Homeಮುಖಪುಟಕೇರಳ | ಗುರು ಪೂರ್ಣಿಮಾ ಹೆಸರಿನಲ್ಲಿ ಶಿಕ್ಷಕರ ಪಾದ ತೊಳೆದ ವಿದ್ಯಾರ್ಥಿಗಳು: ಶಾಲೆಗಳ ವಿರುದ್ಧ ಶಿಕ್ಷಣ...

ಕೇರಳ | ಗುರು ಪೂರ್ಣಿಮಾ ಹೆಸರಿನಲ್ಲಿ ಶಿಕ್ಷಕರ ಪಾದ ತೊಳೆದ ವಿದ್ಯಾರ್ಥಿಗಳು: ಶಾಲೆಗಳ ವಿರುದ್ಧ ಶಿಕ್ಷಣ ಸಚಿವ ಗರಂ, ವರದಿ ನೀಡಲು ಸೂಚನೆ

- Advertisement -
- Advertisement -

ಗುರು ಪೂರ್ಣಿಮಾ ಅಂಗವಾಗಿ ಆಯೋಜಿಸಿದ್ದ ಗುರುವಂದನಾ ಸಮಾರಂಭ ವೇಳೆ ಶಿಕ್ಷಕರ ಪಾದ ತೊಳೆಯುವಂತೆ ಕೇರಳದ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಒತ್ತಾಯಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಶಿಕ್ಷಣ ಸಚಿವ ಶಿವನ್ ಕುಟ್ಟಿ ಗರಂ ಆಗಿದ್ದು, ಅಧಿಕಾರಿಗಳಿಂದ ವರದಿ ಕೇಳಿದ್ದಾರೆ.

ಕಾಸರಗೋಡು ಮತ್ತು ಮಾವೇಲಿಕರದ ಎರಡು ಖಾಸಗಿ ಶಾಲೆಗಳಿಂದ ವಿವರಣೆ ಕೇಳಲಾಗಿದೆ. ವರದಿ ನೀಡುವಂತೆ ಶಿಕ್ಷಣ ಇಲಾಖೆ ಮಹಾ ನಿರ್ದೇಶಕರಿಗೆ ಸಚಿವ ಶಿವನ್‌ ಕುಟ್ಟಿ ಸೂಚಿಸಿದ್ದಾರೆ. ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದೆ ಎಂದು onmanorama.com ವರದಿ ಮಾಡಿದೆ.

ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ಶಿವನ್ ಕುಟ್ಟಿ, ವಿದ್ಯಾರ್ಥಿಗಳಿಂದ ಶಿಕ್ಷರ ಪಾದ ತೊಳೆಯುವಂತೆ ಒತ್ತಾಯಿಸಿದ ಶಾಲೆಗಳ ಆಡಳಿತ ಮಂಡಳಿ ವಿರುದ್ದ ಕಿಡಿಕಾರಿದ್ದು, “ಇದು ಅನುಚಿತ ವರ್ತನೆ, ಅಲ್ಲದೆ ಪ್ರಜಾಪ್ರಭುತ್ವ ಮತ್ತು ಪ್ರಗತಿಪರ ಶಿಕ್ಷಣ ವ್ಯವಸ್ಥೆಯ ಮೌಲ್ಯಗಳಿಗೆ ವಿರುದ್ಧವಾಗಿದೆ” ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಕಾಸರಗೋಡಿನ ಬಂದಡ್ಕದ ಸರಸ್ವತಿ ವಿದ್ಯಾಲಯದಲ್ಲಿ ಮತ್ತು ಆಲಪ್ಪುಝದ ಮಾವೇಲಿಕರದಲ್ಲಿರುವ ವಿದ್ಯಾಧಿರಾಜ ವಿದ್ಯಾಪೀಠಂ ಸೈನಿಕ ಶಾಲೆಯಲ್ಲಿ ಮಕ್ಕಳಿಂದ ಪಾದ ಪೂಜೆ ಮಾಡಲಿಸಲಾಗಿದೆ. ಇವೆರಡೂ ಸಿಬಿಎಸ್‌ಸಿ ಸಂಯೋಜಿತ ಶಾಲೆಗಳಾಗಿದ್ದು, ಭಾರತೀಯ ವಿದ್ಯಾ ನಿಕೇತನ ಇವುಗಳನ್ನು ನಿರ್ವಹಿಸುತ್ತಿದೆ.

