Homeಮುಖಪುಟಕೇರಳ | ಗುರು ಪೂರ್ಣಿಮಾ ಹೆಸರಿನಲ್ಲಿ ಶಿಕ್ಷಕರ ಪಾದ ತೊಳೆದ ವಿದ್ಯಾರ್ಥಿಗಳು: ಶಾಲೆಗಳ ವಿರುದ್ಧ ಶಿಕ್ಷಣ...

ಕೇರಳ | ಗುರು ಪೂರ್ಣಿಮಾ ಹೆಸರಿನಲ್ಲಿ ಶಿಕ್ಷಕರ ಪಾದ ತೊಳೆದ ವಿದ್ಯಾರ್ಥಿಗಳು: ಶಾಲೆಗಳ ವಿರುದ್ಧ ಶಿಕ್ಷಣ ಸಚಿವ ಗರಂ, ವರದಿ ನೀಡಲು ಸೂಚನೆ

- Advertisement -
- Advertisement -

ಗುರು ಪೂರ್ಣಿಮಾ ಅಂಗವಾಗಿ ಆಯೋಜಿಸಿದ್ದ ಗುರುವಂದನಾ ಸಮಾರಂಭ ವೇಳೆ ಶಿಕ್ಷಕರ ಪಾದ ತೊಳೆಯುವಂತೆ ಕೇರಳದ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಒತ್ತಾಯಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಶಿಕ್ಷಣ ಸಚಿವ ಶಿವನ್ ಕುಟ್ಟಿ ಗರಂ ಆಗಿದ್ದು, ಅಧಿಕಾರಿಗಳಿಂದ ವರದಿ ಕೇಳಿದ್ದಾರೆ.

ಕಾಸರಗೋಡು ಮತ್ತು ಮಾವೇಲಿಕರದ ಎರಡು ಖಾಸಗಿ ಶಾಲೆಗಳಿಂದ ವಿವರಣೆ ಕೇಳಲಾಗಿದೆ. ವರದಿ ನೀಡುವಂತೆ ಶಿಕ್ಷಣ ಇಲಾಖೆ ಮಹಾ ನಿರ್ದೇಶಕರಿಗೆ ಸಚಿವ ಶಿವನ್‌ ಕುಟ್ಟಿ ಸೂಚಿಸಿದ್ದಾರೆ. ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದೆ ಎಂದು onmanorama.com ವರದಿ ಮಾಡಿದೆ.

ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ಶಿವನ್ ಕುಟ್ಟಿ, ವಿದ್ಯಾರ್ಥಿಗಳಿಂದ ಶಿಕ್ಷರ ಪಾದ ತೊಳೆಯುವಂತೆ ಒತ್ತಾಯಿಸಿದ ಶಾಲೆಗಳ ಆಡಳಿತ ಮಂಡಳಿ ವಿರುದ್ದ ಕಿಡಿಕಾರಿದ್ದು, “ಇದು ಅನುಚಿತ ವರ್ತನೆ, ಅಲ್ಲದೆ ಪ್ರಜಾಪ್ರಭುತ್ವ ಮತ್ತು ಪ್ರಗತಿಪರ ಶಿಕ್ಷಣ ವ್ಯವಸ್ಥೆಯ ಮೌಲ್ಯಗಳಿಗೆ ವಿರುದ್ಧವಾಗಿದೆ” ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಕಾಸರಗೋಡಿನ ಬಂದಡ್ಕದ ಸರಸ್ವತಿ ವಿದ್ಯಾಲಯದಲ್ಲಿ ಮತ್ತು ಆಲಪ್ಪುಝದ ಮಾವೇಲಿಕರದಲ್ಲಿರುವ ವಿದ್ಯಾಧಿರಾಜ ವಿದ್ಯಾಪೀಠಂ ಸೈನಿಕ ಶಾಲೆಯಲ್ಲಿ ಮಕ್ಕಳಿಂದ ಪಾದ ಪೂಜೆ ಮಾಡಲಿಸಲಾಗಿದೆ. ಇವೆರಡೂ ಸಿಬಿಎಸ್‌ಸಿ ಸಂಯೋಜಿತ ಶಾಲೆಗಳಾಗಿದ್ದು, ಭಾರತೀಯ ವಿದ್ಯಾ ನಿಕೇತನ ಇವುಗಳನ್ನು ನಿರ್ವಹಿಸುತ್ತಿದೆ.

