Homeಮುಖಪುಟಕೇರಳ | ಗುರು ಪೂರ್ಣಿಮಾ ಹೆಸರಿನಲ್ಲಿ ಶಿಕ್ಷಕರ ಪಾದ ತೊಳೆದ ವಿದ್ಯಾರ್ಥಿಗಳು: ಶಾಲೆಗಳ ವಿರುದ್ಧ ಶಿಕ್ಷಣ...

ಕೇರಳ | ಗುರು ಪೂರ್ಣಿಮಾ ಹೆಸರಿನಲ್ಲಿ ಶಿಕ್ಷಕರ ಪಾದ ತೊಳೆದ ವಿದ್ಯಾರ್ಥಿಗಳು: ಶಾಲೆಗಳ ವಿರುದ್ಧ ಶಿಕ್ಷಣ ಸಚಿವ ಗರಂ, ವರದಿ ನೀಡಲು ಸೂಚನೆ

- Advertisement -
- Advertisement -

ಗುರು ಪೂರ್ಣಿಮಾ ಅಂಗವಾಗಿ ಆಯೋಜಿಸಿದ್ದ ಗುರುವಂದನಾ ಸಮಾರಂಭ ವೇಳೆ ಶಿಕ್ಷಕರ ಪಾದ ತೊಳೆಯುವಂತೆ ಕೇರಳದ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಒತ್ತಾಯಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಶಿಕ್ಷಣ ಸಚಿವ ಶಿವನ್ ಕುಟ್ಟಿ ಗರಂ ಆಗಿದ್ದು, ಅಧಿಕಾರಿಗಳಿಂದ ವರದಿ ಕೇಳಿದ್ದಾರೆ.

ಕಾಸರಗೋಡು ಮತ್ತು ಮಾವೇಲಿಕರದ ಎರಡು ಖಾಸಗಿ ಶಾಲೆಗಳಿಂದ ವಿವರಣೆ ಕೇಳಲಾಗಿದೆ. ವರದಿ ನೀಡುವಂತೆ ಶಿಕ್ಷಣ ಇಲಾಖೆ ಮಹಾ ನಿರ್ದೇಶಕರಿಗೆ ಸಚಿವ ಶಿವನ್‌ ಕುಟ್ಟಿ ಸೂಚಿಸಿದ್ದಾರೆ. ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದೆ ಎಂದು onmanorama.com ವರದಿ ಮಾಡಿದೆ.

ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ಶಿವನ್ ಕುಟ್ಟಿ, ವಿದ್ಯಾರ್ಥಿಗಳಿಂದ ಶಿಕ್ಷರ ಪಾದ ತೊಳೆಯುವಂತೆ ಒತ್ತಾಯಿಸಿದ ಶಾಲೆಗಳ ಆಡಳಿತ ಮಂಡಳಿ ವಿರುದ್ದ ಕಿಡಿಕಾರಿದ್ದು, “ಇದು ಅನುಚಿತ ವರ್ತನೆ, ಅಲ್ಲದೆ ಪ್ರಜಾಪ್ರಭುತ್ವ ಮತ್ತು ಪ್ರಗತಿಪರ ಶಿಕ್ಷಣ ವ್ಯವಸ್ಥೆಯ ಮೌಲ್ಯಗಳಿಗೆ ವಿರುದ್ಧವಾಗಿದೆ” ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಕಾಸರಗೋಡಿನ ಬಂದಡ್ಕದ ಸರಸ್ವತಿ ವಿದ್ಯಾಲಯದಲ್ಲಿ ಮತ್ತು ಆಲಪ್ಪುಝದ ಮಾವೇಲಿಕರದಲ್ಲಿರುವ ವಿದ್ಯಾಧಿರಾಜ ವಿದ್ಯಾಪೀಠಂ ಸೈನಿಕ ಶಾಲೆಯಲ್ಲಿ ಮಕ್ಕಳಿಂದ ಪಾದ ಪೂಜೆ ಮಾಡಲಿಸಲಾಗಿದೆ. ಇವೆರಡೂ ಸಿಬಿಎಸ್‌ಸಿ ಸಂಯೋಜಿತ ಶಾಲೆಗಳಾಗಿದ್ದು, ಭಾರತೀಯ ವಿದ್ಯಾ ನಿಕೇತನ ಇವುಗಳನ್ನು ನಿರ್ವಹಿಸುತ್ತಿದೆ.

ಭಾರತೀಯ ವಿದ್ಯಾ ನಿಕೇತನ ಆರ್‌ಎಸ್‌ಎಸ್‌ನ ಶೈಕ್ಷಣಿಕ ವಿಭಾಗವಾದ ವಿದ್ಯಾ ಭಾರತಿಯ (ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ) ಕೇರಳದ ಅಂಗ ಸಂಸ್ಥೆಯಾಗಿದೆ.