ಭಾರತೀಯ ವಿದ್ಯಾ ನಿಕೇತನ ಆರ್‌ಎಸ್‌ಎಸ್‌ನ ಶೈಕ್ಷಣಿಕ ವಿಭಾಗವಾದ ವಿದ್ಯಾ ಭಾರತಿಯ (ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ) ಕೇರಳದ ಅಂಗ ಸಂಸ್ಥೆಯಾಗಿದೆ.

ಎರಡು ಶಾಲೆಗಳು ಮಾತ್ರವಲ್ಲದೆ ಕಾಸರಗೋಡು ಜಿಲ್ಲೆಯ ತ್ರಿಕರಿಪುರದ ಶ್ರೀ ಚಕ್ರಪಾಣಿ ವಿದ್ಯಾ ಮಂದಿರ, ಕುಂದಂಕುಝಿಯ ಹರಿಶ್ರೀ ವಿದ್ಯಾಲಯ, ಚೀಮೇನಿಯ ವಿವೇಕಾನಂದ ವಿದ್ಯಾ ಮಂದಿರ ಸೇರಿದಂತೆ ಇತರೆ ಖಾಸಗಿ ಶಾಲೆಗಳಲ್ಲೂ ಮಕ್ಕಳಿಂದ ಶಿಕ್ಷಕರ ಪಾದಗಳನ್ನು ತೊಳೆಯುವಂತೆ ಒತ್ತಾಯಿಸಲಾಗಿದೆ ಎಂದು ವರದಿಯಾಗಿದೆ.

ಕಾಸರಗೋಡಿನ ಬಂದಡ್ಕ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರು ಮಾತ್ರವಲ್ಲದೆ, ಅತಿಥಿಗಳ ಪಾದಗಳನ್ನೂ ನೀರು ಹಾಕಿ ತೊಳೆದು, ನಂತರ ಹೂವು ಅರ್ಪಿಸಿ ಪೂಜೆ ಮಾಡಿದ ವಿಡಿಯೋ ವೈರಲ್ ಆದ ಬಳಿಕ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕೆಲವೆಡೆ ಅತಿಥಿಗಳ ಹೆಸರಿನಲ್ಲಿ ಮಕ್ಕಳು ಸ್ಥಳೀಯ ಆರ್‌ಎಸ್‌ಎಸ್‌, ಬಿಜೆಪಿ ನಾಯಕರ ಪಾದಗಳನ್ನು ತೊಳೆದಿದ್ದಾರೆ ಎನ್ನಲಾಗಿದೆ.

ಡಿವೈಎಫ್‌ಐ ಮತ್ತು ಎಸ್‌ಎಫ್‌ಐ ಸಂಘಟನೆಗಳು ಮಕ್ಕಳು ಪಾದ ತೊಳೆದಿರುವುದನ್ನು ಬಲವಾಗಿ ಖಂಡಿಸಿವೆ. ಚೀಮೇನಿ ಶಾಲೆಯಲ್ಲಿ ವಿದ್ಯಾರ್ಥಿಗಳು ನೂರಾರು ಶಿಕ್ಷಕರ ಪಾದಗಳನ್ನು ತೊಳೆದಿದ್ದಾರೆ ಎಂದು ಡಿವೈಎಫ್‌ಐ ಆರೋಪಿಸಿದೆ. “ಈ ಬ್ರಾಹ್ಮಣ್ಯದ ಆಚರಣೆಗಳನ್ನು ಆರ್‌ಎಸ್‌ಎಸ್‌ ಬೆಂಬಲಿತ ಶಾಲೆಗಳಲ್ಲಿ ನಡೆಸಲಾಗಿದ್ದರೂ, ಇದು ನಮ್ಮ ರಾಜ್ಯಕ್ಕೆ ನಾಚಿಕೆಗೇಡಿನ ಸಂಗತಿ” ಎಂದು ಡಿವೈಎಫ್‌ಐ ಹೇಳಿಕೆಯಲ್ಲಿ ತಿಳಿಸಿದೆ.