ಭಾರತೀಯ ವಿದ್ಯಾ ನಿಕೇತನ ಆರ್‌ಎಸ್‌ಎಸ್‌ನ ಶೈಕ್ಷಣಿಕ ವಿಭಾಗವಾದ ವಿದ್ಯಾ ಭಾರತಿಯ (ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ) ಕೇರಳದ ಅಂಗ ಸಂಸ್ಥೆಯಾಗಿದೆ.

ಎರಡು ಶಾಲೆಗಳು ಮಾತ್ರವಲ್ಲದೆ ಕಾಸರಗೋಡು ಜಿಲ್ಲೆಯ ತ್ರಿಕರಿಪುರದ ಶ್ರೀ ಚಕ್ರಪಾಣಿ ವಿದ್ಯಾ ಮಂದಿರ, ಕುಂದಂಕುಝಿಯ ಹರಿಶ್ರೀ ವಿದ್ಯಾಲಯ, ಚೀಮೇನಿಯ ವಿವೇಕಾನಂದ ವಿದ್ಯಾ ಮಂದಿರ ಸೇರಿದಂತೆ ಇತರೆ ಖಾಸಗಿ ಶಾಲೆಗಳಲ್ಲೂ ಮಕ್ಕಳಿಂದ ಶಿಕ್ಷಕರ ಪಾದಗಳನ್ನು ತೊಳೆಯುವಂತೆ ಒತ್ತಾಯಿಸಲಾಗಿದೆ ಎಂದು ವರದಿಯಾಗಿದೆ.

ಕಾಸರಗೋಡಿನ ಬಂದಡ್ಕ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರು ಮಾತ್ರವಲ್ಲದೆ, ಅತಿಥಿಗಳ ಪಾದಗಳನ್ನೂ ನೀರು ಹಾಕಿ ತೊಳೆದು, ನಂತರ ಹೂವು ಅರ್ಪಿಸಿ ಪೂಜೆ ಮಾಡಿದ ವಿಡಿಯೋ ವೈರಲ್ ಆದ ಬಳಿಕ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕೆಲವೆಡೆ ಅತಿಥಿಗಳ ಹೆಸರಿನಲ್ಲಿ ಮಕ್ಕಳು ಸ್ಥಳೀಯ ಆರ್‌ಎಸ್‌ಎಸ್‌, ಬಿಜೆಪಿ ನಾಯಕರ ಪಾದಗಳನ್ನು ತೊಳೆದಿದ್ದಾರೆ ಎನ್ನಲಾಗಿದೆ.

ಡಿವೈಎಫ್‌ಐ ಮತ್ತು ಎಸ್‌ಎಫ್‌ಐ ಸಂಘಟನೆಗಳು ಮಕ್ಕಳು ಪಾದ ತೊಳೆದಿರುವುದನ್ನು ಬಲವಾಗಿ ಖಂಡಿಸಿವೆ. ಚೀಮೇನಿ ಶಾಲೆಯಲ್ಲಿ ವಿದ್ಯಾರ್ಥಿಗಳು ನೂರಾರು ಶಿಕ್ಷಕರ ಪಾದಗಳನ್ನು ತೊಳೆದಿದ್ದಾರೆ ಎಂದು ಡಿವೈಎಫ್‌ಐ ಆರೋಪಿಸಿದೆ. “ಈ ಬ್ರಾಹ್ಮಣ್ಯದ ಆಚರಣೆಗಳನ್ನು ಆರ್‌ಎಸ್‌ಎಸ್‌ ಬೆಂಬಲಿತ ಶಾಲೆಗಳಲ್ಲಿ ನಡೆಸಲಾಗಿದ್ದರೂ, ಇದು ನಮ್ಮ ರಾಜ್ಯಕ್ಕೆ ನಾಚಿಕೆಗೇಡಿನ ಸಂಗತಿ” ಎಂದು ಡಿವೈಎಫ್‌ಐ ಹೇಳಿಕೆಯಲ್ಲಿ ತಿಳಿಸಿದೆ.