ಎರಡು ಶಾಲೆಗಳು ಮಾತ್ರವಲ್ಲದೆ ಕಾಸರಗೋಡು ಜಿಲ್ಲೆಯ ತ್ರಿಕರಿಪುರದ ಶ್ರೀ ಚಕ್ರಪಾಣಿ ವಿದ್ಯಾ ಮಂದಿರ, ಕುಂದಂಕುಝಿಯ ಹರಿಶ್ರೀ ವಿದ್ಯಾಲಯ, ಚೀಮೇನಿಯ ವಿವೇಕಾನಂದ ವಿದ್ಯಾ ಮಂದಿರ ಸೇರಿದಂತೆ ಇತರೆ ಖಾಸಗಿ ಶಾಲೆಗಳಲ್ಲೂ ಮಕ್ಕಳಿಂದ ಶಿಕ್ಷಕರ ಪಾದಗಳನ್ನು ತೊಳೆಯುವಂತೆ ಒತ್ತಾಯಿಸಲಾಗಿದೆ ಎಂದು ವರದಿಯಾಗಿದೆ.

ಕಾಸರಗೋಡಿನ ಬಂದಡ್ಕ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರು ಮಾತ್ರವಲ್ಲದೆ, ಅತಿಥಿಗಳ ಪಾದಗಳನ್ನೂ ನೀರು ಹಾಕಿ ತೊಳೆದು, ನಂತರ ಹೂವು ಅರ್ಪಿಸಿ ಪೂಜೆ ಮಾಡಿದ ವಿಡಿಯೋ ವೈರಲ್ ಆದ ಬಳಿಕ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕೆಲವೆಡೆ ಅತಿಥಿಗಳ ಹೆಸರಿನಲ್ಲಿ ಮಕ್ಕಳು ಸ್ಥಳೀಯ ಆರ್‌ಎಸ್‌ಎಸ್‌, ಬಿಜೆಪಿ ನಾಯಕರ ಪಾದಗಳನ್ನು ತೊಳೆದಿದ್ದಾರೆ ಎನ್ನಲಾಗಿದೆ.

ಡಿವೈಎಫ್‌ಐ ಮತ್ತು ಎಸ್‌ಎಫ್‌ಐ ಸಂಘಟನೆಗಳು ಮಕ್ಕಳು ಪಾದ ತೊಳೆದಿರುವುದನ್ನು ಬಲವಾಗಿ ಖಂಡಿಸಿವೆ. ಚೀಮೇನಿ ಶಾಲೆಯಲ್ಲಿ ವಿದ್ಯಾರ್ಥಿಗಳು ನೂರಾರು ಶಿಕ್ಷಕರ ಪಾದಗಳನ್ನು ತೊಳೆದಿದ್ದಾರೆ ಎಂದು ಡಿವೈಎಫ್‌ಐ ಆರೋಪಿಸಿದೆ. “ಈ ಬ್ರಾಹ್ಮಣ್ಯದ ಆಚರಣೆಗಳನ್ನು ಆರ್‌ಎಸ್‌ಎಸ್‌ ಬೆಂಬಲಿತ ಶಾಲೆಗಳಲ್ಲಿ ನಡೆಸಲಾಗಿದ್ದರೂ, ಇದು ನಮ್ಮ ರಾಜ್ಯಕ್ಕೆ ನಾಚಿಕೆಗೇಡಿನ ಸಂಗತಿ” ಎಂದು ಡಿವೈಎಫ್‌ಐ ಹೇಳಿಕೆಯಲ್ಲಿ ತಿಳಿಸಿದೆ.

ಆಲಪ್ಪುಝ ಜಿಲ್ಲೆಯ ಅಟ್ಟುವದಲ್ಲಿರುವ ವಿವೇಕಾನಂದ ವಿದ್ಯಾ ಪೀಠದಲ್ಲಿ ವಿದ್ಯಾರ್ಥಿಗಳಿಗೆ ಬಿಜೆಪಿ ನಾಯಕನ ಪಾದಗಳನ್ನು ತೊಳೆಯುವಂತೆ ಒತ್ತಾಯಿಸಲಾಗಿದೆ ಎಂದು ಎಸ್‌ಎಫ್‌ಐ ಆರೋಪಿಸಿದೆ. ಎಸ್‌ಎಫ್‌ಐ ರಾಜ್ಯ ಸಮಿತಿ ಶಿಕ್ಷಣ ಸಚಿವ ಶಿವನ್‌ಕುಟ್ಟಿ ಮತ್ತು ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದೆ.