ಆಲಪ್ಪುಝ ಜಿಲ್ಲೆಯ ಅಟ್ಟುವದಲ್ಲಿರುವ ವಿವೇಕಾನಂದ ವಿದ್ಯಾ ಪೀಠದಲ್ಲಿ ವಿದ್ಯಾರ್ಥಿಗಳಿಗೆ ಬಿಜೆಪಿ ನಾಯಕನ ಪಾದಗಳನ್ನು ತೊಳೆಯುವಂತೆ ಒತ್ತಾಯಿಸಲಾಗಿದೆ ಎಂದು ಎಸ್‌ಎಫ್‌ಐ ಆರೋಪಿಸಿದೆ. ಎಸ್‌ಎಫ್‌ಐ ರಾಜ್ಯ ಸಮಿತಿ ಶಿಕ್ಷಣ ಸಚಿವ ಶಿವನ್‌ಕುಟ್ಟಿ ಮತ್ತು ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದೆ.

ಮಕ್ಕಳ ಹಕ್ಕುಗಳ ಆಯೋಗ ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದೆ. “ಬಂದಡ್ಕದ ಸರಸ್ವತಿ ವಿದ್ಯಾಲಯದ ಬಗ್ಗೆ ಆರಂಭಿಕ ದೂರು ಬಂದಿತ್ತು. ನಂತರ ರಾಜ್ಯಾದ್ಯಂತ ಹಲವು ಶಾಲೆಗಳಲ್ಲಿ ಈ ರೀತಿಯ ಕೃತ್ಯ ನಡೆದಿರುವುದು ನಮ್ಮ ಗಮನಕ್ಕೆ ಬಂದಿದೆ. ಆಯೋಗವು ಈ ಬಗ್ಗೆ ವರದಿ ಸಲ್ಲಿಸುವಂತೆ ಪೊಲೀಸರಿಗ ಸೂಚಿಸಿದೆ” ಎಂದು ಆಯೋಗದ ಕಾಸರಗೋಡು ಜಿಲ್ಲಾ ಉಸ್ತುವಾರಿ ಮೋಹನಕುಮಾರ್ ಬಿ ತಿಳಿಸಿದ್ದಾರೆ.

ಮಕ್ಕಳು ಪಾದ ತೊಳೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಂದಡ್ಕ ಶಾಲೆಯ ಮುಖ್ಯೋಪಾಧ್ಯಾಯಿನಿ ಪಿ.ಟಿ. ಉಮಾ “ಇದು ‘ವ್ಯಾಸ ಜಯಂತಿ’ಯ ಅಂಗವಾಗಿ ಹಿಂದಿನಿಂದಲೂ ನಡೆಸಿಕೊಂಡು ಬಂದಿರುವ ಪದ್ದತಿ. ಆಹ್ವಾನಿತ ಗೌರವಾನ್ವಿತರ ಪಾದಗಳನ್ನು ಶಿಕ್ಷಕರು ಸ್ವತಃ ತೊಳೆದಿದ್ದಾರೆ. ವಿದ್ಯಾರ್ಥಿಗಳು ಅವರ ಪಾದಗಳಿಗೆ ಹೂವುಗಳನ್ನು ಮಾತ್ರ ಅರ್ಪಿಸಿದ್ದಾರೆ. ಈ ಮೂಲಕ ಮಕ್ಕಳು ಹಿರಿಯರ ಆಶೀರ್ವಾದ ಪಡೆದಿದ್ದಾರೆ. ಮಕ್ಕಳು ಪ್ರತಿದಿನ ಅವರ ಪೋಷಕರ ಪಾದಗಳನ್ನು ಮುಟ್ಟಿ ನಮಸ್ಕರಿಸಲು ಪ್ರೋತ್ಸಾಹಿಸಲಾಗುತ್ತದೆ. ಇಂತಹ ಅಭ್ಯಾಸಗಳ ಅನುಪಸ್ಥಿತಿಯು ಮಕ್ಕಳು ಮಾದಕ ದ್ರವ್ಯ ಸೇವನೆ ಬಲಿಯಾಗಲು ಮತ್ತು ಅನೈತಿಕ ವರ್ತನೆಗೆ ಕಾರಣವಾಗುತ್ತದೆ” ಎಂದು ಹೇಳಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಚೀಮೇನಿಯ ವಿವೇಕಾನಂದ ಶಾಲೆಯ ಶಿಕ್ಷಕರು ಮತ್ತು ಪೋಷಕರ ಸಮಿತಿಯ ಅಧಿಕಾರಿ ರಾಜೀವನ್ ಮಕ್ಕಳು ಪಾದ ತೊಳೆದಿರುವುದನ್ನು ಸಮರ್ಥಿಸಿಕೊಂಡಿದ್ದು, “ಇದು ಪ್ರಾಚೀನ ಮತ್ತು ದೈವಿಕ ಸನಾತನ ಧರ್ಮದ ಭಾಗವಾಗಿದೆ. ಈ ಆಚರಣೆಗೆ ಬರುವ ವಿರೋಧಗಳನ್ನು ನಾವು ‘ಒಗ್ಗಟ್ಟಿನಿಂದ ಪ್ರತಿರೋಧಿಸುತ್ತೇವೆ’ ಎಂಬುವುದಾಗಿ ಹೇಳಿದ್ದಾರೆ” ಎಂದು ನ್ಯೂಸ್ ಮಿನಿಟ್ ತಿಳಿಸಿದೆ.