ಆಲಪ್ಪುಝ ಜಿಲ್ಲೆಯ ಅಟ್ಟುವದಲ್ಲಿರುವ ವಿವೇಕಾನಂದ ವಿದ್ಯಾ ಪೀಠದಲ್ಲಿ ವಿದ್ಯಾರ್ಥಿಗಳಿಗೆ ಬಿಜೆಪಿ ನಾಯಕನ ಪಾದಗಳನ್ನು ತೊಳೆಯುವಂತೆ ಒತ್ತಾಯಿಸಲಾಗಿದೆ ಎಂದು ಎಸ್‌ಎಫ್‌ಐ ಆರೋಪಿಸಿದೆ. ಎಸ್‌ಎಫ್‌ಐ ರಾಜ್ಯ ಸಮಿತಿ ಶಿಕ್ಷಣ ಸಚಿವ ಶಿವನ್‌ಕುಟ್ಟಿ ಮತ್ತು ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದೆ.

ಮಕ್ಕಳ ಹಕ್ಕುಗಳ ಆಯೋಗ ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದೆ. “ಬಂದಡ್ಕದ ಸರಸ್ವತಿ ವಿದ್ಯಾಲಯದ ಬಗ್ಗೆ ಆರಂಭಿಕ ದೂರು ಬಂದಿತ್ತು. ನಂತರ ರಾಜ್ಯಾದ್ಯಂತ ಹಲವು ಶಾಲೆಗಳಲ್ಲಿ ಈ ರೀತಿಯ ಕೃತ್ಯ ನಡೆದಿರುವುದು ನಮ್ಮ ಗಮನಕ್ಕೆ ಬಂದಿದೆ. ಆಯೋಗವು ಈ ಬಗ್ಗೆ ವರದಿ ಸಲ್ಲಿಸುವಂತೆ ಪೊಲೀಸರಿಗ ಸೂಚಿಸಿದೆ” ಎಂದು ಆಯೋಗದ ಕಾಸರಗೋಡು ಜಿಲ್ಲಾ ಉಸ್ತುವಾರಿ ಮೋಹನಕುಮಾರ್ ಬಿ ತಿಳಿಸಿದ್ದಾರೆ.

ಮಕ್ಕಳು ಪಾದ ತೊಳೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಂದಡ್ಕ ಶಾಲೆಯ ಮುಖ್ಯೋಪಾಧ್ಯಾಯಿನಿ ಪಿ.ಟಿ. ಉಮಾ “ಇದು ‘ವ್ಯಾಸ ಜಯಂತಿ’ಯ ಅಂಗವಾಗಿ ಹಿಂದಿನಿಂದಲೂ ನಡೆಸಿಕೊಂಡು ಬಂದಿರುವ ಪದ್ದತಿ. ಆಹ್ವಾನಿತ ಗೌರವಾನ್ವಿತರ ಪಾದಗಳನ್ನು ಶಿಕ್ಷಕರು ಸ್ವತಃ ತೊಳೆದಿದ್ದಾರೆ. ವಿದ್ಯಾರ್ಥಿಗಳು ಅವರ ಪಾದಗಳಿಗೆ ಹೂವುಗಳನ್ನು ಮಾತ್ರ ಅರ್ಪಿಸಿದ್ದಾರೆ. ಈ ಮೂಲಕ ಮಕ್ಕಳು ಹಿರಿಯರ ಆಶೀರ್ವಾದ ಪಡೆದಿದ್ದಾರೆ. ಮಕ್ಕಳು ಪ್ರತಿದಿನ ಅವರ ಪೋಷಕರ ಪಾದಗಳನ್ನು ಮುಟ್ಟಿ ನಮಸ್ಕರಿಸಲು ಪ್ರೋತ್ಸಾಹಿಸಲಾಗುತ್ತದೆ. ಇಂತಹ ಅಭ್ಯಾಸಗಳ ಅನುಪಸ್ಥಿತಿಯು ಮಕ್ಕಳು ಮಾದಕ ದ್ರವ್ಯ ಸೇವನೆ ಬಲಿಯಾಗಲು ಮತ್ತು ಅನೈತಿಕ ವರ್ತನೆಗೆ ಕಾರಣವಾಗುತ್ತದೆ” ಎಂದು ಹೇಳಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಚೀಮೇನಿಯ ವಿವೇಕಾನಂದ ಶಾಲೆಯ ಶಿಕ್ಷಕರು ಮತ್ತು ಪೋಷಕರ ಸಮಿತಿಯ ಅಧಿಕಾರಿ ರಾಜೀವನ್ ಮಕ್ಕಳು ಪಾದ ತೊಳೆದಿರುವುದನ್ನು ಸಮರ್ಥಿಸಿಕೊಂಡಿದ್ದು, “ಇದು ಪ್ರಾಚೀನ ಮತ್ತು ದೈವಿಕ ಸನಾತನ ಧರ್ಮದ ಭಾಗವಾಗಿದೆ. ಈ ಆಚರಣೆಗೆ ಬರುವ ವಿರೋಧಗಳನ್ನು ನಾವು ‘ಒಗ್ಗಟ್ಟಿನಿಂದ ಪ್ರತಿರೋಧಿಸುತ್ತೇವೆ’ ಎಂಬುವುದಾಗಿ ಹೇಳಿದ್ದಾರೆ” ಎಂದು ನ್ಯೂಸ್ ಮಿನಿಟ್ ತಿಳಿಸಿದೆ.

ಊರಿಗೆ ರಸ್ತೆ ನಿರ್ಮಿಸುವಂತೆ ಗರ್ಭಿಣಿ ಬೇಡಿಕೆ: ಹೆರಿಗೆ ದಿನಾಂಕ ತಿಳಿಸಿ ಎಂದ ಬಿಜೆಪಿ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ನಿರಂತರ ಒತ್ತಡ ಎದುರಿಸುತ್ತಿದೆ, ಅದರ ಸ್ವಾತಂತ್ರ್ಯ ರಕ್ಷಿಸಬೇಕಿದೆ : ಮಲ್ಲಿಕಾರ್ಜುನ ಖರ್ಗೆ

ಇತ್ತೀಚಿನ ದಿನಗಳಲ್ಲಿ, ಚುನಾವಣಾ ಆಯೋಗದಂತಹ ಸಂಸ್ಥೆಗಳು ನಿರಂತರ ಒತ್ತಡವನ್ನು ಎದುರಿಸುತ್ತಿವೆ. ಆದ್ದರಿಂದ ಪ್ರಜಾಪ್ರಭುತ್ವವು ಕೇವಲ ಉಳಿಯುವುದಲ್ಲದೆ, ನಿಜವಾಗಿಯೂ ಅಭಿವೃದ್ಧಿ ಹೊಂದುವಂತೆ ಅವುಗಳ ಸ್ವಾತಂತ್ರ್ಯವನ್ನು ರಕ್ಷಿಸುವುದು 'ನಮ್ಮ ಜವಾಬ್ದಾರಿ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಗುಜರಾತ್ ಸೇರಿದಂತೆ ಇತರ ರಾಜ್ಯಗಳಲ್ಲಿ ‘ಮತ ಕಳ್ಳತನ’ಕ್ಕೆ ಎಸ್‌ಐಆರ್‌ ಬಳಕೆ: ರಾಹುಲ್ ಗಾಂಧಿ

ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ ಕುರಿತ ತಮ್ಮ ವಾಗ್ದಾಳಿಯನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೀವ್ರಗೊಳಿಸಿದ್ದಾರೆ. ಗುಜರಾತ್ ಸೇರಿದಂತೆ ಇತರ ರಾಜ್ಯಗಳಲ್ಲಿ...

