆ ದೆಹಲಿಯಲ್ಲಿ ಸಭೆ ಸೇರಲಿದೆ.

ಇದನ್ನು ಓದಿ: ತೇಜಸ್ವಿ ಸೂರ್ಯ ವಿರುದ್ಧ ಪೋಸ್ಟರ್‌ ಹಾಕಿದ ಆಟೋ ಚಾಲಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...