ಊರಿಗೆ ರಸ್ತೆ ನಿರ್ಮಿಸುವಂತೆ ಗರ್ಭಿಣಿ ಬೇಡಿಕೆ: ಹೆರಿಗೆ ದಿನಾಂಕ ತಿಳಿಸಿ ಎಂದ ಬಿಜೆಪಿ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

ಬುಧವಾರ (ಡಿ.24) ಒಡಿಶಾದ ಸಂಬಾಲ್‌ಪುರದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 30 ವರ್ಷದ ವಲಸೆ ಕಾರ್ಮಿಕರೊಬ್ಬರನ್ನು ಗುಂಪು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಉನ್ನಾವೋ ಅತ್ಯಾಚಾರ ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಇಬ್ಬರು ಮಹಿಳಾ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ

ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟಿಸಿದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಓಂ ಪ್ರಕಾಶ್ ರಾಜ್‌ಭರ್ ಅಪಹಾಸ್ಯ ಮಾಡಿದ್ದು, "ಆಕೆಯ ಮನೆ ಉನ್ನಾವೋದಲ್ಲಿರುವಾಗ ದೆಹಲಿಯಲ್ಲಿ ಏಕಿದ್ದಾಳೆ?"...

ಹತ್ಯೆಯ ಕೆಲವೇ ಗಂಟೆಗಳ ಮೊದಲು ನಾನು ಹಮಾಸ್ ಮುಖ್ಯಸ್ಥರನ್ನು ಭೇಟಿಯಾಗಿದ್ದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹತ್ಯೆಯಾಗುವ ಕೆಲವೇ ಗಂಟೆಗಳ ಮೊದಲು ಟೆಹ್ರಾನ್‌ನಲ್ಲಿ ಹಮಾಸ್‌ನ ಮಾಜಿ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಅವರನ್ನು ಭೇಟಿಯಾಗಿದ್ದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಬಹಿರಂಗಪಡಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ಅಧ್ಯಕ್ಷ...

ಕರ್ನಾಟಕ ಜನಶಕ್ತಿ ಸಕ್ರಿಯ ಕಾರ್ಯಕರ್ತೆ, ಹೋರಾಟದ ಒಡನಾಡಿ ಕೆ.ಪದ್ಮಾ ಇನ್ನಿಲ್ಲ

ಹಿರಿಯ ಹೋರಾಟಗಾರ್ತಿ, ಕರ್ನಾಟಕ ಜನಶಕ್ತಿ ಸಂಘಟನೆಯ ಸಕ್ರಿಯ ಕಾರ್ಯಕರ್ತೆ ಕೆ ಪದ್ಮಾ ಅವರು ಹೋರಾಟದ ಬದುಕನ್ನು ಮುಗಿಸಿದ್ದಾರೆ. ಬುಧವಾರ ರಾತ್ರಿ, ಬೆಂಗಳೂರಿನಲ್ಲಿ ಕೊನೆಯುಸಿಳೆದಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು, ತಮ್ಮನ್ನು ಬಾಧಿಸುತ್ತಿದ್ದ...

