Homeಮುಖಪುಟಕೇರಳ | ಗುರು ಪೂರ್ಣಿಮಾ ಹೆಸರಿನಲ್ಲಿ ಶಿಕ್ಷಕರ ಪಾದ ತೊಳೆದ ವಿದ್ಯಾರ್ಥಿಗಳು: ಶಾಲೆಗಳ ವಿರುದ್ಧ ಶಿಕ್ಷಣ...

ಕೇರಳ | ಗುರು ಪೂರ್ಣಿಮಾ ಹೆಸರಿನಲ್ಲಿ ಶಿಕ್ಷಕರ ಪಾದ ತೊಳೆದ ವಿದ್ಯಾರ್ಥಿಗಳು: ಶಾಲೆಗಳ ವಿರುದ್ಧ ಶಿಕ್ಷಣ ಸಚಿವ ಗರಂ, ವರದಿ ನೀಡಲು ಸೂಚನೆ

- Advertisement -
- Advertisement -

ಗುರು ಪೂರ್ಣಿಮಾ ಅಂಗವಾಗಿ ಆಯೋಜಿಸಿದ್ದ ಗುರುವಂದನಾ ಸಮಾರಂಭ ವೇಳೆ ಶಿಕ್ಷಕರ ಪಾದ ತೊಳೆಯುವಂತೆ ಕೇರಳದ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಒತ್ತಾಯಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಶಿಕ್ಷಣ ಸಚಿವ ಶಿವನ್ ಕುಟ್ಟಿ ಗರಂ ಆಗಿದ್ದು, ಅಧಿಕಾರಿಗಳಿಂದ ವರದಿ ಕೇಳಿದ್ದಾರೆ.

ಕಾಸರಗೋಡು ಮತ್ತು ಮಾವೇಲಿಕರದ ಎರಡು ಖಾಸಗಿ ಶಾಲೆಗಳಿಂದ ವಿವರಣೆ ಕೇಳಲಾಗಿದೆ. ವರದಿ ನೀಡುವಂತೆ ಶಿಕ್ಷಣ ಇಲಾಖೆ ಮಹಾ ನಿರ್ದೇಶಕರಿಗೆ ಸಚಿವ ಶಿವನ್‌ ಕುಟ್ಟಿ ಸೂಚಿಸಿದ್ದಾರೆ. ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದೆ ಎಂದು onmanorama.com ವರದಿ ಮಾಡಿದೆ.

ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ಶಿವನ್ ಕುಟ್ಟಿ, ವಿದ್ಯಾರ್ಥಿಗಳಿಂದ ಶಿಕ್ಷರ ಪಾದ ತೊಳೆಯುವಂತೆ ಒತ್ತಾಯಿಸಿದ ಶಾಲೆಗಳ ಆಡಳಿತ ಮಂಡಳಿ ವಿರುದ್ದ ಕಿಡಿಕಾರಿದ್ದು, “ಇದು ಅನುಚಿತ ವರ್ತನೆ, ಅಲ್ಲದೆ ಪ್ರಜಾಪ್ರಭುತ್ವ ಮತ್ತು ಪ್ರಗತಿಪರ ಶಿಕ್ಷಣ ವ್ಯವಸ್ಥೆಯ ಮೌಲ್ಯಗಳಿಗೆ ವಿರುದ್ಧವಾಗಿದೆ” ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಕಾಸರಗೋಡಿನ ಬಂದಡ್ಕದ ಸರಸ್ವತಿ ವಿದ್ಯಾಲಯದಲ್ಲಿ ಮತ್ತು ಆಲಪ್ಪುಝದ ಮಾವೇಲಿಕರದಲ್ಲಿರುವ ವಿದ್ಯಾಧಿರಾಜ ವಿದ್ಯಾಪೀಠಂ ಸೈನಿಕ ಶಾಲೆಯಲ್ಲಿ ಮಕ್ಕಳಿಂದ ಪಾದ ಪೂಜೆ ಮಾಡಲಿಸಲಾಗಿದೆ. ಇವೆರಡೂ ಸಿಬಿಎಸ್‌ಸಿ ಸಂಯೋಜಿತ ಶಾಲೆಗಳಾಗಿದ್ದು, ಭಾರತೀಯ ವಿದ್ಯಾ ನಿಕೇತನ ಇವುಗಳನ್ನು ನಿರ್ವಹಿಸುತ್ತಿದೆ.

ಭಾರತೀಯ ವಿದ್ಯಾ ನಿಕೇತನ ಆರ್‌ಎಸ್‌ಎಸ್‌ನ ಶೈಕ್ಷಣಿಕ ವಿಭಾಗವಾದ ವಿದ್ಯಾ ಭಾರತಿಯ (ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ) ಕೇರಳದ ಅಂಗ ಸಂಸ್ಥೆಯಾಗಿದೆ.

