Homeಮುಖಪುಟಕೇರಳ | ಗುರು ಪೂರ್ಣಿಮಾ ಹೆಸರಿನಲ್ಲಿ ಶಿಕ್ಷಕರ ಪಾದ ತೊಳೆದ ವಿದ್ಯಾರ್ಥಿಗಳು: ಶಾಲೆಗಳ ವಿರುದ್ಧ ಶಿಕ್ಷಣ...

ಕೇರಳ | ಗುರು ಪೂರ್ಣಿಮಾ ಹೆಸರಿನಲ್ಲಿ ಶಿಕ್ಷಕರ ಪಾದ ತೊಳೆದ ವಿದ್ಯಾರ್ಥಿಗಳು: ಶಾಲೆಗಳ ವಿರುದ್ಧ ಶಿಕ್ಷಣ ಸಚಿವ ಗರಂ, ವರದಿ ನೀಡಲು ಸೂಚನೆ

- Advertisement -
- Advertisement -

ಗುರು ಪೂರ್ಣಿಮಾ ಅಂಗವಾಗಿ ಆಯೋಜಿಸಿದ್ದ ಗುರುವಂದನಾ ಸಮಾರಂಭ ವೇಳೆ ಶಿಕ್ಷಕರ ಪಾದ ತೊಳೆಯುವಂತೆ ಕೇರಳದ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಒತ್ತಾಯಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಶಿಕ್ಷಣ ಸಚಿವ ಶಿವನ್ ಕುಟ್ಟಿ ಗರಂ ಆಗಿದ್ದು, ಅಧಿಕಾರಿಗಳಿಂದ ವರದಿ ಕೇಳಿದ್ದಾರೆ.

ಕಾಸರಗೋಡು ಮತ್ತು ಮಾವೇಲಿಕರದ ಎರಡು ಖಾಸಗಿ ಶಾಲೆಗಳಿಂದ ವಿವರಣೆ ಕೇಳಲಾಗಿದೆ. ವರದಿ ನೀಡುವಂತೆ ಶಿಕ್ಷಣ ಇಲಾಖೆ ಮಹಾ ನಿರ್ದೇಶಕರಿಗೆ ಸಚಿವ ಶಿವನ್‌ ಕುಟ್ಟಿ ಸೂಚಿಸಿದ್ದಾರೆ. ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದೆ ಎಂದು onmanorama.com ವರದಿ ಮಾಡಿದೆ.

ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ಶಿವನ್ ಕುಟ್ಟಿ, ವಿದ್ಯಾರ್ಥಿಗಳಿಂದ ಶಿಕ್ಷರ ಪಾದ ತೊಳೆಯುವಂತೆ ಒತ್ತಾಯಿಸಿದ ಶಾಲೆಗಳ ಆಡಳಿತ ಮಂಡಳಿ ವಿರುದ್ದ ಕಿಡಿಕಾರಿದ್ದು, “ಇದು ಅನುಚಿತ ವರ್ತನೆ, ಅಲ್ಲದೆ ಪ್ರಜಾಪ್ರಭುತ್ವ ಮತ್ತು ಪ್ರಗತಿಪರ ಶಿಕ್ಷಣ ವ್ಯವಸ್ಥೆಯ ಮೌಲ್ಯಗಳಿಗೆ ವಿರುದ್ಧವಾಗಿದೆ” ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಕಾಸರಗೋಡಿನ ಬಂದಡ್ಕದ ಸರಸ್ವತಿ ವಿದ್ಯಾಲಯದಲ್ಲಿ ಮತ್ತು ಆಲಪ್ಪುಝದ ಮಾವೇಲಿಕರದಲ್ಲಿರುವ ವಿದ್ಯಾಧಿರಾಜ ವಿದ್ಯಾಪೀಠಂ ಸೈನಿಕ ಶಾಲೆಯಲ್ಲಿ ಮಕ್ಕಳಿಂದ ಪಾದ ಪೂಜೆ ಮಾಡಲಿಸಲಾಗಿದೆ. ಇವೆರಡೂ ಸಿಬಿಎಸ್‌ಸಿ ಸಂಯೋಜಿತ ಶಾಲೆಗಳಾಗಿದ್ದು, ಭಾರತೀಯ ವಿದ್ಯಾ ನಿಕೇತನ ಇವುಗಳನ್ನು ನಿರ್ವಹಿಸುತ್ತಿದೆ.

ಭಾರತೀಯ ವಿದ್ಯಾ ನಿಕೇತನ ಆರ್‌ಎಸ್‌ಎಸ್‌ನ ಶೈಕ್ಷಣಿಕ ವಿಭಾಗವಾದ ವಿದ್ಯಾ ಭಾರತಿಯ (ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ) ಕೇರಳದ ಅಂಗ ಸಂಸ್ಥೆಯಾಗಿದೆ.

ಎರಡು ಶಾಲೆಗಳು ಮಾತ್ರವಲ್ಲದೆ ಕಾಸರಗೋಡು ಜಿಲ್ಲೆಯ ತ್ರಿಕರಿಪುರದ ಶ್ರೀ ಚಕ್ರಪಾಣಿ ವಿದ್ಯಾ ಮಂದಿರ, ಕುಂದಂಕುಝಿಯ ಹರಿಶ್ರೀ ವಿದ್ಯಾಲಯ, ಚೀಮೇನಿಯ ವಿವೇಕಾನಂದ ವಿದ್ಯಾ ಮಂದಿರ ಸೇರಿದಂತೆ ಇತರೆ ಖಾಸಗಿ ಶಾಲೆಗಳಲ್ಲೂ ಮಕ್ಕಳಿಂದ ಶಿಕ್ಷಕರ ಪಾದಗಳನ್ನು ತೊಳೆಯುವಂತೆ ಒತ್ತಾಯಿಸಲಾಗಿದೆ ಎಂದು ವರದಿಯಾಗಿದೆ.

ಕಾಸರಗೋಡಿನ ಬಂದಡ್ಕ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರು ಮಾತ್ರವಲ್ಲದೆ, ಅತಿಥಿಗಳ ಪಾದಗಳನ್ನೂ ನೀರು ಹಾಕಿ ತೊಳೆದು, ನಂತರ ಹೂವು ಅರ್ಪಿಸಿ ಪೂಜೆ ಮಾಡಿದ ವಿಡಿಯೋ ವೈರಲ್ ಆದ ಬಳಿಕ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕೆಲವೆಡೆ ಅತಿಥಿಗಳ ಹೆಸರಿನಲ್ಲಿ ಮಕ್ಕಳು ಸ್ಥಳೀಯ ಆರ್‌ಎಸ್‌ಎಸ್‌, ಬಿಜೆಪಿ ನಾಯಕರ ಪಾದಗಳನ್ನು ತೊಳೆದಿದ್ದಾರೆ ಎನ್ನಲಾಗಿದೆ.

ಡಿವೈಎಫ್‌ಐ ಮತ್ತು ಎಸ್‌ಎಫ್‌ಐ ಸಂಘಟನೆಗಳು ಮಕ್ಕಳು ಪಾದ ತೊಳೆದಿರುವುದನ್ನು ಬಲವಾಗಿ ಖಂಡಿಸಿವೆ. ಚೀಮೇನಿ ಶಾಲೆಯಲ್ಲಿ ವಿದ್ಯಾರ್ಥಿಗಳು ನೂರಾರು ಶಿಕ್ಷಕರ ಪಾದಗಳನ್ನು ತೊಳೆದಿದ್ದಾರೆ ಎಂದು ಡಿವೈಎಫ್‌ಐ ಆರೋಪಿಸಿದೆ. “ಈ ಬ್ರಾಹ್ಮಣ್ಯದ ಆಚರಣೆಗಳನ್ನು ಆರ್‌ಎಸ್‌ಎಸ್‌ ಬೆಂಬಲಿತ ಶಾಲೆಗಳಲ್ಲಿ ನಡೆಸಲಾಗಿದ್ದರೂ, ಇದು ನಮ್ಮ ರಾಜ್ಯಕ್ಕೆ ನಾಚಿಕೆಗೇಡಿನ ಸಂಗತಿ” ಎಂದು ಡಿವೈಎಫ್‌ಐ ಹೇಳಿಕೆಯಲ್ಲಿ ತಿಳಿಸಿದೆ.

ಆಲಪ್ಪುಝ ಜಿಲ್ಲೆಯ ಅಟ್ಟುವದಲ್ಲಿರುವ ವಿವೇಕಾನಂದ ವಿದ್ಯಾ ಪೀಠದಲ್ಲಿ ವಿದ್ಯಾರ್ಥಿಗಳಿಗೆ ಬಿಜೆಪಿ ನಾಯಕನ ಪಾದಗಳನ್ನು ತೊಳೆಯುವಂತೆ ಒತ್ತಾಯಿಸಲಾಗಿದೆ ಎಂದು ಎಸ್‌ಎಫ್‌ಐ ಆರೋಪಿಸಿದೆ. ಎಸ್‌ಎಫ್‌ಐ ರಾಜ್ಯ ಸಮಿತಿ ಶಿಕ್ಷಣ ಸಚಿವ ಶಿವನ್‌ಕುಟ್ಟಿ ಮತ್ತು ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದೆ.

ಮಕ್ಕಳ ಹಕ್ಕುಗಳ ಆಯೋಗ ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದೆ. “ಬಂದಡ್ಕದ ಸರಸ್ವತಿ ವಿದ್ಯಾಲಯದ ಬಗ್ಗೆ ಆರಂಭಿಕ ದೂರು ಬಂದಿತ್ತು. ನಂತರ ರಾಜ್ಯಾದ್ಯಂತ ಹಲವು ಶಾಲೆಗಳಲ್ಲಿ ಈ ರೀತಿಯ ಕೃತ್ಯ ನಡೆದಿರುವುದು ನಮ್ಮ ಗಮನಕ್ಕೆ ಬಂದಿದೆ. ಆಯೋಗವು ಈ ಬಗ್ಗೆ ವರದಿ ಸಲ್ಲಿಸುವಂತೆ ಪೊಲೀಸರಿಗ ಸೂಚಿಸಿದೆ” ಎಂದು ಆಯೋಗದ ಕಾಸರಗೋಡು ಜಿಲ್ಲಾ ಉಸ್ತುವಾರಿ ಮೋಹನಕುಮಾರ್ ಬಿ ತಿಳಿಸಿದ್ದಾರೆ.

ಮಕ್ಕಳು ಪಾದ ತೊಳೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಂದಡ್ಕ ಶಾಲೆಯ ಮುಖ್ಯೋಪಾಧ್ಯಾಯಿನಿ ಪಿ.ಟಿ. ಉಮಾ “ಇದು ‘ವ್ಯಾಸ ಜಯಂತಿ’ಯ ಅಂಗವಾಗಿ ಹಿಂದಿನಿಂದಲೂ ನಡೆಸಿಕೊಂಡು ಬಂದಿರುವ ಪದ್ದತಿ. ಆಹ್ವಾನಿತ ಗೌರವಾನ್ವಿತರ ಪಾದಗಳನ್ನು ಶಿಕ್ಷಕರು ಸ್ವತಃ ತೊಳೆದಿದ್ದಾರೆ. ವಿದ್ಯಾರ್ಥಿಗಳು ಅವರ ಪಾದಗಳಿಗೆ ಹೂವುಗಳನ್ನು ಮಾತ್ರ ಅರ್ಪಿಸಿದ್ದಾರೆ. ಈ ಮೂಲಕ ಮಕ್ಕಳು ಹಿರಿಯರ ಆಶೀರ್ವಾದ ಪಡೆದಿದ್ದಾರೆ. ಮಕ್ಕಳು ಪ್ರತಿದಿನ ಅವರ ಪೋಷಕರ ಪಾದಗಳನ್ನು ಮುಟ್ಟಿ ನಮಸ್ಕರಿಸಲು ಪ್ರೋತ್ಸಾಹಿಸಲಾಗುತ್ತದೆ. ಇಂತಹ ಅಭ್ಯಾಸಗಳ ಅನುಪಸ್ಥಿತಿಯು ಮಕ್ಕಳು ಮಾದಕ ದ್ರವ್ಯ ಸೇವನೆ ಬಲಿಯಾಗಲು ಮತ್ತು ಅನೈತಿಕ ವರ್ತನೆಗೆ ಕಾರಣವಾಗುತ್ತದೆ” ಎಂದು ಹೇಳಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಚೀಮೇನಿಯ ವಿವೇಕಾನಂದ ಶಾಲೆಯ ಶಿಕ್ಷಕರು ಮತ್ತು ಪೋಷಕರ ಸಮಿತಿಯ ಅಧಿಕಾರಿ ರಾಜೀವನ್ ಮಕ್ಕಳು ಪಾದ ತೊಳೆದಿರುವುದನ್ನು ಸಮರ್ಥಿಸಿಕೊಂಡಿದ್ದು, “ಇದು ಪ್ರಾಚೀನ ಮತ್ತು ದೈವಿಕ ಸನಾತನ ಧರ್ಮದ ಭಾಗವಾಗಿದೆ. ಈ ಆಚರಣೆಗೆ ಬರುವ ವಿರೋಧಗಳನ್ನು ನಾವು ‘ಒಗ್ಗಟ್ಟಿನಿಂದ ಪ್ರತಿರೋಧಿಸುತ್ತೇವೆ’ ಎಂಬುವುದಾಗಿ ಹೇಳಿದ್ದಾರೆ” ಎಂದು ನ್ಯೂಸ್ ಮಿನಿಟ್ ತಿಳಿಸಿದೆ.

ಊರಿಗೆ ರಸ್ತೆ ನಿರ್ಮಿಸುವಂತೆ ಗರ್ಭಿಣಿ ಬೇಡಿಕೆ: ಹೆರಿಗೆ ದಿನಾಂಕ ತಿಳಿಸಿ ಎಂದ ಬಿಜೆಪಿ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...