ದೇಶದ ಹಲವೆಡೆ ಕ್ರೈಸ್ತರ ಮೇಲೆ ಮತಾಂಧ ಕೋಮುವಾದಿಗಳ ದಾಳಿ : ಕ್ರಿಸ್‌ಮಸ್ ಆಚರಣೆಗೆ ಅಡ್ಡಿ

ಪ್ರತಿ ವರ್ಷದಂತೆ ಈ ವರ್ಷವೂ ಡಿಸೆಂಬರ್ ತಿಂಗಳಲ್ಲಿ, ವಿಶೇಷವಾಗಿ ಡಿಸೆಂಬರ್ 25ರಂದು ಇಡೀ ಜಗತ್ತು ಕ್ರಿಸ್‌ಮಸ್ ಹಬ್ಬದ ಸಂಭ್ರಮದಲ್ಲಿದೆ. ಏಸು ಕ್ರಿಸ್ತನ ಜನ್ಮದಿನದ ಪ್ರಯುಕ್ತ ಜನರು ಗಡಿಗಳನ್ನು ಮೀರಿ ಪರಸ್ಪರ ಸಂತಸ ಹಂಚಿಕೊಳ್ಳುತ್ತಿದ್ದಾರೆ. ಈ...

ಹರಿಯಾಣ| ಕಳ್ಳತನ ಆರೋಪದ ಮೇಲೆ 12 ವರ್ಷದ ದಲಿತ ಬಾಲಕನಿಗೆ ಚಿತ್ರಹಿಂಸೆ; ಕಟ್ಟಿಹಾಕಿ ದೌರ್ಜನ್ಯ

12 ವರ್ಷದ ದಲಿತ ಬಾಲಕನ ಮೇಲೆ ಕಳ್ಳತನದ ಶಂಕೆಯಿಂದ ಹಲವಾರು ಗಂಟೆಗಳ ಕಾಲ ಚಿತ್ರಹಿಂಸೆ ನೀಡಿ ಅಕ್ರಮ ಬಂಧನದಲ್ಲಿಟ್ಟ ಆರೋಪದ ಮೇಲೆ ಕುಟುಂಬವೊಂದರ 10 ಸದಸ್ಯರ ವಿರುದ್ಧ ಹರಿಯಾಣದ ಪಲ್ವಾಲ್‌ನಲ್ಲಿ ಪೊಲೀಸರು ಪ್ರಕರಣ...

ಉನ್ನಾವೋ ಅತ್ಯಾಚಾರಿಯ ಶಿಕ್ಷೆ ಅಮಾನತು : ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೊರೆ ಹೋಗಲು ಮುಂದಾದ ಸಿಬಿಐ

ಉನ್ನಾವೋ ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತಿನಲ್ಲಿಟ್ಟ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಕೇಂದ್ರ ತನಿಖಾ ದಳ (ಸಿಬಿಐ) ಮುಂದಾಗಿದೆ ಎಂದು ಬುಧವಾರ (ಡಿ.24) ವರದಿಯಾಗಿದೆ. ಸಿಬಿಐ ಈ ಪ್ರಕರಣದ ತನಿಖೆ...

ಚಿತ್ರದುರ್ಗ | ಹೊತ್ತಿ ಉರಿದ ಖಾಸಗಿ ಬಸ್​​​​ : 10ಕ್ಕೂ ಹೆಚ್ಚು ಜನರು ಸಜೀವ ದಹನ, ಹಲವರಿಗೆ ಗಾಯ

ಖಾಸಗಿ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದ ಪರಿಣಾಮ 10ಕ್ಕೂ ಹೆಚ್ಚು ಜನರು ಸಜೀವ ದಹನವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಗುರುವಾರ (ಡಿ.25) ನಡೆದಿದೆ. ರಾಷ್ಟ್ರೀಯ ಹೆದ್ದಾರಿ...

ಜಾಮಿಯಾ ಮಿಲ್ಲಿಯಾ |’ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ’ದ ಬಗ್ಗೆ ಪ್ರಶ್ನೆ ಕೇಳಿದ ಪ್ರಾಧ್ಯಾಪಕ ಅಮಾನತು

ಪದವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿದ್ದ "ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಬಗ್ಗೆ ವಿವರಿಸಿ" ಎಂಬ ಪ್ರಶ್ನೆಯ ಬಗ್ಗೆ ದೂರುಗಳು ಬಂದ ನಂತರ ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯವು ಸಮಾಜ ಕಾರ್ಯ...