ಎರಡು ಶಾಲೆಗಳು ಮಾತ್ರವಲ್ಲದೆ ಕಾಸರಗೋಡು ಜಿಲ್ಲೆಯ ತ್ರಿಕರಿಪುರದ ಶ್ರೀ ಚಕ್ರಪಾಣಿ ವಿದ್ಯಾ ಮಂದಿರ, ಕುಂದಂಕುಝಿಯ ಹರಿಶ್ರೀ ವಿದ್ಯಾಲಯ, ಚೀಮೇನಿಯ ವಿವೇಕಾನಂದ ವಿದ್ಯಾ ಮಂದಿರ ಸೇರಿದಂತೆ ಇತರೆ ಖಾಸಗಿ ಶಾಲೆಗಳಲ್ಲೂ ಮಕ್ಕಳಿಂದ ಶಿಕ್ಷಕರ ಪಾದಗಳನ್ನು ತೊಳೆಯುವಂತೆ ಒತ್ತಾಯಿಸಲಾಗಿದೆ ಎಂದು ವರದಿಯಾಗಿದೆ.

ಕಾಸರಗೋಡಿನ ಬಂದಡ್ಕ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರು ಮಾತ್ರವಲ್ಲದೆ, ಅತಿಥಿಗಳ ಪಾದಗಳನ್ನೂ ನೀರು ಹಾಕಿ ತೊಳೆದು, ನಂತರ ಹೂವು ಅರ್ಪಿಸಿ ಪೂಜೆ ಮಾಡಿದ ವಿಡಿಯೋ ವೈರಲ್ ಆದ ಬಳಿಕ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕೆಲವೆಡೆ ಅತಿಥಿಗಳ ಹೆಸರಿನಲ್ಲಿ ಮಕ್ಕಳು ಸ್ಥಳೀಯ ಆರ್‌ಎಸ್‌ಎಸ್‌, ಬಿಜೆಪಿ ನಾಯಕರ ಪಾದಗಳನ್ನು ತೊಳೆದಿದ್ದಾರೆ ಎನ್ನಲಾಗಿದೆ.

ಡಿವೈಎಫ್‌ಐ ಮತ್ತು ಎಸ್‌ಎಫ್‌ಐ ಸಂಘಟನೆಗಳು ಮಕ್ಕಳು ಪಾದ ತೊಳೆದಿರುವುದನ್ನು ಬಲವಾಗಿ ಖಂಡಿಸಿವೆ. ಚೀಮೇನಿ ಶಾಲೆಯಲ್ಲಿ ವಿದ್ಯಾರ್ಥಿಗಳು ನೂರಾರು ಶಿಕ್ಷಕರ ಪಾದಗಳನ್ನು ತೊಳೆದಿದ್ದಾರೆ ಎಂದು ಡಿವೈಎಫ್‌ಐ ಆರೋಪಿಸಿದೆ. “ಈ ಬ್ರಾಹ್ಮಣ್ಯದ ಆಚರಣೆಗಳನ್ನು ಆರ್‌ಎಸ್‌ಎಸ್‌ ಬೆಂಬಲಿತ ಶಾಲೆಗಳಲ್ಲಿ ನಡೆಸಲಾಗಿದ್ದರೂ, ಇದು ನಮ್ಮ ರಾಜ್ಯಕ್ಕೆ ನಾಚಿಕೆಗೇಡಿನ ಸಂಗತಿ” ಎಂದು ಡಿವೈಎಫ್‌ಐ ಹೇಳಿಕೆಯಲ್ಲಿ ತಿಳಿಸಿದೆ.

ಆಲಪ್ಪುಝ ಜಿಲ್ಲೆಯ ಅಟ್ಟುವದಲ್ಲಿರುವ ವಿವೇಕಾನಂದ ವಿದ್ಯಾ ಪೀಠದಲ್ಲಿ ವಿದ್ಯಾರ್ಥಿಗಳಿಗೆ ಬಿಜೆಪಿ ನಾಯಕನ ಪಾದಗಳನ್ನು ತೊಳೆಯುವಂತೆ ಒತ್ತಾಯಿಸಲಾಗಿದೆ ಎಂದು ಎಸ್‌ಎಫ್‌ಐ ಆರೋಪಿಸಿದೆ. ಎಸ್‌ಎಫ್‌ಐ ರಾಜ್ಯ ಸಮಿತಿ ಶಿಕ್ಷಣ ಸಚಿವ ಶಿವನ್‌ಕುಟ್ಟಿ ಮತ್ತು ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದೆ.