ಮಕ್ಕಳ ಹಕ್ಕುಗಳ ಆಯೋಗ ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದೆ. “ಬಂದಡ್ಕದ ಸರಸ್ವತಿ ವಿದ್ಯಾಲಯದ ಬಗ್ಗೆ ಆರಂಭಿಕ ದೂರು ಬಂದಿತ್ತು. ನಂತರ ರಾಜ್ಯಾದ್ಯಂತ ಹಲವು ಶಾಲೆಗಳಲ್ಲಿ ಈ ರೀತಿಯ ಕೃತ್ಯ ನಡೆದಿರುವುದು ನಮ್ಮ ಗಮನಕ್ಕೆ ಬಂದಿದೆ. ಆಯೋಗವು ಈ ಬಗ್ಗೆ ವರದಿ ಸಲ್ಲಿಸುವಂತೆ ಪೊಲೀಸರಿಗ ಸೂಚಿಸಿದೆ” ಎಂದು ಆಯೋಗದ ಕಾಸರಗೋಡು ಜಿಲ್ಲಾ ಉಸ್ತುವಾರಿ ಮೋಹನಕುಮಾರ್ ಬಿ ತಿಳಿಸಿದ್ದಾರೆ.

ಮಕ್ಕಳು ಪಾದ ತೊಳೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಂದಡ್ಕ ಶಾಲೆಯ ಮುಖ್ಯೋಪಾಧ್ಯಾಯಿನಿ ಪಿ.ಟಿ. ಉಮಾ “ಇದು ‘ವ್ಯಾಸ ಜಯಂತಿ’ಯ ಅಂಗವಾಗಿ ಹಿಂದಿನಿಂದಲೂ ನಡೆಸಿಕೊಂಡು ಬಂದಿರುವ ಪದ್ದತಿ. ಆಹ್ವಾನಿತ ಗೌರವಾನ್ವಿತರ ಪಾದಗಳನ್ನು ಶಿಕ್ಷಕರು ಸ್ವತಃ ತೊಳೆದಿದ್ದಾರೆ. ವಿದ್ಯಾರ್ಥಿಗಳು ಅವರ ಪಾದಗಳಿಗೆ ಹೂವುಗಳನ್ನು ಮಾತ್ರ ಅರ್ಪಿಸಿದ್ದಾರೆ. ಈ ಮೂಲಕ ಮಕ್ಕಳು ಹಿರಿಯರ ಆಶೀರ್ವಾದ ಪಡೆದಿದ್ದಾರೆ. ಮಕ್ಕಳು ಪ್ರತಿದಿನ ಅವರ ಪೋಷಕರ ಪಾದಗಳನ್ನು ಮುಟ್ಟಿ ನಮಸ್ಕರಿಸಲು ಪ್ರೋತ್ಸಾಹಿಸಲಾಗುತ್ತದೆ. ಇಂತಹ ಅಭ್ಯಾಸಗಳ ಅನುಪಸ್ಥಿತಿಯು ಮಕ್ಕಳು ಮಾದಕ ದ್ರವ್ಯ ಸೇವನೆ ಬಲಿಯಾಗಲು ಮತ್ತು ಅನೈತಿಕ ವರ್ತನೆಗೆ ಕಾರಣವಾಗುತ್ತದೆ” ಎಂದು ಹೇಳಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಚೀಮೇನಿಯ ವಿವೇಕಾನಂದ ಶಾಲೆಯ ಶಿಕ್ಷಕರು ಮತ್ತು ಪೋಷಕರ ಸಮಿತಿಯ ಅಧಿಕಾರಿ ರಾಜೀವನ್ ಮಕ್ಕಳು ಪಾದ ತೊಳೆದಿರುವುದನ್ನು ಸಮರ್ಥಿಸಿಕೊಂಡಿದ್ದು, “ಇದು ಪ್ರಾಚೀನ ಮತ್ತು ದೈವಿಕ ಸನಾತನ ಧರ್ಮದ ಭಾಗವಾಗಿದೆ. ಈ ಆಚರಣೆಗೆ ಬರುವ ವಿರೋಧಗಳನ್ನು ನಾವು ‘ಒಗ್ಗಟ್ಟಿನಿಂದ ಪ್ರತಿರೋಧಿಸುತ್ತೇವೆ’ ಎಂಬುವುದಾಗಿ ಹೇಳಿದ್ದಾರೆ” ಎಂದು ನ್ಯೂಸ್ ಮಿನಿಟ್ ತಿಳಿಸಿದೆ.

ಊರಿಗೆ ರಸ್ತೆ ನಿರ್ಮಿಸುವಂತೆ ಗರ್ಭಿಣಿ ಬೇಡಿಕೆ: ಹೆರಿಗೆ ದಿನಾಂಕ ತಿಳಿಸಿ ಎಂದ ಬಿಜೆಪಿ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...