ಕೇಂದ್ರದ ಸಲಹೆಯಂತೆ ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆ : ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ಎಂದ ನ್ಯಾ. ಉಜ್ಜಲ್ ಭುಯಾನ್

ಕೇಂದ್ರ ಸರ್ಕಾರದ ಕೋರಿಕೆಯ ಮೇರೆಗೆ ಹೈಕೋರ್ಟ್ ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ಪ್ರಸ್ತಾವನೆ ಮಾರ್ಪಡಿಸಿದ ಕೊಲಿಜಿಯಂನ ಇತ್ತೀಚಿನ ನಿರ್ಧಾರವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಪ್ರಶ್ನಿಸಿದ್ದು, "ನ್ಯಾಯಾಧೀಶರ ವರ್ಗಾವಣೆ ಮತ್ತು ನೇಮಕಾತಿ...

ತಮಿಳುನಾಡಿನಲ್ಲಿ ಎಂದೆಂದಿಗೂ ಹಿಂದಿಗೆ ಸ್ಥಾನವಿಲ್ಲ: ಮುಖ್ಯಮಂತ್ರಿ ಸ್ಟಾಲಿನ್

ಹಿಂದಿ ವಿರೋಧಿ ಆಂದೋಲನದ ಸಮಯದಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ರಾಜ್ಯದ ಹುತಾತ್ಮರನ್ನು ಡಿಎಂಕೆ ಅಧ್ಯಕ್ಷ ಮತ್ತು ತನಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಇಂದು ಶ್ಲಾಘಿಸಿದರು. ನಮ್ಮಲ್ಲಿ ಹಿಂದಿ ಭಾಷೆಗೆ ಶಾಶ್ವತವಾಗಿ...

ಒಡಿಶಾ : ಗಣರಾಜ್ಯೋತ್ಸವ ದಿನ ಮಾಂಸ, ಮೊಟ್ಟೆ, ಮೀನು ಮಾರಾಟ ನಿಷೇಧಿಸಿದ ಜಿಲ್ಲಾಡಳಿತ!

ಗಣರಾಜ್ಯೋತ್ಸವದಂದು ಜಿಲ್ಲೆಯಾದ್ಯಂತ ಮಾಂಸಾಹಾರಿ ವಸ್ತುಗಳ ಮಾರಾಟವನ್ನು ನಿಷೇಧಿಸಿ ಒಡಿಶಾದ ಕೊರಾಪುಟ್ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜನವರಿ 26, ಗಣರಾಜ್ಯೋತ್ಸವದಂದು ಮಾಂಸ, ಕೋಳಿ, ಮೊಟ್ಟೆ, ಮೀನು ಮತ್ತು ಇತರ ಮಾಂಸಾಹಾರಿ ವಸ್ತುಗಳ...

ಮೋದಿ ಸ್ವಾಗತಿಸುವ ಫ್ಲೆಕ್ಸ್ ಬೋರ್ಡ್‌; ದಂಡ ವಿಧಿಸಿದ ಬಿಜೆಪಿ ಆಡಳಿತದ ತಿರುವನಂತಪುರಂ ಮಹಾನಗರ ಪಾಲಿಕೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿಗೆ ಸಂಬಂಧಿಸಿದಂತೆ ನಗರದಲ್ಲಿನ ಪಾದಚಾರಿ ಮಾರ್ಗಗಳಲ್ಲಿ ಫ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸಿದ್ದಕ್ಕಾಗಿ ಬಿಜೆಪಿ ಆಡಳಿತವಿರುವ ತಿರುವನಂತಪುರಂ ಮಹಾನಗರ ಪಾಲಿಕೆ ತನ್ನದೇ ಪಕ್ಷಕ್ಕೆ ದಂಡ ವಿಧಿಸಿದೆ. ಪೊಲೀಸ್ ಠಾಣೆಯಲ್ಲಿ ದೂರು...

ಲಂಚ ಪ್ರಕರಣ : ಅದಾನಿಗೆ ಸಮನ್ಸ್ ತಲುಪಿಸಲು ಎರಡು ಬಾರಿ ನಿರಾಕರಿಸಿದ ಕೇಂದ್ರ

ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಅವರಿಗೆ ಕಾನೂನು ಸಮನ್ಸ್ ಕಳುಹಿಸಿತ್ತು. ಆದರೆ, ಭಾರತದ ಕಾನೂನು ಮತ್ತು ನ್ಯಾಯ ಸಚಿವಾಲಯ ಈ...

ನಕಾರಾತ್ಮಕ ಪರಿಣಾಮ ಕಡಿಮೆ ಮಾಡಲು ಸಾಮಾಜಿಕ ಮಾಧ್ಯಮ ನಿಯಂತ್ರಣ ಅಗತ್ಯ: ಕೈಲಾಶ್‌ ಸತ್ಯಾರ್ಥಿ

ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಕೈಲಾಶ್ ಸತ್ಯಾರ್ಥಿ ಅವರು ಅಪ್ರಾಪ್ತರಿಗೆ ಸಾಮಾಜಿಕ ಮಾಧ್ಯಮದ ನಿಯಂತ್ರಣ ನಿರ್ಧಾರವನ್ನು ಬೆಂಬಲಿಸಿದ್ದಾರೆ. 'ಇದರ ನಕಾರಾತ್ಮಕ ಪರಿಣಾಮವನ್ನು ಕಡಿಮೆ ಮಾಡಲು, ಸಕಾರಾತ್ಮಕವಾಗಿ ನೈತಿಕ ಮೌಲ್ಯಗಳನ್ನು ಹರಡಲು ಮತ್ತು ಸಮುದಾಯಗಳನ್ನು...

ನ್ಯೂಸ್ ಲಾಂಡ್ರಿ ಸಂಪಾದಕಿ ಬಗ್ಗೆ ತಪ್ಪು ವರದಿ: ದೆಹಲಿ ಹೈಕೋರ್ಟ್ ಅಸಮಾಧಾನ

ನ್ಯೂಸ್ ಲಾಂಡ್ರಿ ವ್ಯವಸ್ಥಾಪಕ ಸಂಪಾದಕಿ ಮನೀಷಾ ಪಾಂಡೆ ಅವರ ಮಾನನಷ್ಟ ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ, ಕೋರ್ಟ್‌ನ ಮೌಖಿಕ ಅವಲೋಕನಗಳ ಕುರಿತು ಕೆಲ ಮಾಧ್ಯಮಗಳ ವರದಿ ಮಾಡಿದ ರೀತಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಅಸಮಾಧಾನ...

ಇಬ್ಬರು ಬಂಗಾಳಿ ವಲಸೆ ಕಾರ್ಮಿಕರ ಶವ ಪತ್ತೆ : ಒಬ್ಬರನ್ನು ಹಿಂದುತ್ವ ಗುಂಪು ಥಳಿಸಿ ಕೊಂದಿರುವ ಆರೋಪ

ಪ್ರತ್ಯೇಕ ರಾಜ್ಯಗಳಲ್ಲಿ ಇಬ್ಬರು ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರು ಶವವಾಗಿ ಪತ್ತೆಯಾಗಿದ್ದು, ದೇಶದಲ್ಲಿ ಬಂಗಾಳಿ ಮಾತನಾಡುವ ಕಾರ್ಮಿಕರ ವಿರುದ್ದ ಹೆಚ್ಚುತ್ತಿರುವ ಹಿಂಸಾಚಾರದ ಭಾಗವಾಗಿ ಇಬ್ಬರನ್ನೂ ಕೊಲ್ಲಲಾಗಿದೆ ಎಂದು ಅವರ ಕುಟುಂಬಗಳು ಆರೋಪಿಸಿವೆ. ಆಂಧ್ರ ಪ್ರದೇಶದ...