ಮಕ್ಕಳ ಹಕ್ಕುಗಳ ಆಯೋಗ ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದೆ. “ಬಂದಡ್ಕದ ಸರಸ್ವತಿ ವಿದ್ಯಾಲಯದ ಬಗ್ಗೆ ಆರಂಭಿಕ ದೂರು ಬಂದಿತ್ತು. ನಂತರ ರಾಜ್ಯಾದ್ಯಂತ ಹಲವು ಶಾಲೆಗಳಲ್ಲಿ ಈ ರೀತಿಯ ಕೃತ್ಯ ನಡೆದಿರುವುದು ನಮ್ಮ ಗಮನಕ್ಕೆ ಬಂದಿದೆ. ಆಯೋಗವು ಈ ಬಗ್ಗೆ ವರದಿ ಸಲ್ಲಿಸುವಂತೆ ಪೊಲೀಸರಿಗ ಸೂಚಿಸಿದೆ” ಎಂದು ಆಯೋಗದ ಕಾಸರಗೋಡು ಜಿಲ್ಲಾ ಉಸ್ತುವಾರಿ ಮೋಹನಕುಮಾರ್ ಬಿ ತಿಳಿಸಿದ್ದಾರೆ.

ಮಕ್ಕಳು ಪಾದ ತೊಳೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಂದಡ್ಕ ಶಾಲೆಯ ಮುಖ್ಯೋಪಾಧ್ಯಾಯಿನಿ ಪಿ.ಟಿ. ಉಮಾ “ಇದು ‘ವ್ಯಾಸ ಜಯಂತಿ’ಯ ಅಂಗವಾಗಿ ಹಿಂದಿನಿಂದಲೂ ನಡೆಸಿಕೊಂಡು ಬಂದಿರುವ ಪದ್ದತಿ. ಆಹ್ವಾನಿತ ಗೌರವಾನ್ವಿತರ ಪಾದಗಳನ್ನು ಶಿಕ್ಷಕರು ಸ್ವತಃ ತೊಳೆದಿದ್ದಾರೆ. ವಿದ್ಯಾರ್ಥಿಗಳು ಅವರ ಪಾದಗಳಿಗೆ ಹೂವುಗಳನ್ನು ಮಾತ್ರ ಅರ್ಪಿಸಿದ್ದಾರೆ. ಈ ಮೂಲಕ ಮಕ್ಕಳು ಹಿರಿಯರ ಆಶೀರ್ವಾದ ಪಡೆದಿದ್ದಾರೆ. ಮಕ್ಕಳು ಪ್ರತಿದಿನ ಅವರ ಪೋಷಕರ ಪಾದಗಳನ್ನು ಮುಟ್ಟಿ ನಮಸ್ಕರಿಸಲು ಪ್ರೋತ್ಸಾಹಿಸಲಾಗುತ್ತದೆ. ಇಂತಹ ಅಭ್ಯಾಸಗಳ ಅನುಪಸ್ಥಿತಿಯು ಮಕ್ಕಳು ಮಾದಕ ದ್ರವ್ಯ ಸೇವನೆ ಬಲಿಯಾಗಲು ಮತ್ತು ಅನೈತಿಕ ವರ್ತನೆಗೆ ಕಾರಣವಾಗುತ್ತದೆ” ಎಂದು ಹೇಳಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಚೀಮೇನಿಯ ವಿವೇಕಾನಂದ ಶಾಲೆಯ ಶಿಕ್ಷಕರು ಮತ್ತು ಪೋಷಕರ ಸಮಿತಿಯ ಅಧಿಕಾರಿ ರಾಜೀವನ್ ಮಕ್ಕಳು ಪಾದ ತೊಳೆದಿರುವುದನ್ನು ಸಮರ್ಥಿಸಿಕೊಂಡಿದ್ದು, “ಇದು ಪ್ರಾಚೀನ ಮತ್ತು ದೈವಿಕ ಸನಾತನ ಧರ್ಮದ ಭಾಗವಾಗಿದೆ. ಈ ಆಚರಣೆಗೆ ಬರುವ ವಿರೋಧಗಳನ್ನು ನಾವು ‘ಒಗ್ಗಟ್ಟಿನಿಂದ ಪ್ರತಿರೋಧಿಸುತ್ತೇವೆ’ ಎಂಬುವುದಾಗಿ ಹೇಳಿದ್ದಾರೆ” ಎಂದು ನ್ಯೂಸ್ ಮಿನಿಟ್ ತಿಳಿಸಿದೆ.

ಊರಿಗೆ ರಸ್ತೆ ನಿರ್ಮಿಸುವಂತೆ ಗರ್ಭಿಣಿ ಬೇಡಿಕೆ: ಹೆರಿಗೆ ದಿನಾಂಕ ತಿಳಿಸಿ ಎಂದ ಬಿಜೆಪಿ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...

ಕೇರಳ | ದೇವಸ್ಥಾನದ ಉತ್ಸವದಲ್ಲಿ ಗುಂಪು ಹಲ್ಲೆ : 18 ವರ್ಷದ ಯುವಕ ಸಾವು

ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತನ...

ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು

ರಂಝಾನ್ ಉಪವಾಸ ನಿರತ ಮುಸ್ಲಿಂ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಭೀಕರವಾಗಿ ಥಳಿಸಿ, ಆಕೆ ನೀರು ಕೇಳಿದಾಗ ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಅಮಾನವೀಯ, ಅನಾಗರಿಕ ಮತ್ತು ಆಘಾತಕಾರಿ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ...